Gayatri Hobbies
8K views • 2 hours ago
27ರ ಹರೆಯದಲ್ಲೇ ಬದುಕಿಗೆ ವಿದಾಯ ಹೇಳಿದ ಯುವ ಮಾಡೆಲ್ ಕೃತಿ ಬಂಗೇರಾ! ಸಾವಿಗೆ ಕಾರಣವೇನು?ಪ್ರಕರಣ ಸಂಬಂಧ ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಆತ್ಮಹ*ತ್ಯೆಗೆ ಕಾರಣಗಳೇನು?, ಯಾವುದೇ ವೈಯಕ್ತಿಕ ಅಥವಾ ಇತರ ಸಮಸ್ಯೆಗಳು ಇದ್ದವೆಯೇ ಎಂಬ ಎಲ್ಲಾ ಆಯಾಮಗಳಲ್ಲಿ ತನಿಖೆ ಮುಂದುವರಿಸಿದ್ದಾರೆ. ಸದ್ಯಕ್ಕೆ ಯಾವುದೇ ಅನುಮಾನಾಸ್ಪದ ಅಂಶಗಳು ದೃಢಪಟ್ಟಿಲ್ಲವೆಂದು ಮೂಲಗಳು ತಿಳಿಸಿವೆ.
ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವ ಪ್ರತಿಭೆ ಕೃತಿ ಬಂಗೇರಾ ಆತ್ಮಹ*ತ್ಯೆ ಮಾಡಿಕೊಂಡಿರುವ ಘಟನೆ ಉಡುಪಿ ಜಿಲ್ಲೆಯ ಮಲ್ಪೆ ಪೊಲೀಸ್ ಠಾಣೆ ವ್ಯಾಪ್ತಿಯ ಕಲ್ಮಾಡಿಯಲ್ಲಿ ಗುರುವಾರ ಬೆಳಕಿಗೆ ಬಂದಿದೆ. ಮನೆಯ ಬೆಡ್ರೂಮ್ನಲ್ಲಿ ಫ್ಯಾನಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಕೃತಿ ಅವರ ಮೃತದೇಹ ಪತ್ತೆಯಾಗಿದ್ದು, ಈ ಘಟನೆ ಕುಟುಂಬಸ್ಥರು, ಸ್ನೇಹಿತರು ಹಾಗೂ ಪರಿಚಿತರಲ್ಲಿ ತೀವ್ರ ದುಃಖ ಮತ್ತು ಆಘಾತಕ್ಕೆ ಕಾರಣವಾಗಿದೆ
ಕೃತಿ ಬಂಗೇರಾ ಅವರು ಕಲ್ಮಾಡಿ ನಿವಾಸಿ ರತ್ನಾ ಅವರ ಪುತ್ರಿಯಾಗಿದ್ದು, ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದರ ಜೊತೆಗೆ ಉಡುಪಿ ನಗರದ ಕಡಿಯಾಳಿ ಸಮೀಪದ ಖಾಸಗಿ ಹೋಟೆಲ್ನಲ್ಲಿ ಉದ್ಯೋಗ ನಿರ್ವಹಿಸುತ್ತಿದ್ದರು. ಆದರೆ ಕಳೆದ ಸುಮಾರು ಐದು ತಿಂಗಳಿಂದ ಅವರು ಕೆಲಸಕ್ಕೆ ಹೋಗದೆ ಮನೆಯಲ್ಲೇ ಇದ್ದರು ಎಂದು ತಿಳಿದುಬಂದಿದೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ಅವರು ಕಳೆದ ಕೆಲವು ತಿಂಗಳಿಂದ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದರು ಎಂದು ಹೇಳಲಾಗಿದೆ. ಇದೇ ಕಾರಣದಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹ*ತ್ಯೆ ಮಾಡಿಕೊಂಡಿರಬಹುದೆಂಬ ಶಂಕೆ ವ್ಯಕ್ತವಾಗಿದ್ದು, ಇದರ ಬಗ್ಗೆ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ. ಆತ್ಮಹ*ತ್ಯೆಗೆ ನಿಖರ ಕಾರಣವೇನು ಎಂಬುದು ಇನ್ನಷ್ಟೇ ಸ್ಪಷ್ಟವಾಗಬೇಕಿದೆ.
ಘಟನೆ ನಡೆದಿದ್ದು ಹೇಗೆ?ಪೊಲೀಸರಿಗೆ ನೀಡಲಾದ ದೂರಿನ ಪ್ರಕಾರ, ಆಗಸ್ಟ್ 6ರಂದು ಕೃತಿ ಅವರ ತಾಯಿ ರತ್ನಾ ಅವರು ಕೆಲಸದ ನಿಮಿತ್ತ ಮಲ್ಪೆಗೆ ತೆರಳಿದ್ದರು. ಇದೇ ವೇಳೆ ಕೃತಿ ಅವರ ಎರಡನೇ ಸಹೋದರಿಯೂ ಉದ್ಯೋಗದ ನಿಮಿತ್ತ ಉಡುಪಿಗೆ ಹೋಗಿದ್ದರು. ಮಧ್ಯಾಹ್ನ ಸುಮಾರು 1 ಗಂಟೆ ವೇಳೆಗೆ ರತ್ನಾ ಅವರು ಮನೆಗೆ ಹಿಂದಿರುಗಿದಾಗ, ಕೃತಿ ತಾಯಿಯನ್ನ ಹೊರಗೆ ಕಳುಹಿಸಿ ಮನೆಯ ಮುಖ್ಯ ಬಾಗಿಲನ್ನ ಒಳಗಿನಿಂದ ಲಾಕ್ ಮಾಡಿಕೊಂಡಿದ್ದರು ಎಂದು ತಿಳಿದುಬಂದಿದೆ.ಸ್ವಲ್ಪ ಸಮಯದ ಬಳಿಕ ಬಾಗಿಲು ತಟ್ಟಿದರೂ ಯಾವುದೇ ಪ್ರತಿಕ್ರಿಯೆ ದೊರೆಯದ ಹಿನ್ನೆಲೆಯಲ್ಲಿ ರತ್ನಾ ಅವರು ತಮ್ಮ ಸಹೋದರ ಚಂದ್ರ ಅವರಿಗೆ ಕರೆ ಮಾಡಿ ಮನೆಗೆ ಕರೆದಿದ್ದಾರೆ. ಇಬ್ಬರೂ ಸೇರಿ ಬಾಗಿಲು ಒಡೆದು ಒಳಗೆ ಪ್ರವೇಶಿಸಿದಾಗ, ಬೆಡ್ರೂಮ್ನಲ್ಲಿ ಫ್ಯಾನಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಕೃತಿ ಅವರ ಮೃತದೇಹ ಪತ್ತೆಯಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಮಲ್ಪೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಬಳಿಕ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ. ಪ್ರಕರಣ ಸಂಬಂಧ ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಆತ್ಮಹ*ತ್ಯೆಗೆ ಕಾರಣಗಳೇನು?, ಯಾವುದೇ ವೈಯಕ್ತಿಕ ಅಥವಾ ಇತರ ಸಮಸ್ಯೆಗಳು ಇದ್ದವೆಯೇ ಎಂಬ ಎಲ್ಲಾ ಆಯಾಮಗಳಲ್ಲಿ ತನಿಖೆ ಮುಂದುವರಿಸಿದ್ದಾರೆ. ಸದ್ಯಕ್ಕೆ ಯಾವುದೇ ಅನುಮಾನಾಸ್ಪದ ಅಂಶಗಳು ದೃಢಪಟ್ಟಿಲ್ಲವೆಂದು ಮೂಲಗಳು ತಿಳಿಸಿವೆ.
ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ ಯುವ ಪ್ರತಿಭೆಕೃತಿ ಬಂಗೇರಾ ಮಾಡೆಲಿಂಗ್ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದು, ತಮ್ಮ ಪ್ರತಿಭೆಯಿಂದ ಗುರುತಿಸಿಕೊಂಡಿದ್ದರು. ಸಾಮಾಜಿಕ ಜಾಲತಾಣಗಳಲ್ಲಿಯೂ ಅವರು ಪರಿಚಿತರಾಗಿದ್ದರು ಎಂದು ತಿಳಿದುಬಂದಿದೆ. ಅವರ ಅಕಾಲಿಕ ನಿಧನದ ಸುದ್ದಿ ಹರಡುತ್ತಿದ್ದಂತೆ ಪರಿಚಿತರು, ಸ್ನೇಹಿತರು ಹಾಗೂ ಸ್ಥಳೀಯರು ಸಾಮಾಜಿಕ ಜಾಲತಾಣಗಳಲ್ಲಿ ಸಂತಾಪ ಸೂಚಿಸುತ್ತಿದ್ದಾರೆ.ಮಾನಸಿಕ ಆರೋಗ್ಯದ ಕುರಿತು ಜಾಗೃತಿ ಅಗತ್ಯಈ ಘಟನೆ ಮಾನಸಿಕ ಆರೋಗ್ಯದ ಮಹತ್ವವನ್ನ ಮತ್ತೊಮ್ಮೆ ನೆನಪಿಸುತ್ತದೆ. ಒತ್ತಡ, ಆತಂಕ ಅಥವಾ ಮನೋವೈಕಲ್ಯಗಳಂತಹ ಸಮಸ್ಯೆಗಳು ಎದುರಾದಾಗ ಕುಟುಂಬದವರು, ಸ್ನೇಹಿತರು ಅಥವಾ ಮಾನಸಿಕ ಆರೋಗ್ಯ ತಜ್ಞರ ನೆರವು ಪಡೆಯುವುದು ಬಹಳ ಮುಖ್ಯ. ಸಮಯಕ್ಕೆ ಸರಿಯಾದ ಬೆಂಬಲ ಮತ್ತು ಚಿಕಿತ್ಸೆ ದೊರೆತರೆ ಇಂತಹ ಅನಾಹುತಗಳನ್ನ ತಡೆಯಲು ಸಹಕಾರಿಯಾಗಬಹುದು. ಪ್ರಸ್ತುತ ಕೃತಿ ಬಂಗೇರಾ ಸಾವಿನ ಕುರಿತು ಮಲ್ಪೆ ಪೊಲೀಸರು ತನಿಖೆ ಮುಂದುವರಿಸಿದ್ದು, ತನಿಖೆ ಪೂರ್ಣಗೊಂಡ ಬಳಿಕವೇ ಆತ್ಮಹ*ತ್ಯೆಗೆ ನಿಖರ ಕಾರಣ ಏನು ಎಂಬುದು ಸ್ಪಷ್ಟವಾಗಲಿದೆ. #💔27ರ ಹರೆಯದಲ್ಲೇ ಬದುಕಿಗೆ ವಿದಾಯ ಹೇಳಿದ ಕನ್ನಡದ ಖ್ಯಾತ ಮಾಡೆಲ್😭
56 likes
54 shares