#📜ಪ್ರಚಲಿತ ವಿದ್ಯಮಾನ📜
ಬಿಜೆಪಿ ಅಂಧ ಭಕ್ತರಿಗೆ ಮಾತ್ರ ಬೆಲೆ ಹೆಚ್ಚಳ ಮಾಡಿ: ಹೆಚ್.ಎಸ್.ಮಂಜುನಾಥ್ ಗೌಡ
ವಾಣಿಜ್ಯ ಸಿಲಿಂಡರ್ ಬೆಲೆ ಹೆಚ್ಚಳ ವಿರೋಧಿಸಿ ಯುವ ಕಾಂಗ್ರೆಸ್ ಸಮಿತಿ ಪ್ರತಿಭಟನೆ
ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಕೇಂದ್ರ ಸಚಿವೆ ಶೋಭ, ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಮೌನದ ವಿರುದ್ಧ ಆಕ್ರೋಶ
ಬೆಂಗಳೂರು: ಫ್ರೀಡಂ ಪಾರ್ಕ್ ನಲ್ಲಿ ಕೇಂದ್ರದ ಬಿಜೆಪಿ ಸರ್ಕಾರ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಭಾರೀ ಏರಿಕೆ ಮಾಡಿರುವುದನ್ನ ಖಂಡಿಸಿ ಮತ್ತು ಸಣ್ಣ ವ್ಯಾಪಾರಿಗಳು, ಹೋಟಲ್ ಉದ್ಯಮಿಗಳು ಮತ್ತು ಸಾರ್ವಜನಿಕರ ಪರವಾಗಿ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿ ರಾಜ್ಯಾಧ್ಯಕ್ಷ ಹೆಚ್.ಎಸ್.ಮಂಜುನಾಥ್ ಗೌಡ ನೇತೃತ್ವದಲ್ಲಿ ಖಾಲಿ ಸಿಲಿಂಡರ್ ಪ್ರದರ್ಶನದ ಮೂಲಕ ವಿನೂತನವಾಗಿ ಪ್ರತಿಭಟನೆ ಮಾಡಿದರು.
ಇದೇ ಸಂದರ್ಭದಲ್ಲಿ ಮಾತನಾಡಿದ ಹೆಚ್.ಎಸ್.ಮಂಜುನಾಥ್ ಗೌಡ, ಚುನಾವಣೆಗೋಸ್ಕರ ದರ ಏರಿಕೆ ಮಾಡದೆ, ಇದೀಗ ವಾಣಿಜ್ಯ ಗ್ಯಾಸ್ ದರ 990 ರೂಪಾಯಿ ಹೆಚ್ಚಳ ಮಾಡಿ, ಬೀದಿಬದಿಯ ಸಣ್ಣ ವ್ಯಾಪಾರಿಗಳು ಮತ್ತು ಹೋಟೆಲ್ ನವರಿಗೆ ಬಹಳ ಸಂಕಷ್ಟ ಎದುರಿಸುವ ಪರಿಸ್ಥಿತಿ ಬಂದಿದೆ ಎಂದರು.
ಸಿಲಿಂಡರ್ ಬೆಲೆ ಏರಿಕೆ ವಿಷಯದ್ಲಿ ರಾಜ್ಯದಿಂದ ಆಯ್ಕೆಯಾಗಿರುವ ಬಿಜೆಪಿ ಸಂಸದರು ಮೌನವಹಿಸಿದ್ದಾರೆ. ಕೇಂದ್ರ ಸರ್ಕಾರ ಬಿಜೆಪಿ ಅಂಧ ಭಕ್ತರಿಗೆ ಗ್ಯಾಸ್ ಬೆಲೆ ಹೆಚ್ಚಳ ಮಾಡಿ ಕೊಡಿ ಅವರು ಸಹಿಸಿಕೊಳ್ಳುತ್ತಾರೆ, ಸಾಮಾನ್ಯ ಜನರಿಗೆ ದರ ಕಡಿಮೆ ಮಾಡಿ ಎಂದು ಆಗ್ರಹಿಸಿದರು.
ಇಷ್ಟು ದಿನ ಬಿಜೆಪಿ ಸರ್ಕಾರ ಬೆಲೆ ಏರಿಕೆ ಮಾಡಿಲ್ಲ, ಪಂಚ ರಾಜ್ಯ ಚುನಾವಣೆ ನಂತರ ಗದಾಪ್ರಹಾರ ಮಾಡಿದ್ದಾರೆ. ವಾಣಿಜ್ಯ ಗ್ಯಾಸ್ ದರ ಏರಿಕೆಯಿಂದ ಆಹಾರ, ತಿನಿಸುಗಳ ಬೆಲೆ ಹೆಚ್ಚಳವಾಗಲಿದೆ. ಇದರಿಂದ ವ್ಯಾಪಾರ ಕುಸಿತವಾಗಲಿದೆ. ಸಣ್ಣ ಉದ್ಯಮಿದಾರರು, ಹೋಟೆಲ್ ಗಳು ನಂಬಿರುವ ಕೋಟ್ಯಂತರ ಜನರ ಜೀವನ ಬೀದಿ ಪಾಲಾಗಲಿದೆ. ಆರ್ಥಿಕ ಕುಸಿತವಾಗಿ ದೇಶ ಕಂಗಾಲು ಆಗುವ ಪರಿಸ್ಥಿತಿ ಬರುತ್ತದೆ ಎಂದರು.
ಕಾಂಗ್ರೆಸ್ ಪಕ್ಷದ ಆಡಳಿತದಲ್ಲಿ 2 ರೂಪಾಯಿ ಹೆಚ್ಚಾದರೆ ಬೀದಿಗೆ ಬಂದು ಗಲಾಟೆ ಮಾಡುತ್ತಿದ್ದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಯವರು ಇಂದು 990 ರೂಪಾಯಿ ಗ್ಯಾಸ್ ದರ ಏರಿಕೆ ಮಾಡಿದೆ. ಈಗ ಯಾಕೆ ಮಾತನಾಡುತ್ತಿಲ್ಲ? ಶೋಭ ಮೇಡಮ್. ಸಂಸದ ತೇಜಸ್ವಿಸೂರ್ಯ ಎಲ್ಲಿದ್ದೀಯಪ್ಪ? ಎಂದು ಕೇಳಿದ ಅವರು, ಕೇಂದ್ರ ಬಿಜೆಪಿ ಸರ್ಕಾರದ ವಿರುದ್ದ ರಾಜ್ಯಾದ್ಯಂತ ಯುವ ಕಾಂಗ್ರೆಸ್ ಸಮಿತಿ ಹೋರಾಟ ಮತ್ತು ಪ್ರತಿಭಟನೆ ಮಾಡಲಿದೆ ಎಂದರು.
#BJP #increas #prices #only #blinddevotees #HSManjunathGowda #malgudiexpress #malgudinews #news #TopNews


