ShareChat
click to see wallet page
search
ಶ್ರೀ ಗುರು ಬಸವ ಲಿಂಗಾಯ ನಮಃ.. "ಹಳ್ಳ ಮೇರೆದಪ್ಪಿದರೆ ಇಳಿವುದು, ಹೊಳೆ ಮೇರೆದಪ್ಪಿದರೆ ಇಳಿವುದು, ಸಮುದ್ರ ಮೇರೆದಪ್ಪಿದರೆ ಇಳಿವುದು. ಮನ ಮೇರೆದಪ್ಪಿದರೆ ಏರಿ ಇಳಿದು ಕಾಡುತ್ತಿದೆ. ಅದು ಎಂತೆಂದರೆ : ಹಳ್ಳ ಮೇರೆದಪ್ಪಿದರೆ ಸಂಗಡ ಕಾಯಿಯಿಂದ ನಡೆವುದು. ಹೊಳೆ ಮೇರೆದಪ್ಪಿದರೆ ಹರುಗೋಲು ನಡೆವುದು. ಸಮುದ್ರ ಮೇರೆದಪ್ಪಿದರೆ ಭೈತ್ರ ನಡೆವುದು. ಮನ ಮೇರೆದಪ್ಪಿದರೆ ಎನ್ನ ಕೊಂಡು ಮುಳುಗಿತ್ತು. ಈ ಮನ ವೇದ ಶಾಸ್ತ್ರ ಆಗಮದ ಕಟ್ಟಳೆಗೆ ನಿಲ್ಲುವುದೆ? ನಿಲ್ಲದು. ಓದುವುದು ಮನ, ಹೇಳುವುದು ಮನ, ಕೇಳುವುದು ಮನ, ಕೇಳಿ ನರಕಕ್ಕಿಳಿವುದು ಕೆಡುವುದು ಮನ. ಈ ಮನದಂದುಗದ ದಾಳಿಯಲ್ಲಿ ನೊಂದು ಬೆಂದೆನಯ್ಯಾ ಪರಮಗುರು ಪಡುವಿಡಿ ಸಿದ್ಧಮಲ್ಲಿನಾಥಪ್ರಭುವೆ.. ✍🏻 ಹೇಮಗಲ್ಲ ಹಂಪನವರ ವಚನ.. ಬಸವ ಬೆಳಗಿನ ಶರಣು ಶರಣಾರ್ಥಿ ಗಳು 🙏 #ಬಸವಾದಿ ಶರಣ ಶರಣೆಯರು #//🌳ವಚನ ಸಾಹಿತ್ಯ 🌳// #ವಚನಗಳು #ಶರಣ ಸಾಹಿತ್ಯ #ಬಸವಣ್ಣನವರ ವಚನಗಳು
ಬಸವಾದಿ ಶರಣ ಶರಣೆಯರು - ೩೫ ಗರಬನವ ಅವ3ಯುನಮುa ೩೫ ಗರಬನವ ಅವ3ಯುನಮುa - ShareChat