"ಹೊಯಿದವರೆನ್ನ ಹೊರೆದವರೆಂಬೆ, ಬಯಿದವರೆನ್ನ ಬಂಧುಗಳೆಂಬೆ, ನಿಂದಿಸಿದವರೆನ್ನ ತಂದೆತಾಯಿಗಳೆಂಬೆ, ಆಳಿಗೊಂಡವರೆನ್ನ ಆಳ್ದವರೆಂಬೆ, ಜರಿದವರೆನ್ನ ಜನ್ಮಬಂಧುಗಳೆಂಬೆ, ಹೊಗಳಿದವರೆನ್ನ ಹೊನ್ನಶೂಲದಲಿಕ್ಕಿದರೆಂಬೆ ಕೂಡಲಸಂಗಮದೇವಾ.. ✍️ ವಿಶ್ವಗುರು ಬಸವಣ್ಣನವರ ವಚನ.. ಶರಣು ಶರಣಾರ್ಥಿಗಳು 🙏 #ಬಸವಣ್ಣನವರ ವಚನಗಳು #//🌳ವಚನ ಸಾಹಿತ್ಯ 🌳// #ವಚನಗಳು #ಶರಣ ಸಾಹಿತ್ಯ #ಬಸವಾದಿ ಶರಣ ಶರಣೆಯರು


