
ಕಾಯಕವೇ ಕೈಲಾಸ..
@76865063
ದಯವೇ ಧರ್ಮದ ಮೂಲವಯ್ಯಾ.. ದೇಹವೇ ದೇಗುಲ.. ಅರಿವೇ ಗುರು..
"ಚಿನ್ಮಯ ಚಿತ್ಪ್ರಕಾಶ ಚಿದಾನಂದ ಲಿಂಗವೆ, ಎನ್ನ ಹೃದಯ ಕಮಲದಲ್ಲಿ ಬೆಳಗಿ ತೋರುವ ಪರಂಜ್ಯೋತಿ, ಎನ್ನ ಕರಸ್ಥಲಕ್ಕನುವಾದ ಧರ್ಮಿ, ಎನ್ನ ಕಂಗಳ ಕೊನೆಯಲ್ಲಿ ಮೂರ್ತಿಗೊಂಡಿಪ್ಪೆಯಯ್ಯಾ, ಕೂಡಲಸಂಗಮದೇವಯ್ಯಾ.. ✍🏻 ವಿಶ್ವಗುರು ಬಸವಣ್ಣನವರ ವಚನ.. ಶರಣು ಶರಣಾರ್ಥಿಗಳು 🙏 #ಬಸವಾದಿ ಶರಣ ಶರಣೆಯರು #ಬಸವಣ್ಣನವರ ವಚನಗಳು #ಶರಣ ಸಾಹಿತ್ಯ #//🌳ವಚನ ಸಾಹಿತ್ಯ 🌳// #ವಚನಗಳು
"ಜಡೆ ಮುಡಿ ಬೋಳು ಹೇಗಾದಡಾಗಲಿ, ನಡೆನುಡಿ ಸಿದ್ದಾಂತವಾದಡೆ ಸಾಕು, ಆತ ಪರಂಜ್ಯೋತಿ ಗುರುವಹ. ಆ ಇರವ ನಿನ್ನ ನೀನರಿ, ಪುಣ್ಯಾರಣ್ಯ ದಹನ ಭೀಮೇಶ್ವರಲಿಂಗ ನಿರಂಗಸಂಗ.. ✍️ ಶರಣ ಕೋಲ ಶಾಂತಯ್ಯನವರ ವಚನ.. (12 ನೇ ಶತಮಾನ ಬಸವಕಲ್ಯಾಣ ಬೀದರ ಜಿಲ್ಲೆ).. ವಚನ ವಿಮರ್ಶೆ: ಬಹಿರಂಗವಾಗಿ ಮೀಸೆ ಗಡ್ಡ ಬಿಡುವುದು, ಜಡೆ ಬೆಳೆಸುವುದು, ತಲೆಗೂದಲು ಬೋಳಿಸಿಕೊಳ್ಳುವುದು ಇವೆಲ್ಲವೂ ಹೇಗಾದರೂ ಇರಲಿ ಆದರೆ ನಡೆ ನುಡಿ ಸರಿಯಾಗಿರಬೇಕು ಮತ್ತು ಅದೇ ಜೀವನದ ತತ್ವವಾಗಿರಬೇಕು. ಅಂತಹ ಮನುಷ್ಯರು ಮಾತ್ರ ಮಾರ್ಗದರ್ಶಕ ಗುರುಗಳು ಮತ್ತು ಜ್ಞಾನಿಗಳು. ಅಂತಹ ಅರಿವು ತಿಳಿದಿರಬೇಕು..! #ವಚನಗಳು #//🌳ವಚನ ಸಾಹಿತ್ಯ 🌳// #ಶರಣ ಸಾಹಿತ್ಯ #ಬಸವಣ್ಣನವರ ವಚನಗಳು #ಬಸವಾದಿ ಶರಣ ಶರಣೆಯರು
ಶ್ರೀ ಗುರು ಬಸವ ಲಿಂಗಾಯ ನಮಃ.. "ಎನಗೆ ಹರಿಯಿತ್ತು ತಮವೆಂಬ ಸಂಸಾರದ ಬಂಧನ. ಅಡಗಿಯೂ ಉಡುಗಿಯೂ ಕಂಡೆಹೆನೆಂದೆಂಬ ಸಂಶಯ. ಸಂಕಲ್ಪ ಸಂದೇಹ ಭ್ರಾಂತು ಭ್ರಮೆಯ ಭಾವಕ್ಕೆ ಬಯಲಾಯಿತ್ತು. ನಿತ್ಯನಿರಂಜನ ಪರಂಜ್ಯೋತಿ ಪ್ರಕಾಶವೆನಗೆ ತಲೆದೋರಿತ್ತು. ಶುದ್ಧಸಿದ್ಧ ಪ್ರಸಿದ್ಧ ಪ್ರಸನ್ನ ಪ್ರಭುವೆ ಶಾಂತಚೆನ್ನಮಲ್ಲಿಕಾರ್ಜುನ ದೇವಯ್ಯಾ, ಕಾಣಬಂದಿತ್ತು ಕಾಣಾ, ಪ್ರಭುದೇವರ ಕಾರುಣ್ಯ ಪ್ರಸಾದದಿಂದ ಬಸವಣ್ಣ.. ✍🏻 ಶರಣ ಮರುಳಶಂಕರದೇವರ ವಚನ.. ಬಸವ ಬೆಳಗಿನ ಶರಣು ಶರಣಾರ್ಥಿ ಗಳು 🙏🏻 #ಬಸವಾದಿ ಶರಣ ಶರಣೆಯರು #ಬಸವಣ್ಣನವರ ವಚನಗಳು #ಶರಣ ಸಾಹಿತ್ಯ #//🌳ವಚನ ಸಾಹಿತ್ಯ 🌳// #ವಚನಗಳು
ಬಸವ (ಲಿಂಗಾಯತ) ಧರ್ಮ ಎಂದರೇನು.??? #ವಚನಗಳು #//🌳ವಚನ ಸಾಹಿತ್ಯ 🌳// #ಶರಣ ಸಾಹಿತ್ಯ #ಬಸವಣ್ಣನವರ ವಚನಗಳು #ಬಸವಾದಿ ಶರಣ ಶರಣೆಯರು
ವಿಶ್ವಗುರು ಬಸವಣ್ಣನವರ ವಚನ.. #ಬಸವಾದಿ ಶರಣ ಶರಣೆಯರು #ಬಸವಣ್ಣನವರ ವಚನಗಳು #ಶರಣ ಸಾಹಿತ್ಯ #//🌳ವಚನ ಸಾಹಿತ್ಯ 🌳// #ವಚನಗಳು
ಅಕ್ಕಮಹಾದೇವಿಯವರ ವಚನ.. #ವಚನಗಳು #//🌳ವಚನ ಸಾಹಿತ್ಯ 🌳// #ಶರಣ ಸಾಹಿತ್ಯ #ಬಸವಣ್ಣನವರ ವಚನಗಳು #ಬಸವಾದಿ ಶರಣ ಶರಣೆಯರು
ಅಲ್ಲಮಪ್ರಭುದೇವರ ವಚನ.. #ಬಸವಾದಿ ಶರಣ ಶರಣೆಯರು #ಬಸವಣ್ಣನವರ ವಚನಗಳು #ಶರಣ ಸಾಹಿತ್ಯ #//🌳ವಚನ ಸಾಹಿತ್ಯ 🌳// #ವಚನಗಳು
"ಎಮ್ಮವರು ಬೆಸಗೊಂಡರೆ ಶುಭಲಗ್ನವೆಂದು ಹೇಳಿರಯ್ಯಾ.. "ರಾಶಿ ಕೂಟ ಋಣ ಸಂಬಂಧಗಳುಂಟೆಂದು ಹೇಳಿರಯ್ಯಾ.. "ಚಂದ್ರಬಲ ತಾರಾಬಲಗಳುಂಟೆಂದು ಹೇಳಿರಯ್ಯಾ.. "ನಾಳಿನ ದಿನಕಿಂದಿನ ದಿನ ಲೇಸೆಂದು ಹೇಳಿರಯ್ಯಾ.. "ಕೂಡಲಸಂಗಮದೇವನ ಪೂಜಿಸಿದ ಫಲ ನಿಮ್ಮದಯ್ಯಾ.. ✍️ ಸಾಂಸ್ಕೃತಿಕ ನಾಯಕ ವಿಶ್ವಗುರು ಜಗಜ್ಯೋತಿ ಬಸವಣ್ಣನವರ ವಚನ.. ಶರಣು ಶರಣಾರ್ಥಿಗಳು 🙏 #ವಚನಗಳು #//🌳ವಚನ ಸಾಹಿತ್ಯ 🌳// #ಶರಣ ಸಾಹಿತ್ಯ #ಬಸವಣ್ಣನವರ ವಚನಗಳು #ಬಸವಾದಿ ಶರಣ ಶರಣೆಯರು
"ಹಾವು ತಿಂದವರ ನುಡಿಸಬಹುದು; ಗರ ಹೊಡೆದವರ ನುಡಿಸಬಹುದು; ಸಿರಿಗರ ಹೊಡೆದವರ ನುಡಿಸಲು ಬಾರದು ನೋಡಯ್ಯಾ! ಬಡತನವೆಂಬ ಮಂತ್ರವಾದಿ ಹೊಗಲು ಒಡನೆ ನುಡಿವರು, ಕೂಡಲಸಂಗಮದೇವಾ.. ವಿಶ್ವಗುರು ಬಸವಣ್ಣನವರ ವಚನ.. ಶರಣು ಶರಣಾರ್ಥಿಗಳು 🙏 #ಬಸವಣ್ಣನವರ ವಚನಗಳು #ಬಸವಾದಿ ಶರಣ ಶರಣೆಯರು #ಶರಣ ಸಾಹಿತ್ಯ #//🌳ವಚನ ಸಾಹಿತ್ಯ 🌳// #ವಚನಗಳು
ಶ್ರೀ ಗುರು ಬಸವ ಲಿಂಗಾಯ ನಮಃ.. "ವಿಷಕ್ಕೆ ಅಂಜುವರಲ್ಲದೆ ಸರ್ಪಂಗೆ ಅಂಜುವರುಂಟೆ??? ಕೊಲುವ ವ್ಯಾಘ್ರಂಗೆ ಅಂಜುವರಲ್ಲದೆ ಸುಲಿದ ಬಣ್ಣಕ್ಕೆ ಅಂಜುವರುಂಟೆ??? ಅರಿವು ಸಂಪನ್ನರಲ್ಲಿ ಇದಿರೆಡೆಯಡಗಬೇಕಲ್ಲದೆ
ಬರುಕಾಯದ ದರುಶನ ಬಿರುಬರಲ್ಲಿ ಉಂಟೆ??? ನೆರೆಯರಿವಿನ ಹೊಲಬು ಕಾಯಕಾಂಡ ಕರ್ಮಕಾಂಡಿಗಳಲ್ಲಿ
ಜ್ಞಾನಹೀನ ಪಾಷಂಡಿಗಳಲ್ಲಿ ಆವ ಭಾವದ ಮಾರ್ಗವನು ನಿಧಾನಿಸಿ ಉಪೇಕ್ಷಿಸಲಿಲ್ಲ. ಗೋರಕ್ಷಪಾಲಕ ಮಹಾಪ್ರಭು ಸಿದ್ಧಸೋಮನಾಥ ಲಿಂಗವನರಿದವರಲ್ಲಿಯಲ್ಲದೆ.. ✍🏻 ಗೋರಕ್ಷ / ಗೋರಖನಾಥ ಶರಣರ ವಚನ.. ಬಸವ ಬೆಳಗಿನ ಶರಣು ಶರಣಾರ್ಥಿಗಳು 🙏🏻 #ವಚನಗಳು #//🌳ವಚನ ಸಾಹಿತ್ಯ 🌳// #ಶರಣ ಸಾಹಿತ್ಯ #ಬಸವಾದಿ ಶರಣ ಶರಣೆಯರು #ಬಸವಣ್ಣನವರ ವಚನಗಳು












