*ಎಲ್ಲ ಕಾಯಕ ಜೀವಿಗಳಿಗೆ ಶರಣು ಶರಣಾರ್ಥಿಗಳು*
*ಮಾದಾರ ಧೂಳಯ್ಯನವರ ವಚನ*
ಸತ್ಯಶುದ್ಧಕಾಯಕವ ಮಾಡಿ ತಂದು,
ವಂಚನೆಯಿಲ್ಲದೆ ಪ್ರಪಂಚಳಿದು,
ನಿಚ್ಚಜಂಗಮಕ್ಕೆ ದಾಸೋಹವ ಮಾಡುವ ಸದ್ಭಕ್ತನ ಹೃದಯದೊಳಗೆ ಅಚ್ಚೊತ್ತಿದಂತಿಪ್ಪ, ಕಾಮಧೂಮ ಧೂಳೇಶ್ವರ.
ಸಮಗ್ರ ವಚನ ಸಂಪುಟ: 8 ವಚನದ ಸಂಖ್ಯೆ: 1266 #ಬಸವಾದಿ ಶರಣ ಶರಣೆಯರು #//🌳ವಚನ ಸಾಹಿತ್ಯ 🌳// #ವಚನಗಳು #ಶರಣ ಸಾಹಿತ್ಯ #ಬಸವಣ್ಣನವರ ವಚನಗಳು


