
ಕಾಯಕವೇ ಕೈಲಾಸ..
@76865063
ದಯವೇ ಧರ್ಮದ ಮೂಲವಯ್ಯಾ.. ದೇಹವೇ ದೇಗುಲ.. ಅರಿವೇ ಗುರು..
"ಆನು ಭಕ್ತನಲ್ಲ, ಆನು ಯುಕ್ತನಲ್ಲ, ನೀವು ಮಾಡಿದ ಸೂತ್ರದ ಬೊಂಬೆ ನಾನಯ್ಯ. ಎನಗೆ ಬೇರೆ ಸ್ವತಂತ್ರವುಂಟೆ??? ನೀವೆನ್ನ ಮಾನಾಭಿಮಾನಕ್ಕೊಡೆಯರಾದ ಬಳಿಕ ಎನ್ನ ತಪ್ಪ ಲೆಕ್ಕಿಸದೆ ಬಿಜಯಂಗೈವುದಯ್ಯಾ, ಕೂಡಲಸಂಗಮದೇವಾ.. ✍🏻 ವಿಶ್ವಗುರು ಬಸವಣ್ಣನವರ ವಚನ.. ಶರಣು ಶರಣಾರ್ಥಿಗಳು 🙏 #ಶರಣ ಸಾಹಿತ್ಯ #ಬಸವಾದಿ ಶರಣ ಶರಣೆಯರು #ವಚನಗಳು #//🌳ವಚನ ಸಾಹಿತ್ಯ 🌳// #ಬಸವಣ್ಣನವರ ವಚನಗಳು
"ದೇವಲೋಕ ಮರ್ತ್ಯಲೋಕವೆಂಬುದು ಕರ್ತಾರನ ಕಮ್ಮಟವಯ್ಯಾ: ಇಲ್ಲಿ ಸಲ್ಲುವವರು ಅಲ್ಲಿಯೂ ಸಲ್ಲುವರಯ್ಯಾ; ಇಲ್ಲಿ ಸಲ್ಲದವರು ಅಲ್ಲಿಯೂ ಸಲ್ಲರಯ್ಯಾ, ಕೂಡಲಸಂಗಮದೇವಾ.. ✍️ ವಿಶ್ವಗುರು ಬಸವಣ್ಣನವರ ವಚನ.. ಶರಣು ಶರಣಾರ್ಥಿಗಳು 🙏 #ಬಸವಣ್ಣನವರ ವಚನಗಳು #//🌳ವಚನ ಸಾಹಿತ್ಯ 🌳// #ವಚನಗಳು #ಬಸವಾದಿ ಶರಣ ಶರಣೆಯರು #ಶರಣ ಸಾಹಿತ್ಯ
"ಅಂಗದ ಮೇಲೆ ಲಿಂಗ ಸಾಹಿತ್ಯವಾದ ಬಳಿಕ ಸ್ಥಾವರದೈವಕ್ಕೆರಗಲಾಗದು. ತನ್ನ ಪುರುಷನ ಬಿಟ್ಟು ಅನ್ಯಪುರುಷನ ಸಂಗ ಸಲ್ಲುವುದೇ??? ಕರಸ್ಥಲದ ದೇವನಿದ್ದಂತೆ ಧರೆಯ ಮೇಲಣ ಪ್ರತಿಷ್ಟೆಗೆರಗಿದಡೆ ನರಕದಲ್ಲಿಕ್ಕುವ ನಮ್ಮ ಕೂಡಲಸಂಗಮದೇವ.. ✍️ ವಿಶ್ವಗುರು ಬಸವಣ್ಣನವರ ವಚನ.. ಶರಣು ಶರಣಾರ್ಥಿಗಳು 🙏 #ಶರಣ ಸಾಹಿತ್ಯ #ಬಸವಾದಿ ಶರಣ ಶರಣೆಯರು #ವಚನಗಳು #//🌳ವಚನ ಸಾಹಿತ್ಯ 🌳// #ಬಸವಣ್ಣನವರ ವಚನಗಳು
"ಕಟ್ಟಿದ ಲಿಂಗವ ಕಿರಿದು ಮಾಡಿ.. "ಬೆಟ್ಟದ ಲಿಂಗವ ಹಿರಿದು ಮಾಡಿ.. ಪರಿಯ ನೋಡಾ..! ಇಂತಪ್ಪ ಲೊಟ್ಟ ಮೂಳರ ಕಂಡರೆ, ಗಟ್ಟಿವುಳ್ಳ ಪಾದರಕ್ಷೆ ತೆಗೆದುಕೊಂಡು, ಲೊಟಲೊಟನೆ ಹೊಡೆಯೆಂದಾತ ನಮ್ಮ ಅಂಬಿಗರ ಚೌಡಯ್ಯ.. ✍️ ನಿಜಶರಣ ಅಂಬಿಗರ ಚೌಡಯ್ಯನವರ ವಚನ.. ಶರಣು ಶರಣಾರ್ಥಿಗಳು 🙏 #ಬಸವಣ್ಣನವರ ವಚನಗಳು #//🌳ವಚನ ಸಾಹಿತ್ಯ 🌳// #ವಚನಗಳು #ಬಸವಾದಿ ಶರಣ ಶರಣೆಯರು #ಶರಣ ಸಾಹಿತ್ಯ
ಶ್ರೀ ಗುರು ಬಸವ ಲಿಂಗಾಯ ನಮಃ.. "ಧರೆ ಗಿರಿಯನಂಬರವ ಖರಕಿರಣನ ಪ್ರಭೆಯ, ಸುರಿವ ಮಳೆ ಉರಿವಗ್ನಿ ಮಾರುತನನು, ಹರಿವಿರಂಚಿಗಳ ಕುಬೇರ ಇಂದ್ರ ಚಂದ್ರಾಮರರನು, ಹರನು ಹಡದಲ್ಲಿ ನೆರವಾದವರೊಳರೆ? ಕರಕಷ್ಟದ ಮಾನವರು ಪರಪುಟ್ಟದ ಮರಿಯಂತೆ
ಹರನ ದಾನವನುಂಡು ಬೇರೆ ಪರದೈವವುಂಟೆಂದು ಬೆಸಕೈವರು. ಎರಡೇಳು ಲೋಕಕ್ಕೆ ಪರಮಪ್ರಭು
ತೆಲುಗೇಶ್ವರನೊಬ್ಬನೇ ಎಂದೆನ್ನದವನ ಬಾಯಲ್ಲಿಪಾಕುಳ.. ✍🏻 ಶರಣ ತೆಲುಗೇಶ ಮಸಣಯ್ಯನವರ ವಚನ.. ಶರಣು ಶರಣಾರ್ಥಿ ಗಳು ಶರಣರಿಗೆ 💐🦚 #ಶರಣ ಸಾಹಿತ್ಯ #ಬಸವಾದಿ ಶರಣ ಶರಣೆಯರು #ಬಸವಣ್ಣನವರ ವಚನಗಳು #//🌳ವಚನ ಸಾಹಿತ್ಯ 🌳// #ವಚನಗಳು
"ಎನ್ನ ಕಾಯವ ದಂಡಿಗೆಯ ಮಾಡಯ್ಯ, ಎನ್ನ ಶಿರವ ಸೋರೆಯ ಮಾಡಯ್ಯ, ಎನ್ನ ನರವ ತಂತಿಯ ಮಾಡಯ್ಯ, ಎನ್ನ ಬೆರಲ ಕಡ್ಡಿಯ ಮಾಡಯ್ಯ, ಬತ್ತೀಸ ರಾಗವ ಹಾಡಯ್ಯ, ಉರದಲೊತ್ತಿ ಬಾಜಿಸು ಕೂಡಲಸಂಗಮದೇವ.. ✍🏻ವಿಶ್ವಗುರು ಬಸವಣ್ಣನವರು.. ಶರಣು ಶರಣಾರ್ಥಿಗಳು 🙏 #ವಚನಗಳು #//🌳ವಚನ ಸಾಹಿತ್ಯ 🌳// #ಬಸವಣ್ಣನವರ ವಚನಗಳು #ಬಸವಾದಿ ಶರಣ ಶರಣೆಯರು #ಶರಣ ಸಾಹಿತ್ಯ
ಶ್ರೀ ಗುರು ಬಸವ ಲಿಂಗಾಯನಮಃ.. "ಮನದಲ್ಲಿ ಹುಟ್ಟಿದ ಅರಿವು ಮಾಡುವ ಮಾಟದಲ್ಲಿ ಕಾಣಬಹುದು
ಶರಣರ ಸಂಗಕ್ಕೆಳಸಿದ ಚಿತ್ತವ ಅನುಭಾವದಲ್ಲಿ ಕಾಣಬಹುದು ಒಳಹೊರಗೆ ತೆರಹಿಲ್ಲದ ಕೂಟ ನಿನ್ನದು ಅಮರೇಶ್ವರಲಿಂಗದಲ್ಲಿ ಸಂಗನಬಸವಣ್ಣಾ ನಿನ್ನ ಪಾದಕ್ಕೆ ನಮೋ ನಮೋ ಎಂಬೆನು.. ✍️ ಶರಣೆ ಆಯ್ದಕ್ಕಿ ಮಾರಯ್ಯನವರು.. ಶರಣು ಶರಣಾರ್ಥಿಗಳು 🙏🏻 #ಶರಣ ಸಾಹಿತ್ಯ #ಬಸವಾದಿ ಶರಣ ಶರಣೆಯರು #ಬಸವಣ್ಣನವರ ವಚನಗಳು #//🌳ವಚನ ಸಾಹಿತ್ಯ 🌳// #ವಚನಗಳು
"ಕೆಂಡದ ಮಳೆ ಕರೆವಲ್ಲಿ ಉದಕವಾಗಿರಬೇಕು.. "ಜಲಪ್ರಳಯವಾದಲ್ಲಿ ವಾಯುವಿನಂತಿರಬೇಕು.. "ಮಹಾಪ್ರಳಯವಾದಲ್ಲಿ ಆಕಾಶದಂತಿರಬೇಕು.. "ಜಗತ್ಪ್ರಳಯವಾದಲ್ಲಿ ತನ್ನ ತಾ ಬಿಡಬೇಕು.. "ಗುಹೇಶ್ವರನೆಂಬ ಲಿಂಗ ತಾನಾಗಿರಬೇಕು.. ✍️ ಅಲ್ಲಮಪ್ರಭುದೇವರ ವಚನ.. ಶರಣು ಶರಣಾರ್ಥಿಗಳು 🙏🏻 #ವಚನಗಳು #//🌳ವಚನ ಸಾಹಿತ್ಯ 🌳// #ಬಸವಣ್ಣನವರ ವಚನಗಳು #ಬಸವಾದಿ ಶರಣ ಶರಣೆಯರು #ಶರಣ ಸಾಹಿತ್ಯ
ವಿಶ್ವಗುರು ಬಸವಣ್ಣನವರ ವಚನ.. #ಶರಣ ಸಾಹಿತ್ಯ #ಬಸವಾದಿ ಶರಣ ಶರಣೆಯರು #ಬಸವಣ್ಣನವರ ವಚನಗಳು #//🌳ವಚನ ಸಾಹಿತ್ಯ 🌳// #ವಚನಗಳು
ಶ್ರೀ ಗುರು ಬಸವ ಲಿಂಗಾಯ ನಮಃ.. "ಹಲವು ಕಾಲ ಧಾವತಿಗೊಂದು ಒಟ್ಟಿದ ಹಿದಿರೆಯು ಒಂದು ಮಿಡುಕುರಲ್ಲಿ ಬೇವಂತೆ, ಸಲೆ ನೆಲೆ ಸನ್ನಿಹಿತನಾಗಿಪ್ಪ ಶರಣನ ಭಕ್ತಿ ಒಂದನಾಯತದಿಂದ ಕೆಡುವುದು. [ಸು]ಧರ್ಮದಲ್ಲಿ ಗಳಿಸಿದ ಪಿತನ ಧನವ ಅಧರ್ಮದಲ್ಲಿ ಕೆಡಿಸುವ ಸುತನಂತೆ- ಶಿವನ ಸೊಮ್ಮ ಶಿವಂಗೆ ಮಾಡದೆ, ಅನ್ಯಕ್ಕೆ ಮಾಡಿದಡೆ, ತನ್ನ ಭಕ್ತಿ ತನ್ನನೆ ಕೆಡಿಸುವುದು ಕೂಡಲಸಂಗಮದೇವಾ ! ✍🏻 ವಿಶ್ವ ಗುರು ಬಸವಣ್ಣನವರ ವಚನ.. ಬಸವ ಬೆಳಗಿನ ಶರಣು ಶರಣಾರ್ಥಿಗಳು 🙏 #ವಚನಗಳು #//🌳ವಚನ ಸಾಹಿತ್ಯ 🌳// #ಬಸವಣ್ಣನವರ ವಚನಗಳು #ಬಸವಾದಿ ಶರಣ ಶರಣೆಯರು #ಶರಣ ಸಾಹಿತ್ಯ












