ShareChat
click to see wallet page
search
ಶ್ರೀ ಗುರು ಬಸವ ಲಿಂಗಾಯ ನಮಃ.. "ಲಿಂಗವ ಧ್ಯಾನಿಸುವನ ಅಂಗ ಕೈಲಾಸದ ರಾಜ್ಯಾಂಗಣ ಕಾಣಿರೊ. ಲಿಂಗವ ನೋಡುವ ಕಂಗಳು ಪರಮಾತ್ಮನಿದಿರಲಿ ಕಟ್ಟಿಹ ನಿಲವುಗನ್ನಡಿ ಕಾಣಿರೊ. ಲಿಂಗವ ಕೊಂಡಾಡುವನ ಜಿಹ್ವೆ ಕೈಲಾಸದಲ್ಲಿ ಸಾರುವ ಪಾರಿಗಂಟೆ ಕಾಣಿರೊ ಲಿಂಗದ ಶ್ರುತಿಯ ಕೇಳುವನ [ಕಿವಿ] ಮಾಣಿಕ ಮುತ್ತಂ ಮುಚ್ಚಿಡುವ ಕರಡಿಗೆ ಕಾಣಿರೊ. ಲಿಂಗವ ಮುಟ್ಟಿ ಪೂಜಿಸಿದವನ ಹಸ್ತ ಸುಹಸ್ತ ಕಾಣಿರೊ. ಇಂತೀ ಲಿಂಗಾಂಗಸಂಗಮರಸದಲ್ಲಿಪ್ಪ ಶರಣಂಗೆ ಅಂಗವಿಕಾರವುಂಟೇನಯ್ಯಾ??? ಭೂತ ಸೋಂಕಿದ ಮೇಲೆ ಆತ್ಮನಗುಣ ಉಂಟೇನಯ್ಯಾ??? ಪರಮಗುರು ಪಡುವಿಡಿ ಸಿದ್ಧಮಲ್ಲಿನಾಥಪ್ರಭುವೆಂಬ ಲಿಂಗ ಸೋಂಕಿದ ಮೇಲೆ ಅಂಗಗುಣವುಂಟೇನಯ್ಯಾ??? ✍🏻ಹೇಮಗಲ್ಲ ಹಂಪನವರ ವಚನ.. ಬಸವ ಬೆಳಗಿನ ಶರಣು ಶರಣಾರ್ಥಿ ಗಳು 🙏🏻 #ಬಸವಣ್ಣನವರ ವಚನಗಳು #ಶರಣ ಸಾಹಿತ್ಯ #ವಚನಗಳು #//🌳ವಚನ ಸಾಹಿತ್ಯ 🌳// #ಬಸವಾದಿ ಶರಣ ಶರಣೆಯರು
ಬಸವಣ್ಣನವರ ವಚನಗಳು - ಹೇಮಗಲ್ಲ ಹಂಪ  ಹೇಮಗಲ್ಲ ಹಂಪ - ShareChat