Edu ವೀರ
ಚೆನ್ನಮ್ಮ ಅಂತ್ಯಕ್ರಿಯೆ: ಜು.20ರಂದು ಹೊಳೆನರಸೀಪುರ ತಾಲೂಕಿನ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡರ ಪತ್ನಿ ಚೆನ್ನಮ್ಮ ಅವರು ಅನಾರೋಗ್ಯದಿಂದ ಇಹಲೋಕ ತ್ಯಜಿಸಿದ್ದು, ಅಂತ್ಯಕ್ರಿಯೆ ಸೋಮವಾರ ನಡೆಯಲಿದೆ. ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಬೆಟ್ಟದ ರಂಗನಾಥ್ ತಪ್ಪಲಿನಲ್ಲಿ ಒಕ್ಕಲಿಗರ ಸಂಪ್ರದಾಯದಂತೆ ಅಂತ್ಯಕ್ರಿಯೆ ನಡೆಯಲಿದ್ದು, ಈಗಾಗಲೇ ಎಲ್ಲಾ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ಇನ್ನು ಮುಂಜಾಗ್ರತಾ ಕ್ರಮವಾಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಹಾಸನ, (ಜುಲೈ 19) : ಮಾಜಿ ಪ್ರಧಾನಿ ದೇವೇಗೌಡರ (HD Deve Gowda) ಪತ್ನಿ ಚೆನ್ನಮ್ಮ (Chennamma Devegowda) ನಿಧನರಾಗಿದ್ದು, ನಾಳೆ ಅಂದರೆ ಜುಲೈ 20ರಂದು ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಮಾವಿನಕೆರೆ ಶ್ರೀರಂಗನಾಥಸ್ವಾಮಿ ಬೆಟ್ಟದ ತಪ್ಪಲು ಪ್ರದೇಶದಲ್ಲಿರುವ ಕ್ಯಾತನಹಳ್ಳಿಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ. ಇದಕ್ಕಾಗಿ ಈಗಾಗಲೇ ಹಾಸನ ಜಿಲ್ಲಾಡಳಿತ ಸಹ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಮುಂಜಾಗ್ರತಾ ಕ್ರಮವಾಗಿ ತಾಲೂಕಿನ ಎಲ್ಲಾ ಶಾಲಾ ಕಾಲೇಜುಗಳಿಗೆ (school and colleges) ರಜೆ ಘೋಷಣೆ ಮಾಡಿದೆ. ಹೌದು..ಸೋಮವಾರ ಜುಲೈ 20ರಂದು ಹೊಳೆನರಸೀಪುರ ತಾಲ್ಲೂಕಿನ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆ ಹಾಗೂ ಕಾಲೇಜುಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿ ಲತಾಕುಮಾರಿ ಘೋಷಣೆ ಮಾಡಿದ್ದಾರೆ.ಮುಂಜಾಗ್ರತಾ ಕ್ರಮವಾಗಿ ರಜೆ ಘೋಷಣೆಮಾಜಿ ಪ್ರಧಾನಿ ಪತ್ನಿಯಾಗಿರುವುದರಿಂದ ಚೆನ್ನಮ್ಮನ ಅಂತ್ಯಕ್ರಿಯೆಗೆ ಅನೇಕ ಗಣ್ಯರು, ರಾಜಕೀಯ ನಾಯಕರು, ಮುಖಂಡರು, ಕಾರ್ಯಕರ್ತರು ಸೇರಿದಂತೆ ಅವರ ಅಭಿಮಾನಿಗಳು ಬರಲಿದ್ದಾರೆ. ಹೀಗಾಗಿ ವಿದ್ಯಾರ್ಥಿಗಳ ಸಂಚಾರಕ್ಕೆ ತೊಡಕಾಗುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಸೋಮವಾರ ಹೊಳೆನರಸೀಪುರ ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.ಬೆಟ್ಟದ ರಂಗನಾಥನ ತಪ್ಪಲಿನಲ್ಲೇ ಚೆನ್ನಮ್ಮನ ಅಂತ್ಯಕ್ರಿಯೆ ಏಕೆ? ಕಾರಣ ಬಿಚ್ಚಿಟ್ಟ ಅಳಿಯಹೊಳೆನರಸೀಪುರ ಪಟ್ಟಣ ಬಂದ್ಚೆನ್ನಮ್ಮ ನಿಧನ ಹಿನ್ನೆಲೆ ನಾಳೆ (ಜುಲೈ 20) ಹೊಳೆನರಸೀಪುರ ಪಟ್ಟಣದ ಅಂಗಡಿ ಮುಗ್ಗಟ್ಟು ಬಂದ್ ಆಗಲಿವೆ. ವರ್ತಕರು ತಮ್ಮ ತಮ್ಮ ಅಂಗಡಿಗಳನ್ನು ಬಂದ್ ಮಾಡಿ ಚನ್ನಮ್ಮರಿಗೆ ಸಂತಾಪ ಸೂಚಿಸಲು ನಿರ್ಧರಿಸಿದ್ದಾರೆ. ಹೀಗಾಗಿ ಹೊಳೆನರಸೀಪುರ ಪಟ್ಟಣ ಸಂಪೂರ್ಣ ಸ್ತಬ್ಧವಾಗಲಿದೆ. ಇನ್ನು ಈಗಾಗಲೇ ಇಂದು ಮತ್ತು ನಾಳೆ (ಸೋಮವಾರ) ಜಿಲ್ಲೆಯಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ.ಶ್ರೀರಂಗನಾಥಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ಚೆನ್ನಮ್ಮ ಅಂತ್ಯಕ್ರಿಯೆನಾಳೆ ಹೊಳೆನರಸೀಪುರದಲ್ಲೂ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಬೆಳಗ್ಗೆ 7 ಗಂಟೆಯಿಂದ 9:30ರವರೆಗೆ ಅಂತಿಮ ದರ್ಶನಕ್ಕೆ ಅವಕಾಶ ಇರಲಿದೆ. ಬಳಿಕ 11:30ಕ್ಕೆ ಮಾವಿನಕೆರೆ ಶ್ರೀರಂಗನಾಥಸ್ವಾಮಿ ಬೆಟ್ಟದ ತಪ್ಪಲು ಪ್ರದೇಶದಲ್ಲಿರುವ ಕ್ಯಾತನಹಳ್ಳಿಗೆ ಮೃತದೇಹ ತಲುಪಲಿದೆ. ನಂತರ ಮಧ್ಯಾಹ್ನ 2 ರಿಂದ ಸಂಜೆ 4:15ರವರೆಗೆ ವಾಸ್ತು ಪ್ರಕಾರವೇ ಅಂತ್ಯಕ್ರಿಯೆ ನಡೆಯಲಿದೆ. ಪುರೋಹಿತರಾದ ಕಣ್ಣನ್ ಶರ್ಮಾ, ಮಹೇಶ್ ಶರ್ಮಾ, ನರಸಿಂಹಸ್ವಾಮಿ ಅಂತಿಮ ವಿಧಿವಿಧಾನ ನೆರವೇರಿಸಿ ಒಕ್ಕಲಿಗ ಸಂಪ್ರದಾಯದಂತೆ ಅಂತ್ಯಕ್ರಿಯೆ ನಡೆಯಲಿದೆ.ಗಣ್ಯರಿಗಾಗಿ 5 ಹೆಲಿಪ್ಯಾಡ್, 2 ಸಾವಿರ ಪೊಲೀಸ್ ಭದ್ರತೆಹೊಳೆನರಸೀಪುರದ ರೇವಣ್ಣ ನಿವಾಸಕ್ಕೆ ಚೆನ್ನಮ್ಮ ಪಾರ್ಥಿವ ಶರೀರ ಆಗಮಿಸಲಿದು,. ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ರೇವಣ್ಣ ನಿವಾಸದ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಡಾಗ್ ಸ್ಕ್ವಾಡ್ ಹಾಗೂ ಬಾಂಬ್ ನಿಷ್ಕ್ರೀಯ ದಳ ಪರಿಶೀಲನೆ ಮಾಡಿದೆ. ಇನ್ನು 5 ಎಸ್ಪಿಗಳ ನೇತೃತ್ವದಲ್ಲಿ 2 ಸಾವಿರಕ್ಕೂ ಹೆಚ್ಚು ಪೊಲೀಸರನ್ನ ನಿಯೋಜಿಸಲಾಗಿದೆ. ಇನ್ನು ಅಂತ್ಯಕ್ರಿಯೆ ಬರುವ ಗಣ್ಯರಿಗಾಗಿ ಒಟ್ಟು ಐದು ಹೆಲಿಪ್ಯಾಡ್ಗಳನ್ನು ನಿರ್ಮಾನಿಸಲಾಗಿದೆ. #👉ಚೆನ್ನಮ್ಮ ಅಂತ್ಯಕ್ರಿಯೆ ಇಂದು ಶಾಲೆ-ಕಾಲೇಜ್ಗಳಿಗೆ ರಜೆ ಘೋಷಣೆ!📢