ಪವರ್
ಸ್ಟಾರ್ ಪುನೀತ್ ರಾಜ್ಕುಮಾರ್ ಅವರ ಅಕಾಲಿಕ ಮರಣ ಅಭಿಮಾನಿಗಳಿಗೆ ಇನ್ನೂ ಅರಗಿಸಿಕೊಳ್ಳೋಕೆ ಆಗುತ್ತಿಲ್ಲ.
ಅಪ್ಪು ದೂರವಾಗಿ ಹಲವು ದಿನಗಳೇ ಕಳೆದಿದ್ದರೂ ಅವರ ನೆನಪುಗಳು ಅಭಿಮಾನಿಗಳನ್ನು ಬಿಟ್ಟು ಹೋಗಿಲ್ಲ ಎಂಬುದಕ್ಕೆ
ಹಲವು ಸನ್ನಿವೇಶಗಳು ಸಾಕ್ಷಿಯಾಗುತ್ತಲೇ ಇವೆ. ಅಪ್ಪುಗೆ ಕರ್ನಾಟಕ ಮಾತ್ರವಲ್ಲದೇ ಪರಭಾಷೆಯಲ್ಲೂ ಸಾಕಷ್ಟು
ಅಭಿಮಾನಿಗಳಿದ್ದಾರೆ. ಬೇರೆ ರಾಜ್ಯಗಳಲ್ಲೂ ಪುನೀತ್ಗೆ ನಮನ ಸಲ್ಲಿಸುವ ಕಾರ್ಯ ನಡೆಯುತ್ತಲೇ ಸಾಗಿದೆ.
ನಾನಾ ರೀತಿಯಲ್ಲಿ ಅವರ ಮೇಲಿನ ಅಭಿಮಾನವನ್ನು ವ್ಯಕ್ತಪಡಿಸಲಾಗುತ್ತಿದೆ. ಕೆಲವರು ಪುನೀತ್ ದಾರಿಯಲ್ಲಿ
ಸಾಗಿ ಸಮಾಜ ಸೇವೆ ಮಾಡುತ್ತಿದ್ದಾರೆ. ಸಾಕಷ್ಟು ಮಂದಿ ಆಂಧ್ರ ಪ್ರದೇಶದಲ್ಲಿ ಪುನೀತ್ ಅವರ ಪ್ರತಿಮೆ
ನಿರ್ಮಾಣ ಮಾಡುತ್ತಿದ್ದಾರೆ. ಕರ್ನಾಟಕ ಮಾತ್ರವಲ್ಲ ಆಂಧ್ರದಲ್ಲೂ ಅಭಿಮಾನಿಗಳು ಅಪ್ಪು ನಾಮ ಸ್ಮರಿಸುತ್ತಿದ್ದಾರೆ.
ಹಾಗೆಯೇ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಕುಪ್ಪಂ ಮಂಡಲಂನ ಗುಡಿವಂಕ ಕಾವಡಿ ಉತ್ಸವದಲ್ಲಿ ಅಪ್ಪು
ಅಭಿಮಾನಿಗಳು ಅಪ್ಪುವಿನ ದೊಡ್ಡ ಭಾವಚಿತ್ರ ಹಿಡಿದು ಕ್ರೇನ್ನಲ್ಲಿ ಕಾವಡಿ ಸಲ್ಲಿಸಿದ್ದಾರೆ. ಇತ್ತ
ಶಿವಮೊಗ್ಗದ ಗುಡ್ಡೆಕಲ್ನಲ್ಲಿ ನಡೆಯುತ್ತಿರುವ ಸುಬ್ರಹ್ಮಣ್ಯ ಜಾತ್ರೆಯಲ್ಲೂ ಅಪ್ಪು ಭಾವಚಿತ್ರ ರಾರಾಜಿಸಿದೆ.
ಹರೋಹರ ಜಾತ್ರೆಯಲ್ಲಿ ಅಪ್ಪು ಅಭಿಮಾನಿಗಳು ಅಪ್ಪು ಭಾವಚಿತ್ರ ಕೈಯಲ್ಲಿ ಹಿಡಿದು ಸುಬ್ರಹ್ಮಣ್ಯನ ದರ್ಶನ
ಮಾಡಿದ್ದಾರೆ. #😍 ಕೊನೆಯಿಲ್ಲದ ಅಪ್ಪು ಫ್ಯಾನ್ಸ್ ಪ್ರೀತಿ

01:14

