ShareChat
click to see wallet page
search
#🔴ಲೇಟೆಸ್ಟ್ ನ್ಯೂಸ್ ಅಪ್ಡೇಟ್ಸ್ #ದಿನಪತ್ರಿಕೆ #📜ಪ್ರಚಲಿತ ವಿದ್ಯಮಾನ📜 #🧠 ಸಾಮಾನ್ಯ ಜ್ಞಾನ & ಕರೆಂಟ್ ಅಫೇರ್ಸ್ 🧠 #🤓ಸರಕಾರಿ ಉದ್ಯೋಗ ಅಪ್ಡೇಟ್ಸ್
🔴ಲೇಟೆಸ್ಟ್ ನ್ಯೂಸ್ ಅಪ್ಡೇಟ್ಸ್ - ಸುವರ್ಣ ಕರ್ನಾಟಕ ಪ್ರಶಸ್ತಿ ಪುರಸ್ಕೃತ SAMYUKTA KARNATAKA ಸಂಯುಕ್ತ ಕರ್ನಾಟಕ ಕನ್ನಡಿಗರ ಸಾಕ್ಷಿಪ್ರಜೆ ಶತಕದತ್ತ ಓಟ ... ತೊಂಬತ್ತರ ನೋಟ ಮಾದಕ ದ್ರವ್ಯ ಪಿಡುಗಿನ ನಿವಾರಣೆಗೆ ವಿದ್ಯಾರ್ಥಿಗಳು ಸಜ್ಜಾಗಲಿ ವಿರಾಜಪೇಟೆಯಲ್ಲಿ ಮಾದಕ ವಸ್ತುಗಳ ವಿರೋಧಿ ಕಾಠ್ಯಕ್ರಮ ಮಾದಕ ವಸ್ತುಗಳ ವಿರುದ್ಧ ಸಮರ ಸಾರಬೇಕಿದೆ ಸಂ.ಕ.ಸಮಾಚಾರ , ಮಡಿಕೇರಿ ವಿದ್ಯಾರ್ಥಿಗಳು ದುಶ್ಚಟಗಳಿಗೆ ಬಲಿಯಾಗದೆ ಆರೋಗ್ಯವಂತ ಸಮಾಜವನ್ನು ನಿರ್ಮಿಸಬೇಕು . ಅದಕ್ಕಾಗಿ ಮಾದಕ ವಸ್ತುಗಳ ವಿರುದ್ಧ ಸಮರ ಸಾರಬೇಕಿದೆ ಎಂದು ವಿರಾಜಪೇಟೆ ಉಪವಿಭಾಗದ ಡಿವೈಎಸ್‌ಪಿ ಮಹೇಶ್ ಕುಮಾರ್ ಅಭಿಪ್ರಾಯ ವ್ಯಕ್ತಪಡಿಸಿದರು . ಜಿಲ್ಲಾ ಪೋಲಿಸ್ ಇಲಾಖೆ , ವಿರಾಜಪೇಟೆ ಪೋಲಿಸ್‌ ಠಾಣೆ ಹಾಗೂ ಸಂತ ಅನ್ನಮ್ಮ ಪದವಿ ಪೂರ್ವ ಕಾಲೇಜಿನ ಸಹಯೋಗದಲ್ಲಿ ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಮಾದಕ ಳ ಸೇವನೆಯ ಕುರಿತ ಜಾಗೃತಿ ಕಾರ್ಯಕ್ರಮದಲ್ಲಿ ವಸ್ತುಗಳ ಪಾಲ್ಗೊಂಡು ಮಾತನಾಡಿದರು . ಉತ್ತಮ ಹವ್ಯಾಸಗಳನ್ನು ಬೆಳೆಸಿಕೊಳ್ಳಲು ವಿದ್ಯಾರ್ಥಿಗಳು ಉತ್ತಮರೊಂದಿಗೆ ಗೆಳೆತನ ಬೆಳೆಸಿಕೊಳ್ಳಬೇಕು . ಭವ್ಯ ಭಾರತದ ನಿರ್ಮಾಣದಲ್ಲಿ ಯುವ ಜನತೆಯ ಮೇಲೆ ಅಪಾರ ನಿರೀಕ್ಷೆಗಳಿದೆ . ವಿದ್ಯಾರ್ಥಿಗಳು ಮಾದಕ ದ್ರವ್ಯಗಳ ಪಿಡುಗನ್ನು ನಿರ್ಮೂಲನೆ ಮಾಡಲು ಮುಂದಾಗಬೇಕು ಎಂದರು . ಇದು ವಿಶ್ವದ ಅತೀ ದೊಡ್ಡ ಸಾಮಾಜಿಕ ಪಿಡುಗಾಗಿ ಮಾರ್ಪಟ್ಟಿದೆ . ಅದರ ನಿರ್ಮೂಲನೆ ಮಾಡುವುದು ಎಲ್ಲರ ಜವಾಬ್ದಾರಿ , ಪೊಲೀಸ್ ಇಲಾಖೆಯ ವತಿಯಿಂದ ಸತ ಕಾರ್ಯಯೋಜನೆಯನ್ನು ಹಮ್ಮಿಕೊಂಡಿದ್ದು ಡಸ್ಟ್ ನಿರ್ಮೂಲನೆಗೆ ಸಹಕಾರಿ ಎಂದರು . ಮಾದಕ ದ್ರವ್ಯ ಪಿಡುಗು ರಾಷ್ಟ್ರಕ್ಕೆ ಆಪತ್ತು : ಜಿಲ್ಲಾ ಪೋಲಿಸ್ ಇಲಾಖೆಯ ಕ್ರೈಂ ವಿಭಾಗದ ಅಧಿಕಾರಿ ಸಚಿನ್‌ ಮಾತನಾಡಿ , ಡಗ್ ಸೇವನೆಯು ಒಂದು ಪಿಡುಗಾಗಿದ್ದು ಅದನ್ನು ನಿಯಂತ್ರಣ ಮಾಡದಿದ್ದರೆ ಸಮಾಜ ಹಾಗೂ ರಾಷ್ಟ್ರಕ್ಕೆ ಆಪತ್ತು ಎಂದು ಹೇಳಿದರು . ಸಾಕ್ಷ್ಯ ಚಿತ್ರಗಳ ಮೂಲಕ ಮಾದಕ ವಸ್ತುಗಳ ವಿಧಗಳು , ಸೇವನೆಯ ಪರಿಣಾಮಗಳು ಹಾಗೂ ಆರೋಗ್ಯದ ಮೇಲೆ ಆಗುವ ಹಾನಿಗಳ ಕುರಿತು ಉದಾಹರಣೆ ಸಹಿತ ವಿವರಿಸಿದ ಅವರು . ಸಮಾಜದ ಪ್ರತಿಯೊಬ್ಬರಲ್ಲಿಯೂ ಮಾದಕ ದ್ರವ್ಯಗಳ ಸೇವನೆಯಿಂದ ಉಂಟಾಗುವ ಅನಾಹುತಗಳ ಬಗ್ಗೆ ಜಾಗೃತಿಯನ್ನು ಮೂಡಿಸಿ ಎಂದು ಹೇಳಿದರು . ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂತ ಅನ್ನಮ್ಮ Mangalore Edition Jun 26 , 2026 Page No. 06 Powered by : erelego.com ಪದವಿ ಪೂರ್ವ ಕಾಲೇಜಿನ ಪಾಂಶುಪಾಲರಾದ ರೆ.ಫಾ.ಮದಲೈ ಮುತ್ತುರವರು , ಯುವ ಜನರು ಮಾದಕ ವಸ್ತುಗಳ ಸೇವನೆಗೆ ಬಲಿಯಾಗದೆ ಸ್ವಸ್ಥ ಸಮಾಜವನ್ನು ನಿರ್ಮಾಣ ಮಾಡಬೇಕು . ಆರೋಗ್ಯವನ್ನು ಕಾಪಾಡಿಕೊಳ್ಳುವುದರ ಜೊತೆಗೆ ದೈಹಿಕವಾಗಿ ಹಾಗೂ ಮಾನಸಿಕವಾಗಿ ಸದೃಢರಾಗಿ ವತಿಯಿಂದ ಎಂದು ಹೇಳಿದರು . ಪೋಲಿಸ್ ಇಲಾಖೆಯ ಆಯೋಜಿಸಲಾದ ಜಾಗೃತಿ ಕಾರ್ಯಕ್ರಮವು ಅತ್ಯಂತ ಮಹತ್ವದ್ದಾಗಿದ್ದು , ವಿದ್ಯಾರ್ಥಿಗಳು ಇದರ ಮಹತ್ವವನ್ನು ಅರಿತು ಇತರರಲ್ಲಿಯೂ ಜಾಗೃತಿ ಮೂಡಿಸಿ ಎಂದು ಕರೆ ನೀಡಿದರು . ಈ ಸಂದರ್ಭದಲ್ಲಿ ಡಗ್ಗೆ ಜಾಗೃತಿಯ ಫಲಕಗಳನ್ನು ಹಿಡಿದು ವಿದ್ಯಾರ್ಥಿಗಳು ಡ್ರಗ್ಸ್ ಮುಕ್ತ ಸಮಾಜ ನಿರ್ಮಿಸುವುದಾಗಿ ಘೋಷಣೆ ಮಾಡಿದರು . ವೇದಿಕೆಯಲ್ಲಿ ವಿರಾಜಪೇಟೆ ಪೋಲಿಸ್ ವೃತ್ತ ನಿರೀಕ್ಷಕ ಪಿ . ಅನೂಪ್ ಮಾದಪ್ಪ , ನಗರ ಪೊಲೀಸ್ ಠಾಣಾಧಿಕಾರಿ ಪ್ರಮೋದ್ , ಅಪರಾದ ವಿಭಾಗದ ಠಾಣಾಧಿಕಾರಿ ಕಾವೇರಪ್ಪಗಾಮಾಂತರ ಪೊಲೀಸ್ ಠಾಣಾಧಿಕಾರಿ ಲತಾ ಉಪಸ್ಥಿತರಿದ್ದರು . ಉಪನ್ಯಾಸಕ ವಿವೇಕ್ ಸ್ವಾಗತಿಸಿದರು . ಈ ಸಂದರ್ಭದಲ್ಲಿ ಉಪನ್ಯಾಸಕರು , ಪೊಲಿಸ್‌ ಇಲಾಖೆಯ ಸಿಬ್ಬಂದಿ ವಿದ್ಯಾರ್ಥಿಗಳು ಉಪಸ್ಥಿತರಿದ್ದರು . - ShareChat