"ತನು ನಿಮ್ಮದೆಂಬೆ, ಮನ ನಿಮ್ಮದೆಂಬೆ, ಧನ ನಿಮ್ಮದೆಂಬೆ: ಮತ್ತೆಯೂ ವಂಚನೆ ಮಾಣದಯ್ಯಾ. ಲಿಂಗ ಜಂಗಮವೆಂಬೆ, ಜಂಗಮ ಲಿಂಗವೆಂಬೆ: ಮತ್ತೆಯೂ ವಂಚನೆ ಮಾಣದಯ್ಯಾ. ಒಡಲೊಡವೆ ಹಡೆದರ್ಥ ನಿಮ್ಮದೆಂದರಿಯದೆ ಕೆಮ್ಮನೆ ಕೆಟ್ಟೆ, ಕೂಡಲಸಂಗಮದೇವಾ! ✍️ ವಿಶ್ವಗುರು ಬಸವಣ್ಣನವರ ವಚನ.. ಶರಣು ಶರಣಾರ್ಥಿಗಳು 🙏 #ಶರಣ ಸಾಹಿತ್ಯ #ಬಸವಾದಿ ಶರಣ ಶರಣೆಯರು #ವಚನಗಳು #//🌳ವಚನ ಸಾಹಿತ್ಯ 🌳// #ಬಸವಣ್ಣನವರ ವಚನಗಳು