
Freaky Fishu
@fishu_47
Entertainment,I don't like it, I avoid it but Entertainment likes me😉I can't avoid
ಸಂಗೀತ್ ಸಾಗರ್ ಶಿವಮೊಗ್ಗದಲ್ಲಿ ‘ಪಾತ್ರಧಾರಿ’ ಸಿನಿಮಾ ಶೂಟಿಂಗ್ ಮಾಡುತ್ತಿದ್ದರು. ಇಡೀ ತಂಡ ಅಲ್ಲಿ ಬೀಡು ಬಿಟ್ಟಿತ್ತು. ಈ ವೇಳೆ ಅವರು ಕುಸಿದು ಬಿದ್ದಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲು ಮಾಡಿದರೂ ಯಾವುದೇ ಪ್ರಯೋಜನ ಆಗಿಲ್ಲ. ಸದ್ಯ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿಯೇ ಸಾಗರ್ ಮೃತದೇಹವನ್ನು ಇಡಲಾಗಿದೆ. ಸಾವು ಯಾವ ಕ್ಷಣದಲ್ಲಿ ಹೇಗೆ ಬರುತ್ತದೆ ಎಂದು ಊಹಿಸೋದು ತುಂಬಾನೇ ಕಷ್ಟ. ನಟಿಸುವಾಗಲೇ ನಿಧನ ಹೊಂದಿದ ಅನೇಕ ಕಲಾವಿದರು ಇದ್ದಾರೆ. ಈಗ ಕನ್ನಡದ ನಿರ್ದೇಶಕನೋರ್ವ ಸಿನಿಮಾ ಚಿತ್ರೀಕರಣದ ವೇಳೆಯೇ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ‘ಪಾತ್ರಧಾರಿ’ ಹೆಸರಿನ ಸಿನಿಮಾ ನಿರ್ದೇಶನ ಮಾಡುತ್ತಿದ್ದ ಸಂಗೀತ್ ಸಾಗರ್ ಮೃತ ದುರ್ಧೈವಿ. ಅವರ ಸಾವಿನಿಂದ ಇಡೀ ಕುಟುಂಬಕ್ಕೆ ಶಾಕ್ ಉಂಟಾಗಿದೆ. ಕುಟುಂಬ ಕಣ್ಣೀರಲ್ಲಿ ಕೈ ತೊಳೆಯುವಂತೆ ಆಗಿದೆ. #😭ಕನ್ನಡದ ಖ್ಯಾತ ನಿರ್ದೇಶಕ ನಿಧನ 💔😟
ಕನ್ನಡ ಕಿರುತೆರೆ ಹಾಗೂ ಹಿರಿತೆರೆ ನಟ ಶ್ರಿರಾಮ್ ಅವರ ವಿವಾಹ ನೆರವೇರಿದೆ. ಸ್ಫೂರ್ತಿ ಎಂಬುವವರ ಜೊತೆ ಶ್ರೀರಾಮ್ ವಿವಾಹ ಆಗಿದ್ದಾರೆ. ಭಾನುವಾರ (ನವೆಂಬರ್ 30) ಅವರು ಸಪ್ತಪದಿ ತುಳಿದಿದ್ದಾರೆ. ಈ ಸಂದರ್ಭದ ಫೋಟೋಗಳು ವೈರಲ್ ಆಗಿವೆ. ಶ್ರೀರಾಮ್ ಅವರದ್ದು ಲವ್ ಮ್ಯಾರೇಜ್ ಅಲ್ಲ. ಇದೊಂದು ಪಕ್ಕಾ ಅರೇಂಜ್ ಮ್ಯಾರೆಜ್ ಎನ್ನಲಾಗುತ್ತಿದೆ. ಮೈಸೂರಿನಲ್ಲಿ ಇವರ ವಿವಾಹ ನೆರವೇರಿದೆಯಂತೆ. ಶ್ರೀರಾಮ್ ಮದುವೆ ಫೋಟೋಗಳು ಗಮನ ಸೆಳೆದಿವೆ. ಇದಕ್ಕೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಕ್ಕಿದೆ. ಸಾಮಾನ್ಯವಾಗಿ ವಿವಾಹ ಆಗುವಾಗ ಹುಡುಗಿ ಚಿತ್ರರಂಗದವರಲ್ಲದೆ ಇದ್ದರೆ ಸೆಲೆಬ್ರಿಟಿಗಳು ಅವರ ಕಿರುಪರಿಚಯ ಮಾಡಿಕೊಡುತ್ತಾರೆ. ಆದರೆ, ಶ್ರೀರಾಮ್ ಅವರು ಸದ್ಯಕ್ಕೆ ಆ ರೀತಿ ಮಾಡಿಲ್ಲ. ಅವರು ತಾವು ಕೈ ಹಿಡಿದ ಹುಡುಗಿಯ ಹಿನ್ನೆಲೆಯನ್ನು ಇನ್ನಷ್ಟೇ ತಿಳಿಸಬೇಕಿದೆ. #❤️ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕನ್ನಡದ ಖ್ಯಾತ ನಟ😍
ನಟಿ ಸಮಂತಾ ರುತ್ ಪ್ರಭು ಮತ್ತು ಚಲನಚಿತ್ರ ನಿರ್ಮಾಪಕ ರಾಜ್ ನಿಧಿಮೋರು ಸೋಮವಾರ ಬೆಳಿಗ್ಗೆ ಸದ್ಗುರುಗಳ ಇಶಾ ಯೋಗ ಕೇಂದ್ರದಲ್ಲಿ ವಿವಾಹವಾದರು. ವಾರಾಂತ್ಯದಿಂದ ಅವರ ವಿವಾಹದ ಬಗ್ಗೆ ಊಹಾಪೋಹಗಳು ಹರಿದಾಡುತ್ತಿದ್ದವು, ಆದರೆ ಮೂಲವೊಂದು ಸ್ಕ್ರೀನ್ಗೆ ದೃಢಪಡಿಸಿದ್ದು, ಸೋಮವಾರ ಬೆಳಿಗ್ಗೆ ಇಶಾ ಯೋಗ ಕೇಂದ್ರದೊಳಗಿನ ಲಿಂಗ ಭೈರವಿ ದೇವಸ್ಥಾನದಲ್ಲಿ ವಿವಾಹ ನಡೆದಿದೆ. "ಈಶ ಯೋಗ ಕೇಂದ್ರದ ಒಳಗಿನ ಲಿಂಗ ಭೈರವಿ ದೇವಸ್ಥಾನದಲ್ಲಿ ಬೆಳಗಿನ ಜಾವ ವಿವಾಹ ನಡೆಯಿತು" ಎಂದು ಮೂಲಗಳು HT ಗೆ ತಿಳಿಸಿವೆ. ಸಮಾರಂಭವು ಕೇವಲ 30 ಅತಿಥಿಗಳು ಮಾತ್ರ ಭಾಗವಹಿಸಿದ್ದರು ಎಂದು ಮೂಲಗಳು ತಿಳಿಸಿವೆ. ದೇವಾಲಯದ ಪ್ರಶಾಂತ ಮತ್ತು ಆಧ್ಯಾತ್ಮಿಕ ವಾತಾವರಣಕ್ಕೆ ಬದ್ಧವಾಗಿ ಸಮಂತಾ ಈ ಸಂದರ್ಭಕ್ಕಾಗಿ ಸಾಂಪ್ರದಾಯಿಕ ಕೆಂಪು ಸೀರೆಯನ್ನು ಧರಿಸಿದ್ದರು ಎಂದು ಹೇಳಲಾಗುತ್ತದೆ.ಬೆಳೆಯುತ್ತಿರುವ ವದಂತಿಗಳ ಹೊರತಾಗಿಯೂ, ಸಮಂತಾ ಅಥವಾ ರಾಜ್ ತಮ್ಮ ವಿವಾಹದ ಸುದ್ದಿಯನ್ನು ಅಧಿಕೃತವಾಗಿ ದೃಢಪಡಿಸಿಲ್ಲ. ಹಲವಾರು ಪ್ರಾದೇಶಿಕ ಮತ್ತು ರಾಷ್ಟ್ರೀಯ ಮಾಧ್ಯಮಗಳು ಇಬ್ಬರೂ ಪ್ರತಿಜ್ಞೆ ವಿನಿಮಯ ಮಾಡಿಕೊಳ್ಳಲು ತಯಾರಿ ನಡೆಸುತ್ತಿದ್ದಾರೆ ಎಂದು ಸೂಚಿಸಿದ ನಂತರ ವದಂತಿಗಳು ವೇಗ ಪಡೆದುಕೊಂಡವು. #😮ಗುಟ್ಟಾಗಿ ಎರಡನೇ ಮದುವೆಯಾದ ಖ್ಯಾತ ನಟಿ 😱
ನಟಿ ಆಶಿಕಾ ರಂಗನಾಥ್ (Ashika Ranganath) ಅವರ ಸಂಬಂಧಿ ಯುವತಿ ಡ್ರಗ್ ಅಡಿಕ್ಟ್ ಯುವಕನ ಲೈಂಗಿಕ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಪಾಂಡುರಂಗ ನಗರದಲ್ಲಿ ನಡೆದಿದೆ.
– ಎಂಜಿನಿಯರಿಂಗ್ ಮುಗಿಸಿ ಕೆಲಸಕ್ಕೆ ತಯಾರಿ ನಡೆಸಿದ್ದ ಅಚಲ
ಹಾಸನ/ಬೆಂಗಳೂರು: ನಟಿ ಆಶಿಕಾ ರಂಗನಾಥ್ (Ashika Ranganath) ಅವರ ಸಂಬಂಧಿ ಯುವತಿ ಡ್ರಗ್ ಅಡಿಕ್ಟ್ ಯುವಕನ ಲೈಂಗಿಕ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಪಾಂಡುರಂಗ ನಗರದಲ್ಲಿ ನಡೆದಿದೆ.
ಹಾಸನ (Hassan) ಮೂಲದ ಯುವತಿ ಅಚಲ (22) ನವೆಂಬರ್ 22ರಂದು ಬೆಂಗಳೂರಿನ ಸಂಬಂಧಿಕರ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರಿನ ಪುಟ್ಟೇನಹಳ್ಳಿ ಪೊಲೀಸ್ ಠಾಣೆ (Puttanahalli Police Station) ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಆದ್ರೆ 10 ದಿನ ಕಳೆದರೂ, ಸಾಕ್ಷ್ಯಗಳಿದ್ದರೂ ಆರೋಪಿ ಬಂಧನ ಆಗದೇ ಇರುವುದು ಅಚಲ ಪೋಷಕರ ಆಕ್ರೋಶಕ್ಕೆ ಕಾರಣವಾಗಿದೆ. #💔ಕನ್ನಡದ ಖ್ಯಾತ ನಟಿ ಮನೆಯಲ್ಲಿ ತೀವ್ರ ಶೋಕ 😟
ಕನ್ನಡದ ಅನೇಕ ಸಿನಿಮಾಗಳಲ್ಲಿ ನಟಿಸಿರುವ ಉಮೇಶ್ ಅವರು ಇನ್ನಿಲ್ಲ. ಇಂದು ಅವರು ಬೆಂಗಳೂರಿನ ಆಸ್ಪತ್ರೆಯಲ್ಲಿ ಅಸು ನೀಗಿದ್ದಾರೆ. ಅವರಿಗೆ 80 ವರ್ಷ ವಯಸ್ಸಾಗಿತ್ತು. ಇತ್ತೀಚೆಗೆ ಆಸ್ಪತ್ರೆ ಬೆಡ್ ಮೇಲಿದ್ದಾಗಲೂ ಕಾಮಿಡಿ ಮಾಡಿದ್ದ ಹಿರಿಯ ನಟ ಉಮೇಶ್ ಅವರು ವಿಧಿವಶರಾಗಿದ್ದಾರೆ. 350ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿರುವ ಅವರು ಕಾಲನ ಕರೆಗೆ ಓಗುಟ್ಟಿದ್ದಾರೆ. ಚಿತ್ರರಂಗದ ಗಣ್ಯರು ಉಮೇಶ್ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. #💔ಖ್ಯಾತ ಹಿರಿಯ ಹಾಸ್ಯ ನಟ ಇನ್ನಿಲ್ಲ😭💔
ಅಕ್ರಮವಾಗಿ ಬಿಪಿಎಲ್ ಕಾರ್ಡ್ ಪಡೆದವರಿಗೆ ಶಾಕ್ ನೀಡಲು ರಾಜ್ಯ ಸರ್ಕಾರ ಮುಂದಾಗಿದ್ದು, Central Board of Direct Taxation ಮಾಹಿತಿ ಆಧಾರದ ಮೇಲೆ ರಾಜಧಾನಿ ಬೆಂಗಳೂರೊಂದರಲ್ಲೇ ಲಕ್ಷಾಂತರ ಕಾರ್ಡ್ಗಳು ರದ್ದಾಗುವ ಸಾಧ್ಯತೆ ಇದೆ. ಆಹಾರ ಇಲಾಖೆಗೆ ಕಳೆದ ತಿಂಗಳು ದೊರೆತಿರುವ ಟ್ಯಾಕ್ಸ್ ರಿಪೋರ್ಟ್ ಆಧಾರದಲ್ಲಿ, ತೆರಿಗೆ ಕಟ್ಟುತ್ತಿದ್ದರೂ ಪಡೆದಿರುವ ಬಿಪಿಎಲ್ ಕಾರ್ಡ್ಗಳು ಎಪಿಎಲ್ ಕಾರ್ಡ್ಗಳಾಗಿ ಪರಿವರ್ತನೆಯಾಗಲಿವೆ. ಆಹಾರ ಇಲಾಖೆಯ ರಾಜಾಜಿನಗರ ಜಂಟಿ ಆಯುಕ್ತರ ವ್ಯಾಪ್ತಿಯಲ್ಲಿಯೇ 13,329 ಬಿಪಿಎಲ್ ಕಾರ್ಡ್ಗಳು ರದ್ದಾಗಿದ್ದು, ಅವನ್ನು ಎಪಿಎಲ್ ಆಗಿ ಪರಿವರ್ತಿಸಲಾಗಿದೆ. ಈ ಹಿನ್ನಲೆ ರಾಜಾಜಿನಗರದ ಆಹಾರ ಇಲಾಖೆ ಮುಂದೆ ಜನರು ಜಮಾಯಿಸಿದ್ದಾರೆ. ಕಳೆದ ತಿಂಗಳು ರೇಷನ್ ಸಿಕ್ಕಿತ್ತು, ಆದ್ರೆ ಈ ತಿಂಗಳು ನಮಗೆ ರೇಷನ್ ನೀಡಿಲ್ಲ ಎಂದು ತಿಳಿಸಿದ್ದಾರೆ. ಈ ಬಗ್ಗೆ ಮಾತನಾಡಿರೋ ಮಹಿಳೆಯೋರ್ವರು, ನಾವು ಟ್ಯಾಕ್ಸ್ ಕಟ್ಟುತ್ತಿಲ್ಲ, ಮಗಳು ಕೆಲಸ ಮಾಡುತ್ತಿದ್ದಳು. ಆದರೆ ಈಗ ಅವಳನ್ನು ಮದುವೆ ಮಾಡಿ ಕೊಟ್ಟಿದ್ದೇವೆ. ಹೀಗಿದ್ದರೂ ನಮಗೆ ರೇಷನ್ ನೀಡುತ್ತಿಲ್ಲ ಎಂದು ಅಲವತ್ತುಕೊಂಡಿದ್ದಾರೆ. #🔴'BPL ಕಾರ್ಡ್ ರದ್ದು' ಮಾಡಿ ಬಡವರ ಹೊಟ್ಟೆ ಮೇಲೆ ಹೊಡೆದ ಸರ್ಕಾರ❌
ಕಾಮಿಡಿ ಕಿಲಾಡಿಗಳು ಶೋ ಮೂಲಕ ಜನಪ್ರಿಯತೆ ಪಡೆದ ನಟಿ ನಯನಾ ವಿರುದ್ಧ ಕಲಬುರ್ಗಿಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ದಲಿತ ದೌರ್ಜನ್ಯ ತಡೆ ಕಾಯ್ದೆಯಡಿ ಎಫ್ಐಆರ್ ದಾಖಲಿಸಿಕೊಂಡಿದ್ದು ತನಿಖೆ ಮುಂದುವರೆಸಿದ್ದಾರೆ. ಕಾಮಿಡಿ ಕಿಲಾಡಿಗಳು (Comedy Kiladigalu) ಖ್ಯಾತಿನ ನಟಿ, ಹಾಸ್ಯ ಕಲಾವಿದೆ ನಯನ ವಿರುದ್ಧ ದೂರು ದಾಖಲಾಗಿದೆ. ನಟಿ ನಯನಾ ಅವರು ದಲಿತ ನಿಂದನೆ ಮಾಡಿದ್ದಾರೆಂದು ಆರೋಪಿಸಿ ದಲಿತ ಸಂಘಟನೆಯೊಂದು ನಟಿಯ ವಿರುದ್ಧ ದೂರು ದಾಖಲಿಸಿದ್ದಾರೆ. ನಯನಾ ಅವರು ಕಳೆದ ತಿಂಗಳು ಚಿಟ್ ಫಂಡ್ ಮೋಸದ ಕುರಿತಾಗಿ ಮಾತನಾಡುತ್ತಾ ಬಳಸಿದ್ದ ಪದಗಳು ದಲಿತ ವಿರೋಧಿ ಮತ್ತು ಜಾತಿ ನಿಂದನಾತ್ಮಕ ಪದಗಳಾಗಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕಲಬುರ್ಗಿಯಲ್ಲಿ ದಲಿತ ಸೇನೆಯ ಅಧ್ಯಕ್ಷರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. #😮ಜಾತಿ ನಿಂದನೆ ಆರೋಪ: ಖ್ಯಾತ ನಟಿ ವಿರುದ್ಧ ದೂರು ದಾಖಲು😱
ಕಳೆದ ಕೆಲವು ದಿನಗಳಿಂದ ಚಿತ್ರರಂಗದಲ್ಲಿ ವಿಚ್ಛೇದನಗಳ ಸಂಖ್ಯೆ ಹೆಚ್ಚಾಗಿದೆ. ಇದು ಮಾತ್ರವಲ್ಲ, ಪ್ರತಿದಿನ ಹಿರಿಯ ನಟಿಯರು ಮತ್ತು ನಟರ ವಿಚ್ಛೇದನದ ಸುದ್ದಿಗಳು ಕೇಳಿ ಬರುತ್ತಿವೆ. ಇದೀಗ, ನಟಿಯೊಬ್ಬರು 43 ನೇ ವಯಸ್ಸಿನಲ್ಲಿ ವಿಚ್ಛೇದನ ಪಡೆದಿದ್ದಾರೆ. ಇದು ಮಾತ್ರವಲ್ಲದೆ, ಇತ್ತೀಚೆಗೆ ನಟಿ ಸಾಮಾಜಿಕ ಮಾಧ್ಯಮದಲ್ಲಿ ತಮ್ಮ ವಿಚ್ಛೇದನದ ಬಗ್ಗೆ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಆಘಾತಕಾರಿ ಸಂಗತಿಯೆಂದರೆ ಇದು ನಟಿಯ ಮೂರನೇ ವಿಚ್ಛೇದನ. ಕಳೆದ ಕೆಲವು ದಿನಗಳಲ್ಲಿ ನಟಿಯ ವಿಚ್ಛೇದನದ ಬಗ್ಗೆ ಚರ್ಚೆ ನಡೆಯುತ್ತಿತ್ತು. ಈಗ ಅವರು ಪೋಸ್ಟ್ ಹಂಚಿಕೊಳ್ಳುವ ಮೂಲಕ ಅಧಿಕೃತ ಘೋಷಣೆ ಮಾಡಿದ್ದಾರೆ. ನಟಿಯ ಪೋಸ್ಟ್ ನೋಡಿ, ಅವರ ಅಭಿಮಾನಿಗಳು ಆಘಾತಕ್ಕೊಳಗಾಗಿದ್ದಾರೆ. ಮಲಯಾಳಂ ನಟಿ ಮೀರಾ ವಾಸುದೇವನ್ ಛಾಯಾಗ್ರಾಹಕ ವಿಪಿನ್ ಪುಥಿಯಕಂ ಅವರಿಂದ ವಿಚ್ಛೇದನ ಪಡೆಯುತ್ತಿರುವುದಾಗಿ ಅಧಿಕೃತವಾಗಿ ಘೋಷಿಸಿದ್ದಾರೆ. ಮೀರಾ ವಾಸುದೇವನ್ ಮತ್ತು ವಿಪಿನ್ ಕಳೆದ ವರ್ಷ ಮೇ ತಿಂಗಳಲ್ಲಿ ಕೊಯಮತ್ತೂರಿನಲ್ಲಿ ವಿವಾಹವಾದರು. ಮದುವೆಯಾದ ಕೇವಲ ಒಂದು ವರ್ಷದೊಳಗೆ, ಇಬ್ಬರೂ ಬೇರೆಯಾಗಲು ನಿರ್ಧರಿಸಿದರು. ನಿರ್ಧಾರ ಮಾತ್ರವಲ್ಲ, ಇಬ್ಬರೂ ಕಾನೂನುಬದ್ಧವಾಗಿ ಬೇರ್ಪಟ್ಟಿದ್ದಾರೆ. #😮43 ನೇ ವಯಸ್ಸಿಗೆ ಮೂರನೇ ಬಾರಿ ವಿಚ್ಛೇದನ ಪಡೆದ ಪ್ರಸಿದ್ಧ ನಟಿ😱
‘ಅಕಿರ’, ‘ವಾಸು ನಾನ್ ಪಕ್ಕಾ ಲೋಕಲ್’ ಇತ್ತೀಚೆಗಿನ ‘ಆರಾಮ್ ಅರವಿಂದ ಸ್ವಾಮಿ’ ಇನ್ನೂ ಕೆಲ ಕನ್ನಡ ಸಿನಿಮಾಗಳಲ್ಲಿ ನಟಿಸಿರುವ ಅನೀಶ್ ಅವರ ಹೊಸ ಸಿನಿಮಾ ‘ಲವ್ ಒಟಿಪಿ’ ನಿನ್ನೆ (ಶುಕ್ರವಾರ) ಬಿಡುಗಡೆ ಆಗಿದೆ. ಸಿನಿಮಾದ ಬಗ್ಗೆ ಒಳ್ಳೆಯ ವಿಮರ್ಶೆಗಳು ಪ್ರಕಟಗೊಂಡಿವೆ. ಆದರೆ ಜನ ಸಿನಿಮಾ ನೋಡಲು ಬಂದಿಲ್ಲ. ಇದು ಅನೀಶ್ ಅವರಿಗೆ ತೀವ್ರ ನೋವುಂಟು ಮಾಡಿದ್ದು, ಕಣ್ನೀರು ಹಾಕುತ್ತಾ ಭಾವುಕವಾಗಿ ವಿಡಿಯೋ ಒಂದನ್ನು ಹಂಚಿಕೊಂಡಿದ್ದಾರೆ. ಕನ್ನಡದಲ್ಲಿ ಈಗಾಗಲೇ ಹಲವು ಸಿನಿಮಾಗಳಲ್ಲಿ ನಾಯಕನಾಗಿ ನಟಿಸಿರುವ ಅನೀಶ್ ಅವರ ಹೊಸ ಸಿನಿಮಾ ‘ಲವ್ ಒಟಿಪಿ’ (Love OTP) ಇದೇ ವಾರ ಬಿಡುಗಡೆ ಆಗಿದೆ. ಸಿನಿಮಾದ ಬಗ್ಗೆ ಒಳ್ಳೆಯ ವಿಮರ್ಶೆಗಳು ವ್ಯಕ್ತವಾಗಿವೆ. ಪ್ರೇಮಕತೆಯುಳ್ಳ ಈ ಸಿನಿಮಾವನ್ನು ಲವ-ಲವಿಕೆಯಿಂದ ನಿರ್ದೇಶಕರು ತೆರೆಗೆ ತಂದಿದ್ದಾರೆ. ಸಿನಿಮಾದ ಬಗ್ಗೆ ಸಾಕಷ್ಟು ಧನಾತ್ಮಕ ವಿಮರ್ಶೆಗಳು ಬಂದ ಹೊರತಾಗಿಯೂ ಚಿತ್ರಮಂದಿರಗಳಿಗೆ ಜನ ಬಂದಿಲ್ಲ. ಇದು ನಟ ಅನೀಶ್ ಅವರಿಗೆ ಬೇಸರ ತರಿಸಿದ್ದು, ಕಣ್ಣೀರು ಹಾಕುತ್ತಾ ವಿಡಿಯೋ ಒಂದನ್ನು ಹಂಚಿಕೊಂಡಿದ್ದಾರೆ. #😢ಸಿನಿಮಾಗೆ ನೀರಸ ಪ್ರತಿಕ್ರಿಯೆ, ಕಣ್ಣೀರು ಹಾಕಿದ ಖ್ಯಾತ ನಟ😞
ನಿಂತಿದ್ದ ಕಾರಿಗೆ ಕ್ಯಾಂಟರ್ ಡಿಕ್ಕಿ ಹೊಡೆದಿದ್ದರಿಂದ ಡ್ಯಾನ್ಸರ್ ಸುಧೀಂದ್ರ ಸಾವನ್ನಪ್ಪಿದ್ದಾರೆ. ನೆಲಮಂಗಲ ತಾಲ್ಲೂಕಿನ ಪೆಮ್ಮನಹಳ್ಳಿ ಬಳಿ ಈ ದುರ್ಘಟನೆ ಸಂಭವಿಸಿದೆ. ನಿನ್ನೆಯಷ್ಟೇ ಹೊಸ ಕಾರು ಡಿಲಿವರಿ ಪಡೆದಿದ್ದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲ್ಲೂಕಿನ ತ್ಯಾಮಗೊಂಡ್ಲು ಪಟ್ಟಣದ ನಿವಾಸಿ ಸುಧೀಂದ್ರ ಹೊಸ ಇಕೋ ಕಾರಿನಲ್ಲಿ ಹೋಗುವಾಗ ರಸ್ತೆ ಮಧ್ಯೆ ಕಾರ್ ಕೆಟ್ಟು ನಿಂತಿದೆ. ಇದರಿಂದಾಗಿ ಕಾರ್ ಪರೀಕ್ಷಿಸಲು ಸುಧೀಂದ್ರ ಕಾರ್ ನಿಂದ ಇಳಿದು ಕಾರ್ ಹಿಂಭಾಗ ನಿಂತಿದ್ದಾಗ, ಹಿಂದಿನಿಂದ ಬಂದ ಕ್ಯಾಂಟರ್, ಸುಧೀಂದ್ರಗೆ ಡಿಕ್ಕಿ ಹೊಡೆದಿದೆ. ಇದರಿಂದ ಸುಧೀಂದ್ರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.ಈ ಕಾರ್ಗೆ ಕ್ಯಾಂಟರ್ ಡಿಕ್ಕಿ ಹೊಡೆಯುವ ದೃಶ್ಯ ಸಮೀಪದಲ್ಲೇ ಇದ್ದ ಸಿಸಿಟಿವಿಯಲ್ಲಿ ದಾಖಲಾಗಿದೆ. ಸಿಸಿಟಿವಿ ದೃಶ್ಯವನ್ನು ನೋಡಿದರೇ, ಇದು ಅಪಘಾತದಂತೆ ಕಾಣುತ್ತಿಲ್ಲ. ದುರುದ್ದೇಶಪೂರ್ವಕವಾಗಿಯೇ ಕ್ಯಾಂಟರ್ ಚಾಲಕ, ಇಕೋ ಕಾರಿನ ಬಳಿಗೆ ಬಂದು ಡಿಕ್ಕಿ ಹೊಡೆದು ಮರ್ಡರ್ ಮಾಡಿದಂತೆ ಕಾಣುತ್ತಿದೆ. ಹೆದ್ದಾರಿ ಸಂಪೂರ್ಣ ಖಾಲಿ ಇತ್ತು. ಬಲಭಾಗದಲ್ಲಿ ಯಾವುದೇ ವಾಹನಗಳು ಇರಲಿಲ್ಲ. ಆದರೂ, ಕ್ಯಾಂಟರ್ ಚಾಲಕ ಹೆದ್ದಾರಿಯ ಎಡಭಾಗದಲ್ಲಿ ನಿಂತಿದ್ದ ಇಕೋ ಕಾರಿನ ಬಳಿಗೆ ಲಾರಿ ಬಂದು ಹೆದ್ದಾರಿಯಲ್ಲಿ ನಿಂತಿದ್ದ ಡ್ಯಾನ್ಸರ್ ಸುಧೀಂದ್ರ ಹಾಗೂ ಇಕೋ ಕಾರಿಗೆ ಡಿಕ್ಕಿ ಹೊಡೆದು ಮುಂದೆ ಹೋಗಿದೆ. #💔ರಸ್ತೆ ಅಪಘಾತದಲ್ಲಿ ಖ್ಯಾತ ಡ್ಯಾನ್ಸರ್ ಸಾವು 😭












