"ಎತ್ತೆತ್ತ ನೋಡಿದಡತ್ತ ಬಸವಣ್ಣನೆಂಬ ಬಳ್ಳಿ, ಆ ಬಳ್ಳಿಯ ಹಿಡಿದೆತ್ತಿದಡೆ ಲಿಂಗವೆಂಬ ಗೊಂಚಲು. ಆ ಲಿಂಗದ ಗೊಂಚಲ ಹಿಡಿದೆತ್ತಿದಡೆ, ಭಕ್ತಿರಸಮಯವಾಯಿತ್ತಯ್ಯಾ. ಇದಾರಯ್ಯಾ ಅಮಳೋಕ್ಯವ ಮಾಡಬಲ್ಲವರು??? ಇದಾರಯ್ಯಾ ಹೊರಗೆ ಪ್ರಜ್ವಲಿಸಿ ತೋರಬಲ್ಲವರು??? ಬಸವಗುರು[ವೆ] ಎನ್ನ ಕರಸ್ಥಲದ ಲಿಂಗದ ಆದಿಯನರುಹಿ ತೋರಿದ ಕಾರಣ, ಗುಹೇಶ್ವರ ಲಿಂಗದ ನಿಲವ ನಿನ್ನಿಂದಲರಿದೆ, ಈ ಉಳಿದ ಲೋಕಾದಿಲೋಕಂಗಳೆಲ್ಲವು ಎನ್ನ ಮುಖದಲ್ಲಿ ಕಿಂಚಿತ್ತ.. ✍️ ಅಲ್ಲಮಪ್ರಭುದೇವರ ವಚನ.. ಶರಣು ಶರಣಾರ್ಥಿಗಳು 🙏 #ಬಸವಾದಿ ಶರಣ ಶರಣೆಯರು #//🌳ವಚನ ಸಾಹಿತ್ಯ 🌳// #ವಚನಗಳು #ಶರಣ ಸಾಹಿತ್ಯ #ಬಸವಣ್ಣನವರ ವಚನಗಳು