
ಕಾಯಕವೇ ಕೈಲಾಸ..
@76865063
ದಯವೇ ಧರ್ಮದ ಮೂಲವಯ್ಯಾ.. ದೇಹವೇ ದೇಗುಲ.. ಅರಿವೇ ಗುರು..
ಬಸವ (ಲಿಂಗಾಯತ) ಧರ್ಮ ಎಂದರೇನು.??? #ವಚನಗಳು #//🌳ವಚನ ಸಾಹಿತ್ಯ 🌳// #ಶರಣ ಸಾಹಿತ್ಯ #ಬಸವಣ್ಣನವರ ವಚನಗಳು #ಬಸವಾದಿ ಶರಣ ಶರಣೆಯರು
ವಿಶ್ವಗುರು ಬಸವಣ್ಣನವರ ವಚನ.. #ಬಸವಾದಿ ಶರಣ ಶರಣೆಯರು #ಬಸವಣ್ಣನವರ ವಚನಗಳು #ಶರಣ ಸಾಹಿತ್ಯ #//🌳ವಚನ ಸಾಹಿತ್ಯ 🌳// #ವಚನಗಳು
ಅಕ್ಕಮಹಾದೇವಿಯವರ ವಚನ.. #ವಚನಗಳು #//🌳ವಚನ ಸಾಹಿತ್ಯ 🌳// #ಶರಣ ಸಾಹಿತ್ಯ #ಬಸವಣ್ಣನವರ ವಚನಗಳು #ಬಸವಾದಿ ಶರಣ ಶರಣೆಯರು
ಅಲ್ಲಮಪ್ರಭುದೇವರ ವಚನ.. #ಬಸವಾದಿ ಶರಣ ಶರಣೆಯರು #ಬಸವಣ್ಣನವರ ವಚನಗಳು #ಶರಣ ಸಾಹಿತ್ಯ #//🌳ವಚನ ಸಾಹಿತ್ಯ 🌳// #ವಚನಗಳು
"ಎಮ್ಮವರು ಬೆಸಗೊಂಡರೆ ಶುಭಲಗ್ನವೆಂದು ಹೇಳಿರಯ್ಯಾ.. "ರಾಶಿ ಕೂಟ ಋಣ ಸಂಬಂಧಗಳುಂಟೆಂದು ಹೇಳಿರಯ್ಯಾ.. "ಚಂದ್ರಬಲ ತಾರಾಬಲಗಳುಂಟೆಂದು ಹೇಳಿರಯ್ಯಾ.. "ನಾಳಿನ ದಿನಕಿಂದಿನ ದಿನ ಲೇಸೆಂದು ಹೇಳಿರಯ್ಯಾ.. "ಕೂಡಲಸಂಗಮದೇವನ ಪೂಜಿಸಿದ ಫಲ ನಿಮ್ಮದಯ್ಯಾ.. ✍️ ಸಾಂಸ್ಕೃತಿಕ ನಾಯಕ ವಿಶ್ವಗುರು ಜಗಜ್ಯೋತಿ ಬಸವಣ್ಣನವರ ವಚನ.. ಶರಣು ಶರಣಾರ್ಥಿಗಳು 🙏 #ವಚನಗಳು #//🌳ವಚನ ಸಾಹಿತ್ಯ 🌳// #ಶರಣ ಸಾಹಿತ್ಯ #ಬಸವಣ್ಣನವರ ವಚನಗಳು #ಬಸವಾದಿ ಶರಣ ಶರಣೆಯರು
"ಹಾವು ತಿಂದವರ ನುಡಿಸಬಹುದು; ಗರ ಹೊಡೆದವರ ನುಡಿಸಬಹುದು; ಸಿರಿಗರ ಹೊಡೆದವರ ನುಡಿಸಲು ಬಾರದು ನೋಡಯ್ಯಾ! ಬಡತನವೆಂಬ ಮಂತ್ರವಾದಿ ಹೊಗಲು ಒಡನೆ ನುಡಿವರು, ಕೂಡಲಸಂಗಮದೇವಾ.. ವಿಶ್ವಗುರು ಬಸವಣ್ಣನವರ ವಚನ.. ಶರಣು ಶರಣಾರ್ಥಿಗಳು 🙏 #ಬಸವಣ್ಣನವರ ವಚನಗಳು #ಬಸವಾದಿ ಶರಣ ಶರಣೆಯರು #ಶರಣ ಸಾಹಿತ್ಯ #//🌳ವಚನ ಸಾಹಿತ್ಯ 🌳// #ವಚನಗಳು
ಶ್ರೀ ಗುರು ಬಸವ ಲಿಂಗಾಯ ನಮಃ.. "ವಿಷಕ್ಕೆ ಅಂಜುವರಲ್ಲದೆ ಸರ್ಪಂಗೆ ಅಂಜುವರುಂಟೆ??? ಕೊಲುವ ವ್ಯಾಘ್ರಂಗೆ ಅಂಜುವರಲ್ಲದೆ ಸುಲಿದ ಬಣ್ಣಕ್ಕೆ ಅಂಜುವರುಂಟೆ??? ಅರಿವು ಸಂಪನ್ನರಲ್ಲಿ ಇದಿರೆಡೆಯಡಗಬೇಕಲ್ಲದೆ
ಬರುಕಾಯದ ದರುಶನ ಬಿರುಬರಲ್ಲಿ ಉಂಟೆ??? ನೆರೆಯರಿವಿನ ಹೊಲಬು ಕಾಯಕಾಂಡ ಕರ್ಮಕಾಂಡಿಗಳಲ್ಲಿ
ಜ್ಞಾನಹೀನ ಪಾಷಂಡಿಗಳಲ್ಲಿ ಆವ ಭಾವದ ಮಾರ್ಗವನು ನಿಧಾನಿಸಿ ಉಪೇಕ್ಷಿಸಲಿಲ್ಲ. ಗೋರಕ್ಷಪಾಲಕ ಮಹಾಪ್ರಭು ಸಿದ್ಧಸೋಮನಾಥ ಲಿಂಗವನರಿದವರಲ್ಲಿಯಲ್ಲದೆ.. ✍🏻 ಗೋರಕ್ಷ / ಗೋರಖನಾಥ ಶರಣರ ವಚನ.. ಬಸವ ಬೆಳಗಿನ ಶರಣು ಶರಣಾರ್ಥಿಗಳು 🙏🏻 #ವಚನಗಳು #//🌳ವಚನ ಸಾಹಿತ್ಯ 🌳// #ಶರಣ ಸಾಹಿತ್ಯ #ಬಸವಾದಿ ಶರಣ ಶರಣೆಯರು #ಬಸವಣ್ಣನವರ ವಚನಗಳು
"ತನು ಮನ ಧನವ ಹಿಂದಿಕ್ಕಿಕೊಂಡು
ಮಾತಿನ ಬಣಬೆಯ ಮುಂದಿಟ್ಟುಕೊಂಡು ಒಳಲೊಟೆಯ ನುಡಿವವರು ನೀವೆಲ್ಲರೂ ಕೇಳಿರೆ. ತಲಹಿಲ್ಲದ ಕೋಲು ಹೊಳ್ಳು ಹಾರುಹುದಲ್ಲದೆ ಗುರಿಯ ತಾಗಬಲ್ಲುದೆ ಮಾಯಾಪಾಶ ಹಿಂಗಿ, ಮನದ ಗಂಟು ಬಿಡದನ್ನಕ್ಕ ಕೂಡಲಸಂಗಮದೇವನೆಂತೊಲಿವನಯ್ಯಾ.. ✍️ ವಿಶ್ವಗುರು ಬಸವಣ್ಣನವರ ವಚನ.. ಬಸವ ಬೆಳಗಿನ ಶರಣು ಶರಣಾರ್ಥಿಗಳು 🙏 #ಬಸವಣ್ಣನವರ ವಚನಗಳು #ಬಸವಾದಿ ಶರಣ ಶರಣೆಯರು #ಶರಣ ಸಾಹಿತ್ಯ #//🌳ವಚನ ಸಾಹಿತ್ಯ 🌳// #ವಚನಗಳು
"ಆಸೆಯುಳ್ಳವಂಗೆ ಮಾಟಕೂಟವಲ್ಲದೆ,
ನಿರಾಸೆಯುಳ್ಳವಂಗೆ ಮಾಟಕೂಟವೇಕೆ??? ಮನಪರಿಣಾಮಿಗೆ ಮತ್ಸರವೇಕೆ??? ಸುತ್ತಿದ ಮಾಯಾಪ್ರಪಂಚವ ಜರಿದವಂಗೆ ಅಂಗನೆಯರ ಹಿಂದು ಮುಂದೆ ತಿರುಗಲೇಕೆ??? ಅಮುಗೇಶ್ವರನೆಂಬ ಲಿಂಗವನರಿದವಂಗೆ ಅಷ್ಟವಿಧಾರ್ಚನೆ ಷೋಡಶೋಪಚಾರದ ಹಂಗೇಕೆ.. ✍️ ಅಮುಗೆ ರಾಯಮ್ಮನವರ ವಚನ.. ಶರಣು ಶರಣಾರ್ಥಿಗಳು.. ಸಮಗ್ರ ವಚನ ಸಂಪುಟ: 5 ವಚನದ ಸಂಖ್ಯೆ: 604 #ವಚನಗಳು #//🌳ವಚನ ಸಾಹಿತ್ಯ 🌳// #ಶರಣ ಸಾಹಿತ್ಯ #ಬಸವಾದಿ ಶರಣ ಶರಣೆಯರು #ಬಸವಣ್ಣನವರ ವಚನಗಳು
"ಕಾಣಿಯ ಲೋಭ ಕೋಟಿಯ ಲಾಭವ ಕೆಡಿಸಿದುದ ನಾನರಿಯೆನಯ್ಯಾ| ಭಕ್ತಿಯ ಕುಳವನರಿಯದೆ ಮತಿಗೆಟ್ಟ ಪರಿಯ ನಾನರಿಯೆನಯ್ಯಾ| ಕೂಡಲಸಂಗನ ಶರಣರ ಸಂಗದಿಂದ ಅರಿದಡೆ| ನಾನು ಬದುಕುವೆನಯ್ಯಾ| ✍️ ವಿಶ್ವಗುರು ಬಸವಣ್ಣನವರ ವಚನ.. ಶರಣು ಶರಣಾರ್ಥಿಗಳು 🙏 #ಬಸವಾದಿ ಶರಣ ಶರಣೆಯರು #ಬಸವಣ್ಣನವರ ವಚನಗಳು #ಶರಣ ಸಾಹಿತ್ಯ #//🌳ವಚನ ಸಾಹಿತ್ಯ 🌳// #ವಚನಗಳು












