"ಶರಣ ಶರಣನ ಕಂಡು, 'ಶರಣು' ಎಂದು ಕರವ ಮುಗಿವುದೆ ಭಕ್ತಿಲಕ್ಷಣ. ಶರಣ ಶರಣನ ಕಂಡು, ಪಾದವಿಡಿದು ವಂದಿಸುವುದೆ ಭಕ್ತಿಲಕ್ಷಣ. ಶರಣ ಚರಣವ ಪಿಡಿಯದೆ ಕಂಡೂ ಕಾಣದೆ ಪೋದನಾದಡೆ ಕೂಡಲಚೆನ್ನಸಂಗನ ಶರಣರು ಮನ್ನಿಸರಯ್ಯಾ. ==================. ಶಿವನಿಗೈದು ಮುಖ, ಭಕ್ತನಿಗೈದು ಮುಖ. ಆವುವಾವುವೆಂದರೆ: ಗುರುವೊಂದು ಮುಖ, ಲಿಂಗವೊಂದು ಮುಖ, ಜಂಗಮವೊಂದು ಮುಖ, ಪಾದೋದಕವೊಂದು ಮುಖ, ಪ್ರಸಾದವೊಂದು ಮುಖ. ಇಂತೀ ಪಂಚಮುಖವನರಿಯದ ವೇಶಿ, ದಾಸಿ, ಸುಂಕಿಗ, ಮಣಿಹಗಾರ, ವಿದ್ಯಾವಂತ ಇಂತೀ ಐವರಿಗೆ ಲಿಂಗವ ಕಟ್ಟಿದಡೆ ಗುಡಿಯ ಮುಂದಣ ಶೃಂಗಾರದ ಗಂಟೆ, ಎಮ್ಮೆಯ ಕೊರಳಗಂಟೆ ಕೊಟ್ಟಿಯ ಮೆಳೆಯೊಳಗೆ ಇಟ್ಟು ಸಿಕ್ಕಿದ ಕಲ್ಲು! ಲಿಂಗ ವಿಭೂತಿ ರುದ್ರಾಕ್ಷಿ ಇವ ಮಾರಾಟಕ್ಕೆ ಹೇರಿಕೊಂಡು ತಿರುಗುವ ಎತ್ತು ಕತ್ತೆಗೆ ಮುಕ್ತಿಯುಂಟೆ??? ಕೂಡಲಚೆನ್ನಸಂಗಮದೇವಾ.. ✍️ ಚಿನ್ಮಯ ಜ್ಞಾನಿ ಚೆನ್ನಬಸವಣ್ಣನವರ ವಚನಗಳು.. ಶರಣು ಶರಣಾರ್ಥಿಗಳು 🙏 #ಬಸವಣ್ಣನವರ ವಚನಗಳು #ಶರಣ ಸಾಹಿತ್ಯ #ವಚನಗಳು #//🌳ವಚನ ಸಾಹಿತ್ಯ 🌳// #ಬಸವಾದಿ ಶರಣ ಶರಣೆಯರು


