"ಹಾವಿನ ಹೆಡೆಗಳ ಕೊಂಡು
ಕೆನ್ನೆಯ ತುರಿಸಿಕೊಂಬಂತೆ, ಉರಿವ ಕೊಳ್ಳಿಯ ಕೊಂಡು ಮಂಡೆಯ ಸಿಕ್ಕ ಬಿಡಿಸುವಂತೆ, ಹುಲಿಯ ಮೀಸೆಯ ಹಿಡಿದುಕೊಂಡು ಒಲೆದುಯ್ಯಲ ನಾಡುವಂತೆ, ಕೂಡಲಸಂಗನ ಶರಣರೊಡನೆ ಮರೆದು ಸರಸವಾಡಿದರೆ ಸುಣ್ಣಕಲ್ಲ ಮಡಿಲಲ್ಲಿ ಕಟ್ಟಿಕೊಂಡು ಮಡುವ ಬಿದ್ದಂತೆ!.. ✍️ ವಿಶ್ವಗುರು ಬಸವಣ್ಣನವರ ವಚನ.. ಶರಣು ಶರಣಾರ್ಥಿಗಳು 🙏 #ಬಸವಣ್ಣನವರ ವಚನಗಳು #ಶರಣ ಸಾಹಿತ್ಯ #ವಚನಗಳು #ಬಸವಾದಿ ಶರಣ ಶರಣೆಯರು #//🌳ವಚನ ಸಾಹಿತ್ಯ 🌳//


