ShareChat
click to see wallet page
search
#📜ಪ್ರಚಲಿತ ವಿದ್ಯಮಾನ📜 MSIL ನೂತನ ಚಿಟ್ಸ್ ಸಾಫ್ಟ್‌ವೇರ್ ಹಾಗೂ ಮೊಬೈಲ್ ಆ್ಯಪ್ ಬಿಡುಗಡೆ ಬೆಂಗಳೂರು: ಎಂಎಸ್ಐಎಲ್ ಸರ್ಕಾರಿ ಸಂಸ್ಥೆಯು ಹಲವು ದಶಕಗಳಿಂದ ಜನರ ವಿಶ್ವಾಸಕ್ಕೆ ಪಾತ್ರವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಮೈಸೂರು ಸೇಲ್ಸ್ ಇಂಟರ್ ನ್ಯಾಷನಲ್ ಲಿಮಿಟೆಡ್‌‌ನ ನೂತನ ಚಿಟ್ಸ್ ಸಾಫ್ಟ್‌ವೇರ್ ಹಾಗೂ ಮೊಬೈಲ್ ಆ್ಯಪ್ ಬಿಡುಗಡೆಗೊಳಿಸಿ ಮಾತನಾಡಿದ ಅವರು, 2005 ರಿಂದ ಚಿಟ್ ಫಂಡ್ ವ್ಯವಸ್ಥೆ ಪ್ರಾರಂಭವಾಗಿದೆ. ಉಳಿತಾಯದ ಸಂಸ್ಕೃತಿ ಅತ್ಯವಶ್ಯವಾಗಿದ್ದು, ತುರ್ತು ಸಂದರ್ಭದಲ್ಲಿ ಉಳಿತಾಯದ ಹಣ ನೆರವಿಗೆ ಬರುತ್ತದೆ ಎಂದರು. ಜಾತಿವರ್ಗಗಳ ಬೇಧವಿಲ್ಲದೇ ಜಾರಿಯಾಗುವ ಸರ್ಕಾರದ ಗ್ಯಾರಂಟಿ ಯೋಜನೆಗಳಾದ ಶಕ್ತಿ, ಗೃಹಲಕ್ಷ್ಮಿ, ಗೃಹಲಕ್ಷ್ಮಿ, ಯುವನಿಧಿ, ಅನ್ನಭಾಗ್ಯದಿಂದ ಉಳಿತಾಯವಾಗುವ ಹಣವನ್ನು ಜನರು, ವಿಶೇಷವಾಗಿ ಮಹಿಳೆಯರು ಹೂಡಿಕೆ ಮಾಡಬೇಕು ಎಂದರು. ಹೂಡಿಕೆ ಹಣ ಸುರಕ್ಷಿತವಾಗಿರುವುದು ಅತ್ಯಂತ ಅಗತ್ಯವಾಗಿದ್ದು, ಎಂಎಸ್ಐಎಲ್ ನ ಚಿಟ್ ಫಂಡ್ ಈ ಭರವಸೆಯನ್ನು ನೀಡುತ್ತದೆ. ಸಾಮಾನ್ಯವಾಗಿ ನಡೆಯುವ ಚೀಟಿ ವ್ಯವಹಾರಗಳಲ್ಲಿ ಮೋಸವಾಗುವ ಸಾಧ್ಯತೆ ಇರುತ್ತದೆ. ಆದರೆ ಎಂಎಸ್ಐಎಲ್ ಸರ್ಕಾರಿ ಸಂಸ್ಥೆಯಾಗಿದ್ದು, ಜನರ ಹೂಡಿಕೆಗೆ ಭದ್ರತೆಯನ್ನು ಒದಗಿಸುತ್ತದೆ. ತಮ್ಮ ಹೂಡಿಕೆಯ ಕೇವಲ ಶೇ.5 ರಷ್ಟು ಲಾಭ ಪಡೆಯುವ ಸಂಸ್ಥೆ ಜನರ ಆರ್ಥಿಕ ಭದ್ರತೆಗೆ ನೆರವಾಗಿದೆ ಎಂದರು. ಕೇರಳ ರಾಜ್ಯದಲ್ಲಿ ಈ ಕ್ಷೇತ್ರದಲ್ಲಿ 47,000 ಕೋಟಿ ವಹಿವಾಟು ನಡೆಯುತ್ತದೆ. ಕರ್ನಾಟಕದಲ್ಲಿ ಕೇವಲ 500 ಕೋಟಿ ವ್ಯವಹಾರ ನಡೆಯುತ್ತಿದ್ದು, ಮುಂದಿನ ದಿನಗಳಲ್ಲಿ ಈ ಮೊತ್ತವನ್ನು 10,000 ಕೋಟಿಗೆ ಹೆಚ್ಚಿಸುವ ಗುರಿಯನ್ನು ಸಂಸ್ಥೆ ಹೊಂದಿದೆ. ಶಿಕ್ಷಣ, ಆರೋಗ್ಯ, ಮದುವೆ ಸಮಾರಂಭ, ಮನೆ, ಹೀಗೆ ಜನರು ತಮ್ಮ ಅಗತ್ಯಗಳಿಗಾಗಿ ಹೂಡಿಕೆ ಮಾಡುವ ಉಳಿತಾಯದ ಮೊತ್ತ ಸುಭದ್ರವಾಗಿರುವ ಗ್ಯಾರಂಟಿ ಇದೆ. ಹಣ ಗಳಿಸುವುದು ಎಷ್ಟು ಮುಖ್ಯವೋ, ಸುಭದ್ರವಾಗಿ ಹೂಡಿಕೆ ಮಾಡುವುದೂ ಅಷ್ಟೇ ಮುಖ್ಯ ಎಂದರು. ಎಂಎಸ್ಐಎಲ್ ನ ಚಿಟ್ ಫಂಡ್ ವ್ಯವಹಾರದಲ್ಲಿ ಗ್ರಾಹಕರಿಗೆ ಅನುಕೂಲವಾಗುವಂತೆ ಆಧುನಿಕ ತಂತ್ರಾಂಶವನ್ನು ಇಂದು ಲೋಕಾರ್ಪಣೆಗೊಳಿಸಲಾಗಿದೆ. ಮೈಕ್ರೋ ಫೈನಾನ್ಸ್ ಗಳು ನೀಡುವ ಸಾಲದ ಸುಳಿಯಲ್ಲಿ ಅನೇಕ ಜನರು ಸಿಲುಕುತ್ತಾರೆ. ಆದ್ದರಿಂದ "ಕಿರು ಸಾಲ ಮತ್ತು ಸಣ್ಣ ಸಾಲ ಅಧ್ಯಾದೇಶ 2025" ಕಾಯ್ದೆಯನ್ನು ಜಾರಿಮಾಡಿ, ಸಾಲ ಪಡೆದು ಕಿರುಕುಳ ಅನುಭವಿಸುತ್ತಿರುವ ಜನರ ರಕ್ಷಣೆ ಮಾಡಲಾಗಿದೆ ಎಂದರು. #Siddaramaiah #launched #MSIL #new #chits #software #mobile #app #ChitFund #malgudiexpress #malgudinews #news #TopNews
📜ಪ್ರಚಲಿತ ವಿದ್ಯಮಾನ📜 - ShareChat