ShareChat
click to see wallet page
search
"ಕಾಸಿ ಕಮ್ಮಾರನಾದ, ಬೀಸಿ ಮಡಿವಾಳನಾದ ಹಾಸನಿಕ್ಕಿ ಸಾಲಿಗನಾದ, ವೇದವನೋದಿ ಹಾರುವನಾದ, ಕರ್ಣದಲ್ಲಿ ಜನಿಸಿದವರುಂಟೆ ಜಗದೋಳಗೆ??? ಇದು ಕಾರಣ ಕೂಡಲ ಸಂಗಮದೇವಾ ಲಿಂಗಸ್ಥಲವನರಿದವನೆ ಕುಲಜನು"! #ಬಸವಣ್ಣನವರ ವಚನ.. "ವ್ಯಾಸ ಬೋವಿತಿಯ ಮಗ, ಮಾರ್ಖಂಡೇಯ ಮಾತಂಗಿಯ ಮಗ, ಮಂಡೋದರಿ ಕಪ್ಪೆಯ ಮಗಳು. ಕುಲವನರಸದಿರಿಂ ಭೋ! ಕುಲದಿಂದ ಮುನ್ನೇನಾದಿರಿಂ ಭೋ! ಸಾಕ್ಷಾತ್ ಅಗಸ್ತ್ಯ ಕಬ್ಬಿಲ, ದುರ್ವಾಸ ಮಚ್ಚಿಗ, ಕಶ್ಯಪ ಕಮ್ಮಾರ, ಕೌಂಡಿನ್ಯನೆಂಬ ಋಷಿ ಮೂರು ಭುವನರಿಯದ ನಾವಿದ ಕಾಣಿ ಭೋ! ನಮ್ಮ ಕೂಡಲಸಂಗನ ವಚನವಿಂತೆಂದುದು ಶ್ವಪಚೋಪಿಯಾದಡೇನು, ಶಿವಭಕ್ತನೆ ಕುಲಜಂ ಭೋ! #ಬಸವಣ್ಣನವರ ವಚನ.. "ನೆಲನೊಂದೆ ಹೊಲಗೇರಿ ಶಿವಾಲಯಕ್ಕೆ ಜಲವೊಂದೆ ಶೌಚಾಚಮನಕ್ಕೆ ಕುಲವೊಂದೆ ತನ್ನ ತಾನರಿದವಂಗೆ ಫಲವೊಂದೆ ಷಡುದರುಶನ ಮುಕ್ತಿಗೆ ನಿಲುವೊಂದೆ ಕೂಡಲ ಸಂಗಮದೇವಾ ನಿಮ್ಮನರಿದವಂಗೆ. #ಬಸವಣ್ಣನವರ ವಚನ.. "ಅಣ್ಣ, ತಮ್ಮ, ಹೆತ್ತಯ್ಯ ಗೋತ್ರದವರಾದಡೆನು??? ಲಿಂಗಸಾಹಿತ್ಯರಲ್ಲದವರ ಎನ್ನವರೆನ್ನೆನಯ್ಯಾ, ನಂಟುಭಕ್ತಿ ನಾಯಕ ನರಕ, ಕೂಡಲಸಂಗಮದೇವ #ಬಸವಣ್ಣನವರ ವಚನ.. "ಆವ ಕುಲವಾದಡೇನು??? ಶಿವಲಿಂಗವಿದ್ದವನೆ ಕುಲಜನು, ಕುಲವನರಸುವರೆ ಶರಣರಲ್ಲಿ, ಜಾತಿಸಂಕರನಾದ ಬಳಿಕ??? ಶಿವಧರ್ಮಕುಲೇಜಾತಃ ಪುನರ್ಜನ್ಮ ವಿವರ್ಜಜಿತಃ! ಉಮಾ ಮಾತಾ ಪಿತಾ ರುದ್ರ ಐಶ್ವರಂ ಕುಮೇವಚ !! ಎಂದುದಾಗಿ, ಒಕ್ಕುದಕೊಂಬೆನವರಲ್ಲಿ. ಕೂಸ ಕೊಡುವೆ, ಕೂಡಲಸಂಗಮದೇವಾ, ನಂಬುವೆ ನಿಮ್ಮ ಶರಣನು #ಬಸವಣ್ಣನವರ ವಚನ.. "ಅಪ್ಪನು ನಮ್ಮ ಮಾದಾರ ಚೆನ್ನಯ್ಯ, ಬೊಪ್ಪನು ನಮ್ಮ ಡೊಹರ ಕಕ್ಕಯ್ಯ, ಚಿಕ್ಕಯ್ಯ ನೆಮ್ಮಯ್ಯ ಕಾಣಯ್ಯ, ಅಣ್ಣನು ನಮ್ಮ ಕಿನ್ನರ ಬೊಮ್ಮಯ್ಯ, ಎನ್ನನೇತಕ್ಕರಿಯಿರಿ,ಕೂಡಲಸಂಗಯ್ಯ??? #ಬಸವಣ್ಣನವರ ವಚನ.. "ಸೆಟ್ಟಿಯೆಂಬೆನೆ ಸಿರಿಯಾಳನ??? ಮಡಿವಾಳನೆಂಬೆನೆ ಮಾಚಯ್ಯನ??? ಡೋಹರನೆಂಬೆನೆ ಕಕ್ಕಯ್ಯನ??? ಮಾದಾರನೆಂಬೆನೆ ಚೆನ್ನಯ್ಯನ??? ಆನು ಹಾರುವನೆಂದಡೆ ಕೂಡಲಸಂಗಯ್ಯ ನಗುವನಯ್ಯಾ.. #ಬಸವಣ್ಣನವರ ವಚನ.. "ಜಾತಿವಿಡಿದು ಸೂತಕವನರಸುವೆ ಜ್ಯೋತಿವಿಡಿದು ಕತ್ತಲೆಯನರಸುವೆ! ಇದೇಕೊ ಮರುಳುಮಾನವಾ??? ಜಾತಿಯಲ್ಲಿ ಅಧಿಕನೆಂಬೆ! ವಿಪ್ರ ಶತಕೋಟಿಗಳಿದ್ದಲ್ಲಿ ಫಲವೇನೊ??? 'ಭಕ್ತನೆ ಶಿಖಾಮಣಿ' ಎಂದುದು ವಚನ, ನಮ್ಮ ಕೂಡಲಸಂಗನ ಶರಣರ ಪಾದಪರುಷವ ನಂಬು, ಕೆಡಬೇಡ ಮಾನವಾ.. #ಬಸವಣ್ಣನವರ ವಚನ.. #ಶರಣ ಸಾಹಿತ್ಯ #ವಚನಗಳು #//🌳ವಚನ ಸಾಹಿತ್ಯ 🌳// #ಬಸವಣ್ಣನವರ ವಚನಗಳು #ಬಸವಾದಿ ಶರಣ ಶರಣೆಯರು
ಶರಣ ಸಾಹಿತ್ಯ - ಕಾಯಕವೇ ಕೈಲಾಸ ಅರಿವೆ ಗುರು . ದೇಹವೇ ದೇಗುಲ ಕಾಯಕವೇ ಕೈಲಾಸ ಅರಿವೆ ಗುರು . ದೇಹವೇ ದೇಗುಲ - ShareChat