ಶ್ರೀ ಗುರು ಬಸವ ಲಿಂಗಾಯ ನಮಃ.. "ಲಿಂಗವ ಧ್ಯಾನಿಸುವನ ಅಂಗ ಕೈಲಾಸದ ರಾಜ್ಯಾಂಗಣ ಕಾಣಿರೊ. ಲಿಂಗವ ನೋಡುವ ಕಂಗಳು ಪರಮಾತ್ಮನಿದಿರಲಿ ಕಟ್ಟಿಹ ನಿಲವುಗನ್ನಡಿ ಕಾಣಿರೊ. ಲಿಂಗವ ಕೊಂಡಾಡುವನ ಜಿಹ್ವೆ ಕೈಲಾಸದಲ್ಲಿ ಸಾರುವ ಪಾರಿಗಂಟೆ ಕಾಣಿರೊ ಲಿಂಗದ ಶ್ರುತಿಯ ಕೇಳುವನ [ಕಿವಿ] ಮಾಣಿಕ ಮುತ್ತಂ ಮುಚ್ಚಿಡುವ ಕರಡಿಗೆ ಕಾಣಿರೊ. ಲಿಂಗವ ಮುಟ್ಟಿ ಪೂಜಿಸಿದವನ ಹಸ್ತ ಸುಹಸ್ತ ಕಾಣಿರೊ. ಇಂತೀ ಲಿಂಗಾಂಗಸಂಗಮರಸದಲ್ಲಿಪ್ಪ ಶರಣಂಗೆ ಅಂಗವಿಕಾರವುಂಟೇನಯ್ಯಾ??? ಭೂತ ಸೋಂಕಿದ ಮೇಲೆ ಆತ್ಮನಗುಣ ಉಂಟೇನಯ್ಯಾ??? ಪರಮಗುರು ಪಡುವಿಡಿ ಸಿದ್ಧಮಲ್ಲಿನಾಥಪ್ರಭುವೆಂಬ ಲಿಂಗ ಸೋಂಕಿದ ಮೇಲೆ ಅಂಗಗುಣವುಂಟೇನಯ್ಯಾ??? ✍🏻ಹೇಮಗಲ್ಲ ಹಂಪನವರ ವಚನ.. ಬಸವ ಬೆಳಗಿನ ಶರಣು ಶರಣಾರ್ಥಿ ಗಳು 🙏🏻 #ಬಸವಣ್ಣನವರ ವಚನಗಳು #ಶರಣ ಸಾಹಿತ್ಯ #ವಚನಗಳು #//🌳ವಚನ ಸಾಹಿತ್ಯ 🌳// #ಬಸವಾದಿ ಶರಣ ಶರಣೆಯರು


