"ಯತ್ರ ಜೀವಸ್ತ್ರ ಶಿವನೆಂಬ ಬಾಲಭಾಷೆಯ ಕೇಳಲಾಗದು ಶಿವಶಿವಾ ಯತ್ರಜೀವಸ್ತತ್ರ ಶಿವನಾದರೆ ಜೀವಂಗೆ ಮರಣವೇಕೋ??? ಯತ್ರ ಜೀವಸ್ತತ್ರ ಶಿವನಾದರೆ ಜನನ ಸ್ಥಿತಿ ಮರಣ ರುಜೆ ಸಂಸಾರ ಬಂಧನವೇಕೋ??? ಯತ್ರ ಜೀವಸ್ತತ್ರ ಶಿವನಾದರೆ ಪುಣ್ಯಪಾಪ ಪ್ರಳಯಕಾಲ ಕಲ್ಪಿತವೇಕೊ??? ಇದು ಕಾರಣ ಯತ್ರ ಜೀವಸ್ತತ್ರ ಶಿವನಲ್ಲ, ಉತ್ಪತ್ತಿ ಸ್ಥಿತಿ ಪ್ರಳಯರಹಿತನು ಸದ್ಭಕ್ತರಲ್ಲಿಪ್ಪನಲ್ಲದೆ ಮತ್ತೆಲ್ಲಿಯೂ ಇಲ್ಲ, ಕೂಡಲಚೆನ್ನಸಂಗಮದೇವ.. ✍️ ಚಿನ್ಮಯ ಜ್ಞಾನಿ ಚೆನ್ನಬಸವಣ್ಣನವರು
ಬಸವ ಬೆಳಗಿನ ಶರಣು ಶರಣಾರ್ಥಿಗಳು 🙏 #ವಚನಗಳು #ಬಸವಾದಿ ಶರಣ ಶರಣೆಯರು #ಶರಣ ಸಾಹಿತ್ಯ #ಬಸವಣ್ಣನವರ ವಚನಗಳು #//🌳ವಚನ ಸಾಹಿತ್ಯ 🌳//


