#👩🦰ಮಹಿಳಾ ದಿನದ ಶುಭಾಶಯಗಳು💖 ಕನ್ನಡ ಸಾಹಿತ್ಯ, ಪತ್ರಿಕೋದ್ಯಮ ಮತ್ತು ಚಿತ್ರರಂಗದ ದಿಗ್ಗಜ ವಿಚಾರವಾದಿ ಪಿ. ಲಂಕೇಶ್ ಪಾಳ್ಯದ ಲಂಕೇಶಪ್ಪ ಅವರ ಜನ್ಮದಿನದಂದು ಗೌರವಪೂರ್ವಕ ನಮನಗಳು ಲಂಕೇಶ್ ಪತ್ರಿಕೆ ಯ ಮೂಲಕ ವೈಚಾರಿಕತೆ ಬಿತ್ತಿದ ಮುಸ್ಸಂಜೆಯ ಕಥಾ ಪ್ರಸಂಗ'ದಂತಹ ಕೃತಿಗಳ ಮೂಲಕ ಸಾಹಿತ್ಯ ಲೋಕವನ್ನು ಶ್ರೀಮಂತಗೊಳಿಸಿದ ಮಹನೀಯರಿಗೆ ಜನ್ಮದಿನದ ಶುಭಾಶಯಗಳು. ಇವರಿಗೆ ನನ್ನ ಹೃತ್ಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸುತ್ತಾ ಈ ಜನ್ಮದಿನದಂದು ಗೌರವ ಪೂರ್ಣ ನಮನಗಳನ್ನು ಸಲ್ಲಿಸುತ್ತಾ ನಿಮ್ಮ ಸ್ನೇಹಿತ ಅನಿಲ್
#👩🦰ಮಹಿಳಾ ದಿನದ ಶುಭಾಶಯಗಳು💖 ಎಲ್ಲ ಅಡೆತಡೆಗಳನ್ನೂ ಮೀರಿ ಕಲೆ-ಸಾಹಿತ್ಯ, ವಿಜ್ಞಾನ, ತಂತ್ರಜ್ಞಾನ, ನೃತ್ಯ, ರಾಜಕೀಯ, ಆರ್ಥಿಕ, ಸಾಮಾಜಿಕ ಹೀಗೆ ಎಲ್ಲ ಕ್ಷೇತ್ರಗಳಲ್ಲೂ ಮಹಿಳೆಯರು ಛಾಪು ಮೂಡಿಸಿ, ಲಕ್ಷಾಂತರ ಮಂದಿಗೆ ಸ್ಫೂರ್ತಿಯಾಗಿದ್ದಾರೆ. ಹೀಗೆಯೇ ಮಹಿಳಾ ಸಬಲೀಕರಣದತ್ತ ಮುನ್ನಡೆಯೋಣ. ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಹಾರ್ದಿಕ ಶುಭಾಶಯಗಳು.ವಿಶ್ವದಾದ್ಯಂತ ಅನೇಕ ದೇಶಗಳಲ್ಲಿ "ಅಂತರಾಷ್ಟ್ರೀಯ ಮಹಿಳೆಯರ ದಿನ" ವನ್ನ ಆಚರಿಸುತ್ತಾರೆ. ಮಹಿಳೆಯರು ಒಂದೇ ಕ್ಷೇತ್ರಕ್ಕೆ ಮಿಸಲಿರದೇ , ಅದು ರಾಷ್ತ್ಟ್ರೀಯ, ಜನಾಂಗೀಯ, ಭಾಷಾವಾರು, ಸಾಂಸ್ಕ್ರತಿಕ, ಆರ್ಥಿಕ ಅಥವಾ ರಾಜಕೀಯ ಕ್ಷೇತ್ರವಾಗಲಿ, ಎಲ್ಲಾದರಲ್ಲು ತಮ್ಮದೆ ಆದ ಛಾಪನ್ನ ಮೂಡಿಸಿದ್ದಾರೆ. ಮಹಿಳೆಯರ ಈ ಪ್ರಗತಿಯನ್ನ ಗುರುತಿಸಿ ಈ ದಿನವನ್ನು ಅವರಿಗೆ ಅರ್ಪಿಸಲಾಗಿದೆ. ೧೯೭೫ರ "ಅಂತರಾಷ್ಟ್ರೀಯ ಮಹಿಳೆಯರ ದಿನ"ದ ಸಮಯದಲ್ಲಿ, ಮಾರ್ಚ್ ೮ ರಂದು ಸಂಯುಕ್ತ ರಾಷ್ಟ್ರಗಳು ಮಹಿಳಾ ದಿನವನ್ನ ಆಚರಿಸಲು ಆರಂಭಿಸಿದವು.ಎರಡು ವರ್ಷದ ನಂತರ,೧೯೭೭ ರಲ್ಲಿ, "ದಿ ಜನರಲ್ ಅಸ್ಸೆಂಬ್ಲಿ" ಮಹಿಳೆಯರ ಹಕ್ಕು ಮತ್ತು ಶಾಂತಿ ಸ್ಥಾಪನೆಯನ್ನು ಆಯಾ ದೇಶದ ಸದಸ್ಯರು ಗಮನಿಸಿ ತಮ್ಮ ದೇಶದ ಐತಿಹಾಸಿಕ ಮತ್ತು ರಾಷ್ಟ್ರೀಯ ಸಂಪ್ರದಾಯಕ್ಕೆ ತಕ್ಕಂತೆ ಅಳವಡಿಸಿಕೊಳ್ಳುವಂತೆ ಕರೆ ನೀಡಿತು. ಹೀಗೆ ಕರೆನೀಡುವಾಗ ಮಹಿಳೆಯ ಪಾತ್ರ ಹಾಗು ಅವರ ಮೇಲೆ ನಡೆಯುತ್ತಿರುವ ಪಕ್ಷಪಾತವನ್ನು ಗಮನಿಸಿ ಅವರಿಗೆ ಸ್ಪರ್ಧಿಸುವ ಪೂರ್ತಿ ಅವಕಾಶವನ್ನು ನೀಡುವಂತೆ ಘೋಷಿಸಿತುಅಂತರಾಷ್ಟ್ರೀಯ ಮಹಿಳೆಯರ ದಿನ" ಮೊದಲ ಬಾರಿಗೆ ಹೊರಹೊಮ್ಮಿದ್ದು ಕೂಲಿ ಚಳುವಳಿ(ಲೇಬರ್ ಮೊವ್ಮೆಂಟ್ಸ್) ಚಟುವಟಿಕೆ ಉತ್ತರ ಅಮೆರಿಕಮತ್ತು ಯೂರೋಪ್ ಪ್ರದೇಶಗಳಲ್ಲಿ ನಡೆದಾಗ. ೧೯೦೯: ಸಂಯುಕ್ತ ಸಂಸ್ಥಾನಗಳಲ್ಲಿ ಮೊದಲ "ಅಂತ ರಾಷ್ಟ್ರೀಯ ಮಹಿಳೆಯರ ದಿನ"ಫೆಬ್ರವರಿ ೨೮ ರಂದು ಕಂಡು ಬಂತು.ಅಮೇರಿಕಾದ ಸಾಮಾಜವಾದಿ ಪಕ್ಷ ಈ ದಿನವನ್ನ ಕೆಲಸದ ಪರಿಸ್ಥಿತಿಯನ್ನ ವಿರೋಧಿಸಿ ನ್ಯುಯಾರ್ಕ್ ನಗರದಲ್ಲಿ ನಡೆದ "ಸರ್ಕಾರಿ ಕಾರ್ಮಿಕರ ಚಳುವಳಿ" ಯಲ್ಲಿ ಪ್ರತಿಭಟಿಸಿದ ಮಹಿಳೆಯರಿಗೆ ಅರ್ಪಿಸಲಾರಿತು. ೧೯೧೦: ಅಂತರಾಷ್ಟ್ರೀಯ ಸಮಾಜವಾದಿ ಕೊಪೆಂಹಗೆನ್ ನಲ್ಲಿ ನಡೆದ ಚರ್ಚೆಯಲ್ಲಿ ಅದಿಷ್ಟಿತಗೊಳಿಸಲಾಯಿತು. ಈ ಪ್ರಸ್ಥಾಪವನ್ನು ಅವಿರೋಧವಾಗಿ ೧೦೦ ಮಹಿಳೆಯರು ೧೭ ದೇಶಗಳಿಂದ ಸಹಕರಿಸಿದರು, ಇದು ಫಿನ್ನಿಷ್ ಪಾರ್ಲಿಮೆಂಟ್ ಗೆ ಆಯ್ಕೆಯಾದ ಮೊದಲ ಮೂವರು ಮಹಿಳೆಯರನ್ನೂ ಸಹ ಒಳಗೊಂಡಿತ್ತು.
೧೯೧೧: ಕೊಪೆಂಹಗೆನ್ ನ ಮೊದಲ ಹೆಜ್ಜೆಯ ಫಲಿತಾಂಶವಾಗಿ, ಅಂತರಾಷ್ಟ್ರೀಯ ಮಹಿಳೆಯರ ದಿನವನ್ನ ಮೊದಲ ಬಾರಿಗೆ ಮಾರ್ಚ್ ೧೯ ರಂದು ಆಸ್ಟ್ರೇಲಿಯ,ಡೆನ್ಮಾರ್ಕ್, ಜರ್ಮನಿ ಮತ್ತು ಸ್ವಿಡ್ಜರ್ಲ್ಯಾಂಡ್ ದೇಶಗಳು ಗುರುತಿಸಿದವು. ಅಂದು ಒಂದು ಮಿಲಿಯನ್ ಗಿಂತಲು ಹೆಚ್ಹು ಮಹಿಳೆಯರು ಹಾಗು ಪುರುಷರು ಈ ಚಳುವಳಿಯಲ್ಲಿ ಭಾಗವಹಿಸಿದರು.ಇದಲ್ಲದೇ ಮತಚಲಾಯಿಸುವ ಹಕ್ಕು, ಸಾರ್ವಜನಿಕ ಕಛೇರಿ, ಮಹಿಳೆಯರಿಗೆ ಕೆಲಸ ಮಾಡುವ ಹಕ್ಕು ಹಾಗು ಉದ್ಯೋಗ ತರಬೇತಿಯನ್ನ ಜಾರಿಗೆ ತರಲು ಬೇಡಿಕೆಯಿಟ್ಟಿದ್ದಲ್ಲದೇ ಕೆಲಸದಲ್ಲಿನ ತಾರತಮ್ಯವನ್ನ ವಿರೋಧಿಸಿ ಪ್ರತಿಭಟಿಸಿದರು. ೧೯೧೩-೧೯೧೪ : ಅಂತರಾಷ್ಟ್ರೀಯ ಮಹಿಳೆಯರ ದಿನದ ಆಚರಣೆ "೧ನೇ ವಿಶ್ವ ಯುದ್ಧ"ವನ್ನ ತಡೆಗಟ್ಟುವ ಯಾಂತ್ರಿಕ ಕೌಶಲ್ಯವಾಗಿ ಮಾರ್ಪಟ್ಟಿತು.ಇದೇ ವೇಳೆಯಲ್ಲಿ ಶಾಂತಿ ಚಳುವಳಿಯ ಅಂಗವಾಗಿ ರಷ್ಯಾದ ಮಹಿಳೆಯರು ಫೆಬ್ರವರಿಯ ಕೊನೆಯವಾರದಲ್ಲಿ ವಿಶ್ವ ಮಹಿಳಾ ದಿನವನ್ನ ಆಚರಿಸಿ ಗಮನಸೆಳೆದರು. ಅತ್ತ ಯುರೋಪಿನಲ್ಲಿ ಅದೇ ಸಾಲಿನ ಮಾರ್ಚಿ ೮ ರಂದು ಮಹಿಳೆಯರು ಯುದ್ಧನೀತಿಯನ್ನ ವಿರೋಧಿಸಿ, ಐಕ್ಯಮತ ವನ್ನ ಸಹಕರಿಸಿ ಬ್ರುಹತ್ ಚಳುವಳಿ ನಡೆಸಿದರು.೧೯೧೭: ಮತ್ತೆ ಯುದ್ಧ ನೀತಿಯನ್ನ ವಿರೋಧಿಸಿ ರಷ್ಯಾದ ಮಹಿಳೆಯರು ಊಟ ಮತ್ತು ಶಾಂತಿ ಚಳುವಳಿಯನ್ನ ಫೆಬ್ರವರಿ ತಿಂಗಳ ಕೊನೆಯಭಾನುವಾರದಲ್ಲಿಇದು ಗ್ರೆಗೊರಿಯನ್ ಕ್ಯಾಲೆಂಡರಿನ ಪ್ರಕಾರ ಮಾರ್ಚಿ ೮) ನಡೆಸಿದರು.
ನಾಲ್ಕು ವಾರಗಳ ನಂತರ ರಾಜ ಮನೆತನದ ಆಳ್ವಿಕೆಯನ್ನು ನಿಲ್ಲಿಸಿ ಮತಚಲಾಯಿಸುವ ಅಧಿಕಾರವನ್ನ ಸರ್ಕಾರ ನೀಡಿತು. ಅಂದಿನ ದಿನಗಳಲ್ಲಿ ಮಹಿಳಾ ದಿನಾಚರಣೆ ಮುಂದುವರೆದ ಮತ್ತು ಮುಂದುವರೆಯುತ್ತಿರುವ ದೇಶಗಳಲ್ಲಿ ಹೊಸ ಆಯಮವನ್ನ ಪಡೆಯಿತು.ಬೆಳೆಯುತ್ತಿದ್ದ ಅಂತರಾಷ್ಟ್ರೀಯ ಮಹಿಳಾ ಚಳುವಳಿ, ಅವುಗಳ ಸಾಮರ್ಥ್ಯವನ್ನ ಹೆಚ್ಹಿಸಿದ ನಾಲ್ಕು "ಜಾಗತಿಕ ಸಂಯುಕ್ತ ರಾಷ್ಟ್ರೀಯ ಮಹಿಳಾ ಸಮಾಲೋಚನೆ", ಮಹಿಳಾ ಹಕ್ಕು, ರಾಜಕೀಯ ಹಾಗು ಆರ್ಥಿಕ ಕ್ಷೆತ್ರಗಳಲ್ಲಿ ಭಾಗವಹಿಸುವ ಹಕ್ಕನ್ನ ಪಡೆಯಲು ಪೋಷಿಸಿದವು. ದಿನಕಳೆದಂತೆ ಅಂತರಾಷ್ಟ್ರೀಯ ಮಹಿಳೆಯರ ದಿನ ಬೆಳವಣಿಗೆಯ ಪ್ರತಿಬಿಂಬದ ಜೊತೆಗೆ ಸಾಧರಣ ಮಹಿಳೆಯ ಧೀರತನ ಮತ್ತು ಧೃಡತೆ ದೇಶ ಹಾಗು ಸಮುದಾಯದ ಇತಿಹಾಸದಲ್ಲಿ ವಹಿಸಿದ ಅಸಾಧಾರಣ ಪಾತ್ರವನ್ನ ಬಿಂಬಿಸುತ್ತಾ ಬದಲಾವಣೆಯ ಕರೆಯನ್ನ ನೀಡುತ್ತದೆ
೧೯೪೫ ರಲ್ಲಿ ಸಹಿ ಮಾಡಿದ ಸಂಯುಕ್ತ ರಾಷ್ಟ್ರಗಳ ಅಂತರಾಷ್ಟ್ರೀಯ "ಲಿಂಗ ಸಮಾನತಾ ತತ್ವ" ಅಂಗೀಕಾರಕ್ಕೆ ಬಂತು.ಅಲ್ಲಿಯ ನಂತರ ವಿಶ್ವವ್ಯಾಪ್ಯ ಒಪ್ಪಂದ ನೀತಿ, ನಿರ್ದಿಷ್ಟಮಾನ, ಮಹಿಳಾಭಿವ್ರುದ್ದಿ ಕಾರ್ಯಕ್ರಮ ಹಾಗು ಯೋಜನೆಗಳು ಕಾರ್ಯರೂಪಕ್ಕೆ ಬಂದವು. ಕೆಲವರ್ಷಗಳ ನಂತರ ಸಂಯುಕ್ತ ರಾಷ್ರಗಳು ಮತ್ತು ಅದರ ತಾಂತ್ರಿಕ ಏಜೆನ್ಸ್ಸಿಗಳು ಮಾನವ ಹಕ್ಕುಗಳನ್ನ ಅಬಿನಂಧಿಸಿ ಮಹಿಳೆಯರು ಭಾಗವಹಿಸುವುದನ್ನ ಪ್ರೋತ್ಸಾಹಿಸಿದವು. ಮಹಿಳೆಯರನ್ನ ಪ್ರಭಲಗೊಳಿಸುವ ಸಂಯುಕ್ತ ರಾಷ್ರಗಳ ಕಾರ್ಯ ವಿಶ್ವದಾದ್ಯಂತ ಮುಂದುವರೆಯಿತು.
ಜನ್ಮ ನೀಡಿದ, ಸಂಬಂಧವನ್ನು ಗಟ್ಟಿ ಪಡಿಸಿದ, ಜೀವನಕ್ಕೆ ದಾರಿ ತೋರಿದ, ಬದುಕಿನ ಅಂಗವಾದ, ಜೀವನದ ಉದ್ದಕ್ಕೂ ಸ್ಪೂರ್ತಿಯಾದ, ಸಾಧನೆ ತೋರಿದ ಜಗತ್ತಿನ ಎಲ್ಲಾ ಮಹಿಳೆಯರಿಗೂ ವಿಶ್ವ ಮಹಿಳಾ ದಿನದ ಶುಭಾಶಯಗಳು.ನಿಮ್ಮ ಸ್ನೇಹಿತ ಅನಿಲ್ ಮಲ್ನಾಡ್
#💐ಗುರುವಾರದ ಶುಭಾಶಯಗಳು ಹಿಂದೂಸ್ಥಾನಿ ಸಂಗೀತದ ಗಾನಸಾಮ್ರಾಜ್ಞಿ ಎಂದು ಖ್ಯಾತರಾದ ಗಾನ ಕೋಗಿಲೆ, ಸಂಗೀತವನ್ನೇ ತಮ್ಮ ಉಸಿರಾಗಿಸಿಕೊಂಡಿದ್ದ ಸಂಗೀತ ಕಲಾರತ್ನ ಪದ್ಮವಿಭೂಷಣ ಡಾ. ಗಂಗೂಬಾಯಿ ಹಾನಗಲ್ ಅವರ ಜಯಂತಿಯಂದು ಶತಕೋಟಿ ನಮನಗಳು.
ಭಾರತ ದೇಶದ ಸಂಗೀತಗಾರರ ಪರಂಪರೆಯಲ್ಲಿ ರಾಷ್ಟ್ರಮಟ್ಟದಲ್ಲಿ ಗುರುತಿಸಿ ಕೊಂಡ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತದ ದಿಗ್ಗಜರಲ್ಲಿ ಕರ್ನಾಟಕದ ಗಂಗೂಬಾಯಿ ಹಾನಗಲ್ ಪ್ರಮುಖರು. ಇವರ ಸಾಧನೆ ಅಪಾರ ಈ ದಿನ ನಾವೆಲ್ಲರೂ ಅವರನ್ನು ಸ್ಮರಿಸುತ್ತಾ ಅವರಿಗೆ ಕೋಟಿ ನಮನ ಸಲ್ಲಿಸೋಣ ಎನ್ನುತ್ತಾ ನಿಮ್ಮ ಸ್ನೇಹಿತ ಅನಿಲ್ ಮಲ್ನಾಡ್
#💪ರಾಷ್ಟ್ರೀಯ ಸುರಕ್ಷತಾ ದಿನ⚔️ ರಾಷ್ಟ್ರೀಯ ಸುರಕ್ಷತಾ ಮಂಡಳಿಯ ಪ್ರತಿಷ್ಠಾನದ ನೆನಪಿಗಾಗಿ ಪ್ರತಿವರ್ಷ ಮಾರ್ಚ್ 4 ರಂದು ರಾಷ್ಟ್ರೀಯ ಸುರಕ್ಷತಾ ದಿನವನ್ನು ಆಚರಿಸಲಾಗುತ್ತದೆ, ಇದು ಅಪಘಾತಗಳು ಮತ್ತು ಅಪಘಾತಗಳನ್ನು ತಡೆಗಟ್ಟಲು ಕೈಗೊಳ್ಳಬೇಕಾದ ಸುರಕ್ಷತಾ ಕ್ರಮಗಳ ಬಗ್ಗೆ ಜಾಗೃತಿ ಮೂಡಿಸುವ ಗುರಿಯನ್ನು ಹೊಂದಿದೆ.ರಾಷ್ಟ್ರೀಯ ಸುರಕ್ಷತಾ ದಿನಾಚರಣೆಯನ್ನು 1972 ರಲ್ಲಿ ಮೊದಲ ಬಾರಿಗೆ ರಾಷ್ಟ್ರೀಯ ಸುರಕ್ಷತಾ ಮಂಡಳಿಯ ಅಡಿಪಾಯ ದಿನದಂದು ಆಚರಿಸಲಾಯಿತು.
ಈಗ ಅದರ 50 ನೇ ವರ್ಷದಲ್ಲಿ, ದೇಶವು ಕೈಗಾರಿಕೆಗಳು, ಇಲಾಖೆಗಳು, ಎನ್ಜಿಒಗಳು ಮತ್ತು ನಿಯಂತ್ರಕ ಏಜೆನ್ಸಿಗಳಲ್ಲಿ ವ್ಯಾಪಕವಾಗಿ ಆಚರಿಸಲ್ಪಡುವ ಪ್ರಮುಖ ರಾಷ್ಟ್ರೀಯ ಅಭಿಯಾನವಾಗಿ ಬೆಳೆದಿದೆ.ರಾಷ್ಟ್ರೀಯ ಸುರಕ್ಷತಾ ಮಂಡಳಿಯ ಮುಖ್ಯ ಉದ್ದೇಶ ಮತ್ತು ದೃಷ್ಟಿ ಒಂದೇ ಆಗಿರುತ್ತದೆ - ಸಮಾಜವನ್ನು ರಕ್ಷಿಸಲು ಮತ್ತು ಸೇವೆ ಮಾಡಲು ಮತ್ತು ಜನರಲ್ಲಿ ತಡೆಗಟ್ಟುವ ಸಂಸ್ಕೃತಿ ಮತ್ತು ವೈಜ್ಞಾನಿಕ ಮನಸ್ಥಿತಿಯನ್ನು ಬೆಳೆಸುವುದು.
"ಈ ವಿಷಯಗಳು ಮೂಲಭೂತ ಮಾನವೀಯ ಕಾಳಜಿಯಾಗಿದೆ ಎಂಬುದು ನಮ್ಮ ನಂಬಿಕೆ. ಗುಣಮಟ್ಟ ಮತ್ತು ಉತ್ಪಾದಕತೆಯೊಂದಿಗಿನ ಅವರ ಆಂತರಿಕ ಸಂಬಂಧವನ್ನು ಚೆನ್ನಾಗಿ ಪ್ರದರ್ಶಿಸಿದರೆ ಅವರ ಪರಿಣಾಮಕಾರಿ ವಿಳಾಸವು ಹೆಚ್ಚು ಅನುಕೂಲವಾಗುತ್ತದೆ ಎಂದು ನಾವು ಸಮಾನವಾಗಿ ನಂಬುತ್ತೇವೆ, ”ಎಂದು ಸಂಸ್ಥೆಯ ದೃಷ್ಟಿ ಓದುತ್ತದೆಸುರಕ್ಷಿತವಾಗಿ ಕೆಲಸ ಮಾಡಲು ನೌಕರರು ಮತ್ತು ಸಾರ್ವಜನಿಕರ ಬದ್ಧತೆಯನ್ನು ನವೀಕರಿಸುವುದು ಮತ್ತು ಸುರಕ್ಷಿತ ಮತ್ತು ಉತ್ತಮ ಕೆಲಸದ ಸಂಸ್ಕೃತಿ ಮತ್ತು ಜೀವನಶೈಲಿಯ ಏಕೀಕರಣವನ್ನು ಖಚಿತಪಡಿಸುವುದು ದಿನದ ಉದ್ದೇಶವಾಗಿದೆ.ಮಾರ್ಚ್ 4 ರಂದು ಒಂದೇ ದಿನದ ಆಚರಣೆಯಾಗಿ ಅಭಿಯಾನ ಪ್ರಾರಂಭವಾಯಿತು. ಆದರೆ ಈಗ ಮಾರ್ಚ್ 4-10 ರಿಂದ ಒಂದು ವಾರದಲ್ಲಿ ಹರಡಿತುಪ್ರತಿ ವರ್ಷ ರಾಷ್ಟ್ರೀಯ ಸುರಕ್ಷತಾ ದಿನಕ್ಕಾಗಿ ಹೊಸ ವಿಷಯವಿದೆ. ಈ ವರ್ಷದ ಥೀಮ್ 'ಸದಕ್ ಸುರಕ್ಷ (ರಸ್ತೆ ಸುರಕ್ಷತೆ)'. ಇಂತಹ ಅದ್ಭುತ ಸುರಕ್ಷತಾ ಕ್ರಮಗಳನ್ನು ಸರ್ಕಾರವು ಸದಾ ಪ್ರೋತ್ಸಾಹಿಸಿ ಜನರನ್ನು ಜಾಗೃತಿ ಮೂಡಿಸುವ ಕೆಲಸವನ್ನು ಮಾಡಲಿ ಹಾಗೂ ಎಲ್ಲಾ ಸ್ನೇಹಿತರು ಯಾವುದೇ ಕೈಗಾರಿಕಾ ಕ್ಷೇತ್ರದಲ್ಲಿ ವಾಹನ ಚಲಾಯಿಸುವಾಗ ನಿಮ್ಮ ಸುರಕ್ಷಿತ ಕ್ರಮವನ್ನು ಕೈಗೊಳ್ಳಿ ಎನ್ನುತ್ತಾ #ನಿಮ್ಮ ಸ್ನೇಹಿತ ಅನಿಲ್ ಮಲ್ನಾಡ್
#💪ರಾಷ್ಟ್ರೀಯ ಸುರಕ್ಷತಾ ದಿನ⚔️ ಈ ರಾಷ್ಟ್ರೀಯ ಭದ್ರತಾ ದಿನದಂದು, ಭಾರತದಲ್ಲಿ ಶಾಂತಿ ಮತ್ತು ಸುರಕ್ಷತೆಯನ್ನು ಕಾಪಾಡಿಕೊಳ್ಳಲು ಅತ್ಯಗತ್ಯ ಪಾತ್ರವನ್ನು ನಿರ್ವಹಿಸುತ್ತಿರುವ ನಮ್ಮ ಸೇನೆ, ಪೊಲೀಸ್, ಭಾರತೀಯ ವಾಯುಪಡೆ, ನೌಕಾಪಡೆ ಮತ್ತು ಇತರ ಎಲ್ಲಾ ಭದ್ರತಾ ಪಡೆಗಳಿಗೆ ಧನ್ಯವಾದಗಳು. ಭದ್ರತಾ ಪಡೆಗಳ ತ್ಯಾಗ ಮತ್ತು ಧೈರ್ಯವನ್ನು ಗೌರವಿಸೋಣ. ಜೈ ಜವಾನ್ ಜೈ ಕಿಸಾನ್ ನಿಮ್ಮ ಸ್ನೇಹಿತ ಅನಿಲ್ ಮಲ್ನಾಡ್
#🌓ಹೋಳಿಹ ಹಬ್ಬದಂದು 100 ವರ್ಷದ ನಂತರ ಅಪರೂಪದ ಚಂದ್ರ ಗ್ರಹಣ🕉️ ಬಣ್ಣಗಳ ಈ ಹಬ್ಬ ನಿಮ್ಮ ಬದುಕಿನಲ್ಲಿ ಸಂತಸ ಮತ್ತು ನೆಮ್ಮದಿಯನ್ನು ತುಂಬಲಿ. ವೈವಿಧ್ಯತೆಯಲ್ಲಿ ಏಕತೆಯನ್ನು ಸಂಭ್ರಮಿಸುವ ಈ ದಿನ, ಎಲ್ಲರಿಗೂ ಸೌಹಾರ್ದಯುತ 'ಹೋಳಿ ಹಬ್ಬ'ದ ಹಾರ್ದಿಕ ಶುಭಾಶಯಗಳು.
#💐ಮಂಗಳವಾರದ ಶುಭಾಶಯಗಳು ಗಾನಯೋಗಿ ಪಂಚಾಕ್ಷರಿ ಗವಾಯಿಗಳ ಶಿಷ್ಯರಾಗಿ ಕರ್ನಾಟಕ ಹಾಗೂ ಹಿಂದೂಸ್ತಾನಿ ಸಂಗೀತ ಪದ್ಧತಿಯಲ್ಲಿ ಪ್ರಭುತ್ವ ಗಳಿಕೆ. ಹಾರ್ಮೋನಿಯಂ, ತಬಲಾ, ಪಿಟೀಲು, ಸಾರಂಗಿ ವಾದ್ಯಗಳಲ್ಲಿ ಪರಿಣತಿ ಪಡೆದ ಉಭಯಗಾನ ವಿಶಾರದ ಡಾ. ಪುಟ್ಟರಾಜ ಗವಾಯಿ ಅವರು ಗ್ವಾಲಿಯರ್ ಘರಾಣೆಯ ಸಮರ್ಥ ಸಾಧಕರು.ವೀರೇಶ್ವರ ಪುಣ್ಯಾಶ್ರಮದ ಸಮರ್ಥ ಉತ್ತರಾಧಿಕಾರಿಯಾಗಿ ಅನೇಕ ಸಂಗೀತ ಕಲಾವಿದರನ್ನು ರೂಪಿಸಿದ ಕೀರ್ತಿಗೆ ಭಾಜನರು.ಡಾ. ಪುಟ್ಟರಾಜ ಗವಾಯಿಗಳ ಸಾಧನೆ ಸಿದ್ಧಿಗಳಿಗೆ ಅನೇಕ ಪ್ರಶಸ್ತಿ-ಗೌರವಗಳು ಸಹ ದೊರೆತಿವೆ. ಅಂತಹ ಮಹಾನ್ ಸಾಧಕರ ಜನ್ಮದಿನದ ಅಂಗವಾಗಿ ಅವರಿಗೆ ಶುಭಾಶಯವನ್ನು ಕೋರೋಣ. ಅವರ ಸಾಧನೆಗಳನ್ನು ಸ್ಮರಿಸೋಣ ಅವರ ಸಾಧನೆಗಳ ಹಾದಿಯಲ್ಲಿ ನಾವು ಸಾಗೋಣ ಎನ್ನುತ್ತಾ #ನಿಮ್ಮ ಸ್ನೇಹಿತ ಅನಿಲ್ ಮಲ್ನಾಡ್
#💐ಮಂಗಳವಾರದ ಶುಭಾಶಯಗಳು ಕಾಡನ್ನು ಹಾಳು/ನಾಶ ಮಾಡುವುದರಿಂದ ಅಲ್ಲಿನ ವನ್ಯ ಜೀವಿಗಳಿಗೆ ತುಂಬಾ ತೊಂದರೆ. ಆದ್ದರಿಂದ ಭವಿಷ್ಯದ ಪೀಳಿಗೆಗಾಗಿ ವನ್ಯ ಜೀವಿಯನ್ನು ಸಂರಕ್ಷಿಸಲು ಅನೇಕ ಪ್ರಾಣಿ ಅಭಯಾರಣ್ಯಗಳು, ಸಂರಕ್ಷಣಾಲಯಗಳು ಕಾಳಜಿ ವಹಿಸುತ್ತಿವೆ. ನಾವೆಲ್ಲರೂ ಒಂದಾಗಿ ವನ್ಯಜೀವಿಗಳನ್ನು ಸಂರಕ್ಷಿಸಲು ಮುಂದಾಗದಿದ್ದರೆ, ಇವೆಲ್ಲವನ್ನೂ ನಾವು ಕಳೆದುಕೊಳ್ಳಬೇಕಾಗುತ್ತದೆ. ಒಂದು ಬಾರಿ ಪ್ರಾಣಿ, ಪಕ್ಷಿಗಳು ವಿನಾಶ ಹೊಂದಿದರೆ, ಶಾಶ್ವತವಾಗಿ ಕಳೆದುಕೊಂಡಂತೆ. ಅದು ಆಗದಂತೆ ಕಾಳಜಿವಹಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಅಳಿವಿನಂಚಿನಲ್ಲಿರುವ ವನ್ಯಜೀವಿಗಳನ್ನು ಉಳಿಸುವುದಕ್ಕಾಗಿ ವನ್ಯಜೀವಿ ದಿನವಾದ ಇಂದು ಎಲ್ಲರೂ ಜಾಗೃತಿ ಮೂಡಿಸೋಣ. ಎನ್ನುತ್ತಾ ನನ್ನೆಲ್ಲ ಸ್ನೇಹಿತರಿಗೆ ವಿಶ್ವ ವನ್ಯಜೀವಿ ದಿನದ ಶುಭಾಶಯಗಳು #ನಿಮ್ಮ ಸ್ನೇಹಿತ ಅನಿಲ್ ಮಲ್ನಾಡ್
#💐ಮಂಗಳವಾರದ ಶುಭಾಶಯಗಳು ರಾಷ್ಟ್ರೀಯ ರಕ್ಷ ಣಾ ದಿನ
ನಮ್ಮ ದೇಶದಲ್ಲಿ ನಾವಿಂದು ನೆಮ್ಮದಿಯಿಂದ ಬದುಕುತ್ತಿರುವುದಕ್ಕೆ ಮುಖ್ಯ ಕಾರಣ ನಮ್ಮ ಸೇನಾಪಡೆ. ಇವರು ನಮ್ಮ ದೇಶವನ್ನು ಶತ್ರುಗಳ ಕೈಯಿಂದ ರಕ್ಷಿಸುತ್ತಿರುವ ಕಾರಣ ನಾವು ಸುಖವಾಗಿ ನಿದ್ರಿಸುವಂತಾಗಿದೆ. ಶತ್ರು ದಾಳಿ ಮಾತ್ರವಲ್ಲದೆ ವಿವಿಧ ಪ್ರವಾಹ, ಭೂಕಂಪ ಮುಂತಾದ ಪ್ರಾಕೃತಿಕ ವಿಕೋಪಗಳ ಸಂದರ್ಭದಲ್ಲಿಯೂ ಸೇನಾಪಡೆಗಳು ಜನರ ರಕ್ಷ ಣೆಗೆ ಧಾವಿಸುತ್ತವೆ. ದೇಶವನ್ನು ಕಣ್ಣಲ್ಲಿ ಕಣ್ಣಿಟ್ಟು ಕಾಯುತ್ತಿರುವ ಇವರ ನಿಸ್ವಾರ್ಥ ಸೇವೆಯನ್ನು ಎಷ್ಟು ಕೊಂಡಾಡಿದರೂ ಕಡಿಮೆಯೇ. ಇವರು ತಮ್ಮ ಜೀವದ ಹಂಗನ್ನು ತೊರೆದು ಪರ್ವತ ಪ್ರದೇಶಗಳಲ್ಲಿ ಮೈ ನಡುಗಿಸುವ ಚಳಿ, ಮರಳುಗಾಡಿನ ಸುಡು ಬಿಸಿಲು, ಸಾಗರದ ದೈತ್ಯ ಅಲೆಗಳನ್ನೂ ಲೆಕ್ಕಿಸದೆ ಶತ್ರುಪಡೆಗಳ ವಿರುದ್ಧ ಹೋರಾಡುತ್ತಾರೆ. ಈ ಹೋರಾಟದಲ್ಲಿ ಹುತಾತ್ಮರೂ ಆಗುತ್ತಾರೆ. ಆ ಮೂಲಕ ತಮ್ಮ ದೇಶಪ್ರೇಮವನ್ನು ಮೆರೆಯುತ್ತಾರೆ. ಆದ್ದರಿಂದ ಇವರಿಗಾಗಿಯೇ ಭಾರತದಲ್ಲಿ ಒಂದು ವಿಶೇಷ ದಿನವನ್ನು ಮೀಸಲಾಗಿಡಲಾಗಿದೆ. ಆ ದಿನವೇ ಮಾರ್ಚ್ 3. ಈ ದಿನವನ್ನು ನ್ಯಾಷನಲ್ ಡಿಫೆನ್ಸ್ ಡೇ ಅಥವಾ ರಾಷ್ಟ್ರೀಯ ರಕ್ಷ ಣಾ ದಿನವನ್ನಾಗಿ ಆಚರಿಸಲಾಗುತ್ತದೆ. ಈ ದಿನದಂದು ಭಾರತೀಯ ಸೇನೆಯ ಮೂರು ಪ್ರಮುಖ ವಿಭಾಗಗಳಾದ ಭೂಸೇನೆ, ವಾಯುಪಡೆ ಮತ್ತು ನೌಕಾಪಡೆಯ ಸೈನಿಕರಿಗೆ ವಿಶೇಷವಾದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತದೆ. ಜೈ ಜವಾನ್ ಜೈ ಕಿಸಾನ್ #ನಿಮ್ಮ ಸ್ನೇಹಿತ ಅನಿಲ್ ಮಲ್ನಾಡ್
#❤️ಸರೋಜಿನಿ ನಾಯ್ಡು ಅವರ ಪುಣ್ಯಸ್ಮರಣೆ💐 ಸರೋಜಿನಿ ನಾಯ್ಡು ಅವರು “ಭಾರತದ ಕೋಗಿಲೆ” ಎನ್ನುವ ಹೆಸರಿನಿಂದಲೇ ಪ್ರಸಿದ್ಧಿಯಾಗಿದ್ದರು. ಚಿಕ್ಕಂದಿನಲ್ಲೇ ಪ್ರಸಿದ್ಧಿ ಹೊಂದಿದ್ದ ಇವರು ಭಾರತದ ಸ್ವಾತಂತ್ರ್ಯ ಹೋರಾಟಗಾರರು ಮತ್ತು ಕವಯತ್ರಿ ಕೂಡ. ಇವರು ರಾಷ್ಟ್ರೀಯ ಭಾರತದ ಕಾಂಗ್ರೇಸ್ನ ಮೊದಲನೆಯ ಮಹಿಳಾ ಅಧ್ಯಕ್ಷರಾಗಿದ್ದರು ಮತ್ತು ಉತ್ತರ ಪ್ರದೇಶದ ಮೊದಲನೆಯ ಮಹಿಳಾ ರಾಜ್ಯಪಾಲರಾಗಿದ್ದರು. ಧೀಮಂತ ಮಹಿಳೆ "ಸರೋಜಿನಿ ನಾಯ್ಡು" ಅವರ ಪುಣ್ಯಸ್ಮರಣೆ ದಿನದಂದು ಮಹಿಳೆಯರಿಗೆ ಸ್ಫೂರ್ತಿದಾಯಕವಾದ ಅವರ ಸಾಧನೆಗಳನ್ನು ಸ್ಮರಿಸೋಣ ಎನ್ನುತ್ತಾ ನಿಮ್ಮ ಸ್ನೇಹಿತ ಅನಿಲ್ ಮಲ್ನಾಡ್













