Malgudi Express
ShareChat
click to see wallet page
@news007
news007
Malgudi Express
@news007
Malgudi Express official Page
#📜ಪ್ರಚಲಿತ ವಿದ್ಯಮಾನ📜 #iran #earthquake #malgudiexpress #malgudinews #news #TopNews | Subscribe | Comment | Like | Share |
📜ಪ್ರಚಲಿತ ವಿದ್ಯಮಾನ📜 - MALGUDI EXPRESS BREAKING NEWS ಇರಾನ್ ರಾಜಧಾನಿ ಟೆಹ್ರಾನ್ನಲ್ಲಿ ಭೂಕಂಪ ಸಂಭವಿಸಿದೆ ಎಂದು ಇರಾನ್ ಮಾಧ್ಯಮಗಳು ವರದಿ ಮಾಡಿವೆ https:| Imalgudiexpressco.in/  Read More MALGUDI EXPRESS BREAKING NEWS ಇರಾನ್ ರಾಜಧಾನಿ ಟೆಹ್ರಾನ್ನಲ್ಲಿ ಭೂಕಂಪ ಸಂಭವಿಸಿದೆ ಎಂದು ಇರಾನ್ ಮಾಧ್ಯಮಗಳು ವರದಿ ಮಾಡಿವೆ https:| Imalgudiexpressco.in/  Read More - ShareChat
#📜ಪ್ರಚಲಿತ ವಿದ್ಯಮಾನ📜
📜ಪ್ರಚಲಿತ ವಿದ್ಯಮಾನ📜 - BREAKIIG IEWS ಶಾಲೆಗಳನ್ನು ಮುಚ್ಚಿ ನೀವೇ ಮನ್ ಕೀ ಬಾತ್ ঔক ১০১ ಮಾಡಿ ಮನ್ ಕೀ ಬಾತ್ ನಲ್ಲಿ ಬಂದು ಯುವಕರಿಗೆ ನೀವೇ గిల్లబిు? ಪಾಠ ಮಾಡಿ ಒಲಿಂಪಿಕ್ ಕ್ರೀಡಾಕೂಟದಲ್ಲಿ ಹೇಗೆ ಫುಟ್ಬಾಲ್, ಕ್ರಿಕೆಟ್ ಹೇಗೆ ಆಡಬೇಕೆಂದು ಹೇಳಿಕೊಡಿ ಎಲ್ಲಾ ಶಾಲೆಗಳನ್ನು ಮುಚ್ಚಿಬಿಡಿ. ಸಂತೋಷ್ ಲಾಡ್, ಕಾರ್ಮಿಕ ಸಚಿವರು https:Ilmalgudiexpress co.inl Read more BREAKIIG IEWS ಶಾಲೆಗಳನ್ನು ಮುಚ್ಚಿ ನೀವೇ ಮನ್ ಕೀ ಬಾತ್ ঔক ১০১ ಮಾಡಿ ಮನ್ ಕೀ ಬಾತ್ ನಲ್ಲಿ ಬಂದು ಯುವಕರಿಗೆ ನೀವೇ గిల్లబిు? ಪಾಠ ಮಾಡಿ ಒಲಿಂಪಿಕ್ ಕ್ರೀಡಾಕೂಟದಲ್ಲಿ ಹೇಗೆ ಫುಟ್ಬಾಲ್, ಕ್ರಿಕೆಟ್ ಹೇಗೆ ಆಡಬೇಕೆಂದು ಹೇಳಿಕೊಡಿ ಎಲ್ಲಾ ಶಾಲೆಗಳನ್ನು ಮುಚ್ಚಿಬಿಡಿ. ಸಂತೋಷ್ ಲಾಡ್, ಕಾರ್ಮಿಕ ಸಚಿವರು https:Ilmalgudiexpress co.inl Read more - ShareChat
#📜ಪ್ರಚಲಿತ ವಿದ್ಯಮಾನ📜 #malgudiexpress #malgudinews #news #TopNews | Subscribe | Comment | Like | Share |
📜ಪ್ರಚಲಿತ ವಿದ್ಯಮಾನ📜 - BREAKIIG IEWS ಶಾಲೆಗಳನ್ನು ಮುಚ್ಚಿ ನೀವೇ ಮನ್ ಕೀ ಬಾತ್ ঔক ১০১ ಮಾಡಿ ಮನ್ ಕೀ ಬಾತ್ ನಲ್ಲಿ ಬಂದು ಯುವಕರಿಗೆ ನೀವೇ గిల్లబిు? ಪಾಠ ಮಾಡಿ ಒಲಿಂಪಿಕ್ ಕ್ರೀಡಾಕೂಟದಲ್ಲಿ ಹೇಗೆ ಫುಟ್ಬಾಲ್, ಕ್ರಿಕೆಟ್ ಹೇಗೆ ಆಡಬೇಕೆಂದು ಹೇಳಿಕೊಡಿ ಎಲ್ಲಾ ಶಾಲೆಗಳನ್ನು ಮುಚ್ಚಿಬಿಡಿ. ಸಂತೋಷ್ ಲಾಡ್, ಕಾರ್ಮಿಕ ಸಚಿವರು https:Ilmalgudiexpress co.inl Read more BREAKIIG IEWS ಶಾಲೆಗಳನ್ನು ಮುಚ್ಚಿ ನೀವೇ ಮನ್ ಕೀ ಬಾತ್ ঔক ১০১ ಮಾಡಿ ಮನ್ ಕೀ ಬಾತ್ ನಲ್ಲಿ ಬಂದು ಯುವಕರಿಗೆ ನೀವೇ గిల్లబిు? ಪಾಠ ಮಾಡಿ ಒಲಿಂಪಿಕ್ ಕ್ರೀಡಾಕೂಟದಲ್ಲಿ ಹೇಗೆ ಫುಟ್ಬಾಲ್, ಕ್ರಿಕೆಟ್ ಹೇಗೆ ಆಡಬೇಕೆಂದು ಹೇಳಿಕೊಡಿ ಎಲ್ಲಾ ಶಾಲೆಗಳನ್ನು ಮುಚ್ಚಿಬಿಡಿ. ಸಂತೋಷ್ ಲಾಡ್, ಕಾರ್ಮಿಕ ಸಚಿವರು https:Ilmalgudiexpress co.inl Read more - ShareChat
#😭ಕನ್ನಡದ ಖ್ಯಾತ ನಟ ಇನ್ನಿಲ್ಲ; ಹೃದಯಾಘಾತದಿಂದ ನಿಧನ💔😭 ಕನ್ನಡದ ನಟ ದಿಲೀಪ್ ರಾಜ್ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಮಿಲನ, ಯು ಟರ್ನ್, ಆರ್ಕೆಸ್ಟ್ರಾ ಮೈಸೂರು ಸೇರಿದಂತೆ ಹಲವು ಸಿನಿಮಾಗಳಲ್ಲಿ ಅವರು ಅಭಿನಯಿಸಿದ್ದರು. #DileepRaj #KannadaCinema #RIP #Sandalwood #KannadaActor #malgudiexpress #malgudinews #news #TopNews | Subscribe | Comment | Like | Share |
😭ಕನ್ನಡದ ಖ್ಯಾತ ನಟ ಇನ್ನಿಲ್ಲ; ಹೃದಯಾಘಾತದಿಂದ ನಿಧನ💔😭 - ShareChat
#📜ಪ್ರಚಲಿತ ವಿದ್ಯಮಾನ📜 ಡಾ.ಎಚ್.ಆರ್. ಸ್ವಾಮಿ ಅವರ ಕುಡ್ರ್ ವಾತ ಕತ ಜನಾಪರ್ಪಣೆ ಸಡಗರ ನೇಗಿಲ ಯೋಗಿ ಟ್ರಸ್ಟ್ ವತಿಯಿಂದ 'ಕೊರಚ' ಸಮುದಾಯದ ಸಂಶೋಧನಾ ಕೃತಿಗಳ 'ಜನಾಪರ್ಪಣೆ ಸಡಗರ' ಕಾರ್ಯಕ್ರಮ ಬೆಂಗಳೂರು: ನಾಡಿನ ವಿಶಿಷ್ಟ ಅಲೆಮಾರಿ ಸಮುದಾಯವಾದ 'ಕೊರಚ' ಜನಾಂಗದ ಬದುಕು, ಸಂಸ್ಕೃತಿ ಮತ್ತು ಭಾಷೆಯನ್ನು ದಾಖಲಿಸುವ ಮಹತ್ವದ ಸಂಶೋಧನಾ ಕೃತಿಗಳ 'ಜನಾಪರ್ಪಣೆ ಸಡಗರ' ಇದೇ ಮೇ 17ರಂದು ಭಾನುವಾರ ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿದೆ. ನೇಗಿಲ ಯೋಗಿ ಟ್ರಸ್ಟ್ (ನೇಯೋಟ್) ವತಿಯಿಂದ ಆಯೋಜನೆಯಾಗಿರುವ ಈ ಕಾರ್ಯಕ್ರಮದಲ್ಲಿ ಹಿರಿಯ ಸಂಶೋಧಕರಾದ ಡಾ.ಎಚ್.ಆರ್. ಸ್ವಾಮಿ ಅವರ ಕೃತಿ ಕುಡ್ರ್ ವಾತ ಕತ (ಕೊರಚ ಮಾತುಕತೆ) ಹಾಗೂ ಡಾ. ಎಚ್.ಆರ್.ಸ್ವಾಮಿ ಅವರ ಕರ್ನಾಟಕದ ಕೊರಚರು ಪಿಎಚ್ಡಿ ಪ್ರಬಂಧದ ಇಂಗ್ಲಿಷ್ ಅನುವಾದಿತ ಕೃತಿ 'The Korachas of Karnataka' (ಅನುವಾದ: ಶ್ರೀಹರ್ಷ) ಬಿಡುಗಡೆಯಾಗಲಿವೆ. ಕಾರ್ಯಕ್ರಮದ ವಿವರಗಳು: ದಿನಾಂಕ: 17-05-2026, ಭಾನುವಾರ ಸಮಯ: ಬೆಳಿಗ್ಗೆ 9:00 ರಿಂದ ಮಧ್ಯಾಹ್ನ 2:00 ರವರೆಗೆ ಸ್ಥಳ: ರವೀಂದ್ರ ಕಲಾಕ್ಷೇತ್ರ, ಬೆಂಗಳೂರು ಗಣ್ಯರ ಉಪಸ್ಥಿತಿ: ನಾಡಿನ ಖ್ಯಾತ ಸಾಕ್ಷಿಪ್ರಜ್ಞೆ, ನಾಡೋಜ ಪ್ರೊ. ಬರಗೂರು ರಾಮಚಂದ್ರಪ್ಪ ಅವರು ಕೃತಿಗಳನ್ನು ಜನಾರ್ಪಣೆ ಮಾಡಲಿದ್ದಾರೆ. ಹಿರಿಯ ಭಾಷಾ ವಿಜ್ಞಾನಿ ಪ್ರೊ. ಹಂಪ ನಾಗರಾಜಯ್ಯ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಭಾರತೀಯ ಸಾಹಿತ್ಯದ ಪರಿಣಿತರಾದ ಅಗ್ರಹಾರ ಕೃಷ್ಣಮೂರ್ತಿ ಹಾಗೂ ರಾಷ್ಟ್ರೀಯ ಕಾನೂನು ಶಾಲೆಯ ಡಾ. ಆರ್.ವಿ. ಚಂದ್ರಶೇಖರ್ ಭಾಗವಹಿಸಲಿದ್ದಾರೆ. ಕೃತಿಗಳ ಕುರಿತು ಚರ್ಚೆ: ಕುಡ್ರ ವಾತ ಕತ (ಕೊರಚ ಮಾತುಕತೆ) ಕೃತಿಯ ಕುರಿತು ತುಮಕೂರು ವಿ.ವಿ.ಯ ಡಾ. ಬಸವರಾಜು ಜಿ. ಅವರು ಮಾತನಾಡಲಿದ್ದಾರೆ. 'The Korachas of Karnataka' ಕೃತಿಯ ಕುರಿತು ಚೀಫ್ ಆಪರೇಟಿಂಗ್ ಆಫಿಸರ್, ಸೀನಿಯರ್ ಅಸೋಸಿಯೇಟ್ ಇನ್ ಎಜುಕೇಷನ್ ಅಂಡ್ ಕರಿಯರ್ ಕೌನ್ಸಿಲಿಂಗ್ ಆಫೀಸರ್ ಕುಮಾರಿ ಅನ್ವೇಷ ಓಬಿರಾಯ್ ವಿಷಯ ಮಂಡಿಸಲಿದ್ದಾರೆ. ವಿಶೇಷ ಆಕರ್ಷಣೆ: ಕಾರ್ಯಕ್ರಮದ ಅಂಗವಾಗಿ ಕೊರಚ ಭಾಷೆಯಲ್ಲಿ ವಚನ ಗಾಯನ (ರಾಜಪ್ಪ ಕೋಲಾರ ಮತ್ತು ತಂಡ), ಬುದ್ಧ ಕಥಾ ವಾಚನ (ಶ್ರೀಮತಿ ಮಾಲತಿ ಎಂ.) ಹಾಗೂ ಸಂವಿಧಾನದ ಪೀಠಿಕೆ ಓದು (ತ್ರಿಶಾನ್ ಸಂತೋಷ್) ನಡೆಯಲಿದೆ. ಅಲ್ಲದೆ, ಪ್ರತಿ ಕೊರಚ ಹಟ್ಟಿಗೆ ಒಂದು ಸೆಟ್ ಪುಸ್ತಕವನ್ನು ಉಚಿತವಾಗಿ ವಿತರಿಸುವ ಮೂಲಕ ಜ್ಞಾನದೀವಿಗೆಯನ್ನು ಹಂಚುವ ವಿಶಿಷ್ಟ ಪ್ರಯತ್ನಕ್ಕೆ ಡಾ. ಎಚ್.ಆರ್. ಸ್ವಾಮಿ ಅವರು ಮುಂದಾಗಿದ್ದಾರೆ. ಕನ್ನಡ ಮತ್ತು ಇಂಗ್ಲಿಷ್ ಲಿಪಿಯಲ್ಲಿ ಕೊರಚ ಭಾಷೆಯನ್ನು ಕಲಿಯುವ ಮೊಟ್ಟಮೊದಲ ದಾಖಲೆ ಇದಾಗಿದ್ದು, ಅಳಿವಿನ ಅಂಚಿನಲ್ಲಿರುವ ಭಾಷೆ ಮತ್ತು ಸಂಸ್ಕೃತಿಯನ್ನು ಉಳಿಸುವ ನಿಟ್ಟಿನಲ್ಲಿ ಈ ಕೃತಿಗಳು ಮೈಲಿಗಲ್ಲಾಗಿವೆ. ಸಮುದಾಯದ ಬಾಂಧವರು, ಸಾಹಿತ್ಯಾಸಕ್ತರು ಹಾಗೂ ಸಾರ್ವಜನಿಕರು ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಬೇಕೆಂದು ನೇಗಿಲ ಯೋಗಿ ಟ್ರಸ್ಟ್‌ನ ಪದಾಧಿಕಾರಿಗಳು ಪ್ರಕಟಣೆಯಲ್ಲಿ ಕೋರಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: ನೇಗಿಲ ಯೋಗಿ ಟ್ರಸ್ಟ್ (ರಿ), ಬೆಂಗಳೂರು. ಸಂ. 161, 2ನೇ ಮುಖ್ಯರಸ್ತೆ, ಕೆಂಗೇರಿ ಉಪನಗರ, ಬೆಂಗಳೂರು - 560060 ಮೊ: 9844086993 #HRSwami #KudrVataKatha #release #bookpromotion #malgudiexpress #malgudinews #news #TopNews
📜ಪ್ರಚಲಿತ ವಿದ್ಯಮಾನ📜 - ಶ ನ93 EXPRESS (ಕನ್ನಡ ಮತ್ತು ಇಂಲ್ಲೀಷ್ ಆಪಿಯಲ್ಲಿ ಮೊಟ್ಟಮೊದಲ ದಾಖಲ ಕೊರಚ ಮಾತುಕತೆ  ಡಾ ಎಚ್ ಆರ್. ಸ್ವಾಮಿ ಕಡ್ ವಾತಕತ ಅವರ ಕುಡ್ರ್ ವಾತ ಕತ మట్తు The Korachas of ಜನಾರ್ಪಣೆ ಸಡಗರ Karnataka ಅನುವಾದಿತ ಕೃತ ಜನಾರ್ಪಣ 1111 ಸಡಗರ HTTPS:IIMALGUDIEXPRESS.CO.INI ಶ ನ93 EXPRESS (ಕನ್ನಡ ಮತ್ತು ಇಂಲ್ಲೀಷ್ ಆಪಿಯಲ್ಲಿ ಮೊಟ್ಟಮೊದಲ ದಾಖಲ ಕೊರಚ ಮಾತುಕತೆ  ಡಾ ಎಚ್ ಆರ್. ಸ್ವಾಮಿ ಕಡ್ ವಾತಕತ ಅವರ ಕುಡ್ರ್ ವಾತ ಕತ మట్తు The Korachas of ಜನಾರ್ಪಣೆ ಸಡಗರ Karnataka ಅನುವಾದಿತ ಕೃತ ಜನಾರ್ಪಣ 1111 ಸಡಗರ HTTPS:IIMALGUDIEXPRESS.CO.INI - ShareChat
#📜ಪ್ರಚಲಿತ ವಿದ್ಯಮಾನ📜 ಇಬ್ಬರು ಐಎಎಸ್ ಅಧಿಕಾರಿಗಳಿಗೆ ಬಿಜೆಪಿ ಭಾರಿ ಬಹುಮಾನವನ್ನೇ ನೀಡಿದೆ!: ಬಿ.ಕೆ.ಹರಿಪ್ರಸಾದ್‌ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ ಅವಿರತವಾಗಿ ಶ್ರಮಿಸಿದ, ಹಗಲು ರಾತ್ರಿಯೂ ಸಕ್ರಿಯವಾಗಿ ಬಿಜೆಪಿ ಪಕ್ಷದ ಕಾರ್ಯಕರ್ತರನ್ನೂ ಮೀರಿಸಿದಂತೆ ಪ್ರಮಾಣಿಕವಾಗಿ ಕಾರ್ಯನಿರ್ವಹಿಸಿರುವ ಮುಖ್ಯ ಚುನಾವಣಾಧಿಕಾರಿ ಮನೊಜ್ ಕುಮಾರ್ ಅಗರವಾಲ್ ಹಾಗೂ ಎಸ್.ಐ.ಆರ್ ಪ್ರಕ್ರಿಯೆಯ ವಿಶೇಷ ವೀಕ್ಷಕ ಸುಬ್ರತಾ ಗುಪ್ತಾ ಇಬ್ಬರು ಐಎಎಸ್ ಅಧಿಕಾರಿಗಳಿಗೆ ಬಂಗಾಳದ ಬಿಜೆಪಿ ಸರ್ಕಾರ ಭಾರಿ ಬಹುಮಾನವನ್ನೇ ನೀಡಿದೆ! ಬಿಜೆಪಿ ಪಕ್ಷದ ಪರವಾಗಿ ತೀರ್ಪು ನೀಡುವ ನ್ಯಾಯಾಧೀಶರನ್ನು ರಾಜ್ಯಪಾಲರಾಗಿ ನೇಮಕ ಮಾಡಲಾಗುತ್ತದೆ, ಕೆಲವರು ರಾಜ್ಯಸಭೆಯ ಸದಸ್ಯರಾಗಿಯೂ ಆಯ್ಕೆಯಾಗುತ್ತಾರೆ!! ತನಿಖಾ ಸಂಸ್ಥೆಗಳ ಅಧಿಕಾರಿಗಳು ನಿವೃತ್ತಿಯ ನಂತರ ರಾಜಕೀಯ ರಕ್ಷಣೆಗೆ ಬಿಜೆಪಿ ಪಕ್ಷವನ್ನೇ ಆಶ್ರಯಿಸುತ್ತಾರೆ. ಚುನಾವಣಾ ಅಧಿಕಾರಿಗಳಂತೂ ಸರ್ಕಾರದ ದರ್ಬಾರಿನಲ್ಲಿ ಗೌರವದ ಆಸನ ಸಿಗುತ್ತದೆ...!!! ಬಿಜೆಪಿಯ ಚುನಾವಣಾ ಮಾಸ್ಟರ್ ಸ್ಟ್ರೋಕ್ ಗಳಿವೂ... ದೇಶದ ಚುನಾವಣಾ ಇತಿಹಾಸದಲ್ಲೇ ಇಂತಹ ಕೀಳುಮಟ್ಟದ ಲಜ್ಜೆಗೇಡಿತನ ರಾಜಕೀಯ ಹಿಂದೆಂದೂ ನಡೆದಿರಲು ಸಾಧ್ಯವೇ ಇಲ್ಲ. Election Commission of India ಪ್ರಜಾಪ್ರಭುತ್ವದ ಕಾವಲುಗಾರನಂತಿತ್ತು, ಈಗ Bharatiya Janata Party (BJP) ಪಕ್ಷದ ಕಾವಲು ನಾಯಿಯಂತಾಗಿದೆ. ಮತದಾರರ ತೀರ್ಪನ್ನು ಕಾಪಾಡಬೇಕಾದವರು, ಅಧಿಕಾರದ ಓಡ್ಡೋಲಗದಲ್ಲಿ ಉಡುಗೊರೆ ಸ್ವೀಕರಿಸುವ ದುಸ್ಥಿತಿಗೆ ಬಂದರೆ ಪ್ರಜಾಪ್ರಭುತ್ವದ ಪಾವಿತ್ರ್ಯತೆ ಉಳಿಯಲು ಸಾಧ್ಯವೇ ಇಲ್ಲ. ದೇಶದ ಚುನಾವಣಾ ವ್ಯವಸ್ಥೆ ಅತ್ಯಂತ ಅಪಾಯಕಾರಿ ಹಂತಕ್ಕೆ ಬಂದು ತಲುಪಿದೆ. ಚುನಾವಣಾ ಆಯೋಗದ ಮೇಲೆ ಜನರ ನಂಬಿಕೆ ವಿಸ್ವಾಸ ಸಂಪೂರ್ಣ ಕಳಚಿದೆ. ಇದು ದೇಶದ ಭವಿಷ್ಯತ್ತಿಗೆ ಅತ್ಯಂತ ಮಾರಕವಾಗಲಿದೆ. ಜಗತ್ತಿನ ಅತೀದೊಡ್ಡ ಪ್ರಜಾಪ್ರಭುತ್ವದ ದೇಶದ ಚುನಾವಣಾ ಪ್ರಕ್ರಿಯೆಯನ್ನು ಬಿಜೆಪಿ ಸಂಪೂರ್ಣವಾಗಿ ನಾಶಗೊಳಿಸುತ್ತಿದೆ. ಬಿಜೆಪಿ ನೀಚ ರಾಜಕೀಯದ ವಿರುದ್ಧ ಪ್ರಬಲ ಹೋರಾಟ ನಡೆಸಬೇಕಿದೆ‌. Indian National Congress ಪಕ್ಷ ಚುನಾವಣೆಯಲ್ಲಿ ಸೋತಿರಬಹುದು ಆದರೆ ವ್ಯವಸ್ಥೆಯನ್ನು ಸೋಲಿಸಲು ಬಿಡುವುದಿಲ್ಲ. - ಬಿ.ಕೆ.ಹರಿಪ್ರಸಾದ್‌, ವಿಧಾನ ಪರಿಷತ್‌ ಸದಸ್ಯ #BJP #given #huge #rewards #two #IAS #officers #BKHariprasad #SaveDemocracy #StopKillingDemocracy #ElectionCommission #ConstitutionUnderAttack #DemocracyInDanger #ElectionCommission #malgudiexpress #malgudinews #news #TopNews
📜ಪ್ರಚಲಿತ ವಿದ್ಯಮಾನ📜 - ShareChat
#📜ಪ್ರಚಲಿತ ವಿದ್ಯಮಾನ📜 ಮಾಧ್ಯಮದ ಪ್ರಮುಖರು ಪ್ರತಿ ವರ್ಷ ಆಸ್ತಿ, ಆದಾಯ ಘೋಷಿಸಿಕೊಳ್ಳಲಿ ಚುನಾಯಿತ ಪ್ರತಿನಿಧಿಗಳು ಪ್ರತಿ ವರ್ಷ ಲೋಕಾಯುಕ್ತಕ್ಕೆ ತಮ್ಮ ಆದಾಯದ ಪ್ರಮಾಣ ಪತ್ರವನ್ನು ನೀಡಬೇಕು. ಅದೇ ರೀತಿಯಲ್ಲಿ ಸರ್ಕಾರಿ ನೌಕರರು ಒಂದು ಹಂತದಲ್ಲಿ ತಮ್ಮ ಆಸ್ತಿಗಳನ್ನ ಪ್ರತಿವರ್ಷ ಘೋಷಿಸಿಕೊಳ್ಳಬೇಕು. ಮುಂದುವರೆದಂತೆ ನ್ಯಾಯಾಧೀಶರು ಸಹ ತಮ್ಮ ಆದಾಯವನ್ನು ಘೋಷಿಸಿಕೊಳ್ಳಬೇಕೆಂಬ ಒತ್ತಾಯ ಸಾರ್ವಜನಿಕರಲ್ಲಿ ಬರುತ್ತಿದೆ. ಎಲ್ಲರ ಭ್ರಷ್ಟಾಚಾರ ಮತ್ತು ಅನ್ಯಾಯಗಳ ಬಗ್ಗೆ ಮಾತನಾಡುವ ಮತ್ತು ಅವುಗಳನ್ನು ಕೆದಕಿ ಜನರ ಗಮನಕ್ಕೆ ತರುವ ಮಾಧ್ಯಮದವರ ಪಾತ್ರವೂ ಸಹ ಬಹಳ ಪ್ರಮುಖವಾಗಿದೆ. ಆದರೆ ಇತ್ತೀಚಿನ ವರ್ಷಗಳಲ್ಲಿ ಬಹಳಷ್ಟು ಮಾಧ್ಯಮಗಳ ಪ್ರಮುಖರ ವಿಚಾರದಲ್ಲಿ ಸಾರ್ವಜನಿಕರಲ್ಲಿ ವಿಶ್ವಾಸವಿಲ್ಲ. ಅವರು ಪಕ್ಷದ ವಕ್ತಾರರು ಎಂಬ ಭಾವನೆ ಇದೆ. ಜೊತೆಗೆ ಅವರು ಸಹ ಅಪಾರ ಪ್ರಮಾಣದಲ್ಲಿ ಆಸ್ತಿ ಗಳಿಸುತ್ತಿದ್ದಾರೆ ಎಂಬ ಅನುಮಾನಗಳು ಮೂಡುತ್ತಿವೆ. ಈ ಹಿನ್ನೆಲೆಯಲ್ಲಿ ಎಲ್ಲರಂತೆ ದೃಶ್ಯ ಮಾಧ್ಯಮ ಮತ್ತು ಪತ್ರಿಕಾ ಮಾಧ್ಯಮದ ಪ್ರಮುಖರು ಪ್ರತಿ ವರ್ಷ ಆದಾಯ ಮತ್ತು ಆಸ್ತಿಯನ್ನು ಘೋಷಿಸಿಕೊಳ್ಳಬೇಕು. ಆಗ ಇವರ ಬಗ್ಗೆ ಜನರಲ್ಲಿ ವಿಶ್ವಾಸ ಮೂಡುತ್ತದೆ. ಕೆಲವು ಮಾಧ್ಯಮದ ವ್ಯಕ್ತಿಗಳು ನಡೆಸುತ್ತಿರುವ ಐಷಾರಾಮಿ ಬದುಕು ಮತ್ತು ಅವರ ಕುಟುಂಬಗಳಲ್ಲಿ ನಡೆಯುವ ಸಮಾರಂಭಗಳಲ್ಲಿ ಅವರು ಮಾಡುವ ಖರ್ಚಿನ ಪ್ರಮಾಣವನ್ನು ಗಮನಿಸಿದಾಗ ಮಾಧ್ಯಮದ ಕ್ಷೇತ್ರದಲ್ಲಿ ದುಡಿದವರು ಇಷ್ಟೊಂದು ಪ್ರಮಾಣದಲ್ಲಿ ಸಂಪಾದನೆಯನ್ನು ಮಾಡಬಹುದೇ ಎನ್ನುವ ಪ್ರಶ್ನೆ ಕಾಡುತ್ತದೆ. ಈ ಹಿನ್ನೆಲೆಯಲ್ಲಿ ಅವರು ಸಹ ಪ್ರತಿ ವರ್ಷ ತಮ್ಮ ಆದಾಯ ಮತ್ತು ಆಸ್ತಿಯನ್ನು ರಾಜ್ಯಪಾಲರಿಗೆ ಪ್ರಮಾಣ ಪತ್ರ ನೀಡುವ ಮೂಲಕ ತಮ್ಮ ಬದ್ಧತೆಯನ್ನು ಮೆರೆಯಲಿ. ನಿಷ್ಠೆ ಮತ್ತು ಪ್ರಾಮಾಣಿಕತೆಯಿಂದ ಹಾಗೂ ಬದ್ಧತೆಯಿಂದ ಪತ್ರಿಕಾ ರಂಗದಲ್ಲಿ ದುಡಿದಂತಹ ಅನೇಕ ಮಹನೀಯರು ಅವರ ಬದುಕಿನ ಅಂತ್ಯದ ಕಾಲದಲ್ಲಿಯೂ ಸಹ ಆರ್ಥಿಕವಾಗಿ ಸಾಕಷ್ಟು ಸಮಸ್ಯೆಗಳಲ್ಲಿದ್ದರೂ ಮತ್ತು ಸರಳವಾದ ಬದುಕನ್ನು ನಡೆಸಿದ್ದರು. ಯಾವುದೇ ರಾಜಕಾರಣಿಯ ಹಂಗಿನಲ್ಲಿ ಬದುಕುತ್ತಿರಲಿಲ್ಲ ಮತ್ತು ಪಕ್ಷಪಾತಿಗಳಾಗಿರಲಿಲ್ಲ. ನಿಷ್ಟೂರವಾದ ಮತ್ತು ನೇರವಾದ ನಡವಳಿಕೆ ಮತ್ತು ಬರವಣಿಗೆಯ ಮೂಲಕ ಇಂದಿಗೂ ಕೆಲವರ ಹೆಸರು ಜನರ ಮನಸ್ಸಿನಲ್ಲಿ ಉಳಿದುಕೊಂಡಿವೆ. ಪ್ರತಿ ವರ್ಷ ವಿವಿಧ ಸಂಸ್ಥೆಗಳಿಗೆ ತಮ್ಮ ಆದಾಯದ ಲೆಕ್ಕ ಕೊಡುವವರು ಸತ್ಯವಾದ ಲೆಕ್ಕವನ್ನೇ ಕೊಡುತ್ತಾರೆ ಎಂದು ನಂಬಿಕೊಳ್ಳುವುದು ಮೂರ್ಖತನವಾಗುತ್ತದೆ. ಇದರಲ್ಲಿ ಸತ್ಯದ ಮತ್ತು ಸುಳ್ಳಿನ ಲೆಕ್ಕಗಳು ಇದ್ದೇ ಇರುತ್ತವೆ. - ಕೆ ಎಸ್ ನಾಗರಾಜ್, ಬೆಂಗಳೂರು #Media #persons #declare #income #ksnagaraju #malgudiexpress #malgudinews #news #TopNews
📜ಪ್ರಚಲಿತ ವಿದ್ಯಮಾನ📜 - ಮಾಧ್ಯಮದ ಪ್ರಮುಖರು ಪ್ರತಿ ವರ್ಷ ಆಸ್ತಿ,ಿ ಆದಾಯ  ಘೋಷಿಸಿಕೊಳ್ಳಲಿ 20 SCPEES ಸುದ್ರಿ 8 చవసరియోల్ల  EXRRESS Please subscribe to Malgudi Express YouTube and Website ಮಾಧ್ಯಮದ ಪ್ರಮುಖರು ಪ್ರತಿ ವರ್ಷ ಆಸ್ತಿ,ಿ ಆದಾಯ  ಘೋಷಿಸಿಕೊಳ್ಳಲಿ 20 SCPEES ಸುದ್ರಿ 8 చవసరియోల్ల  EXRRESS Please subscribe to Malgudi Express YouTube and Website - ShareChat
#📜ಪ್ರಚಲಿತ ವಿದ್ಯಮಾನ📜 ಬೆಳಗಾವಿಯಲ್ಲಿ ಬಿಎಸ್ಸಿ ವಿದ್ಯಾರ್ಥಿನಿ ನೇಣಿಗೆ ಶರಣು ಜನ್ಮದಿನವೇ ಕೊನೆಯ ದಿನ! ಬೆಳಗಾವಿ: ಜನ್ಮದಿನದಂದೇ ಬಿಎಸ್ಸಿ ಅಂತಿಮ ವರ್ಷದ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಬೆಳಗಾವಿ ನಗರದ ಅಜಂನ ನಗರದಲ್ಲಿರುವ ಹಾಸ್ಟೆಲ್‌ನಲ್ಲಿ ನಡೆದಿದೆ. ಹುಕ್ಕೇರಿ ತಾಲೂಕಿನ ಕಟಾಬಳ್ಳಿ ಗ್ರಾಮದ ಕಾವೇರಿ ನಾಯಕ (21) ಮೃತ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದೆ. ಕಾವೇರಿ ಅವರು ಬಿಎಸ್ಸಿ ಅಂತಿಮ ವರ್ಷದ ವಿದ್ಯಾಭ್ಯಾಸ ಮಾಡುತ್ತಿದ್ದು, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯದಲ್ಲಿ ವಾಸವಾಗಿದ್ದರು. ಕಾವೇರಿ ಅವರು ತಮ್ಮ ಜನ್ಮದಿನದಂದೇ ಹಾಸ್ಟೆಲ್ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಕುಟುಂಬಸ್ಥರು ಹಾಗೂ ಸ್ನೇಹಿತರಲ್ಲಿ ಆಘಾತ ಮೂಡಿಸಿದೆ. ಆತ್ಮಹತ್ಯೆಗೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ. ಮೃತ ವಿದ್ಯಾರ್ಥಿನಿಗೆ ಸುಮಾರು ಮೂರು ತಿಂಗಳ ಹಿಂದೆ ನಿಶ್ಚಿತಾರ್ಥ ನಡೆದಿದ್ದು, ಪೊಲೀಸ್ ಪೇದೆಯೊಬ್ಬರೊಂದಿಗೆ ಮದುವೆ ನಿಶ್ಚಯವಾಗಿತ್ತು ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಮಗಳ ಸಾವಿನ ಸುದ್ದಿ ತಿಳಿಯುತ್ತಿದ್ದಂತೆಯೇ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಹಾಸ್ಟೆಲ್ ಆವರಣದಲ್ಲಿ ದುಃಖದ ವಾತಾವರಣ ನಿರ್ಮಾಣವಾಗಿದೆ. ಘಟನಾ ಸ್ಥಳಕ್ಕೆ ಎಪಿಎಂಸಿ ಪೊಲೀಸ್ ಠಾಣೆಯ ಸಿಪಿಐ ಉಸ್ಮಾನ್ ಆವಟಿ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ. #BSc #student #commits #suicide #Belagavi #malgudiexpress #malgudinews #news #TopNews
📜ಪ್ರಚಲಿತ ವಿದ್ಯಮಾನ📜 - ಶ నoలv EXPRESS ಬೆಳಗಾವಿಯಲ್ಲಿ ಬಿಎಸ್ಸಿ  ವಿದ್ಯಾರ್ಥಿನಿ ನೇಣಿಗೆ ಶರಣು HTTPS:IIMALGUDIEXPRESS.CO.IN/ ಶ నoలv EXPRESS ಬೆಳಗಾವಿಯಲ್ಲಿ ಬಿಎಸ್ಸಿ  ವಿದ್ಯಾರ್ಥಿನಿ ನೇಣಿಗೆ ಶರಣು HTTPS:IIMALGUDIEXPRESS.CO.IN/ - ShareChat
#📜ಪ್ರಚಲಿತ ವಿದ್ಯಮಾನ📜 ಬೆಂಗಳೂರಿನಲ್ಲಿ ಮಾತನಾಡಿದ್ದು ದೇಶದ ಪ್ರಧಾನಿಯಾಗಿಯೋ? ರಾಜ್ಯ ಬಿಜೆಪಿ ಅಧ್ಯಕ್ಷರೋ?: ಸಿದ್ದರಾಮಯ್ಯ ಪ್ರಧಾನಿ Narendra Modi ಅವರು ಭಾನುವಾರ ಬೆಂಗಳೂರಿನಲ್ಲಿ ಮಾತನಾಡಿದ್ದು ದೇಶದ ಪ್ರಧಾನಿಯಾಗಿಯೋ? ಇಲ್ಲವೇ ರಾಜ್ಯ ಬಿಜೆಪಿ ಅಧ್ಯಕ್ಷರೋ? ಇಲ್ಲವೇ ರಾಜ್ಯದ ವಿರೋಧ ಪಕ್ಷದ ನಾಯಕರಾಗಿಯೋ? ಎನ್ನುವುದನ್ನು ಅವರೇ ಸ್ಪಷ್ಟಪಡಿಸಿ ಸಾರ್ವಜನಿಕರಲ್ಲಿ ಮೂಡಿರುವ ಗೊಂದಲವನ್ನು ಬಗೆಹರಿಸಬೇಕು. ಪ್ರಧಾನಮಂತ್ರಿಯವರು ರಾಜ್ಯದ ಕಾಂಗ್ರೆಸ್ ಸರ್ಕಾರವನ್ನು ಉದ್ದೇಶಿಸಿ ಮಾತನಾಡಿದ್ದರೂ ಅವರ ಮಾತಿನಲ್ಲಿ ಕೇಂದ್ರದಲ್ಲಿರುವ ಅವರದ್ದೇ ಸರ್ಕಾರದ ವೈಫಲ್ಯ ಮತ್ತು ರಾಜ್ಯದಲ್ಲಿರುವ ಅವರ ಪಕ್ಷದ ದುಸ್ಥಿತಿಯಯನ್ನು ಸರಿಪಡಿಸಲಾಗದ ಅಸಹಾಯಕತೆ ಇತ್ತು. ತನ್ನ ಎಲೆ ಮೇಲೆ ಆನೆ ಸತ್ತು ಬಿದ್ದಿದ್ದರೂ ಎದುರಿನವರ ಎಲೆ ಮೇಲೆ ಸತ್ತುಬಿದ್ದ ನೊಣವನ್ನು ಹುಡುಕಾಡುವ ಢೋಂಗಿ ಬುದ್ಧಿಯೂ ಅವರ ಭಾಷಣದಲ್ಲಿ ಇತ್ತು. ಪಂಡಿತ್ ಜವಾಹರಲಾಲ್ ನೆಹರೂ, ಇಂದಿರಾಗಾಂಧಿ, ಅಟಲ್‌ ಬಿಹಾರಿ ವಾಜಪೇಯಿಯವರೂ ಸೇರಿದಂತೆ ದೇಶದ ಪ್ರಧಾನಮಂತ್ರಿಯಾದವರು ಎಂದೂ ಕೆಟ್ಟ ರಾಜಕಾರಣಿಗಳ ರೀತಿ ಬೀದಿ ಭಾಷಣ ಮಾಡಿ ವಿರೋಧ ಪಕ್ಷಗಳನ್ನು ಹಳಿಯಲು ಹೋಗಿಲ್ಲ. ಅವರೆಲ್ಲರೂ ಕಾಪಾಡಿಕೊಂಡು ಬಂದಿದ್ದ ಪ್ರಧಾನಿ ಕುರ್ಚಿಯ ಘನತೆ, ಗಾಂಭಿರ್ಯ ಮತ್ತು ಔಚಿತ್ಯವನ್ನು ನರೇಂದ್ರ ಮೋದಿಯವರು ತಮ್ಮ ಸುಳ್ಳು, ಕೀಳು ಅಭಿರುಚಿ ಮತ್ತು ದ್ವೇಷಾಸೂಯೆಗಳನ್ನು ವ್ಯಕ್ತಪಡಿಸುವ ಭಾಷಣಗಳ ಮೂಲಕ ಮಣ್ಣುಪಾಲು ಮಾಡುತ್ತಿದ್ದಾರೆ. ಬೆಂಗಳೂರಿಗೆ ಬಂದಿದ್ದ ಮೋದಿಯವರು ಇನ್ನೂ ಪಂಚ ರಾಜ್ಯಗಳ ಚುನಾವಣಾ ರ‌್ಯಾಲಿಯಗಳ ಗುಂಗಿನಲ್ಲಿಯೇ ಇದ್ದಂತೆ ಕಂಡರು. 2024-25ರಲ್ಲಿಯೇ ಭಾರತವನ್ನು 5 ತ್ರಿಲಿಯನ್ ಡಾಲರ್ ಆರ್ಥಿಕತೆಯ ದೇಶ ಮಾಡುವೆ ಎಂದು ಕೊಚ್ಚಿಕೊಂಡಿದ್ದ, ಭಾರತದ ಅಭಿವೃದ್ದಿ ರಥ ನಾಗಾಲೋಟದಿಂದ ಮುಂದೋಡುತ್ತಿದೆ ಎಂದು ಬೀಗಿದ್ದ ಮತ್ತು ದೇಶದ ಬಡತನವನ್ನು ನಿರ್ಮೂಲನೆ ಮಾಡಿ ಆಗಿದೆ ಎಂದು ತನ್ನ ಬೆನ್ನನ್ನು ತಾನೇ ಚಪ್ಪರಿಸಿಕೊಂಡಿದ್ದ ಪ್ರಧಾನಿಯವರು ಈಗ ಚಿನ್ನ ಖರೀದಿಸಬೇಡಿ, ಪೆಟ್ರೋಲ್ ಮತ್ತು ಖಾದ್ಯ ಎಣ್ಣೆ ಕಡಿಮೆ ಬಳಸಿ, ವಿದೇಶ ಪ್ರವಾಸ ಮಾಡಬೇಡಿ ಮತ್ತು ಗೊಬ್ಬರ ಬಳಕೆ ತಗ್ಗಿಸಿ ಎಂದು ಬೇಡಿಕೊಳ್ಳುತ್ತಿರುವುದು ಯಾವ ಅಭಿವೃದ್ದಿಯ ಲಕ್ಷಣ ಎನ್ನುವುದನ್ನು ಮೋದಿಯವರೇ ಸ್ಪಷ್ಟಪಡಿಸಬೇಕು. ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ, ಖಾದ್ಯತೈಲ ಎಲ್ಲವೂ ದುಬಾರಿಯಾಗಿ ದೇಶದ ಜನರ ನಿತ್ಯದ ಜೀವನ ನಿರ್ವಹಣೆಗಾಗಿ ಪರದಾಡುವಂತಹ ಪರಿಸ‍್ಥಿತಿ ನಿರ್ಮಾಣಕ್ಕೆ ದೇಶದ ಎಡಬಿಡಂಗಿ ವಿದೇಶಾಂಗ ನೀತಿ ಕಾರಣ ಎನ್ನುವುದನ್ನು ಅರಿತುಕೊಳ್ಳುವಷ್ಟು ಜನತೆ ಪ್ರಬುದ್ಧರಾಗಿದ್ದಾರೆ. ಇರಾನ್ ವಿರುದ್ಧ ಇಸ್ರೇಲ್ ಮತ್ತು ಅಮೆರಿಕ ಜಂಟಿಯಾಗಿ ನಡೆಸುತ್ತಿರುವ ಯುದ್ಧದ ನಡುವೆ ಭಾರತ ಸಿಕ್ಕಿಹಾಕಿಕೊಂಡು ಒದ್ದಾಡುತ್ತಿದೆ. ಇಂತಹ ಸಂದರ್ಭದಲ್ಲಿ ನ್ಯಾಯ ಮತ್ತು ನೀತಿಯ ಪರವಾಗಿ ಗಟ್ಟಿಯಾದ ನಿಲುವು ತೆಗೆದುಕೊಂಡಿದ್ದರೆ ಭಾರತ ಇಂದಿನ ದುಸ್ಥಿತಿಯನ್ನು ಎದುರಿಸುತ್ತಿರಲಿಲ್ಲ. ಮೋದಿಯವರೇ, ಈ ವೈಫಲ್ಯಕ್ಕೆ ಯಾರನ್ನು ದೂರುತ್ತೀರಿ? ಜವಾಹರಲಾಲ್ ನೆಹರೂ ಅವರನ್ನೇ? ಕಾಂಗ್ರೆಸ್ ಪಕ್ಷವನ್ನೇ? ಉತ್ತರಿಸಿ. ಕಾಂಗ್ರೆಸ್ ಆಡಳಿತದಲ್ಲಿ ಕರ್ನಾಟಕದ ಆರ್ಥಿಕ ಪರಿಸ್ಥಿತಿ ಸುಭದ್ರವಾಗಿದೆ. ದೇಶದ ತಲಾವಾರು ಆದಾಯ ರೂ.2.11 ಲಕ್ಷ ರೂ.ಗಳಾಗಿದ್ದರೆ ಕರ್ನಾಟಕದ್ದು 4.33 ಲಕ್ಷ ರೂಪಾಯಿಗಳು. ದೇಶದ ಜಿಡಿಪಿ ಬೆಳವಣಿಗೆಯ ದರ ಶೇಕಡಾ 7.4 ಆಗಿದ್ದರೆ, ಕರ್ನಾಟಕದ್ದು ಶೇಕಡಾ 8.1 ಆಗಿದೆ. ದೇಶದ ಜಿಡಿಪಿಯಲ್ಲಿ ಕರ್ನಾಟಕದ ಪಾಲು ಶೇಕಡಾ 9.19 ಆಗಿದೆ. ಜಿಎಸ್‌ಟಿ ಸಂಗ್ರಹದಲ್ಲಿ ಮಹಾರಾಷ್ಟ್ರದ ನಂತರ ಕರ್ನಾಟಕದ್ದೇ ಅತ್ಯಧಿಕ ಪಾಲು. ಪ್ರಧಾನಿಗಳೇ, ಕರ್ನಾಟಕವು ಅಭಿವೃದ್ದಿಯ ಪಥದಲ್ಲಿ ವೇಗದಲ್ಲಿ ಸಾಗುತ್ತಿರುವುದಕ್ಕೆ ಇನ್ನೇನು ಪುರಾವೆ ಬೇಕು? ಮುಂದಿನ ಬಾರಿ ನಮ್ಮ ಸರ್ಕಾರದ ವಿರುದ್ಧ ಆರೋಪ ಮಾಡುವಾಗ ಸ್ವಲ್ಪ ಪೂರ್ವ ತಯಾರಿ ಮಾಡಿಕೊಂಡು ಬನ್ನಿ. ದೇಶದ ಪ್ರಧಾನಿಯವರ ಬಾಯಲ್ಲಿ ಸುಳ್ಳು ಹೇಳಿಕೆಗಳು ಶೋಭೆಯಲ್ಲ. ಪ್ರಧಾನಿ ಮೋದಿಯವರು ತಮ್ಮ ಪಕ್ಷದ ವಿಶ್ವಾಸದ್ರೋಹದ ಚರಿತ್ರೆಯನ್ನು ಒಮ್ಮೆ ನೆನಪುಮಾಡಿಕೊಂಡಿದ್ದರೆ ಅವರು ಖಂಡಿತ ಕಾಂಗ್ರೆಸ್ ಪಕ್ಷದ ಮೇಲೆ ವಿಶ್ವಾಸದ್ರೋಹದ ಆರೋಪವನ್ನು ಮಾಡುತ್ತಿರಲಿಲ್ಲ. ಬಿಎಸ್‌ಪಿ, ಟಿಎಂಸಿ, ಡಿಎಂಕೆ, ಎಐಡಿಎಂಕೆ, ಪಿಡಿಪಿ, ಶಿವಸೇನೆ, ಅಕಾಲಿದಳ, ನ್ಯಾಷನಲ್ ಕಾನ್ಫರೆನ್ಸ್ ಸೇರಿದಂತೆ ಬಿಜೆಪಿ ಜೊತೆ ಮೈತ್ರಿಮಾಡಿಕೊಂಡು ವಿಶ್ವಾಸದ್ರೋಹಕ್ಕೊಳಗಾದ ಪ್ರಾದೇಶಿಕ ಪಕ್ಷಗಳ ಪಟ್ಟಿ ಬೆಳೆಯುತ್ತಲೇ ಇದೆ. ಇನ್ನೊಂದೆಡೆ ಕಾಂಗ್ರೆಸ್ ಮತ್ತು ಇತರ ಪಕ್ಷಗಳ ನಾಯಕರನ್ನು ಬ್ಲಾಕ್ ಮೇಲ್ ಮಾಡಿ ಅವರು ತಮ್ಮ ಪಕ್ಷಗಳಿಗೆ ವಿಶ್ವಾಸದ್ರೋಹ ಎಸಗುವಂತೆ ಮಾಡಿ, ಜೊತೆಯಲ್ಲಿ ಸೇರಿಸಿಕೊಂಡ ವಿರೋಧ ಪಕ್ಷದ ನಾಯಕರ ಪಟ್ಟಿಯೂ ಬೆಳೆಯುತ್ತಿದೆ. ಇಂತಹ ವಿಶ್ವಾಸದ್ರೋಹಿ ಪಕ್ಷದ ನಾಯಕರಾದ ಮೋದಿವಯರು ಕಾಂಗ್ರೆಸ್ ಪಕ್ಷದ ವಿರುದ್ಧ ವಿಶ್ವಾಸದ್ರೋಹದ ಆರೋಪ ಮಾಡುತ್ತಿರುವುದನ್ನು ನೋಡಿ ದೇಶದ ಜನರೇ ಅಪಹಾಸ್ಯ ಮಾಡುತ್ತಿದ್ದಾರೆ. ಕರ್ನಾಟಕದ ಬಿಜೆಪಿಯ ಸ್ಥಿತಿ ಬುಟ್ಟಿಯಲ್ಲಿ ಕೂಡಿ ಹಾಕಿರುವ ಏಡಿಗಳಂತಾಗಿದೆ. ಒಬ್ಬರ ಕಾಲನ್ನು ಮತ್ತೊಬ್ಬರು ಎಳೆದುಕೊಂಡು ರಾಜಕೀಯ ಹರಾಕಿರಿ ನಡೆಸುತ್ತಿದ್ದಾರೆ. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಅವರ ಕುಟುಂಬಕ್ಕೆ ಎದುರಾಗಿ ಪಕ್ಷದೊಳಗೆ ಅರ್ಧ ಡಜನ್ ಗುಂಪುಗಳಿವೆ. ಈ ಗುಂಪುಗಳ ನಾಯಕರು ಯಡಿಯೂರಪ್ಪ ವಿರುದ್ಧ ನೂರಾರು ಆರೋಪಗಳನ್ನು ಮಾಡಿದ್ದರೂ ಅವರ ವಿರುದ್ಧ ಶಿಸ್ತಿನ ಕ್ರಮ ಕೈಗೊಳ‍್ಳುವ ಧೈರ್ಯ 56 ಇಂಚಿನ ಎದೆಯಳತೆಯ ನಾಯಕರಲ್ಲಿ ಇಲ್ಲ. ರಾಜ್ಯ ಬಿಜೆಪಿ ಅಧ್ಯಕ್ಷರ ಮಾತಿಗೆ ಆ ಪಕ್ಷದಲ್ಲಿ ಕವಡೆಕಾಸಿನ ಕಿಮ್ಮತ್ತಿಲ್ಲ. ಪಕ್ಷವೇ ಅಮಾನತುಗೊಳಿಸಿದ್ದ ನಾಯಕರ ಕಾಲಿಗೆಬಿದ್ದು ಕರೆತಂದು ಚುನಾವಣಾ ಪ್ರಚಾರ ಮಾಡುವಷ್ಟರ ಮಟ್ಟಿಗೆ ರಾಜ್ಯದ ಬಿಜೆಪಿಯ ಸ್ಥಿತಿ ಕೆಟ್ಟುಹೋಗಿದೆ. ಇಂತಹವರು ಕಾಂಗ್ರೆಸ್ ಪಕ್ಷಕ್ಕೆ ಬುದ್ಧಿ ಹೇಳಲು ಹೊರಟಿದ್ದಾರೆ. ಪ್ರಧಾನಿಯವರೇ ಮೊದಲು ಕುಸಿದು ಬೀಳುತ್ತಿರುವ ನಿಮ್ಮ ಮನೆಯನ್ನು ಭದ್ರಮಾಡಿಕೊಳ್ಳಿ, ನಂತರ ನಮ್ಮ ಬಗ್ಗೆ ಮಾತನಾಡಿ. - ಸಿದ್ದರಾಮಯ್ಯ, ಸಿಎಂ #speak #Bengaluru #PM #country #state #BJP #President #Siddaramaiah #malgudiexpress #malgudinews #news #TopNews
📜ಪ್ರಚಲಿತ ವಿದ್ಯಮಾನ📜 - ಶ ನ93 EXPRESS ಬೆಂಗಳೂರಿನಲ್ಲಿ ಮಾತನಾಡಿದ್ದು ದೇಶದ ಪ್ರಧಾನಿಯಾಗಿಯೋ? ಅಧ್ಯಕ್ಷರೋ?: ರಾಜ್ಯ ಬಿಜೆಪಿ ಸಿದ್ದರಾಮಯ್ಯ  HTTPS:IIMALGUDIEXPRESS.CO.IN/ ಶ ನ93 EXPRESS ಬೆಂಗಳೂರಿನಲ್ಲಿ ಮಾತನಾಡಿದ್ದು ದೇಶದ ಪ್ರಧಾನಿಯಾಗಿಯೋ? ಅಧ್ಯಕ್ಷರೋ?: ರಾಜ್ಯ ಬಿಜೆಪಿ ಸಿದ್ದರಾಮಯ್ಯ  HTTPS:IIMALGUDIEXPRESS.CO.IN/ - ShareChat
#📜ಪ್ರಚಲಿತ ವಿದ್ಯಮಾನ📜 ಮಕ್ಕಳಲ್ಲಿರುವ ಸುಪ್ತ ಪ್ರತಿಭೆಗಳನ್ನು ಪ್ರೋತ್ಸಾಹಿಸಿ ಹೆಮ್ಮರವಾಗಿ ಬೆಳೆಸಿ: ರೆ.ಫಾ.ಜಾನ್ಸನ್ ಪಿಂಟೋ ಮಂಗಳೂರು: ಮನುಷ್ಯ ಹುಟ್ಟಿನಿಂದಲೇ ಒಂದಲ್ಲ ಒಂದು ರೀತಿಯ ಪ್ರತಿಭೆಗಳನ್ನು ಮೈಗೂಡಿಸಿಕೊಂಡು ಬೆಳೆಯುತ್ತಿರುತ್ತಾನೆ. ಇಂತಹ ಪ್ರತಿಭೆಗಳನ್ನು ಎಳೆಯ ಪ್ರಾಯದಲ್ಲಿಯೇ ಗುರುತಿಸಿ, ಪ್ರೋತ್ಸಾಹಿಸಿ ಅದನ್ನು ಹೆಮ್ಮರವಾಗಿ ಬೆಳೆಸುವಂತೆ ಮಕ್ಕಳ ಹೆತ್ತವರು ಸೇರಿದಂತೆ ಸಮಾಜದ ಪ್ರತಿಯೊಬ್ಬ ನಾಗರಿಕರು ಹೆಚ್ಚಿನ ಗಮನ ನೀಡಬೇಕಾಗಿದೆ ಎಂದು ಸಂತ ಅಲೋಶಿಯಸ್ ಹೈಸ್ಕೂಲ್ ನ ಮುಖ್ಯೋಪಾಧ್ಯಾಯರಾದ ರೆ.ಫಾ.ಜಾನ್ಸನ್ ಪಿಂಟೋ ಎಸ್ ಜೆ ಅಭಿಪ್ರಾಯಪಟ್ಟರು. ಚಿಣ್ಣರ ಚಾವಡಿ ಮಂಗಳೂರು ಹಾಗೂ ಸಂತ ಮದರ್ ತೆರೇಸಾ ವಿಚಾರ ವೇದಿಕೆಗಳ ಜಂಟಿ ಆಶ್ರಯದಲ್ಲಿ ಸಂತ ಅಲೋಶಿಯಸ್ ಹೈಸ್ಕೂಲ್ ನ ಸಹಕಾರದೊಂದಿಗೆ 6 ದಿನಗಳ ಕಾಲ ನಡೆಯಲಿರುವ ಚಿಣ್ಣರ ಕಲರವ - 2026 ಮಕ್ಕಳ ಸಂತಸ ಕಲಿಕಾ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಜಿಲ್ಲಾ ಯುವಜನ ನಾಯಕ ಮೆರಿಲ್ ರೇಗೋ, ಮಾಜಿ ವಿದ್ಯಾರ್ಥಿ ನಾಯಕ ಮೆಲ್ವಿನ್ ಪಾಯಸ್ ಮಾತನಾಡಿ, ಚಿಣ್ಣರ ಕಲರವದಂತಹ ಮಕ್ಕಳ ಬೇಸಿಗೆ ಶಿಬಿರಗಳು ಹೆಚ್ಚೆಚ್ಚು ನಡೆಯುವ ಮೂಲಕ ಮಕ್ಕಳಲ್ಲಿಯೂ ಸಮಾಜಮುಖಿ ಚಿಂತನೆಗಳನ್ನು ಹಾಗೂ ಮಾನವೀಯ ಗುಣಗಳನ್ನು ಬೆಳೆಸಲು ಸಾಧ್ಯವಾಗಬೇಕು ಎಂದರು. ಸಭೆಯ ಅಧ್ಯಕ್ಷತೆ ವಹಿಸಿದ ಸಂತ ಮದರ್ ತೆರೇಸಾ ವಿಚಾರ ವೇದಿಕೆಯ ಅಧ್ಯಕ್ಷ ರೋಯ್ ಕ್ಯಾಸ್ಟಲಿನೋ ಮಾತನಾಡಿ, ಇಂದಿನ ಮಕ್ಕಳೇ ಭವ್ಯ ಭಾರತದ ಭವಿಷ್ಯವಾಗಿದ್ದು, ಅವರನ್ನು ಉತ್ತಮ ರೀತಿಯಲ್ಲಿ ಬೆಳೆಸಲು ಸಮಾಜದ ಸ್ವಾಸ್ಥ್ಯವನ್ನು ಕೂಡ ಕಾಪಾಡಬೇಕಿದೆ.ಹಾಗೂ ಮಕ್ಕಳ ಹಕ್ಕುಗಳನ್ನು ಸಂರಕ್ಷಿಸುವುದು ಪ್ರತಿಯೊಬ್ಬ ನಾಗರಿಕನ ಆದ್ಯ ಕರ್ತವ್ಯವಾಗಿದೆ ಎಂದರು. ವೇದಿಕೆಯಲ್ಲಿ ಚಿಣ್ಣರ ಚಾವಡಿ ಅಧ್ಯಕ್ಷರಾದ ಪೂರ್ವಿ ಶೆಟ್ಟಿ, ಶಿಬಿರದ ನಿರ್ದೇಶಕರಾದ ಪ್ರವೀಣ್ ವಿಸ್ಮಯ ಬಜಾಲ್, ಶಿಬಿರದ ಸಂಚಾಲಕರಾದ ಸುನಿಲ್ ಕುಮಾರ್ ಬಜಾಲ್, ವೇದಿಕೆಯ ಪ್ರಮುಖರಾದ ಡೋಲ್ಫಿ ಡಿಸೋಜ, ಫ್ಲೇವಿಕ್ರಾಸ್ತ ಅತ್ತಾವರ, ಅಸುಂತ ಡಿಸೋಜ, ಗ್ರೆಟ್ಟಾ ಟೀಚರ್ ಮುಂತಾದವರು ಹಾಜರಿದ್ದರು. #Encourage #nurture #latent #talents #children #JohnsonPinto #malgudiexpress #malgudinews #news #TopNews
📜ಪ್ರಚಲಿತ ವಿದ್ಯಮಾನ📜 - ಶಿ ನ9ನ EXPRESS ಮಕ್ಕಳಲ್ಲಿರುವ ಸುಪ್ತ ಪ್ರತಿಭೆಗಳನ್ನು ಪ್ರೋತ್ಸಾಹಿಸಿ శిమ్మేః రేవాగి బిళిసి: ರೆ.ಫಾ.ಜಾನ್ಸನ್ ಪಿಂಟೋ HTTPS:IIMALGUDIEXPRESS.CO.IN/ ಶಿ ನ9ನ EXPRESS ಮಕ್ಕಳಲ್ಲಿರುವ ಸುಪ್ತ ಪ್ರತಿಭೆಗಳನ್ನು ಪ್ರೋತ್ಸಾಹಿಸಿ శిమ్మేః రేవాగి బిళిసి: ರೆ.ಫಾ.ಜಾನ್ಸನ್ ಪಿಂಟೋ HTTPS:IIMALGUDIEXPRESS.CO.IN/ - ShareChat