ShareChat
click to see wallet page
search
#ದಿನಕ್ಕೊಂದು ಕಥೆ #🔱 ಭಕ್ತಿ ಲೋಕ #🙏ತಿರುಪತಿ ತಿಮ್ಮಪ್ಪ #ಶ್ರೀನಿವಾಸ ಕಲ್ಯಾಣ 🌷🙏 ಪದ್ಮಾವತಿಯೊಂದಿಗೆ ಶ್ರೀನಿವಾಸನ ಕಲ್ಯಾಣ ಮಾಡಿಸಿದ ಯಶೋಧ :- ದ್ವಾಪರ ಯುಗದ ಕೃಷ್ಣನ ತಾಯಿ ಯಶೋದೆಗೂ, ಕಲಿಯುಗದ ಶ್ರೀನಿವಾ ಸನಿಗೂ ಎತ್ತಣಿಂದ ಎತ್ತ ಸಂಬಂಧ ಎಂದು ಯೋಚಿಸ ಹೊರಟರೆ ಇದು ಭಗವಂತನ ಸಂಕಲ್ಪ. ಕೃಷ್ಣನ ವರದಿಂದ ಕಾರಣ ಜನ್ಮಳಾದಳು ಬಕುಳಾದೇವಿ. ಕಾರ್ಯಕಾರಣಕ್ಕಾಗಿ ಭೃಗು ಮಹರ್ಷಿಯ ನಿಮಿತ್ತ ಶಾಪದಿಂದ ಮಹಾ ವಿಷ್ಣು,ತನ್ನ ಪತ್ನಿ ಮಹಾಲಕ್ಷ್ಮಿಯನ್ನು ಹುಡುಕುವ ಸಲುವಾಗಿ ತನ್ನ ದಿವ್ಯ ರೂಪ ವನ್ನು ವೈಕುಂಠದಲ್ಲಿ ಬಿಟ್ಟು ಮಾನವ ಶರೀರದಿಂದ ಶ್ರೀನಿವಾಸನಾಗಿ ಧರೆಯಲ್ಲಿ ಅವತರಿಸಿದನು. ಧರೆಗಿಳಿದ ಕಾರಣ ಮಾನವ ಸಹಜ ವಾಗಿ ಹಸಿವು ನೀರಡಿ ಕೆ ಗಳಿಂದ ಬಳಲಿ ಒಂದು ಮರದ ಕೆಳಗಿನ ಹುತ್ತದಲ್ಲಿ ಸೇರಿದನು. ತ್ರಿಲೋಕ ಸಂಚಾರಿ ಆದ ನಾರದರು, ಶ್ರೀನಿವಾಸನ ಹಸಿವು- ಬಾಯಾರಿಕೆ- ಬಳಲಿಕೆ ಗಳನ್ನು ತಿಳಿಸುವ ಸಲುವಾಗಿ ಕೊಲ್ಲಾಪುರಕ್ಕೆ ನಡೆದರು. ಪತಿಯ ಮೇಲಿನ ಕೋಪದಿಂದ ವೈಕುಂಠವನ್ನು ತೊರೆದು ಭೂಲೋಕದ ಕೊಲ್ಲಾಪುರ ದಲ್ಲಿ ನೆಲೆಯಾಗಿದ್ದ ಮಹಾಲ ಕ್ಷ್ಮಿಗೆ ಶ್ರೀನಿವಾಸ ಪಡುತ್ತಿದ್ದ ಕಷ್ಟವನ್ನು ತಿಳಿಸಿದರು ತನ್ನ ಪತಿ ಹಸಿವು ಬಳಲಿಕೆಯಿಂದ ಇರುವುದನ್ನು ತಿಳಿದು ಲಕ್ಷ್ಮಿಗೆ ಸಹಿಸಲಾಗ ಲಿಲ್ಲ. ಆಕೆಯ ಸಿಟ್ಟು ಇನ್ನೂ ಹೋಗಿರದ ಕಾರಣ ಅವಳು ಶ್ರೀನಿವಾಸ ಇದ್ದಲ್ಲಿಗೆ ಬರಲಿಲ್ಲ. ಆದರೆ, ದೇವಲೋಕದ ಬ್ರಹ್ಮ ಮತ್ತು ಶಿವನಲ್ಲಿ ಮೊರೆ ಹೋದಳು. ಆಲಿಸಿದ ಬ್ರಹ್ಮನು ಧೇನುವಾಗಿ, ಶಿವನು ಕರುವಾಗಿ ಭೂಮಿಗೆ ಬಂದು ಚೋಳರಾಜನ ಗೋ ಶಾಲೆ ಸೇರಿದರು. ಆ ನಂತರ ಗೋಶಾಲೆಯ ಹಸುಗಳ ಗುಂಪಿನಲ್ಲಿ ಸೇರಿಕೊಂಡು ಶ್ರೀನಿವಾಸನ ಆಶ್ರಯ ತಾಣವಾದ ಹುತ್ತದ ಬಳಿಗೆ ಬಂದ ಕಾಮಧೇನು ಹಾಲು ತುಂಬಿದ ಕೆಚ್ಚಲಿನಿಂದ ಶ್ರೀನಿವಾಸನ ಬಾಯಿಗೆ ಬೀಳುವಂತೆ ಹಾಲು ಸುರಿಸಿ ಹಸಿವು ತಣಿಸಿತು. ಆದರೆ ಒಂದೆರಡು ದಿನದೊಳಗೆ ಈ ವಿಷಯ ಚೋಳ ರಾಜನಿಗೆ ತಿಳಿದು ಅವನು ಗೋ ಶಾಲೆಯ ಗೋಪಾಲಕನಿಗೆ ಪರೀಕ್ಷಿಸಲು ಹೇಳಿದನು. ಗೋಪಾಲಕನು ಹುತ್ತದೊಳಗೆ ಹಾಲು ಸುರಿಸುತ್ತಿದ್ದ ಕಾಮಧೇನುವನ್ನು ಕಂಡ ಸಿಟ್ಟಿನಿಂದ ಹಸುವಿಗೆ ಹೊಡೆಯಲು ಕೈಲಿದ್ದ ಕೋಲನ್ನು ಅದರ ಕಡೆಗೆ ಗುರಿ ಯಿಟ್ಟು ಬೀಸಿ ಒಗೆದನು ಬೀಸಿ ಬಂದ ಕೋಲಿನ ಪೆಟ್ಟು ಕಾಮಧೇನು ವಿಗೆ ಬೀಳದಂತೆ ಶ್ರೀನಿವಾಸ ತನ್ನ ತಲೆಯನ್ನು ಅಡ್ಡ ಹಿಡಿದನು. ಆ ದೊಣ್ಣೆ ಯ ಪ್ರಹಾರದ ಪೆಟ್ಟು ಅವನ ಹಣೆಗೆ ಬಡಿಯಿತು. ಶ್ರೀನಿವಾಸನ ಹಣೆಗೆ ಬಲ ವಾದ ಪೆಟ್ಟು ಬಿದ್ದು ರಕ್ತ ಸುರಿಯಿತು. ನೋವಿನಿಂದ ನರಳ ತೊಡಗಿದ. ಈ ವಿಚಾರ ದೇವಲೋಕದಲ್ಲಿ ತಿಳಿದು ಚರ್ಚೆಯಾಯಿತು. ಅಲ್ಲಿದ್ದ ಗುರು ಬೃಹಸ್ಪತಿ ಗಳು ತಾವೇ ಶ್ರೀನಿವಾಸನಿಗೆ ಆರೈಕೆ ಮಾಡುವುದಾಗಿ ಹೊರಟ ಸಮಯದಲ್ಲಿ ನಾರದರು ಆಗಮಿಸಿ ಅವರೊಂದು ಸಲಹೆ ಕೊಟ್ಟರು. ಬೃಹಸ್ಪತಿಗಳೇ ನೀವು ಹೋಗಿ ಔಷಧಿ ಕೊಡಿ ಆದರೆ ಶ್ರೀನಿವಾಸನಿಗೆ ಆರೈಕೆ ಮಾಡಲು ಅಲ್ಲೊಬ್ಬ ತಾಯಿ ಕಾದಿದ್ದಾಳೆ. ಅವಳು ಶ್ರೀನಿವಾಸನ ಆರೈಕೆ ಪ್ರೀತಿಯಿಂದ ಮಾಡುತ್ತಾಳೆ ಆ ಜವಾಬ್ದಾರಿಯನ್ನು ಅವಳಿಗೆ ಬಿಡಿ ಎಂದರು. ಅಲ್ಲಿದ್ದವರೆಲ್ಲ ಆಶ್ಚರ್ಯ ಚಕಿತರಾಗಿ ಇದೇನು ಶ್ರೀನಿವಾಸನಿಗೆ ತಾಯಿಯೇ ಯಾರು ಆಕೆ ?ಎಂದಾಗ, ನಾರದರು ದ್ವಾಪರ ಯುಗದ ನೆನಪು ಮಾಡಿ ದರು. ಮೂರು ಸಾವಿರ ವರ್ಷಗಳ ಹಿಂದೆ ಮಥುರಾ ನಗರದಲ್ಲಿ ವಸುದೇವ ದೇವಕಿಗೆ ಹುಟ್ಟಿದ ಮಗು ಕೃಷ್ಣನನ್ನು,‌ ಕಂಸನದೃಷ್ಟಿಯಿಂದ ತಪ್ಪಿಸಲು, ವಿಷ್ಣುವಿನ ಆದೇಶದಂತೆ, ವಸುದೇವನು ಆಗ ತಾನೇ ಹುಟ್ಟಿದ ಹಸು ಗೂಸನ್ನು ಬುಟ್ಟಿಯಲ್ಲಿ ಹೊತ್ತು ತಂದು ಗೋಕುಲದ ಯಶೋಧ -ನಂದರ ಮನೆಯಲ್ಲಿ ಬಿಡುತ್ತಾನೆ. ಮುಂದೆ ಕೃಷ್ಣನು, ತಾಯಿ ಯಶೋಧೆಯ ಮುದ್ದಿನ ಆರೈಕೆಯಲ್ಲಿ ಬೆಳೆಯುತ್ತಾನೆ. ಇತ್ತ ಮಧುರಾದಲ್ಲಿ ಕೃಷ್ಣನ ಸೋದರ ಮಾವ ಕಂಸನು ಕೃಷ್ಣನನ್ನು ಸಂಹರಿಸಲು ತಂತ್ರರೂಪಿಸಿ ಕೃಷ್ಣ - ಬಲರಾಮರನ್ನು ಮಥುರಾಕ್ಕೆ ಕರೆಸುವ ಸಲುವಾಗಿ ಕುಸ್ತಿ ಕಾಳಗ ಸ್ಪರ್ಧೆ ಏರ್ಪಡಿಸಿ ಅವರಿಗೆ ಬರಲು ಆಹ್ವಾನ ಕೊಟ್ಟು ಕರೆ ತರಲು ಅಕ್ರೂರನನ್ನು ಕಳಿಸಿದನು. ಕಂಸನ ಕುತಂತ್ರವನ್ನು ಬಲ್ಲ ಕೃಷ್ಣನು ಮಧುರಾಕ್ಕೆ ಬೇಕೆಂದೆ ಹೋಗಿ ಅಲ್ಲಿ ಕಂಸನ ಸಂಹಾರ ಮಾಡಿ ಹೆತ್ತವರಾದ ವಸುದೇವ - ದೇವಕಿಯರನ್ನು ಬಂಧಮುಕ್ತ ಗೊಳಿಸಿದನು. ಆನಂತರ ಮತ್ತೆ ಅವನೆಂದೂ ಗೋಕುಲಕ್ಕೆ ಬರಲೇ ಇಲ್ಲ. ದೇಶದ ಉದ್ದಗಲಕ್ಕೂ ಸಂಚರಿಸುವುದೇ ಆಯಿತು. ಎಷ್ಟೋ ವರ್ಷಗಳು ಕಳೆದ ಮೇಲೆ ಒಮ್ಮೆ ಯಶೋಧಾ ತಾಯಿ ಕೃಷ್ಣನ ಅರಮನೆಗೆ ಬಂದಾಗ ಅಷ್ಟಮಹಿಷಿಯರಲ್ಲದೆ ಅದರ ಮೇಲೆ ಮತ್ತೆ 16,000 ಕನ್ಯೆಯರನ್ನು ವಿವಾಹವಾದ ವಿಷಯ ತಿಳಿದು ಯಶೋಧ ತಾಯಿಗೆ ಬೇಸರವಾಯಿತು. ಕೃಷ್ಣನ ಮದುವೆಯನ್ನು ತಾನೇ ಮುಂದೆ ನಿಂತು ಮಾಡಿ ಆ ಸಂಭ್ರಮವನ್ನು ಕಣ್ತುಂಬಿ ಕೊಳ್ಳುವ ಕನಸನ್ನು ಕಂಡಿದ್ದಳು. ಬೇಸರದಿಂದ ನೀನು ನನಗೆ ತಿಳಿಸದೆ ಮದುವೆಯಾಗಿರುವೆ ನಿನ್ನ ವಿವಾಹ ನೋಡುವ ಭಾಗ್ಯವನ್ನು ನನಗೆ ಕರುಣಿಸಲಿಲ್ಲ ಎಂದು ಕೃಷ್ಣನಿಗೆ ಹೇಳಿದಾಗ ಕೃಷ್ಣನು ಬೇಸರ ಪಡಬೇಡ ಮುಂದಿನ ಕಲಿಯುಗದಲ್ಲಿ ನಿನ್ನ ಕೈಯಾರೆ ನನ್ನ ವಿವಾಹವನ್ನು ಸಂಭ್ರಮ ದಿಂದ ಮಾಡುವೆ ಎಂದು ತಾಯಿ ವರ ಕೊಟ್ಟಿದ್ದ. ಅದರಂತೆ ಕಲಿಯುಗ ಕಾಲಿಟ್ಟಾಗ ಯಶೋದೆ ಸಪ್ತಗಿರಿಯಲ್ಲಿ ಬಕುಳಾ ದೇವಿಯಾಗಿ ಅವತರಿಸಿ ವರಾಹನದಿ ತಟದ ಪುಷ್ಕರಣಿಯಲ್ಲಿ ಸ್ನಾನ ಮಾಡಿ ಬರುತ್ತಿರುವ ಆಕೆಯನ್ನು ನಾರದರು ದೇವಲೋಕದ ಸಭೆಯಲ್ಲಿದ್ದವರಿಗೆ ತೋರಿಸಿದರು. ಇತ್ತ ಪೆಟ್ಟು ತಿಂದು ರಕ್ತ ಸುರಿಯುತ್ತಿದ್ದ ಶ್ರೀನಿವಾಸ ಒಬ್ಬನೇ ಪುಷ್ಕರಣಿಯ ಮೆಟ್ಟಿಲ ಮೇಲೆ ಕುಳಿತಿದ್ದನು. ಆಗತಾನೆ ಸ್ನಾನ ಮುಗಿಸಿ ಬಂದ ಬಕುಳಾ ದೇವಿ ಆತನನ್ನು ನೋಡಿ ಯಾರಪ್ಪ ನೀನು? ಎಲ್ಲಿಂದ ಬಂದಿರುವೆ? ಏನಿ ದು ನಿನ್ನ ಗಾಯ? ಎಂದೆಲ್ಲಾ ಕೇಳಿದಾಗ ಶ್ರೀನಿವಾಸನು ಅಮ್ಮಾ ಎಂದು ಕರೆಯುತ್ತಿದ್ದಂತೆ, ಬಕುಳಾ ದೇವಿಗೆ ಅಮ್ಮಾ ಎಂಬ ಶಬ್ದ ಕಿವಿಗೆ ಬೀಳುತ್ತಿದ್ದ ಹಾಗೆ ತಾಯಿಯ ಕರುಳು ಚುರುಕ್ ಎಂದಿತು. ಅಮ್ಮಾ ನನ್ನ ಹೆಸರು ಶ್ರೀನಿ ವಾಸ ಸ್ವಲ್ಪ ಪೆಟ್ಟು ಬಿದ್ದಿದೆ ಎಂದನು ತಾಯಿ ಕರುಳು ಕೇಳಬೇಕಲ್ಲವೇ? ಇದೇನು ಸಣ್ಣ ಗಾಯವೇ? ಎಷ್ಟೊಂದು ರಕ್ತ ಸುರಿಯುತ್ತಿದೆ ಎಂದು ತನ್ನ ಸೀರೆಯ ಸೆರಗಿನ ಅಂಚನ್ನು ಹರಿದು ಹಣೆಗೆ ಕಟ್ಟಲು ಹೊರಟಾಗ ಅಮ್ಮ ತಡೆಯಿರಿ ಎಂದು ಧ್ವನಿ ಕೇಳಿದಾಗ ತಿರುಗಿ ನೋಡಿದಳು, ಕೈಯಲ್ಲಿ ಔಷಧಿ ಹಿಡಿದು ಧನ್ವಂತರಿಯಂತೆ ಒಬ್ಬ ವ್ಯಕ್ತಿ ನಿಂತಿದ್ದನು. ಆತ ಬೇರೆ ಯಾರೊ ಆಗಿರದೇ ದೇವಗುರು ಬೃಹಸ್ಪತಿ. ಆ ಔಷಧಿ ಯನ್ನು ಬಕುಳಾದೇವಿ ಕಟ್ಟಲು ಹಿಡಿದಿದ್ದ ಸೀರೆಯ ತುಂಡಿನೊಳಗೆ ಹಾಕಿ ಈಗ ಇದನ್ನು ಕಟ್ಟಿ ಎಂದನು. ಬಕುಳಾದೇವಿ ಔಷಧಿ ತುಂಬಿದ ಸೆರಗಿನ ಅಂಚನ್ನು ಶ್ರೀನಿವಾಸನ ಹಣೆಗೆ ಕಟ್ಟಿ, ಬಂದ ವ್ಯಕ್ತಿಯ ಕಡೆ ತಿರುಗಿ ಸಮಯಕ್ಕೆ ಸರಿಯಾಗಿ ಬಂದಿರುವೆಯಲ್ಲ ಇದು ಯಾವ ಜನ್ಮದ ಸಂಬಂಧವೂ ನಾಕಾಣೆ ಇವನು ಅಮ್ಮ ಎಂದು ಕರೆದಾಗಲೇ ನನಗೆ ನನ್ನ ಮಗ ಎಂದು ಅನಿಸುತ್ತಿದೆ. ಹೀಗೆ ಆರೈಕೆ ಮಾಡು ತ್ತಲೇ ಶ್ರೀನಿವಾಸನಿಗೆ ಯಾರಪ್ಪ ನೀನು ಎಲ್ಲಿಂದ ಬಂದಿರುವೆ ನಿನ್ನ ತಂದೆ ತಾಯಿ ಬಂಧು ಬಳಗ ಎಲ್ಲಿರುವರು ಎಂದು ಕೇಳಿದಾಗ ಅಮ್ಮ ನನಗೆ ಯಾರು ಇಲ್ಲ ನೀನೇ ನನ್ನ ತಾಯಿ ಎಂದನು. ಈ ಕಥೆಯನ್ನು ಬರಹ ರೂಪಕ್ಕೆ ತಂದವರು — ಆಶಾ ನಾಗಭೂಷಣ. ತಾಯಿಯ ಮಮತೆ ಉಕ್ಕಿಬಂದು ಈ ರೀತಿ ಪೆಟ್ಟು ಮಾಡಿದವರು ಯಾರು ಅಂತ ಹೇಳು ಅವರನ್ನು ಸುಮ್ಮನೆ ಬಿಡುವುದಿಲ್ಲ ಎಂದಳು. ಹೋಗಲಿ ಬಿಡಮ್ಮ ಕಳೆದು ಹೋದ ವಿಚಾರ ಬೇಡ ಈಗ ನನಗೆ ಹಸಿವಾಗುತ್ತಿದೆ ಅಮ್ಮ ಹೇಳು ಅಮ್ಮ ಹೇಳು ನಿನ್ನ ಮನೆ ಎಲ್ಲಿದೆ? ನೀನು ಯಾರ ಜೊತೆ ಇರುವೆ ಎಂದನು ಬಕುಳಾದೇವಿ ನನಗೂ ಯಾರು ಇಲ್ಲ ನಾನು ಒಬ್ಬಂಟಿಯಾಗಿರುವೆ ಎಂದಳು. ಶ್ರೀನಿವಾಸ ಹೇಳಿದ ಯಾರೂ ಇಲ್ಲ ಎಂದು ಏಕೆ ಹೇಳುವೆ, ಭಗವಂತ ನಿನ್ನ ಜೊತೆಗಿರುತ್ತಾನೆ. ಏಕಾಂಗಿ ಯಾಗಿ ಯಾರು ಇರುವು ದಿಲ್ಲ ಇನ್ನು ಮುಂದೆ ನಾನೇ ನಿನ್ನ ಮಗ ನೀನೇ ನನಗೆ ಅಮ್ಮ ಎಂದನು. ಈ ರೀತಿಯಾಗಿ ಅಮ್ಮ ಮಗನ ಬಾಂಧವ್ಯ ಮುಂದುವರೆಯಿತು. ತಾಯಿಯ ಆರೈಕೆಯಲ್ಲಿ ಶ್ರೀನಿವಾಸ ಚೇತರಿಸಿ ಕೊಂಡನು. ಮುಂದೆ ಆಕಾಶ ರಾಜನ ಮಗಳಾದ ಪದ್ಮಾವತಿ ಯೊಂದಿಗೆ ಮಗ ಶ್ರೀನಿವಾಸನ ಮದುವೆಯನ್ನು ಬಕುಳಾದೇವಿಯೇ ಮುಂದೆ ನಿಂತು, ಹಿಂದೆ ಅಂತ ಮದುವೆ ಯಾಗಿಲ್ಲ ಮುಂದೆ ಆಗುವುದಿಲ್ಲ ಅನ್ನುವ ಹಾಗೆ, ಶ್ರೀನಿವಾಸನು ತನ್ನ ಮದುವೆಗಾಗಿ ಕುಬೇರನ ಹತ್ತಿರ ಸಾಲ ಮಾಡಿ ಬಾರಿ ಮದುವೆಯನ್ನು ಸಂಭ್ರಮ ಸಡಗರದಿಂದ ಮಾಡಿ ಕೊಂಡನು. ಅಂತಹ ಶ್ರೀನಿವಾಸ ಪದ್ಮಾವತಿ ರ ಕಲ್ಯಾಣಕ್ಕೆ ಸಾಕ್ಷಿಯಾಗಿ ದ್ವಾಪರದ ಯಶೋದೆ ಕಲಿಯುಗದಲ್ಲಿ ಬಕುಳಾದೇವಿಯಾಗಿ ಆ ಸಂಭ್ರಮವನ್ನು ಕಣ್ತುಂಬಿ ಕೊಂಡಳು. ( ತ್ರೇತಾಯುಗದಲ್ಲಿ ರಾವಣ ಸೀತೆಯನ್ನು ಅಪಹರಿಸಿದಾಗ ಸೀತೆಯ ಬದಲಿಗೆ ಅಲ್ಲಿ ‘ವೇದವತಿ’ ಇದ್ದು, ರಾಮ ರಾವಣರ ಯುದ್ಧವೆಲ್ಲ ಮುಗಿದ ನಂತರ ರಾಮನು ವೇದವತಿಗೆ ಏನು ವರ ಬೇಕು ಎಂದು ಕೇಳಿದಾಗ ನೀನು ನನ್ನನ್ನು ವಿವಾಹ ಆಗಬೇಕು ಎಂದಳಂತೆ ರಾಮ ಆಗ ಏಕ ಪತ್ನಿ ವ್ರತಸ್ಥ ನಾದುದರಿಂದ ಮುಂದಿನ ಯುಗದಲ್ಲಿ ಶ್ರೀನಿವಾಸನಾಗಿ ಬಂದು ನಿನ್ನನ್ನು ವಿವಾಹ ಆಗಬೇಕು ಎಂದು ಮಾತು ಕೊಟ್ಟಿದ್ದನಂತೆ ಅದರಂತೆ ವೇದವತಿಯೇ ಪದ್ಮಾವತಿಯಾಗಿ ಜನಿಸಿ ರಾಮನೆ ಶ್ರೀನಿವಾಸನಾಗಿ ಅವಳ ಇಚ್ಛೆಯಂತೆ ವಿವಾಹವಾದನು. ಮುಂದೆ ಲಕ್ಷ್ಮಿಗೂ ಮತ್ತು ಪದ್ಮಾವತಿ ಸರಿ ಬರದೆ ಶ್ರೀನಿವಾಸ ತಿರುಪತಿಯಲ್ಲಿ ಕಲ್ಲಾದ ಎನ್ನುವ ಕಥೆಯು ಇದೆ.) ಕಲ್ಯಾಣಾದ್ಭುತಗಾತ್ರಾಯ ಕಾಮಿತಾರ್ಥ ಪ್ರದಾಯಿನೇ ! ಶ್ರೀಮದ್ವೇಂಕಟನಾಥಾಯ ಶ್ರೀನಿವಾಸಾಯ ಮಂಗಳಮ್ !! ವಂದನೆಗಳೊಂದಿಗೆ, ಬರಹ: ©ಆಶಾ ನಾಗಭೂಷಣ — ಹಕ್ಕುಗಳು ಸಂರಕ್ಷಿತ #ashanagabhushan #ಆಶಾನಾಗಭೂಷಣ
ದಿನಕ್ಕೊಂದು ಕಥೆ - Asha Nagabhushana Sories Asha Nagabhushana Sories - ShareChat