Malgudi Express
ShareChat
click to see wallet page
@news007
news007
Malgudi Express
@news007
Malgudi Express official Page
#📜ಪ್ರಚಲಿತ ವಿದ್ಯಮಾನ📜 ಬಸವಣ್ಣನವರ ವಚನಗಳು ವಿಶ್ವವಿದ್ಯಾಲಯಗಳು ಹೇಳಿಕೊಡುವ ಪಾಠಕ್ಕಿಂತ ಕಡಿಮೆಯಲ್ಲ: ಸಾಜೀದ್ ಮುಲ್ಲಾ ಕಾರವಾರ: ಹನ್ನೆರಡನೇ ಶತಮಾನದ ಬಹು ದೊಡ್ಡ ಸಮಾಜ ಸುಧಾರಕರು ಬಸವಣ್ಣನವರು. ಮೇಲು ಕೀಳು, ಜಾತಿ ಧರ್ಮ, ಮಡಿಮೈಲಿಗೆ ತುಂಬಿದ್ದ ಸಮಯದಲ್ಲಿ ನೊಂದವರ, ದೀನದಲಿತರ ಉದ್ಧಾರಕ್ಕೆ ನಿಂತವರು. ಕೆಳವರ್ಗದವರನ್ನು ಮೇಲ್ವರ್ಗದವರು ಅತ್ಯಂತ ಹೀನಾಯವಾಗಿ ಕಾಣುತಿದ್ದ ಆ ಅನ್ಯಾಯವನ್ನು ಹೋಗಲಾಡಿಸಲೆಂದೇ ಬಸವಣ್ಣನವರ ಕಲ್ಯಾಣದಲ್ಲಿ ಕ್ರಾಂತಿಯ ಬೀಜ ಬಿತ್ತಿದರು. ಅವರ ವಚನಗಳು ಸರ್ವಕಾಲಕ್ಕೂ ಶ್ರೇಷ್ಠ ಎಂದು ಅಪರ ಜಿಲ್ಲಾಧಿಕಾರಿ ಸಾಜೀದ್ ಮುಲ್ಲಾ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಮತ್ತು ಕನ್ನಡ ಸಂಸ್ಕ್ರತಿ ಇಲಾಖೆಯ ಸಹಯೋಗದಲ್ಲಿ ಕಾರವಾರದ ನ್ಯೂ ಕೆ.ಹೆಚ್.ಬಿ ಕಾಲೋನಿ ಹಬ್ಬುವಾಡದ ಬ್ರಹ್ಮಕುಮಾರಿ ಸಭಾಂಗಣ, ಓಂ ಶಾಂತಿ ಭವನದಲ್ಲಿ ಆಯೋಜಿಸಲಾದ ಬಸವ ಜಯಂತಿಯನ್ನು ಬಸವಣ್ಣನವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು. ಹನ್ನೇರಡನೇ ಶತಮಾನದಲ್ಲಿ ಬಸವಣ್ಣನವರು ಮೇಲು ಕೀಲು, ಗಂಡು ಹೆಣ್ಣು, ಜಾತಿ ಧರ್ಮ, ಮೂಡ ನಂಬಿಕೆ ಈಗೇ ಅಸಮಾನತೆಯನ್ನು ಹೊಗಲಾಡಿಸಲು ಬಿತ್ತಿದ ಕಾಂತ್ರಿಯ ಬೀಜ ಇಂದು ಹೆಮ್ಮರವಾಗಿ ಬೆಳೆದಿದೆ. ಮಹಿಳೆಯರಿಗೆ ಉನ್ನತ ಸ್ಥಾನಮಾನ, ಸಮಾನ ಅವಕಾಶ ಕಲ್ಪಿಸಿ, ಅನುಭವ ಮಂಟಪವನ್ನು ನಿರ್ಮಿಸಿ ಎಲ್ಲಾ ಸಮುದಾಯವರನ್ನು ಒಗ್ಗೂಡಿಸಿ ಜನರಲ್ಲಿ ಜಾಗೃತಿ ಮೂಡಿಸಿ ಸಮಾಜದಲ್ಲಿನ ಅನಿಷ್ಠ ಆಚರಣೆಗಳ ವಿರುದ್ಧ ಹೊರಾಡಿದರು. ಸರ್ಕಾರವು ವಿಶ್ವಗುರು ಬಸವಣ್ಣನವರನ್ನು ಸಾoಸ್ಕೃತಿಕ ನಾಯಕ ಎಂದು ಘೋಷಣೆ ಮಾಡಿದೆ. ಅವರ ಒಂದೊoದು ವಚನಗಳು ವಿಶ್ವ ವಿದ್ಯಾಲಯಗಳು ಹೇಳಿಕೊಡುವ ಪಾಠಕ್ಕಿಂತ ಕಡಿಮೆ ಇಲ್ಲ ಎಂದರು. ತಾಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ವೀರಣ್ಣ ಪಿ ಏನಗಗೌಡರ ಮಾತನಾಡಿ, ಹನ್ನೆರಡನೇ ಶತಮಾನದಲ್ಲಿ ಸಮಾಜದಲ್ಲಿನ ಅಸಮಾನತೆಯನ್ನು ಹೊಗಲಾಡಿಸಲು, ಸಮಾಜದಲ್ಲಿರುವ ಪ್ರತಿಯೊಬ್ಬರು ಸಮಾನರು ಎಂಬ ಮನೋಭಾವವನ್ನು ಬಿತ್ತಿದವರು ಬಸವಣ್ಣ. ವಚನಗಳ ಮೂಲಕ ಸಮಾಜದ ಸುಧಾರಣೆ ತರಲು ಹೋರಾಡಿದ ಮಹಾನ್ ನಾಯಕ ಅವರ ಹಾಕಿಕೊಟ್ಟ ಮಾರ್ಗದಲ್ಲಿ ನಾವೇಲ್ಲರೂ ಮುನ್ನಡೆಯೋಣ ಎಂದರು. ಬಸವಣ್ಣನವರ ಕುರಿತು ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಸಂಚಾಲಕಿ ಬ್ರಹ್ಮಕುಮಾರಿ ಕವಿತ ವಿಶೇಷ ಉಪನ್ಯಾಸ ನೀಡಿ, ಬಸವಣ್ಣನವರ ಜಯಂತಿ ಕೇವಲ ಜಯಂತಿಯಾಗದೇ ಕ್ರಾಂತಿಯ ಸ್ಮರಣೆಯಾಗಿದೆ. ಭಕ್ತಿಯ ಅಡಿಪಾಯದಲ್ಲಿ ಸಮಾಜದ ಸುಧಾರಣೆ ಮಾಡಿದವರು. ಎಲ್ಲರಿಗೂ ಒಂದೇ ದೇವರು ಎಂಬ ಏಕ ದೇವೋಪಾಸನೆ, ಕಾಯಕವೇ ಕೈಲಾಸ ವಸುದೈವ ಕುಟುಂಬಕ ಹೀಗೆ ಹಲವಾರು ಸಂದೇಶಗಳನ್ನು ಸಾರಿದರು. ಸಮಾಜದಲ್ಲಿನ ಅಸ್ಪೃಶ್ಯತೆ, ಜಾತಿ, ಮೂಡನಂಬಿಕೆ, ಮೌಡ್ಯ, ಅಂಧ ಶ್ರದ್ಧೆಗಳನ್ನು ಹೋಗಲಾಡಿಸಲು ಬಸವಣ್ಣನವರು ಸರಳ ರೀತಿಯಲ್ಲಿ ಜನ ಸಾಮಾನ್ಯರಿಗೆ ಮುಟ್ಟುವಂತೆ ಭಕ್ತಿಯ ವಚನಗಳ ಸಾರಿದರು ಅವರು ನುಡಿದಂತೆ ನಡೆದರು. ಅವರ ವಚನಗಳು, ತತ್ವಾ ಆದರ್ಶಗಳು, ನಡೆಯನ್ನು ಜೀವನದಲ್ಲಿ ಅಳವಡಿಸಿಕೊಳ್ಳೋಣ ಎಂದರು. ಕಾರ್ಯಕ್ರಮದಲ್ಲಿ ಮುಜರಾಯಿ ಇಲಾಖೆಯ ಸಹಾಯಕ ಆಯುಕ್ತೆ ಸುಧಾ ತಳವಾರ, ಅಖಿಲ ಭಾರತ ವೀರಶೈವ ಮಹಾಸಭಾದ ಜಿಲ್ಲಾಧ್ಯಕ್ಷ ಶಿವಲಿಂಗಯ್ಯ ಅಲ್ಲಯ್ಯನವರು,ವೀರಶೈವ ಸಾoಸ್ಕೃತಿಕ ಸಂಘದ ಅಧ್ಯಕ್ಷ ಡಾ. ಮಲ್ಲಿಕಾರ್ಜುನ ಹಿರೇಮಠ, ಲಿಂಗಾಯತ ಸಮುದಾಯದವರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಮಂಗಲಾ ವೆಂ. ನಾಯ್ಕ, ನ್ಯೂ ಹೈಸ್ಕೂಲ್ ಶಿಕ್ಷಕ ಕೃಷ್ಣಮೂರ್ತಿ ಶಿವು ಹುಳ್ಸೆಮಕ್ಕಿ ಮೊದಲಾದವರು ಉಪಸ್ಥಿತರಿದ್ದರು. #Basavanna #vachanad #lessons #taught #universities sSajidMulla #malgudiexpress #malgudinews #news #TopNews
📜ಪ್ರಚಲಿತ ವಿದ್ಯಮಾನ📜 - ShareChat
#📜ಪ್ರಚಲಿತ ವಿದ್ಯಮಾನ📜 ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ ಈಗಾಗಲೇ ಲೋಕಸಭೆ ಮತ್ತು ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇಕಡ 33 ರಷ್ಟು ಮೀಸಲಾತಿಯ ಮಸೂದೆ ಅಂಗೀಕಾರವಾಗಿದೆ. ಲೋಕಸಭೆ ಮತ್ತು ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇಕಡ 33ರಷ್ಟು ಮೀಸಲಾತಿಯನ್ನು ನೀಡುವ ಮಸೂದೆ ಡಾಕ್ಟರ್ ಮನಮೋಹನ್ ಸಿಂಗ್ ರವರು ಪ್ರಧಾನಮಂತ್ರಿಯಾಗಿದ್ದಾಗ 2010ರಲ್ಲಿ ಮಂಡನೆಯಾಗಿತ್ತು ಆಗ ರಾಜ್ಯಸಭೆಯಲ್ಲಿ ಇದಕ್ಕೆ ಅನುಮೋದನೆ ದೊರೆಯಿತು ಲೋಕಸಭೆಯಲ್ಲಿ ಇದಕ್ಕೆ ಅನುಮೋದನೆ ದೊರೆಯಲಿಲ್ಲ. 2023ರ ಸೆಪ್ಟೆಂಬರ್ 19ರಂದು ಮತ್ತೊಮ್ಮೆ ಈ ಮಸೂದೆ ಮಂಡನೆ ಆಯಿತು. ಅಂದು ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಚರ್ಚೆಯಾಗಿ ಸೆಪ್ಟೆಂಬರ್ 20ರಂದು ಎಲ್ಲ ಪಕ್ಷದವರು ಸೇರಿ ಸರ್ವಾನುಮತದಿಂದ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಈ ಮಸೂದೆಯನ್ನು ಅನುಮೋದಿಸಿ ಕೊಟ್ಟಿದ್ದಾರೆ. ಮಸೂದೆ ಅನುಮೋದನೆಯಾದ ನಂತರ 2024ರ ಲೋಕಸಭಾ ಚುನಾವಣೆಗೆ ಇದನ್ನು ಪರಿಗಣಿಸಲಿಲ್ಲ. 2029ರ ಚುನಾವಣೆಗು ಇದನ್ನು ಪರಿಗಣಿಸಲು ಸಾಧ್ಯವಿಲ್ಲವೆಂದು ಈ ಹಿಂದೆ ಹೇಳಿರುತ್ತಾರೆ. ಕಾರಣ 2011ರಲ್ಲಿ ಆದಂತಹ ದೇಶದ ಜನಗಣತಿ 2021ರಲ್ಲಿ ಮತ್ತೆ ಆಗಬೇಕಿತ್ತು. ಆದರೆ ಅಂದು ಕೊರೋನ ಬಂದ ಸಂದರ್ಭದಲ್ಲಿ ಜನಗಣತಿ ಕಾರ್ಯ ಮುಂದೂಡಲ್ಪಟ್ಟಿತು. ಈಗ ಕೇಂದ್ರ ಸರ್ಕಾರ ಜಾತಿಯು ಒಳಗೊಂಡಂತೆ ಜನಗಣತಿಯನ್ನು ಆರಂಭಿಸಿದೆ. ಈ ಜನಗಣತಿ 2027ಕ್ಕೆ ಮುಗಿಯುತ್ತದೆ. ಈ ನಡುವೆ ಕೇಂದ್ರದ ಬಿಜೆಪಿ ಸರ್ಕಾರ ಪಶ್ಚಿಮ ಬಂಗಾಳ ಮತ್ತು ತಮಿಳುನಾಡು ಚುನಾವಣೆಗಳ ಹಿನ್ನೆಲೆಯಲ್ಲಿ ಅಲ್ಲಿನ ಮಹಿಳಾ ಮತದಾರರ ಮೇಲೆ ಪ್ರಭಾವವನ್ನು ಬೀರುವ ಸಲುವಾಗಿ ಇದ್ದಕ್ಕಿದ್ದ ಹಾಗೆ ಏಪ್ರಿಲ್ 16 ಮತ್ತು 17ರಂದು ವಿಶೇಷ ಅಧಿವೇಶನವನ್ನ ಕರೆದು ಈಗಾಗಲೇ ಪಾಸ್ ಆಗಿರುವ ಮಹಿಳಾ ಬಿಲ್ ಜೊತೆಗೆ ಕ್ಷೇತ್ರಗಳ ಪುನರ್ ವಿಂಗಡಣೆ ಮತ್ತು ಲೋಕಸಭಾ ಕ್ಷೇತ್ರಗಳ ಸಂಖ್ಯೆಯನ್ನು ಹೆಚ್ಚಿಸುವ ಮಸೂದೆಯನ್ನು ಮಂಡಿಸಿರುತ್ತಾರೆ. ಸದ್ಯದಲ್ಲಿಯೇ ಜನಗಣತಿ ಪೂರ್ಣಗೊಳ್ಳುವುದರಿಂದ ಜನಗಣತಿ ವರದಿ ಬಂದ ನಂತರ ಅದರ ಆಧಾರದ ಮೇಲೆ ಕ್ಷೇತ್ರಗಳ ಪುನರ್ ವಿಂಗಡಣೆ ಮತ್ತು ಕ್ಷೇತ್ರಗಳ ಸಂಖ್ಯೆಯನ್ನು ಹೆಚ್ಚಿಸುವ ಕಾರ್ಯವನ್ನು ಮಾಡಬೇಕಾದದ್ದು ಸರಿಯಾದಂತಹ ವಿಚಾರವಾಗಿರುತ್ತದೆ. ರಾಜಕಾರಣದ ಉದ್ದೇಶದಿಂದ ಆತುರವಾಗಿ ಮಂಡಿಸಿರುವಂತಹ ಮಸೂದೆಗೆ ಕಾಂಗ್ರೆಸ್ ಪಕ್ಷ ಒಳಗೊಂಡಂತೆ ಎಲ್ಲ ವಿರೋಧ ಪಕ್ಷಗಳು ವಿರೋಧವನ್ನು ಮಾಡಿ ಲೋಕಸಭೆಯಲ್ಲಿ ಎರಡನೇ ಮೂರರಷ್ಟು ಬಹುಮತ ಆ ಮಸೂದೆಗೆ ದೊರೆಯದ ಕಾರಣದಿಂದ ಮಸೂದೆ ಮತದಾನದಲ್ಲಿ ಸೋತಿರುತ್ತದೆ. ಈಗ ಬಿಜೆಪಿಯವರು ಜನರ ದಿಕ್ಕು ತಪ್ಪಿಸುವ ಸಲುವಾಗಿ ಕ್ಷೇತ್ರ ಪುನರ್ ವಿಂಗಡನೆ ಮತ್ತು ಕ್ಷೇತ್ರದ ಸಂಖ್ಯೆಗಳ ಹೆಚ್ಚಿಸುವ ವಿಚಾರವನ್ನು ಪ್ರಸ್ತಾಪಿಸದೆ ಕೇವಲ ಕಾಂಗ್ರೆಸ್ ಪಕ್ಷ ಮಹಿಳಾ ಮಸೂದೆಗೆ ವಿರೋಧವನ್ನು ಮಾಡಿದೆ ಲೋಕಸಭೆ ಮತ್ತು ವಿಧಾನಸಭೆಯಲ್ಲಿ ಮಹಿಳೆಯರ ಶೇಕಡ 33 ರಷ್ಟು ಸ್ಥಾನವನ್ನು ಪಡೆದುಕೊಳ್ಳುವಲ್ಲಿ ಇದ್ದ ಅವಕಾಶವನ್ನ ತಪ್ಪಿಸಿದ್ದಾರೆ ಎಂದು ರಾಜಕಾರಣವಾಗಿ ಮಾತನಾಡುತ್ತಿದ್ದಾರೆ. ಈ ದೇಶದಲ್ಲಿ 1930ರಲ್ಲಿ ಮಹಿಳೆಯರಿಗೆ ಸಮಾನವಾದಂತಹ ಸ್ಥಾನಮಾನಗಳನ್ನ ಸದನಗಳಲ್ಲಿ ನೀಡಬೇಕೆಂದು ಮೋತಿಲಾಲ್ ನೆಹರುರವರು ಪ್ರಸ್ತಾಪಿಸಿದ್ದರು. ತದನಂತರ ಸಂವಿಧಾನದ ರಚನೆಯ ಸಂದರ್ಭದಲ್ಲಿಯೇ ಮಹಿಳೆಯರು ಚುನಾವಣೆಗೆ ನಿಲ್ಲಲು ಮತ್ತು ದೇಶದ ಎಲ್ಲ ಮಹಿಳೆಯರಿಗೆ ಪ್ರಥಮ ಚುನಾವಣೆಯಲ್ಲಿಯೇ ಮತದಾನದ ಹಕ್ಕನ್ನು ನೀಡುವ ಕಾನೂನನ್ನು ನೀಡುತ್ತಾರೆ. ರಾಜೀವ್ ಗಾಂಧಿ ಅವರು ಸಂವಿಧಾನದ 73, 74ನೇ ಕಲಂಗಳಿಗೆ ತಿದ್ದುಪಡಿಯನ್ನ ತಂದು ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಶೇಕಡ 33ರಷ್ಟು ಮೀಸಲಾತಿಯನ್ನು ಈಗಾಗಲೇ ಕಲ್ಪಿಸಿ ಕೊಟ್ಟಿದ್ದಾರೆ. ಕೆಲವು ರಾಜ್ಯಗಳಲ್ಲಿ ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಮೀಸಲಾತಿ ಶೇಕಡ 50ರಷ್ಟು ನಿಗದಿಯಾಗಿದೆ. ಕಾಂಗ್ರೆಸ್ ಪಕ್ಷ 1963ರಲ್ಲಿಯೇ ಉತ್ತರ ಪ್ರದೇಶದಲ್ಲಿ ಪ್ರಥಮ ಬಾರಿಗೆ ಸುಚೇತಾ ಕೃಪಲಾನಿ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಿದೆ. 1972ರಲ್ಲಿ ತದನಂತರ ಒರಿಸ್ಸಾದಲ್ಲಿ ನಂದಿನಿ ಸತ್ಪತಿ ಇವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಿದೆ. 1980ರಲ್ಲಿ ಅಸ್ಸಾಮಿನಲ್ಲಿ ಅನ್ವರ್ ಥೈಮೂರ್, 1996ರಲ್ಲಿ ಭಟ್ಕಲ್ ಪಂಜಾಬಿನಲ್ಲಿ, ತದನಂತರ ದೆಹಲಿಯಲ್ಲಿ ಶೀಲಾ ದೀಕ್ಷಿತ್ ರವರು 15 ವರ್ಷಗಳ ಕಾಲ ಮುಖ್ಯಮಂತ್ರಿಗಳಾಗಿದ್ದರು. ದೇಶದ ಪ್ರಧಾನಿಯಾಗಿ ಇಂದಿರಾ ಗಾಂಧಿಯವರು ಮಹಿಳೆಯರಿಗೆ ಹೆಚ್ಚಿನ ರಾಜಕೀಯ ಮತ್ತು ಆರ್ಥಿಕ ಸ್ವಾತಂತ್ರ್ಯವನ್ನು ಕಲ್ಪಿಸಿ ಕೊಟ್ಟಿದ್ದಾರೆ. ದೇಶದಲ್ಲಿ ಪ್ರಥಮ ಬಾರಿಗೆ ಕಾಂಗ್ರೆಸ್ ಪಕ್ಷ ಪ್ರತಿಭಾ ಪಾಟೀಲ್ ಅವರನ್ನು ರಾಷ್ಟ್ರಪತಿಯನ್ನಾಗಿ ಆಯ್ಕೆ ಮಾಡಿರುತ್ತದೆ. ಮೀರಾ ಕುಮಾರಿ ಅವರನ್ನು ಲೋಕಸಭೆಯ ಸಭಾಧ್ಯಕ್ಷರನ್ನಾಗಿ ಆಯ್ಕೆ ಮಾಡಿದೆ. ಈ ರೀತಿಯಲ್ಲಿ ಮಹಿಳೆಯರಿಗೆ ಕಾಂಗ್ರೆಸ್ ಪಕ್ಷ ಕಲ್ಪಿಸಿಕೊಟ್ಟಷ್ಟು ಅವಕಾಶಗಳನ್ನ ಬೇರೆ ಯಾವ ರಾಜಕೀಯ ಪಕ್ಷವು ಕಲ್ಪಿಸಿ ಕೊಟ್ಟಿಲ್ಲ. ಕಾಂಗ್ರೆಸ್ ಪಕ್ಷ ಮತ್ತು ಇದರ ಜೊತೆಯಲ್ಲಿ ಕೈಜೋಡಿಸಿದ ಎಲ್ಲ ವಿರೋಧ ಪಕ್ಷಗಳ ನಿಲುವು ಒಂದೇ, ಮಹಿಳೆಯರಿಗೆ ಲೋಕಸಭೆ ಮತ್ತು ವಿಧಾನಸಭೆಯಲ್ಲಿ ಶೇಕಡ 33%ರಷ್ಟು ಮೀಸಲಾತಿ ಕೊಡುವ ವಿಚಾರದಲ್ಲಿ ಯಾವುದೇ ಭೇದಭಾವವಿಲ್ಲ. ಆದರೆ ರಾಜಕೀಯ ಕಾರಣಕ್ಕಾಗಿ ಕ್ಷೇತ್ರ ಪುಡವಿಂಗಡಣೆ ಮತ್ತು ಕ್ಷೇತ್ರದ ಸಂಖ್ಯೆಯನ್ನು ಹೆಚ್ಚಿಸುವ 2011ರ ಜನಗಣತಿಯ ಮಾನದಂಡವನ್ನು ವಿರೋಧಿಸುತ್ತಾ ಈ ಮಸೂದೆಯ ವಿರುದ್ಧವಾಗಿ ಲೋಕಸಭೆಯಲ್ಲಿ ಮತವನ್ನು ನೀಡಿರುತ್ತಾರೆ. ಮಹಿಳೆಯರ ರಾಜಕೀಯ ಸ್ವಾತಂತ್ರ್ಯ ಮತ್ತು ಅವರ ಹಕ್ಕುಗಳ ವಿಚಾರದಲ್ಲಿ ಬಿಜೆಪಿ ಅವರಿಂದ ಕಾಂಗ್ರೆಸ್ ಪಾಠ ಕಲಿಯಬೇಕಿಲ್ಲ. ಸರೋಜಿನಿ ನಾಯ್ಡು ಅವರು ಸಹ ಸದನಗಳಲ್ಲಿ ಮಹಿಳೆಯರಿಗೆ ಮೀಸಲಾತಿಯ ವಿಚಾರದಲ್ಲಿ ಬಹಳ ಗಟ್ಟಿಯಾಗಿ ಸ್ವಾತಂತ್ರ್ಯ ಪೂರ್ವದಲ್ಲಿಯೇ ಪ್ರತಿಪಾದಿಸಿದ್ದಾರೆ. ಸಂವಿಧಾನ ಸಮಿತಿಯಲ್ಲಿ 15 ಜನ ಮಹಿಳೆಯರಿಗೆ ಅವಕಾಶ ನೀಡಲಾಗಿತ್ತು. - ಕೆ ಎಸ್ ನಾಗರಾಜ್, ಬೆಂಗಳೂರು #Bill #33percent #reservation #women #passed #ksnagaraj #passed #malgudiexpress #malgudinews #news #TopNews
📜ಪ್ರಚಲಿತ ವಿದ್ಯಮಾನ📜 - ಶೇ.3ತರಷ್ಟು ಮೀಸಲಾತಿ ಮಸೂದೆ ಮಹಿಳೆಯರಿಗೆ ಅಂಗೀಕಾರವಾಗಿದೆ ಸುದಿ 8 ಯರಿಯಲ್ಲಿ್ Soqa Please subscribe to Malgudi Express YouTube and Website EXPRESS ಶೇ.3ತರಷ್ಟು ಮೀಸಲಾತಿ ಮಸೂದೆ ಮಹಿಳೆಯರಿಗೆ ಅಂಗೀಕಾರವಾಗಿದೆ ಸುದಿ 8 ಯರಿಯಲ್ಲಿ್ Soqa Please subscribe to Malgudi Express YouTube and Website EXPRESS - ShareChat
#📜ಪ್ರಚಲಿತ ವಿದ್ಯಮಾನ📜 ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ ಮಹಿಳಾ ಮೀಸಲಾತಿ ಮಸೂದೆ ವಿಚಾರದಲ್ಲಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ಮಾಡಿದ ಕಪಟ ನಾಟಕ ದೇಶದ ಮಹಿಳೆಯರಿಗೆ ಮಾಡಿರುವ ಅಪಮಾನ ಮತ್ತು ದ್ರೋಹವಾಗಿದೆ. ಸ್ವಾಭಿಮಾನಿಗಳಾಗಿರುವ ಭಾರತೀಯ ಮಹಿಳೆಯರು ಈ ದ್ರೋಹವನ್ನು ಖಂಡಿತಾ ಸಹಿಸುವುದಿಲ್ಲ ಮತ್ತು ಮರೆಯುವುದಿಲ್ಲ. ವಿರೋಧ ಪಕ್ಷಗಳು ಈ ಮಸೂದೆಯನ್ನು ತಿರಸ್ಕರಿಸಬೇಕು ಮತ್ತು ಅದನ್ನೇ ನೆಪಮಾಡಿಕೊಂಡು ನಾವೆಲ್ಲರೂ ಮಹಿಳಾ ವಿರೋಧಿಗಳು ಎಂದು ದೇಶದ ತುಂಬಾ ಢಂಗುರ ಬಾರಿಸುತ್ತಾ ಹೋಗಬೇಕು ಎನ್ನುವ ದುರುದ್ದೇಶದಿಂದಲೇ ಕೇಂದ್ರ ಸರ್ಕಾರ ತುರ್ತಾಗಿ ಲೋಕಸಭಾ ಅಧಿವೇಶನವನ್ನು ಕರೆದು ಅವಸರದಲ್ಲಿ "ನಾಮ್ ಕ ವಸ್ತೆ" ಚರ್ಚೆ ನಡೆಸಿ ಅದು ವಿಫಲಗೊಳ್ಳುವಂತೆ ಮಾಡಿದೆ. ಈ ಕಪಟ ನಾಟಕವನ್ನು ಅರ್ಥಮಾಡಿಕೊಳ್ಳದಷ್ಟು ನಮ್ಮ ಮಹಿಳೆಯರು ದಡ್ಡರಲ್ಲ. ದೇಶದ ಜನಸಂಖ್ಯೆಯಲ್ಲಿ ಅರ್ಧಭಾಗದಷ್ಟು ಇರುವ ಮಹಿಳೆಯರಿಗೆ ಸಂಬಂಧಿಸಿದ ಮೀಸಲಾತಿಯಂತಹ ಗಂಭೀರ ವಿಷಯದ ಬಗ್ಗೆ ನಿರ್ಧಾರ ಕೈಗೊಳ್ಳುವ ಮೊದಲು ಪ್ರಧಾನ ಮಂತ್ರಿಗಳು ವಿರೋಧಪಕ್ಷಗಳ ಜೊತೆ ಸಮಾಲೋಚನೆ ನಡೆಸಿ ಅಭಿಪ್ರಾಯ ಸಂಗ್ರಹ ಮಾಡಬೇಕಾಗಿತ್ತು. ಕೇವಲ ತಮ್ಮ ಪೋಟೊಗಳನ್ನು ಹಾಕಿಕೊಂಡು ಜಾಹೀರಾತು ನೀಡುವುದಲ್ಲ, ದೇಶದಾದ್ಯಂತ ಬೇರೆ ಬೇರೆ ಕ್ಷೇತ್ರದಲ್ಲಿರುವ ಹಿರಿಯ ಮಹಿಳಾ ನಾಯಕಿಯರ ಜೊತೆಗಾದರೂ ಒಂದು ಚರ್ಚೆ ನಡೆಸಬೇಕಾಗಿತ್ತು. ಇದ್ಯಾವುದನ್ನೂ ಮಾಡದೆ ದಿಢೀರನೆ ಮಹಿಳಾ ಮೀಸಲಾತಿ ಮಸೂದೆಯನ್ನು ಮಂಡಿಸಿ, ವಿರೋಧ ಪಕ್ಷಗಳು ಕಣ್ಣುಮುಚ್ಚಿಕೊಂಡು ಒಪ್ಪಿಗೆ ನೀಡಬೇಕೆಂದು ನಿರೀಕ್ಷಿಸುವುದು ಮಹಿಳೆಯರಿಗೆ ಮಾತ್ರವಲ್ಲ ವಿರೋಧ ಪಕ್ಷಗಳಿಗೂ ಮಾಡಿರುವ ಅವಮಾನವಾಗಿದೆ. ಸಾಮಾಜಿಕ ನ್ಯಾಯಕ್ಕೆ ಬದ್ಧವಾಗಿರುವ ಕಾಂಗ್ರೆಸ್ ಪಕ್ಷ ಪ್ರಾರಂಭದಿಂದಲೂ ಮಹಿಳೆಯರಿಗೆ ರಾಜಕೀಯ ಪ್ರಾತಿನಿಧ್ಯದಲ್ಲಿ ಮೀಸಲಾತಿ ನೀಡಲು ಬದ್ಧವಾಗಿದೆ. ನಮ್ಮ ಪಕ್ಷ ಅಧಿಕಾರದಲ್ಲಿರಲಿ, ಇರದೆ ಇರಲಿ ಸತತವಾಗಿ ಮಹಿಳಾ ಮೀಸಲಾತಿ ಪರವಾದ ನಿಲುವು ತೆಗೆದುಕೊಂಡಿದೆ. ಶ್ರೀಮತಿ ಇಂದಿರಾಗಾಂಧಿ ಮತ್ತು ಶ್ರೀಮತಿ ಸೋನಿಯಾ ಗಾಂಧಿಯವರಂತಹ ಜಗಮೆಚ್ಚಿದ ನಾಯಕಿಯರನ್ನು ಪಡೆದಿರುವ ಕಾಂಗ್ರೆಸ್ ಪಕ್ಷಕ್ಕೆ ಮಹಿಳಾ ನಾಯಕತ್ವದ ಮಹತ್ವ ಗೊತ್ತಿದೆ. 1992ರಲ್ಲಿ 73 ಮತ್ತು 74ನೇ ಸಾಂವಿಧಾನಿಕ ತಿದ್ದುಪಡಿ ಮೂಲಕ ಸ್ಥಳೀಯ ಸಂಸ್ಥೆಗಳಲ್ಲಿ (ಪಂಚಾಯತ್ ರಾಜ್ ಮತ್ತು ನಗರ ಸ್ಥಳೀಯ ಸಂಸ್ಥೆಗಳು) ಮಹಿಳೆಯರಿಗೆ ಶೇಕಡಾ 33ರಷ್ಟು ಮೀಸಲಾತಿ ನೀಡಿರುವ ಕೀರ್ತಿ ಕಾಂಗ್ರೆಸ್ ಪಕ್ಷಕ್ಕೆ ಸಲ್ಲಬೇಕು. ಈ ಐತಿಹಾಸಿಕ ನಿರ್ಧಾರವನ್ನು ಕೈಗೊಂಡವರು ದಿವಂಗತ ಪ್ರಧಾನಿ ರಾಜೀವ್ ಗಾಂಧಿಯವರು ಎನ್ನುವುದನ್ನು ಈಗ ಮಹಿಳೆಯರ ಪರ ಹುಸಿ ಪ್ರೀತಿ ತೋರಿಸುತ್ತಿರುವ ಬಿಜೆಪಿ ನಾಯಕರಿಗೆ ನೆನಪಿಸಬಯಸುತ್ತೇನೆ. ಈಗ ಇರುವ ಲೋಕಸಭೆಯಲ್ಲಿಯೇ ಮಹಿಳಾ ಮೀಸಲಾತಿ ಮಸೂದೆಯನ್ನು ಮಂಡಿಸಲಿ, ಅದಕ್ಕೆ ಒಪ್ಪಿಗೆ ನೀಡಲು ಕಾಂಗ್ರೆಸ್ ಮತ್ತು ಮಿತ್ರಪಕ್ಷಗಳು ಸಿದ್ಧ ಇವೆ ಎಂದು ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕ ಗಾಂಧಿಯವರು ಸೇರಿದಂತೆ ನಮ್ಮ ಎಲ್ಲಾ ನಾಯಕರು ಲೋಕಸಭೆಯಲ್ಲಿ ಸವಾಲನ್ನು ಹಾಕಿದ್ದಾರೆ. ನರೇಂದ್ರ ಮೋದಿ ನೇತೃತ್ವದ ಸರ್ಕಾರ ಈ ಸವಾಲನ್ನು ಸ್ವೀಕರಿಸಿ ಮಹಿಳೆಯರ ಪರವಾಗಿ ತಮಗೆ ಪ್ರಾಮಾಣಿಕ ಕಾಳಜಿ ಇದೆ ಎನ್ನುವುದನ್ನು ಸಾಬೀತು ಪಡಿಸಬೇಕು. ಮಹಿಳಾ ಮೀಸಲಾತಿ ಮಸೂದೆಗೆ 2023ರಲ್ಲಿಯೇ ಸಂಸತ್ ನ ಉಭಯ ಸದನಗಳು ಅಂಗೀಕಾರ ನೀಡಿದ ನಂತರ ಅದು ಕಾಯ್ದೆಯಾಗಿದೆ. ಮಹಿಳೆಯರಿಗೆ ರಾಜಕೀಯ ಮೀಸಲಾತಿ ನೀಡುವುದೇ ಉದ್ದೇಶವಾಗಿದ್ದರೆ ಈ ಮೂರು ವರ್ಷ ಯಾಕೆ ಕಾಯಬೇಕಾಗಿತ್ತು? ಸತ್ಯ ಸಂಗತಿ ಏನೆಂದರೆ ಭಾರತೀಯ ಜನತಾ ಪಕ್ಷಕ್ಕೆ ತಮಿಳುನಾಡು ಮತ್ತು ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯಲ್ಲಿ ಸೋಲುತ್ತೇವೆ ಎಂಬ ಭಯ ಹುಟ್ಟಿಕೊಂಡಿದೆ. ಇದಕ್ಕಾಗಿ ನಮ್ಮನ್ನು ಮಹಿಳಾ ವಿರೋಧಿಗಳೆಂದು ಬಿಂಬಿಸಿ ಅವರ ಮತಗಳನ್ನು ಪಡೆಯಬೇಕೆನ್ನುವ ಕುಟಿಲ ಕಾರಸ್ತಾನದ ಫಲವೇ ಈ ಅವಸರದ ಮಹಿಳಾ ಮೀಸಲಾತಿ ಮಸೂದೆ ಮಂಡನೆಯ ನಾಟಕ. 2026ರ ಜನಗಣತಿ ನಡೆಸಿ ಅದರ ಅಂತಿಮ ವರದಿ ಕೈಸೇರಿದ ನಂತರ ಅದರ ಆಧಾರದಲ್ಲಿಯೇ ಕ್ಷೇತ್ರ ಮರುವಿಂಗಡಣೆ ನಡೆಸಲಾಗುವುದು ಮತ್ತು ಅದರ ಆಧಾರದಲ್ಲಿಯೇ ಮಹಿಳಾ ಮೀಸಲಾತಿ ಕಾಯ್ದೆಯನ್ನು ಜಾರಿಗೆ ತರಲಾಗುವುದು ಎಂದು ಸ್ಪಷ್ಟವಾಗಿ ಹೇಳಿದ್ದ ಪ್ರಧಾನಿ ನರೇಂದ್ರ ಮೋದಿಯವರು ಇದ್ದಕ್ಕಿದ್ದಂತೆ ಮನಸ್ಸು ಬದಲಾಯಿಸಿ ಇಷ್ಟೊಂದು ಅವಸರದಲ್ಲಿ ಲೋಕಸಭಾ ಅಧಿವೇಶನ ಕರೆದು ಮಹಿಳಾ ಮೀಸಲಾತಿ ಕಾಯ್ದೆಗೆ ತಿದ್ದುಪಡಿ ತರುವ ಅಗತ್ಯ ಏನಿತ್ತು? ಸಂಸತ್ ಎನ್ನುವುದು ಪ್ರಜಾಪ್ರಭುತ್ವ ವ್ಯವಸ್ಥೆಯ ಒಂದು ಪವಿತ್ರ ವೇದಿಕೆ. ಕನಿಷ್ಠ ಅಲ್ಲಿ ನಿಂತು ಮಾತನಾಡುವಾಗಲಾದರೂ ಪ್ರಾಮಾಣಿಕವಾಗಿರಬೇಕು. ಆದರೆ ವಿಷಾದನೀಯ ಸಂಗತಿ ಎಂದರೆ ಅಲ್ಲಿಯೂ ಪ್ರಧಾನ ಮಂತ್ರಿ ಮತ್ತು ಗೃಹ ಸಚಿವರ ಬಾಯಿಯಿಂದ ಸುಳ್ಳುಗಳೇ ಹೊರಚಿಮ್ಮಿವೆ. ಮಹಿಳಾ ಮೀಸಲಾತಿ (ತಿದ್ದುಪಡಿ) ಮಸೂದೆಯ ಕರಡಿನಲ್ಲಿ ಲೋಕಸಭಾ ಕ್ಷೇತ್ರಗಳ ಮರುವಿಂಗಡಣೆಯನ್ನು 2011ರ ಜನಗಣತಿ ಆಧಾರದಲ್ಲಿ ಮಾಡಲಾಗುವುದು ಎಂದು ನಮೂದಿಸಲಾಗಿದೆ. ಆದರೆ ಪ್ರಧಾನಿ ಮತ್ತು ಗೃಹ ಸಚಿವರಿಬ್ಬರೂ ಲೋಕಸಭಾ ಕ್ಷೇತ್ರಗಳ ಸಂಖ್ಯೆಯನ್ನು ಶೇಕಡಾ 50ರಷ್ಟು ಹೆಚ್ಚಿಸಲಾಗುವುದು ಎಂದು ಸದನದಲ್ಲಿ ಹೇಳಿದ್ದಾರೆ. ಇದರಲ್ಲಿ ಯಾವುದೂ ಸತ್ಯ? ಮಹಿಳಾ ಮೀಸಲಾತಿಗೆ ನಮ್ಮ ವಿರೋಧ ಖಂಡಿತ ಇಲ್ಲ, ಅದಕ್ಕೆ ದೋಷಪೂರಿತ ಕ‍್ಷೇತ್ರ ಮರುವಿಂಗಡಣೆಯನ್ನು ತಳುಕುಹಾಕಿರುವುದನ್ನು ನಾವು ಖಂಡಿತ ವಿರೋಧಿಸುತ್ತೇವೆ. ಕೇಂದ್ರ ಸರ್ಕಾರ ಜಾರಿಗೆ ತರಲು ಪ್ರಯತ್ನಿಸುತ್ತಿರುವ ಕ್ಷೇತ್ರ ಮರುವಿಂಗಡಣೆಯನ್ನು ಕರ್ನಾಟಕವೂ ಸೇರಿದಂತೆ ದಕ್ಷಿಣದ ರಾಜ್ಯಗಳು ಯಾಕೆ ವಿರೋಧಿಸುತ್ತಿವೆ ಎನ್ನುವುದನ್ನು ಈ ಹಿಂದೆಯೇ ವಿವರವಾಗಿ ಮಾತನಾಡಿದ್ದೇನೆ. ನರೇಂದ್ರ ಮೋದಿ ಸರ್ಕಾರದ ಕ್ಷೇತ್ರ ಮರುವಿಂಗಡಣೆಯ ಮಾದರಿ ಅಭಿವೃದ್ಧಿಶೀಲ ರಾಜ್ಯಗಳನ್ನು ಶಿಕ್ಷಿಸುವ ಜೊತೆಯಲ್ಲಿ ಭ್ರಷ್ಟಾಚಾರ ಮತ್ತು ದುರಾಡಳಿತದಿಂದ ನಲುಗಿಹೋಗಿರುವ ಬಿಮಾರು ರಾಜ್ಯಗಳನ್ನು ಪುರಸ್ಕರಿಸುವ ರೀತಿಯಲ್ಲಿ ಇದೆ. ಇದು ಸರಿಯಾದ ಅಭಿವೃದ್ಧಿ ಮಾದರಿ ಖಂಡಿತಾ ಅಲ್ಲ. ಜನಸಂಖ್ಯೆಯೊಂದನ್ನೇ ಆಧಾರವಾಗಿಟ್ಟುಕೊಂಡು ನಡೆಸುವ ಕ್ಷೇತ್ರ ಮರುವಿಂಗಡಣೆಯಲ್ಲಿ ದಕ್ಷಿಣದ ರಾಜ್ಯಗಳು ಸಂಸತ್ ನಲ್ಲಿ ತಮ್ಮ ಧ್ವನಿಯನ್ನು ಕಳೆದುಕೊಳ್ಳಲಿದೆ ಎನ್ನುವುದಕ್ಕೆ ಬಲವಾದ ಪುರಾವೆಗಳಿವೆ. ಈ ಮಾದರಿಯ ಕ್ಷೇತ್ರ ಮರುವಿಂಗಡಣೆಯನ್ನು ನಮ್ಮ ರಾಜ್ಯ ಕೂಡಾ ಒಪ್ಪುವುದಿಲ್ಲ. ಇದರ ವಿರುದ್ಧ ದಕ್ಷಿಣದ ಬಾಧಿತ ರಾಜ್ಯಗಳ ಜೊತೆಗೂಡಿ ಪ್ರತಿಭಟನೆಯನ್ನು ನಡೆಸುತ್ತೇವೆ. - ಸಿದ್ದರಾಮಯ್ಯ, ಸಿಎಂ #Modi #govt #betrayed #women #womenreservation #Siddaramaiah #WomensReservation #Delimitation #malgudiexpress #malgudinews #news #TopNews
📜ಪ್ರಚಲಿತ ವಿದ್ಯಮಾನ📜 - ShareChat
#📜ಪ್ರಚಲಿತ ವಿದ್ಯಮಾನ📜 ಕಾಂಗ್ರೆಸ್‌ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ ಕಾಂಗ್ರೆಸ್ ಪಕ್ಷ ಮಹಿಳಾ ವಂದನಾ (ಮಹಿಳಾ ಮೀಸಲಾತಿ) ಬಿಲ್ ನ್ನು ವಿರೋಧಿಸುವ ಮೂಲಕ ದೇಶದ ಸಮಗ್ರ ಮಹಿಳಾ ಶಕ್ತಿಗೆ ಅಪಮಾನ ಮಾಡಿದೆ. ಮಹಿಳೆಯರಿಗೆ ಮೀಸಲಾತಿ ನೀಡುವ ನೈಜ ಇಚ್ಛಾಶಕ್ತಿ ಕಾಂಗ್ರೆಸ್‌ಗೆ ಯಾವತ್ತೂ ಇರಲಿಲ್ಲ. ಕಳೆದ ಮೂವತ್ತು ವರ್ಷಗಳಿಂದ ಅವರು ಮಾಡುತ್ತಿರುವುದನ್ನೇ ಈಗಲೂ ಮುಂದುವರಿಸಿದ್ದಾರೆ. ಇದರಿಂದ ಅವರಿಗೆ ಮಹಿಳೆಯರ ಶಾಪ ತಟ್ಟುವುದು ಖಚಿತ. ದೇಶದ ಅಭಿವೃದ್ಧಿಯಲ್ಲಿ ಮಹಿಳೆಯರು ಸಮಾನವಾಗಿ ಪಾಲ್ಗೊಳ್ಳಬೇಕು ಎನ್ನುವ ಪ್ರಗತಿಪರ ಚಿಂತನೆಗೆ ವಿರುದ್ಧವಾಗಿ ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳು ನಡೆದುಕೊಂಡಿವೆ. ಮಹಿಳಾ ಮೀಸಲಾತಿ ಬಿಲ್ ಪಾಸ್ ಆಗದಿರುವುದನ್ನು ಇಡೀ ದೇಶ ಗಮನಿಸುತ್ತಿದೆ. ಈಗ ಕಾಂಗ್ರೆಸ್ ಸುಳ್ಳು ಸಮರ್ಥನೆ ನೀಡಲು ಪ್ರಯತ್ನಿಸುತ್ತಿದೆ. 2023ರಲ್ಲಿ, ಜನಸಂಖ್ಯೆ ಆಧಾರದ ಮೇಲೆ ಕ್ಷೇತ್ರಗಳ ಪುನರ್ವಿಂಗಡಣೆ ಮಾಡಿ, ಸುಮಾರು 50% ರಷ್ಟು ಕ್ಷೇತ್ರಗಳನ್ನು ಹೆಚ್ಚಿಸಿ, ಮಹಿಳೆಯರಿಗೆ 33% ಮೀಸಲಾತಿ ನೀಡುವ ಪ್ರಸ್ತಾವನೆ ಇತ್ತು. ಇದನ್ನು 2034ರಿಂದ ಜಾರಿಗೆ ತರಲು ತೀರ್ಮಾನಿಸಲಾಗಿತ್ತು. ಆದರೆ, ಇದನ್ನು 2029ರಲ್ಲೇ ಜಾರಿಗೆ ತರಬೇಕೆಂಬ ಕಾರಣದಿಂದ ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳ ಸ್ಥಾನಗಳನ್ನು ಸುಮಾರು 50% ಹೆಚ್ಚಿಸುವ ಉದ್ದೇಶ ಇತ್ತು. ಈ ಮಹತ್ವದ ವಿಷಯದಲ್ಲೂ ಕಾಂಗ್ರೆಸ್ ರಾಜಕಾರಣ ಮಾಡಲು ಮುಂದಾಗಿದೆ. ಈ ರಾಜಕೀಯ ****ಟಕ್ಕೆ ಕಾಂಗ್ರೆಸ್ ಪಕ್ಷ ಮುಂದಿನ ದಿನಗಳಲ್ಲಿ ದೊಡ್ಡ ಬೆಲೆ ತೆರಬೇಕಾಗುತ್ತದೆ ಎಂಬುದು ಸ್ಪಷ್ಟವಾಗಿದೆ. ದಕ್ಷಿಣ ಭಾರತಕ್ಕೆ ಅನ್ಯಾಯವಾಗುತ್ತಿದೆ ಎಂಬ ವಾದವನ್ನು ಕಾಂಗ್ರೆಸ್ ಮಿತ್ರಪಕ್ಷಗಳು ಲೋಕಸಭೆಯಲ್ಲಿ ಮುಂದಿಟ್ಟವು. ಇದಕ್ಕೆ ಪ್ರತಿಯಾಗಿ ಗೃಹ ಸಚಿವ ಅಮಿತ್ ಶಾ ಅವರು ಈಗಿರುವ ಲೋಕಸಭೆ ಮತ್ತು ವಿಧಾನಸಭೆಗಳ ಸ್ಥಾನಗಳನ್ನು ಸುಮಾರು 50% ಹೆಚ್ಚಿಸಲು ಕಾನೂನಿನಲ್ಲಿ ತಿದ್ದುಪಡಿ ತರಲಾಗುತ್ತದೆ ಎಂದು ಹೇಳಿದ್ದಾರೆ. ಆದರೂ ವಿಪಕ್ಷಗಳು ಇದನ್ನು ಒಪ್ಪಲಿಲ್ಲ. ಇದರಿಂದ ಕಾಂಗ್ರೆಸ್‌ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟವಾಗುತ್ತದೆ. - ಬಸವರಾಜ ಬೊಮ್ಮಾಯಿ, ಸಂಸದ #clear #Congress #womenreservation #BasavarajBommai #malgudiexpress #malgudinews #news #TopNews
📜ಪ್ರಚಲಿತ ವಿದ್ಯಮಾನ📜 - ShareChat
#📜ಪ್ರಚಲಿತ ವಿದ್ಯಮಾನ📜 ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎನ್ನುವುದಕ್ಕೆ ಕನ್ನಡಿ: ಆರ್ ಅಶೋಕ್ ಮಾನ್ಯ ಸಿದ್ದರಾಮಯ್ಯನವರೇ, ನಿಮ್ಮ ತವರು ಜಿಲ್ಲೆಯಲ್ಲೇ ನವಜಾತ ಶಿಶುಗಳ ಮಾರಣಹೋಮ ನಡೀತಿದ್ರೂ ನಿಮಗೆ ಕಾಣುತ್ತಿಲ್ಲವೇ? ಮೈಸೂರಿನ ಐತಿಹಾಸಿಕ ಚೆಲುವಾಂಬ ಆಸ್ಪತ್ರೆಯಲ್ಲಿ ಕೇವಲ 15 ತಿಂಗಳಲ್ಲಿ 421 ಶಿಶುಗಳು ಮತ್ತು 12 ತಾಯಂದಿರು ಸಾವನ್ನಪ್ಪಿರುವುದು @INCKarnataka ಸರ್ಕಾರದ ದುರಾಡಳಿತದಲ್ಲಿ ರಾಜ್ಯದ ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎನ್ನುವುದಕ್ಕೆ ಕನ್ನಡಿ ಹಿಡಿದಿದೆ. ಮೈಸೂರು ಮಹಾರಾಜರು ಕಟ್ಟಿಸಿದ ಪವಿತ್ರ ಆಸ್ಪತ್ರೆ ಇಂದು ಕಾಂಗ್ರೆಸ್ ಸರ್ಕಾರದ ನಿರ್ಲಕ್ಷ್ಯದಿಂದಾಗಿ ಬಡ ಕುಟುಂಬಗಳ ಗರ್ಭಿಣಿ ಮಹಿಳೆಯರಿಗೆ, ನವಜಾತ ಶಿಶುಗಳಿಗೆ ಸ್ಮಶಾನವಾಗಿ ಮಾರ್ಪಡುತ್ತಿರುವುದು ನಾಚಿಕೆಗೇಡಿನ ಸಂಗತಿ. ಮುಖ್ಯಮಂತ್ರಿ @siddaramaiah ಅವರೇ, ನಿಮ್ಮ ಸ್ವಂತ ಜಿಲ್ಲೆಯಲ್ಲೇ ನವಜಾತ ಶಿಶುಗಳು ಹೀಗೆ ಸರಣಿಯಾಗಿ ಪ್ರಾಣ ಬಿಡುತ್ತಿದ್ದರೆ ನಿಮ್ಮ ಅಂತಃಕರಣ ಎಲ್ಲಿ ಸತ್ತು ಹೋಗಿದೆ? ಈ ಸಾವಿನ ಸರಣಿಗೆ ಸರ್ಕಾರದ ದಿವ್ಯ ನಿರ್ಲಕ್ಷ್ಯವೇ ನೇರ ಕಾರಣ. ಆಸ್ಪತ್ರೆಯಲ್ಲಿ 6 ಜನ ತಜ್ಞ ವೈದ್ಯರಿರಬೇಕಾದ ಜಾಗದಲ್ಲಿ ಕೇವಲ ಒಬ್ಬರೇ ವೈದ್ಯರಿದ್ದಾರೆ ಎಂದರೆ ರಾಜ್ಯದ ಆರೋಗ್ಯ ವ್ಯವಸ್ಥೆ ಎಂತಹ ದುಸ್ಥಿತಿಯಲ್ಲಿದೆ ಎಂಬುದು ಯಾರಿಗಾದರೂ ಅರ್ಥವಾಗುತ್ತದೆ. 96 ನರ್ಸ್‌ಗಳಿರಬೇಕಾದ ಕಡೆ ಕೇವಲ 59 ಮಂದಿ ಇದ್ದಾರೆ. ಬೆಡ್‌ಗಳ ಕೊರತೆ ಮತ್ತು ಎಸ್‌ಎನ್‌ಸಿಯು (SNCU) ಘಟಕಗಳ ಕೊರತೆಯ ಬಗ್ಗೆ ವೈದ್ಯಾಧಿಕಾರಿಗಳು ಪತ್ರ ಬರೆದರೂ ಸ್ಪಂದಿಸದ ನಿಮ್ಮ ಸರ್ಕಾರಕ್ಕೆ, ಬಜೆಟ್‌ನಲ್ಲಿ ಆರೋಗ್ಯಕ್ಕಿಂತ ಭ್ರಷ್ಟಾಚಾರ ಮತ್ತು ಸುಳ್ಳು ಪ್ರಚಾರವೇ ಮುಖ್ಯವಾಗಿದೆಯೇ? ನಿಮ್ಮ ತವರು ಜಿಲ್ಲೆಯಲ್ಲೇ ಸರ್ಕಾರಿ ಆಸ್ಪತ್ರೆಗಳ ಗತಿ ಹೀಗಾದರೆ, ಇನ್ನು ರಾಜ್ಯದ ಉಳಿದ ಜಿಲ್ಲೆಗಳ ಸರ್ಕಾರಿ ಆಸ್ಪತ್ರೆಗಳ ಗತಿ ಏನಾಗಿದೆ ಎನ್ನುವುದನ್ನ ಊಹಿಸಿಕೊಳ್ಳಲೂ ಭಯವಾಗುತ್ತದೆ? ಮೈಸೂರಿನಲ್ಲಿ ತಮ್ಮ ಪ್ರತಿಮೆ ತಾವೇ ಉದ್ಘಾಟನೆ ಮಾಡುವುದಕ್ಕೆ, ರಸ್ತೆಗಳಿಗೆ ತಮ್ಮ ಹೆಸರು ಇಟ್ಟುಕೊಳ್ಳುವುದಕ್ಕೆ ಇರುವ ಉತ್ಸಾಹ, ಆಸಕ್ತಿ, ಬಡ ಕುಟುಂಬಗಳ ಮಹಿಳೆಯರು, ಶಿಶುಗಳ ಪ್ರಾಣ ಉಳಿಸುವ ಮೂಲಸೌಕರ್ಯ ಒದಗಿಸುವಲ್ಲಿ ಏಕಿಲ್ಲ? ಜಾಹೀರಾತುಗಳಲ್ಲಿ ಗ್ಯಾರೆಂಟಿ ಸರ್ಕಾರ, ನುಡಿದಂತೆ ನಡೆದ ಸರ್ಕಾರ, ಬಡವರ ಪರವಾದ ಸರ್ಕಾರ ಅಂತ ಬಿಂಬಿಸಿಕೊಳ್ಳುವ ನೀವು, ವಾಸ್ತವದಲ್ಲಿ ಸಾವಿನ ಸರಣಿಯಲ್ಲಿ ಕರ್ನಾಟಕವನ್ನು ನಂಬರ್ 1 ಮಾಡುತ್ತಿದ್ದೀರಿ. ಇನ್ನಾದರೂ ಆಡಳಿತ ಯಂತ್ರವನ್ನು ಎಚ್ಚರಿಸಿ ಅಗತ್ಯ ಸೌಲಭ್ಯಗಳನ್ನು ಒದಗಿಸಿ. ಇಲ್ಲದಿದ್ದರೆ ಮಕ್ಕಳನ್ನು ಕಳೆದುಕೊಂಡ ತಾಯಂದಿರ ಶಾಪ ನಿಮ್ಮ ಸರ್ಕಾರವನ್ನು ಸುಟ್ಟು ಭಸ್ಮ ಮಾಡುವುದು ನಿಶ್ಚಿತ. - ಆರ್ ಅಶೋಕ್, ವಿಧಾನಸಭೆ ವಿಪಕ್ಷ ನಾಯಕ #mirror #deteriorated #public #health #system #RAshok #malgudiexpress #malgudinews #news #TopNews
📜ಪ್ರಚಲಿತ ವಿದ್ಯಮಾನ📜 - ShareChat
#📜ಪ್ರಚಲಿತ ವಿದ್ಯಮಾನ📜 ನಮ್ಮ ಪ್ರತಿಭೆಗಳು ದೆಹಲಿಯಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಿರುವುದು ಸಂತಸದ ವಿಷಯ: ಕೆ.ಸುಧಾಕರ್ ನಮ್ಮ ಅವಿಭಜಿತ ಕೋಲಾರ - ಚಿಕ್ಕಬಳ್ಳಾಪುರ ಜಿಲ್ಲೆಗಳು ದೇಶದ ಆಡಳಿತ, ನ್ಯಾಯಾಂಗ, ಸಾಹಿತ್ಯ ಮತ್ತು ಪತ್ರಿಕೋದ್ಯಮ ಕ್ಷೇತ್ರಗಳಿಗೆ ನೀಡಿರುವ ಕೊಡುಗೆ ಅನನ್ಯವಾದದ್ದು. ಒಂದು ಕಾಲದಲ್ಲಿ ಆಡಳಿತ ಸೇವೆ ಎಂದರೆ ಅದು 'ಕೋಲಾರ ಅಡ್ಮಿನಿಸ್ಟ್ರೇಟಿವ್ ಸರ್ವಿಸ್' (KAS) ಎನ್ನುವಷ್ಟರ ಮಟ್ಟಿಗೆ ನಮ್ಮ ಬಯಲುಸೀಮೆ ಭಾಗದ ಪ್ರತಿಭೆಗಳು ದೇಶದಾದ್ಯಂತ ಹೆಸರು ಮಾಡಿದ್ದವು. ಆ ಭವ್ಯ ಪರಂಪರೆಯನ್ನು ಮುಂದುವರಿಸುತ್ತಾ, ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ನೀಲಟೂರು ಗ್ರಾಮದ ಒಂದು ಸಾಮಾನ್ಯ ಕೃಷಿ ಕುಟುಂಬದಿಂದ ಬಂದ ಶಿಕ್ಷಕರ ಮಗ ಡಾ. ಕೆ.ಎಸ್. ಸೋಮಶೇಖರ್ ಅವರು ಈಗ ದೇಶದ ಶಾಸಕಾಂಗದ ಮೇಲ್ಮನೆಯಾದ ರಾಜ್ಯಸಭೆಯ ಕಾರ್ಯದರ್ಶಿಯಾಗಿ ನೇಮಕಗೊಂಡಿರುವುದು ನಮಗೆಲ್ಲರಿಗೂ ಅತ್ಯಂತ ಹೆಮ್ಮೆಯ ಸಂಗತಿ. ಕನ್ನಡ ಸೇರಿದಂತೆ ಪಂಚಭಾಷೆಗಳಲ್ಲಿ ಪರಿಣತಿ ಹೊಂದಿರುವ, ಸಾಹಿತ್ಯದಲ್ಲಿ ಡಾಕ್ಟರೇಟ್ ಪಡೆದಿರುವ ಸೋಮಶೇಖರ್ ಅವರು, ಕಳೆದ ಮೂರು ದಶಕಗಳಿಂದ ಸಂಸತ್ತಿನ ವಿವಿಧ ಆಡಳಿತಾತ್ಮಕ ಹುದ್ದೆಗಳಲ್ಲಿ ಅಪಾರ ಅನುಭವ ಹೊಂದಿದ್ದಾರೆ. ಅಂತರರಾಷ್ಟ್ರೀಯ ವೇದಿಕೆಗಳಲ್ಲಿ ಭಾರತವನ್ನು ಪ್ರತಿನಿಧಿಸಿರುವ ಇವರು, ಇಂದು ರಾಜ್ಯಸಭೆಯ ಕಾರ್ಯದರ್ಶಿಯಂತಹ ಉನ್ನತ ಜವಾಬ್ದಾರಿಯನ್ನು ವಹಿಸಿಕೊಳ್ಳುವ ಮೂಲಕ ಅವಿಭಜಿತ ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲೆಗಳ ಹಾಗೂ ಕರ್ನಾಟಕದ ಕೀರ್ತಿಯನ್ನು ರಾಷ್ಟ್ರ ಮಟ್ಟದಲ್ಲಿ ಮತ್ತಷ್ಟು ಎತ್ತರಿಸಿದ್ದಾರೆ. ನಮ್ಮ ಮಣ್ಣಿನ ಪ್ರತಿಭೆಗಳು ದೆಹಲಿಯ ರಾಜಕೀಯ ಮತ್ತು ಆಡಳಿತದ ಶಕ್ತಿಕೇಂದ್ರಗಳಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಿರುವುದು ಸಂತಸದ ವಿಷಯ. ಡಾ. ಕೆ.ಎಸ್. ಸೋಮಶೇಖರ್ ಅವರ ಮುಂದಿನ ಅಧಿಕಾರಾವಧಿ ಯಶಸ್ವಿಯಾಗಲಿ, ಅವರ ಅನುಭವದಿಂದ ದೇಶದ ಸಂಸದೀಯ ವ್ಯವಸ್ಥೆಗೆ ಮತ್ತಷ್ಟು ಬಲ ಸಿಗಲಿ ಎಂದು ಈ ಮೂಲಕ ಹಾರೈಸುತ್ತೇನೆ. - ಡಾ.ಕೆ.ಸುಧಾಕರ್, ಸಂ‌ಸದ #matter #joy #talents #playing #crucial #role #Delhi #KSudhakar #malgudiexpress #malgudinews #news #TopNews
📜ಪ್ರಚಲಿತ ವಿದ್ಯಮಾನ📜 - ShareChat
#📜ಪ್ರಚಲಿತ ವಿದ್ಯಮಾನ📜 ಸರ್ವಜನಾಂಗದ ಶಾಂತಿಯ ತೋಟವೇ ನಮ್ಮ ಗುರಿ: ಸಿದ್ದರಾಮಯ್ಯ ಹಾವೇರಿ: ದೇವರು ವಿಶ್ವವ್ಯಾಪಿ, ದೇವನೊಬ್ಬ ನಾಮ ಹಲವು. ನಮ್ಮ ನಾಡು ಬುದ್ಧ, ಬಸವ, ಗಾಂಧಿ, ಅಂಬೇಡ್ಕರ್ ಕಂಡಂತೆ ಸರ್ವಜನಾಂಗದ ಶಾಂತಿಯ ತೋಟವಾಗಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲ್ಲೂಕಿನ ನಿಟ್ಟೂರು ಗ್ರಾಮದಲ್ಲಿ ಆಯೋಜಿಸಲಾಗಿದ್ದ ಶ್ರೀ ಬೀರೇಶ್ವರ ಸ್ವಾಮಿ ದೇವಸ್ಥಾನದ 50ನೇ ವರ್ಷದ ಸುವರ್ಣ ಮಹೋತ್ಸವ ಹಾಗೂ ಶ್ರೀ ಭಕ್ತ ಕನಕದಾಸರ ಮಹಾದ್ವಾರದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡುತ್ತಿದ್ದರು. ಸಾಮರಸ್ಯಕ್ಕೆ ಸಾಕ್ಷಿಯಾದ ನಿಟ್ಟೂರು: ಕೇವಲ 13 ಕುರುಬ ಸಮುದಾಯದ ಕುಟುಂಬಗಳಿರುವ ನಿಟ್ಟೂರು ಗ್ರಾಮದಲ್ಲಿ ಇಷ್ಟು ಭವ್ಯವಾಗಿ ಬೀರಲಿಂಗೇಶ್ವರನ ಸುವರ್ಣ ಮಹೋತ್ಸವ ನಡೆಯುತ್ತಿರುವುದು ಇಲ್ಲಿನ ಕೋಮು ಸೌಹಾರ್ದತೆಗೆ ಹಿಡಿದ ಕನ್ನಡಿಯಾಗಿದೆ ಅವರು ಸಿಎಂ ಬಣ್ಣಿಸಿದರು. ಸೈದ್ಧಾಂತಿಕವಾಗಿ ಭಿನ್ನಾಭಿಪ್ರಾಯಗಳಿದ್ದರೂ ಮನುಷ್ಯ ಮನುಷ್ಯನನ್ನು ಪ್ರೀತಿಸಬೇಕು. ಆಗ ಮಾತ್ರ ಮಾನವ ಸಮಾಜ ನಿರ್ಮಾಣ ಸಾಧ್ಯ ಎಂದು ಅವರು ಕಿವಿಮಾತು ಹೇಳಿದರು. ಸಂವಿಧಾನ ಮತ್ತು ವೈಚಾರಿಕತೆಯ ಸಂದೇಶ: ತಮ್ಮ ಭಾಷಣದುದ್ದಕ್ಕೂ ಬಸವಣ್ಣ ಮತ್ತು ಕನಕದಾಸರ ತತ್ವಗಳನ್ನು ಪ್ರಸ್ತಾಪಿಸಿದ ಮುಖ್ಯಮಂತ್ರಿಗಳು, ಸಮಾಜಕ್ಕೆ ಕೆಲವು ಪ್ರಮುಖ ವಿಚಾರಗಳನ್ನು ನೆನಪಿಸಿದರು. ಮೂಢನಂಬಿಕೆ ಬೇಡ: ದೇವರ ಪೂಜೆ ಮಾಡಿ, ಆದರೆ ಮೂಢನಂಬಿಕೆಗಳನ್ನು ಬಿಡಿ. ಬಸವಣ್ಣನವರು ಕರ್ಮ ಸಿದ್ಧಾಂತವನ್ನು ತಿರಸ್ಕರಿಸಿದ್ದನ್ನು ನಾವು ಮರೆಯಬಾರದು ಎಂದರು. ಶಿಕ್ಷಣ ಮತ್ತು ಜಾತಿ: ದುರಂತವೆಂದರೆ ಉನ್ನತ ವಿದ್ಯೆ ಕಲಿತವರೇ ಜಾತಿ ವ್ಯವಸ್ಥೆಯನ್ನು ಪೋಷಿಸುತ್ತಿದ್ದಾರೆ. ಇದು ಬದಲಾಗಬೇಕು ಎಂದು ವಿಷಾದ ವ್ಯಕ್ತಪಡಿಸಿದರು. ಸಾಂಸ್ಕೃತಿಕ ನಾಯಕ: ಬಸವಣ್ಣನವರನ್ನು ರಾಜ್ಯದ 'ಸಾಂಸ್ಕೃತಿಕ ನಾಯಕ' ಎಂದು ಘೋಷಿಸಿರುವ ಸರ್ಕಾರ, ಅವರ 'ಇವ ನಮ್ಮವ' ಎನ್ನುವ ತತ್ವದ ಹಾದಿಯಲ್ಲೇ ಸಾಗುತ್ತಿದೆ ಎಂದು ತಿಳಿಸಿದರು. ಅಭಿವೃದ್ಧಿ ಮಂತ್ರ ಹಾಗೂ ಬರ ಮುನ್ನೆಚ್ಚರಿಕೆ: ಬರೀ ಸಿದ್ಧಾಂತ ಮಾತ್ರವಲ್ಲದೆ, ಕ್ಷೇತ್ರದ ಅಭಿವೃದ್ಧಿಯ ಬಗ್ಗೆಯೂ ಸಿಎಂ ಭರವಸೆ ನೀಡಿದರು. ಅನುದಾನ ಘೋಷಣೆ: ರಾಣೇಬೆನ್ನೂರಿನ ವರ್ತುಲ ರಸ್ತೆ (Ring Road) ಹಾಗೂ ಸಮುದಾಯ ಭವನ ನಿರ್ಮಾಣಕ್ಕೆ ಅಗತ್ಯ ಅನುದಾನ ನೀಡುವುದಾಗಿ ಘೋಷಿಸಿದರು. ಕುಡಿಯುವ ನೀರು: ಈ ಬಾರಿ ಮಳೆ ಕೊರತೆಯ ಮುನ್ಸೂಚನೆ ಇರುವುದರಿಂದ, ಜನರಿಗೆ ಕುಡಿಯುವ ನೀರಿನ ತೊಂದರೆಯಾಗದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು. ಧರ್ಮದ ಮೂಲವೇ ದಯೆ: ಇಸ್ಲಾಂ, ಹಿಂದೂ ಅಥವಾ ಕ್ರಿಶ್ಚಿಯನ್ ಯಾವುದೇ ಧರ್ಮವಿರಲಿ, ಎಲ್ಲವೂ ಬೋಧಿಸುವುದು ಪ್ರೀತಿಯನ್ನು ಮಾತ್ರ. ದಯವೇ ಧರ್ಮದ ಮೂಲವಯ್ಯ ಎಂಬ ಬಸವಣ್ಣನವರ ನುಡಿಯಂತೆ ನಾವೆಲ್ಲರೂ ಬದುಕಬೇಕಿದೆ ಎಂದರು. ಕಾರ್ಯಕ್ರಮದಲ್ಲಿ ಸ್ಥಳೀಯ ಮುಖಂಡರು, ವಿವಿಧ ಜಿಲ್ಲೆಗಳಿಂದ ಆಗಮಿಸಿದ ಸಾವಿರಾರು ಭಕ್ತಾದಿಗಳು ಹಾಗೂ ಜನಪ್ರತಿನಿಧಿಗಳು ಉಪಸ್ಥಿತರಿದ್ದರು. #goal #garden #peace #Siddaramaiah #malgudiexpress #malgudinews #news #TopNews
📜ಪ್ರಚಲಿತ ವಿದ್ಯಮಾನ📜 - ShareChat
#📜ಪ್ರಚಲಿತ ವಿದ್ಯಮಾನ📜 ಭಾರತ ಕಲ್ಯಾಣ ರಾಷ್ಟ್ರವಾಗಲು ಅಂಬೇಡ್ಕರರ ವಿಚಾರಗಳನ್ನು ಅಳವಡಿಸಿಕೊಳ್ಳಬೇಕು: ಕೆ.ವೈ.ನಾರಾಯಣಸ್ವಾಮಿ ಬೆಂಗಳೂರು: ಭಾರತದ ಪ್ರಜಾಪ್ರಭುತ್ವವನ್ನು ಉತ್ತಮಗೊಳಿಸಿಕೊಳ್ಳಲು, ಜನಮುಖಿಯಾದ ಸರ್ವರ ಕಲ್ಯಾಣ ರಾಷ್ಟ್ರವಾಗಿಸಲು ಬಾಬಾ ಸಾಹೇಬ್ ಅಂಬೇಡ್ಕರರ ವಿಚಾರಗಳನ್ನು ಅಳವಡಿಸಿಕೊಳ್ಳಬೇಕು ಎಂದು ಖ್ಯಾತ ನಾಟಕಕಾರರೂ ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾಲಯದ ಉಪಕುಲಪತಿ ಡಾ. ಕೆ.ವೈ. ನಾರಾಯಣಸ್ವಾಮಿ ಅಭಿಪ್ರಾಯಪಟ್ಟರು. ಸರ್ಕಾರಿ ಕಲಾ ಕಾಲೇಜಿನಲ್ಲಿ ಏರ್ಪಡಿಸಿದ್ದ ಡಾ. ಬಿ.ಆರ್. ಅಂಬೇಡ್ಕರ್ ಅವರ ೧೩೫ನೇ ಜಯಂತಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಭಾರತ ಕಲ್ಯಾಣ ರಾಷ್ಟ್ರವಾಗಲು ಯುವ ತಲೆಮಾರನ್ನು ತಯಾರುಮಾಡಲು ಪ್ರಾಥಮಿಕ ಶಿಕ್ಷಣದಿಂದಲೇ ಅಂಬೇಡ್ಕರರ ವಿಚಾರಧಾರೆಗಳು ಮನಮುಟ್ಟುವಂತ ಶಿಕ್ಷಣ ಕ್ರಮವನ್ನು ರೂಪಿಸಬೇಕು ಎಂದು ಕರೆನೀಡಿದರು. ಅಂಬೇಡ್ಕರ್ ಅವರನ್ನು ಕೇವಲ ವ್ಯಕ್ತಿಯಾಗಿ ನೋಡದೆ ನಮ್ಮ ದೇಶವನ್ನು ಸದೃಢಗೊಳಿಸುವ ನಿಟ್ಟಿನಲ್ಲಿ ಬಾಬಾಸಾಹೇಬರ ವಿಚಾರಗಳನ್ನು ಯುವ ಸಮುದಾಯಕ್ಕೆ ತಲುಪಿಸಬೇಕಾಗಿದೆ. ಆದ್ದರಿಂದ ಶಿಕ್ಷಣವೇ ಅಂಬೇಡ್ಕೀಕರಣವಾಗಬೇಕು ಎಂದು ಪ್ರತಿಪಾದಿಸಿದರು. ಅಂಬೇಡ್ಕರ್ ಅವರನ್ನು ಆಚೆಯಿಡುವ ಪ್ರಯತ್ನಗಳು ನಡೆಯುತ್ತಿರುವ ಬಗೆಗೆ ಆತಂಕವನ್ನು ವ್ಯಕ್ತಪಡಿಸಿದ ಅವರು, ಯುವ ಜನತೆಯು ಅಂಬೇಡ್ಕರರ ವಿಚಾರಧಾರೆಗಳ ಹಿನ್ನೆಲೆಯಲ್ಲಿ ನಡೆದು ರಾಷ್ಟ್ರವನ್ನು ಕಲ್ಯಾಣ ರಾಷ್ಟ್ರವನ್ನಾಗಿ ಕಟ್ಟಬೇಕೆಂದು ಕರೆನೀಡಿದರು. ಭಾರತದ ಭವಿಷ್ಯದ ದಾರಿ ಮತ್ತು ಬೆಳಕು ಅಂಬೇಡ್ಕರರ ವಿಚಾರಧಾರೆಗಳ ಮೇಲಿದೆಯೆಂದು ಬಲವಾಗಿ ಪ್ರತಿಪಾದಿಸಿದರು. ಸರ್ಕಾರಿ ಕಲಾ ಕಾಲೇಜಿನ ಪ್ರಾಂಶುಪಾಲ ಡಾ. ಬಿ.ಸಿ. ನಾಗೇಂದ್ರಕುಮಾರ್ ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ, ಕಲುಷಿತಗೊಳ್ಳುತ್ತಿರುವ ಸಮಕಾಲೀನ ಸಮಾಜಕ್ಕೆ ಅಂಬೇಡ್ಕರರ ವಿಚಾರಧಾರೆಗಳು ಪರಿಹಾರೋಪಾಯಗಳಾಗಿವೆ ಎಂದು ತಿಳಿಸಿದರು. ವಿಚಾರಧಾರೆಗಳು ಕಲಾತ್ಮಕವಾಗಿ ಮೂಡಿದಾಗ ಹೆಚ್ಚು ಪರಿಣಾಕಾರಿಯಾಗಿರುತ್ತವೆ. ಡಾ. ಕೆ.ವೈ. ನಾರಾಯಣ ಸ್ವಾಮಿಯವರು ವರ್ಣ ಪಲ್ಲಟ ನಾಟಕದಲ್ಲಿ ಅಂಬೇಡ್ಕರರ ವಿಚಾರಧಾರೆಗಳನ್ನು ಕಲಾತ್ಮಕಗೊಳಿಸಿದ್ದಾರೆಂದು ಪ್ರಶಂಸೆ ವ್ಯಕ್ತಪಡಿಸಿದರು. ಕನ್ನಡ ಸಂಘದ ಸಂಚಾಲಕ ಡಾ. ರುದ್ರೇಶ್ ಅದರಂಗಿ ನಿರೂಪಿಸಿದರು. ಅಂಬೇಡ್ಕರ್ ಅಧ್ಯಯನ ಕೇಂದ್ರದ ಸಂಚಾಲಕ ಡಾ. ಚಲುವರಾಜು ಸ್ವಾಗತಿಸಿದರು. ಐ.ಕ್ಯು.ಎ.ಸಿ. ಸಂಚಾಲಕ ಡಾ. ನಾಗೇಶ ಜಿ., ಕೆಜಿಸಿಟಿಎ ಕಾರ್ಯದರ್ಶಿ ಡಾ. ನಾರಾಯಣ ಹೆಚ್.ಜಿ., ಅಧ್ಯಾಪಕಿಯರಾದ ಡಾ. ನಾಜಿಯ ಒಬೇದ್ ಹಾಗೂ ಡಾ. ಸುಮ ಡಿ ಅವರು ಉಪಸ್ಥಿತರಿದ್ದರು. ಅನಾವರಣ ತಂಡದವರು ಶಶಿಧರ್ ಭಾರಿಘಾಟ್ ನಿರ್ದೇಶನದಲ್ಲಿ ಡಾ. ಕೆ.ವೈ. ನಾರಾಯಣ ಸ್ವಾಮಿಯವರ ವರ್ಣ ಪಲ್ಲಟ ನಾಟಕವನ್ನು ಪ್ರದರ್ಶಿಸಿದರು. ವಿದ್ಯಾರ್ಥಿಗಳು ನಾಟಕವನ್ನು ವೀಕ್ಷಿಸಿ ಸಂವಾದದಲ್ಲಿ ಭಾಗವಹಿಸಿದ್ದರು. #make #India #welfare #nation #Ambedkar #ideas #adopted #KYNarayanaswamy #malgudiexpress #malgudinews #news #TopNews
📜ಪ್ರಚಲಿತ ವಿದ್ಯಮಾನ📜 - ShareChat
#📜ಪ್ರಚಲಿತ ವಿದ್ಯಮಾನ📜 Modi is confident that he can capture the Delimitation Commission too: Rahul Gandhi One of the BJP's dangerous plans is to “gerrymander” all Lok Sabha seats to its advantage for the 2029 elections. The proposed Bills remove all Constitutional safeguards on delimitation, giving full power to the Delimitation Commission which the govt itself will appoint and direct. We have seen how BJP does this - it hijacked delimitation in Assam and Jammu and Kashmir, where it split up anti-BJP regions and communities for electoral advantage. As a result, - some seats have 25 lakh voters, while some have only 8 lakh - some seats have 12 Vidhan Sabha segments, while some have only 6 - ⁠some seats are broken into pieces without connection, sometimes divided by rivers or mountains Having captured the Election Commission, PM Modi is confident that he can capture the Delimitation Commission too. The Congress will not allow this to happen. Delimitation should be based on a transparent policy framework, developed after wide consultations with a consensus. Indians of all communities and States should feel confident that they will be represented and their voices will be heard. This is the only way forward to protect and strengthen our democracy. - Rahul Gandhi, Leader of the Opposition, Lokasabha #Modi #confident #capture #DelimitationCommission #Rahul Gandhi #malgudiexpress #malgudinews #news #TopNews
📜ಪ್ರಚಲಿತ ವಿದ್ಯಮಾನ📜 - ShareChat
#📜ಪ್ರಚಲಿತ ವಿದ್ಯಮಾನ📜 ಅಳವು ಅರಿಯದ ಭಾಷೆ - ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ ತುಮಕೂರು ವಿಶ್ವವಿದ್ಯಾಲಯದಲ್ಲಿ ಪ್ರಾಧ್ಯಾಪಕರಾಗಿರುವ ಮತ್ತು ಕನ್ನಡದ ಲೇಖಕರೂ ಆಗಿರುವ ನಿತ್ಯಾನಂದ ಬಿ ಶೆಟ್ಟಿಯವರು ಒಂದು ಅದ್ಭುತವಾದ ಪುಸ್ತಕ ಬರೆದಿದ್ದಾರೆ.ಆ ಕೃತಿಯ ಹೆಸರು ಆಳವು ಅರಿಯದ ಭಾಷೆ - ಕಲೆ,ಸಮಾಜ, ಇತಿಹಾಸ. ಒಂದು ಕಾದಂಬರಿಯಂತೆ, ಕುತೂಹಲ ಹುಟ್ಟಿಸುತ್ತ ಓದಿಸಿಕೊಂಡು ಹೋಗುವ ಇಂತಹ ಒಂದು ಸಂಶೋಧನಾ ಕೃತಿ ಕನ್ನಡದಲ್ಲಂತೂ ಪ್ರಾಯಶಃ ಇದೇ ಮೊದಲು. ಓದು-ಬರಹ ಬಲ್ಲ ಸಾಮಾನ್ಯರಿಂದ ತೊಡಗಿ, ಮಹಾನ್ ಪಂಡಿತರನ್ನೂ ಏಕಕಾಲಕ್ಕೆ ಆವರಿಸಬಲ್ಲ ಪುಸ್ತಕ ಇದು.‌ ಈ ಪುಸ್ತಕದ ಪ್ರತಿಯೊಂದು ಪದ, ಪ್ರತಿ ಸಾಲು ಓದುಗರನ್ನು ಹೇಗೆ ಹಿಡಿದಿಡುತ್ತದೆಯೆಂದರೆ ಇದನ್ನು ಒಮ್ಮೆ ಓದಲು ತೊಡಗಿದರೆ ನಾವು ಪುಸ್ತಕದ ಗುಂಗಿನಲ್ಲೇ ಇರುತ್ತೇವೆ. ಒಂದು ಬೃಹತ್ ಕಾದಂಬರಿಯಾಗುವ, ನಾಟಕವೂ ಆಗುವ, ಸಿನಿಮಾವೂ ಆಗಬಲ್ಲ ಸಮೃದ್ಧವಾದ ವಸ್ತುವನ್ನು ಇದು ಹೊಂದಿದೆ.ಕಲೆ, ಸಮಾಜ ಮತ್ತು ಇತಿಹಾಸದ ಎಲ್ಲಾ ಆಯಾಮಗಳನ್ನು ಒಂದೇ ಕೃತಿಯಲ್ಲಿ ಅಳವಡಿಸುವ ಮೂಲಕ ತನ್ನ ಮೇಧಾವಿತನವನ್ನು ಇಲ್ಲಿ ನಿತ್ಯಾನಂದ ಬಿ ಶೆಟ್ಟಿಯವರು ವಿಶಾಲವಾಗಿ ತೆರೆದಿಟ್ಟಿದ್ದಾರೆ. ಯಾವುದರ ಬಗೆಗೂ ತೀರ್ಮಾನ ಕೊಡದೆ, ಓದುಗರೇ ನಿರ್ಧಾರಕ್ಕೆ ಬರುವಂತೆ ಯಕ್ಷಗಾನವೆಂಬ ವಸ್ತುವನ್ನು ಪ್ರಧಾನವಾಗಿ ಮುಂದಿಟ್ಟು ಅದರ ಸುತ್ತಮುತ್ತಲಿನ ವಿಚಾರಗಳು, ಕಳೆದ 150 ವರ್ಷಗಳಿಂದ ಯಕ್ಷಗಾನ ಬೆಳೆದು ಬಂದ ರೀತಿಯನ್ನು ಕಣ್ಣಿಗೆ ಕಟ್ಟುವಂತೆ ವಿವರಿಸಿರುವುದು ಅತ್ಯಂತ ರೋಮಾಂಚನಕಾರಿಯಾಗಿದೆ. ಒಂದು ಕಾಲದಲ್ಲಿ ಬಹಳ ಪ್ರಸಿದ್ಧರಾದ ಕಲಾವಿದರು ಮುಸ್ಲಿಂ ಮತ್ತು ಕ್ರಿಶ್ಚಿಯನ್ ಸಮುದಾಯದಿಂದಲೂ ಬಂದಿದ್ದರು ಎಂಬುದನ್ನು ಇಲ್ಲಿ ಓದಿ ತಿಳಿದಾಗಲೇ ಬಹಳ ಆಶ್ಚರ್ಯವಾಯಿತು. ಯಾಕೆಂದರೆ ಅದನ್ನು ಇವತ್ತಿನ ಧರ್ಮ ರಾಜಕಾರಣದ ಸಂಕೀರ್ಣತೆಯಲ್ಲಿ ಊಹೆ ಮಾಡಲು ಕೂಡ ಸಾಧ್ಯವಿಲ್ಲ. ಯಕ್ಷಗಾನದ ಈಗಿನ ವಾತಾವರಣದಲ್ಲಿ ಇನ್ನೊಬ್ಬ ಜಬ್ಬಾರ್ ಸುಮೋನಂತಹ ಕಲಾವಿದ ಹುಟ್ಟಲು ಸಾಧ್ಯವೇ ಎಂಬ ಪ್ರಶ್ನೆಯೂ ಈ ಪುಸ್ತಕವನ್ನು ಓದುವಾಗ ಹುಟ್ಟಿಕೊಳ್ಳುತ್ತದೆ. ಇಂದು ಯಕ್ಷಗಾನವನ್ನು ಬಿಜೆಪಿ ಪಕ್ಷದ ಪ್ರಚಾರಕ್ಕೆ ಬಳಸಿಕೊಂಡು, ಕೋಮುವಾದಿ ವಿಚಾರಗಳನ್ನು ಪ್ರಸ್ತಾಪಿಸುತ್ತ, ಅಲ್ಪಸಂಖ್ಯಾತರನ್ನು ಅತ್ಯಂತ ತುಚ್ಛವಾಗಿ ಅವಮಾನಿಸುತ್ತಾ, ಜನರಲ್ಲಿ ಮುಸ್ಲಿಂ ದ್ವೇಷ ಹುಟ್ಟುವಂತೆ ಕೋಮುವಾದಿ ಶಕ್ತಿಗಳು ಹೂಡಿದ ರಣತಂತ್ರಗಳನ್ನು ಈ ಪುಸ್ತಕ ಎಳೆಎಳೆಯಾಗಿ ವಿವರಿಸುತ್ತದೆ. ಸೌಹಾರ್ದತೆಯನ್ನು ಸಾರುವ ಕಲೆಯಾಗಿದ್ದ ಯಕ್ಷಗಾನದಲ್ಲಿ ಕೋಮುವಾದಿ ವಿಚಾರಗಳನ್ನು ಮುಂದಿಟ್ಟು ಕಲೆಗೆ ಕಳಂಕವನ್ನುಂಟು ಮಾಡಿದ ಕುಂಬ್ಳೆ ಸುಂದರರಾಯರ ವ್ಯಕ್ತಿತ್ವ, ಬಳಿಕ ಅವರ ಆತ್ಮಕಥೆಯಲ್ಲಿ ಅವರಾಡಿದ ವಿಷಾದದ ಮಾತುಗಳು, ಸಂಘಪರಿವಾರದ use & throw (ಬಳಸು ಮತ್ತು ಬಿಸಾಕು) ಎಂಬ ಕುತಂತ್ರ ಎಲ್ಲವೂ ಇಲ್ಲಿ ಚರ್ಚೆಗೆ, ವಿಶ್ಲೇಷಣೆಗೆ ಒಳಗಾಗಿದೆ. ಸಂಘಪರಿವಾರ ಪ್ರಜ್ಞಾಪೂರ್ವಕವಾಗಿ ಯಕ್ಷಗಾನದಂತಹ ಕಲೆಯಲ್ಲೂ ತನ್ನ ಗುಪ್ತಾ ಅಜೆಂಡಾವನ್ನು ಪಸರಿಸುವ ಮೂಲಕ ಎಷ್ಟೊಂದು ವ್ಯಾಪಕತೆ ಪಡೆದಿದೆ ಎಂಬುದನ್ನು ಇತ್ತೀಚಿನ ಚುನಾವಣೆಯ ಸಂದರ್ಭದಲ್ಲಿ ನಳಿನ್ ಕುಮಾರ್ ಕಟೀಲುರವರು ಆಡಿದ ಮಾತುಗಳನ್ನು ಇಲ್ಲಿ ಲೇಖಕರು ಉಲ್ಲೇಖಿಸಿ ಓದುಗರಿಗೆ ಮನದಟ್ಟು ಮಾಡಿಸುತ್ತಾರೆ. ಇಂತಹ ಅದ್ಭುತ ಕೃತಿಗೆ ಪೂರಕ ಮಾತುಗಳನ್ನು ಆಡಿದ್ದಲ್ಲದೆ ಇದಕ್ಕೆ ಪ್ರತಿಕ್ರಿಯೆ ಬರೆದ 8 ಮಂದಿ ವಿವಿಧ ಕ್ಷೇತ್ರಗಳ ವಿದ್ವಾಂಸರ ವಿಮರ್ಶಾತ್ಮಕ ಮಾತುಗಳು ಈ ಕೃತಿಗೆ ಮತ್ತಷ್ಟು ಶಕ್ತಿಯನ್ನು ತುಂಬಿದೆ‌. ಅದರಲ್ಲೂ ಕವಿ ಮತ್ತು ರಂಗ ನಿರ್ದೇಶಕರಾದ ರಘುನಂದನರವರ ಸವಿವರವಾದ ಜಾಗತಿಕ ವಿಶ್ಲೇಷಣೆಯು ಹಲವು ಆಯಾಮಗಳನ್ನು ವಿವರಿಸುತ್ತಾ, ಯಕ್ಷಗಾನದೊಳಗೆ ಫ್ಯಾಸಿಸಂ ಇಣುಕುವ ಅಪಾಯ,ಅದೇ ಫ್ಯಾಸಿಸಂ ಜಗತ್ತಿನ ವಿದ್ಯಮಾನವನ್ನು ಅಲ್ಲೋಲ ಕಲ್ಲೋಲ ಮಾಡಿದ ಪ್ರಸಂಗಗಳನ್ನು ಉದಾಹರಣೆ ಸಮೇತವಾಗಿ ವಿವರಿಸಿದ್ದಾರೆ. ಪ್ರಸ್ತುತ ಜಗತ್ತಿನಲ್ಲಿ ನಡೆಯುತ್ತಿರುವ ಯುದ್ಧ ಹಾಗೂ ಇಸ್ರೇಲ್ ಪ್ಯಾಲೆಸ್ಟೈನ್ ನ ಮೇಲೆ ನಡೆಸಿರುವ ಭೀಕರ ಧಾಳಿಯ ಭಯಾನಕತೆಯನ್ನು ಬಿಚ್ಚಿಟ್ಟಿದ್ದಾರೆ. ಒಟ್ಟಿನಲ್ಲಿ ಯಕ್ಷಗಾನವೆಂಬ ಕಲೆ ಈ ಕೃತಿಯ ಪ್ರಧಾನ ವಸ್ತುವಾಗಿದ್ದರೂ, ಅದರಾಚೆಗಿರುವ ಹತ್ತು ಹಲವು ವಿಚಾರಗಳನ್ನು ತರುವ ಮೂಲಕ ಇಡೀ ಪುಸ್ತಕವನ್ನು ಜಾಗತಿಕ ವಿದ್ಯಮಾನಗಳ ಹಿನ್ನೆಲೆಯಲ್ಲಿ ಓದುವಂತೆ ಲೇಖಕರು ಮಾಡಿದ್ದಾರೆ. ಓದುಗರನ್ನು ಆಳವಾಗಿ ಯೋಚಿಸುವಂತೆ ಮಾಡುವ, ಆತ್ಮಾವಲೋಕನ ಮಾಡುವಂತೆ ಪ್ರಚೋದಿಸುವ ಈ ಪುಸ್ತಕದ ಬರಹದ ಶೈಲಿ ಅಪೂರ್ವವಾದುದು.‌ ಈ ಪುಸ್ತಕವನ್ನು ಓದಿ ಮುಗಿಸಿದಾಗ ಓದುಗರಲ್ಲಿ ಹುಟ್ಟುವ ಭಾವನೆಗಳನ್ನು ವಿವರಿಸಲು ಸಾಧ್ಯವೇ ಇಲ್ಲ. ಹಾಗೆಯೇ, ಇಲ್ಲಿನ ಹೋರಾಟಗಾರರು ತಾವು ಸಾಗಿಬಂದ ದಾರಿಯನ್ನು ಮತ್ತೊಂದು ಸಲ ಪರಿಶೀಲಿಸುವಂತೆ ಮಾಡಿದ ಒತ್ತಾಯವೂ ಅರ್ಥವಾಗುತ್ತದೆ. ಇಂತಹ ಎಲ್ಲವೂ ಈ ಪುಸ್ತಕದಲ್ಲಿದೆ. ಕರಾವಳಿಯ ಹೆಮ್ಮೆಯ ಚಿಂತಕರೂ ಮತ್ತು ಬರಹಗಾರರೂ ಆದ ನಿತ್ಯಾನಂದ ಬಿ ಶೆಟ್ಟಿಯವರ ಈ ಪರಿಶ್ರಮವನ್ನು ಇಡೀ ಕರ್ನಾಟಕದ ಜನತೆ ಅಭಿನಂದಿಸಬೇಕಾಗಿದೆ.‌ - ಸುನಿಲ್ ಕುಮಾರ್ ಬಜಾಲ್, ಸಾಮಾಜಿಕ ಹೋರಾಟಗಾರ #language #knows #pain #proudest #work #TuluNadu #SunikumarBajal #malgudiexpress #malgudinews #news #TopNews
📜ಪ್ರಚಲಿತ ವಿದ್ಯಮಾನ📜 - ಸುದ್ರಿ ಬುಕ್ ಪ್ರಮೋಷನ್ & ನಖನ EXPRESS ಅಳವು ಅರಿಯದ ಭಾಷೆ ಅಳವು ಅರಿಯದ ಭಾಷೆ ತುಳುನಾಡಿನ ಅತ್ಯಂತ ಕಲೆ, ಸಮಾಜ; ಇತಿಹಾಸ  ಹೆಮ್ಮೆಯ ಕೃತಿ ಸುದ್ರಿ ಬುಕ್ ಪ್ರಮೋಷನ್ & ನಖನ EXPRESS ಅಳವು ಅರಿಯದ ಭಾಷೆ ಅಳವು ಅರಿಯದ ಭಾಷೆ ತುಳುನಾಡಿನ ಅತ್ಯಂತ ಕಲೆ, ಸಮಾಜ; ಇತಿಹಾಸ  ಹೆಮ್ಮೆಯ ಕೃತಿ - ShareChat