Malgudi Express
ShareChat
click to see wallet page
@news007
news007
Malgudi Express
@news007
Malgudi Express official Page
#📜ಪ್ರಚಲಿತ ವಿದ್ಯಮಾನ📜 ಲ್ಯಾಂಡ್ ಲಾರ್ಡ್ ಚಿತ್ರಕ್ಕೆ ಬೆಂಬಲ ನೀಡಿದ ಮುಖಂಡರಿಗೆ ಕೃತಜ್ಞತೆಗಳು: ದುನಿಯಾ ವಿಜಯ್ ಲ್ಯಾಂಡ್ ಲಾರ್ಡ್ ಚಿತ್ರಕ್ಕೆ ಬೆಂಬಲ ನೀಡಿದ ಸಿಎಂ ಹಾಗೂ ಡಿಎಸ್ಎಸ್ ಮುಖಂಡರಿಗೆ ಕೃತಜ್ಞತೆಗಳು: ದುನಿಯಾ ವಿಜಯ್ ನಮ್ಮ 'ಲ್ಯಾಂಡ್ ಲಾರ್ಡ್' ಸಿನಿಮಾಗೆ ತೆರಿಗೆ ವಿನಾಯಿತಿ ನೀಡುವಂತೆ ಕೋರಿ ಇಂದು ಗೌರವಾನ್ವಿತ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ ದಲಿತ ಸಂಘರ್ಷ ಸಮಿತಿಯ (DSS) ಹಿರಿಯ ಮುಖಂಡರಿಗೆ ನಮ್ಮ ಚಿತ್ರತಂಡದ ಪರವಾಗಿ ಹೃತ್ಪೂರ್ವಕ ಧನ್ಯವಾದಗಳು. ಈ ಸಂದರ್ಭದಲ್ಲಿ ನಮ್ಮ ಜೊತೆಗಿದ್ದ ಅಣ್ಣ ಮಾವಳ್ಳಿ ಶಂಕರ್, ಸುಬ್ಬು ಹೊಲೆಯಾರ್, ಗೊಲ್ಲಹಳ್ಳಿ ಶಿವಪ್ರಸಾದ್, ಹುಲಿಕುಂಟೆ ಮೂರ್ತಿ, ಚಂದ್ರು ತರಹುಣಸೆ, ರವಿಕುಮಾರ್ ಈಚಲಮರ,ಹರೀಶ್ ಭೈರಪ್ಪ, ಮುರಳಿ ಕಾಟಿ ಹಾಗೂ ವಿಜಯಕುಮಾರ್ ಸೋನಾರೆ ಅವರಿಗೆ ನಾವು ಸದಾ ಚಿರಋಣಿಯಾಗಿರುತ್ತೇವೆ. ಹಾಗು ಈ ಕಾರ್ಯ ನೆರವೇರಲು ಸಹಕರಿಸಿದ ಮುಖ್ಯಮಂತ್ರಿಗಳ ಮಾಧ್ಯಮ ಕಾರ್ಯದರ್ಶಿಗಳಾದ ಶ್ರೀ ಪ್ರಭಾಕರ್ ಅವರು ಹಾಗು ಮುಖ್ಯಮಂತ್ರಿಗಳ ಆಪ್ತ ಕಾರ್ಯದರ್ಶಿಗಳಾದ ಡಾ.ನೆಲ್ಕುಂಟೆ ವೆಂಕಟೇಶಯ್ಯ ಅವರನ್ನು ತುಂಬು ಹೃದಯದಿಂದ ನೆನೆಯುತ್ತೇವೆ. ನಮ್ಮ ಮನವಿಗೆ ಅತ್ಯಂತ ಸಕಾರಾತ್ಮಕವಾಗಿ ಸ್ಪಂದಿಸಿದ ಮುಖ್ಯಮಂತ್ರಿಗಳು, ತೆರಿಗೆ ವಿನಾಯಿತಿ ನೀಡುವ ಭರವಸೆ ನೀಡಿದ್ದಾರೆ. ಸರ್ಕಾರದ ಈ ನಡೆ ತಳಸಮುದಾಯಗಳ ಹಕ್ಕು ಮತ್ತು ಹೋರಾಟಗಳ ಕುರಿತು ಇನ್ನಷ್ಟು ಅರ್ಥಪೂರ್ಣ ಚಿತ್ರಗಳನ್ನು ಮಾಡಲು ನಮಗೆ ಹೊಸ ಹುರುಪು ನೀಡಿದೆ. ನಮಗೆ ಬೆಂಬಲವಾಗಿ ನಿಂತ ಮುಖ್ಯಮಂತ್ರಿಗಳಿಗೆ ಹಾಗೂ ಸಂಘಟನೆಯ ಎಲ್ಲಾ ನಾಯಕರಿಗೂ ನಮ್ಮ ಸಿನಿಮಾ ತಂಡ ಸದಾ ಕೃತಜ್ಞವಾಗಿರುತ್ತದೆ. ಸಿನಿಮಾ ಬಿಡುಗಡೆಯಾದಾಗಿನಿಂದ ನಮ್ಮೊಂದಿಗೆ ನಿಂತು ಜನರನ್ನು ಪ್ರೇರೇಪಿಸಿದ ಎಲ್ಲಾ ಸಂಘಟನೆಗಳಿಗೆ, ನಾಯಕರಿಗೆ, ಕಾರ್ಯಕರ್ತರಿಗೆ ತುಂಬು ಹೃದಯದ ಧನ್ಯವಾದಗಳನ್ನು ತಿಳಿಸುತ್ತೇವೆ. ಧನ್ಯವಾದಗಳೊಂದಿಗೆ, 'ಲ್ಯಾಂಡ್ ಲಾರ್ಡ್' ಚಿತ್ರತಂಡ. ಜೈ ಭೀಮ್! - ದುನಿಯಾ ವಿಜಯ್ #DuniyaVijay #thanks #leaders #supporting #film #Landlord #malgudiexpress #malgudinews #news #TopNews
📜ಪ್ರಚಲಿತ ವಿದ್ಯಮಾನ📜 - ShareChat
#📜ಪ್ರಚಲಿತ ವಿದ್ಯಮಾನ📜 ದ್ವೇಷ ಭಾಷಣ ನಿಯಂತ್ರಣ ಕಾಯ್ದೆಯನ್ನು ರಾಷ್ಟ್ರಪತಿಗಳ ಅಂಗಳಕ್ಕೆ ಕಳುಹಿಸಿದ ರಾಜ್ಯಪಾಲ ಬೆಂಗಳೂರು: ಗುಂಪು ಘರ್ಷಣೆ ಮತ್ತು ಕೋಮು ಸಂಘರ್ಷ ನಿಯಂತ್ರಿಸಬಹುದು ಎಂಬ ದೃಷ್ಟಿಯಿಂದ ರಾಜ್ಯ ಸರ್ಕಾರ ಜಾರಿಗೊಳಿಸಲು ಮುಂದಾಗಿದ್ದ ಮಹತ್ವಾಕಾಂಕ್ಷೆಯ ದ್ವೇಷ ಭಾಷಣ ನಿಯಂತ್ರಣ ಕಾಯ್ದೆಗೆ ಅಂಕಿತ ಹಾಕಲು ನಿರಾಕರಿಸಿರುವ ರಾಜ್ಯಪಾಲರು ಅದನ್ನು ರಾಷ್ಟ್ರಪತಿಗಳ ಅಂಗಳಕ್ಕೆ ಕಳುಹಿಸಿ ಕೈತೊಳೆದುಕೊಂಡಿದ್ದಾರೆ. ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ (ತಡೆ) ವಿಧೇಯಕದಲ್ಲಿ ಹಲವಾರು ವಿವಾದಾತ್ಮಕ ಅಂಶಗಳಿವೆ ಎಂದು ಹೇಳಿರುವ ರಾಜ್ಯಪಾಲರು ಸಹಿ ಹಾಕದೆ ಅದನ್ನು ರಾಷ್ಟ್ರಪತಿಗಳಿಗೆ ರವಾನಿಸಿದ್ದಾರೆ. ವಿಧೇಯಕದಲ್ಲಿ ದ್ವೇಷ ಭಾಷಣಕ್ಕೆ ಸಂಬಂಧಿಸಿದ ಕಠಿಣ ನಿಬಂಧನೆಗಳಿವೆ. ಆದರೆ ಇದು ಸಂವಿಧಾನದ ಅನುಚ್ಛೇದ 19ರ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆಯಾಗುತ್ತದೆ ಎಂದು ಕಾಯ್ದೆಯನ್ನು ರಾಷ್ಟ್ರಪತಿಗಳಿಗೆ ರವಾನಿಸುವ ತಮ್ಮ ಪತ್ರದಲ್ಲಿ ವಿವರಿಸಿರುವ ತಾವರ ಚಂದ್ ಗೆಹ್ಲೋಟ್ ಹಲವು ಪ್ರಮುಖ ಘೋಷಣೆಗಳನ್ನು ಈ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ದ್ವೇಷ ಭಾಷಣದ ವ್ಯಾಖ್ಯಾನವೇ ಅಸ್ಪಷ್ಟವಾಗಿದೆ ಎಂದು ತಮ್ಮ ಪತ್ರದಲ್ಲಿ ರಾಜ್ಯಪಾಲರು ಹೇಳಿದ್ದಾರೆ. ಈ ಅಸ್ಪಷ್ಟತೆಯಿಂದಾಗಿ ಧರ್ಮ, ಜಾತಿ, ಜನಾಂಗ, ವ್ಯಕ್ತಿಗಳ ಮೇಲೆ ಪೂರ್ವಾಗ್ರಹದಿಂದ ಕ್ರಮ ಜರುಗುವ ಸಾಧ್ಯತೆಯನ್ನು ಹೆಚ್ಚಿಸಲಿದೆ ಎಂಬ ಆತಂಕ ವ್ಯಕ್ತಪಡಿಸಿದ್ದಾರೆ. ಮಸೂದೆಯನ್ನು ಉಭಯ ಸದನಗಳಲ್ಲಿ ಅರ್ಥಪೂರ್ಣ ಮತ್ತು ಸಮಗ್ರ ಚರ್ಚೆಗೆ ಒಳಪಡಿಸದೇ ಅಂಗೀಕರಿಸಲಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಇದರ ಪರಿಣಾಮವಾಗಿ ಸಂವಿಧಾನಾತ್ಮಕವಾಗಿ ಸಂರಕ್ಷಿತ ಪ್ರಜಾಪ್ರಭುತ್ವದ ಚರ್ಚೆ ಹಾಗೂ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಗಂಭೀರ ಧಕ್ಕೆಯಾಗುವ ಸಾಧ್ಯತೆ ಇದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ರಾಜ್ಯಪಾಲರ ಈ ನಿರ್ಧಾರವನ್ನು ಸ್ವಾಗತಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಚರ್ಚೆಗೂ ಅವಕಾಶ ನೀಡದೇ ಆತುರಾತುರವಾಗಿ ದ್ವೇಷ ಭಾಷಣ ಮಸೂದೆಯನ್ನು ಸರಕಾರ ಮಂಜೂರು ಮಾಡಿಸಿತ್ತು. ಈ ಕಾಯ್ದೆ ವಿಪಕ್ಷವನ್ನು ಮಟ್ಟ ಹಾಕಲು ತಂದ ಕಾಯ್ದೆ ಎಂದು ಹೇಳಿದ್ದಾರೆ. ಈ ಮಸೂದೆ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕ. ಪರಿಣಾಮವಾಗಿ ತರೀಕೆರೆಯಲ್ಲಿ ನಮ್ಮ ಹಿಂದೂ ಕಾರ್ಯಕರ್ತ ವಿಕಾಸ್ ಪುತ್ತೂರು ಭಾಷಣವನ್ನೇ ಆರಂಭಿಸಿರಲಿಲ್ಲ; ಅಲ್ಲಿ ಪೊಲೀಸ್ ಅಧಿಕಾರಿಗಳು ಹೋಗಿ ನೋಟಿಸ್ ಕೊಟ್ಟು, ನೀವೇನಾದರೂ ಮಾತನಾಡಿದರೆ, ಬಂಧಿಸುವುದಾಗಿ ಬೆದರಿಸಿದ್ದಾರೆ ಎಂದು ಅಭಿಪ್ರಾಯಪಟ್ಟಿದ್ದಾರೆ. ದಕ್ಷಿಣ ಕನ್ನಡದಲ್ಲಿ ಬಜರಂಗದಳದ ಕಾರ್ಯಕರ್ತ ಶರಣ್ ಪಂಪ್ವೆಲ್ ಅವರು ಗಡಿ ದಾಟದಂತೆ ಕಡಿವಾಣ ಹಾಕಿದ್ದಾರೆ. ಬೆಂಗಳೂರಿನಲ್ಲಿ ಪುನೀತ್ ಕೆರೆಹಳ್ಳಿಯವರು ಪ್ರಾಮಾಣಿಕವಾಗಿ ಬಾಂಗ್ಲಾ ದೇಶೀಯರನ್ನು ಪತ್ತೆ ಹಚ್ಚಿ ಪೊಲೀಸರು ಮಾಡುವ ಕೆಲಸ ಮಾಡಿದರೆ, ಅವರನ್ನೂ ಬಂಧಿಸಿದ್ದಾರೆ ಎಂದು ಆಕ್ಷೇಪಿಸಿದರು. ಅಕ್ರಮವಾಗಿ ಗೋಸಾಗಣೆ ಮಾಡುವ ದೇಶದ್ರೋಹಿಗಳನ್ನು ಈಗಿನ ಕಾನೂನಿನಡಿ ಅಕ್ರಮ ವಾಹನ ವಶಕ್ಕೆ ಪಡೆದು ಗೋಸಾಗಾಟಗಾರರನ್ನು ಒಳಗೆ ಹಾಕುತ್ತಿದ್ದರು. ಸಿದ್ದರಾಮಯ್ಯನವರ ಸರಕಾರವು ಬಂಧಿತರಿಗೆ ಸ್ಟೇಷನ್ ಜಾಮೀನು ಕೊಡುವ ಮಸೂದೆ ತರಲು ಮುಂದಾಗಿತ್ತು ಎಂದು ದೂರಿದರು. #Governor #sends #Hate #Speech #Control #Act #President #malgudiexpress #malgudinews #news #TopNews
📜ಪ್ರಚಲಿತ ವಿದ್ಯಮಾನ📜 - ShareChat
#📜ಪ್ರಚಲಿತ ವಿದ್ಯಮಾನ📜 ಕೆ ಆರ್ ಎಸ್ ಟೋಲ್ ವರ್ಗಾಯಿಸುವಂತೆ ಸದನದಲ್ಲಿ ದರ್ಶನ್ ಪುಟ್ಟಣ್ಣಯ್ಯ ಮನವಿ ಬೆಂಗಳೂರು: ರೈತರಿಗೆ ಮತ್ತು ಸ್ಥಳೀಯ ನಾಗರಿಕರಿಗೆ ಅನುಕೂಲ ಆಗುವಂತೆ ಬೃಂದಾವನ (ಕೆ ಆರ್ ಎಸ್) ಟೋಲ್ ಅನ್ನು ವರ್ಗಾಯಿಸುವಂತೆ ಸದನದಲ್ಲಿ ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರು ಮನವಿ ಮಾಡಿದರು. ವಿಧಾನಸಭೆಯ ವಿಶೇಷ ಅಧಿವೇಶನದಲ್ಲಿ ಗಮನ ಸೆಳೆಯುವ ಸೂಚನೆ ಅಡಿಯಲ್ಲಿ ಮಾತನಾಡಿದ ಅವರು, ರೈತರು ಮತ್ತು ಸ್ಥಳೀಯ ನಾಗರಿಕರು ಬೃಂದಾವನ ಮಾರ್ಗದಲ್ಲಿ ತೆರಳುವ ವೇಳೆ ಟೋಲ್ ಭರಿಸಬೇಕಾಗುತ್ತದೆ. ಇದನ್ನು ತಪ್ಪಿಸಬೇಕು ಎಂದು ಮನವಿ ಮಾಡಿದರು. ಇದಕ್ಕೆ ಡಿಸಿಎಂ ಡಿ ಕೆ ಶಿವಕುಮಾರ್ ಸಕಾರಾತ್ಮಕವಾಗಿ ಸ್ಪಂದಿಸಿದರು. ದರ್ಶನ್ ಪುಟ್ಟಣ್ಣಯ್ಯ ಅವರ ಮನವಿಯನ್ನು ಪರಿಗಣಿಸುವ ಭರವಸೆ ನೀಡಿದರು. #DarshanPuttannaiah #requests #session #transfer #KRS #toll #malgudiexpress #malgudinews #news #TopNews
📜ಪ್ರಚಲಿತ ವಿದ್ಯಮಾನ📜 - ShareChat
#📜ಪ್ರಚಲಿತ ವಿದ್ಯಮಾನ📜 ಹೌದೋ ಹುಲಿಯಾ ಸಿದ್ದರಾಮಯ್ಯ ಹೌದೋ ಇಲಿಯಾ ಎಂಬಂತಾಗಿದ್ದಾರೆ: ಆರ್ ಅಶೋಕ್ ಬೆಂಗಳೂರು: ರಾಜ್ಯದಲ್ಲಿ ಭ್ರಷ್ಟಾಚಾರ ಮಿತಿಮೀರಿದೆ. ಎಲ್ಲ ಇಲಾಖೆಗಳಲ್ಲಿ ಲಂಚಗುಳಿತನ ತಾಂಡವಾಡುತ್ತಿದೆ. ಇಂತಹ ಅಕ್ರಮಗಳ ವಿರುದ್ಧ ಹೌದೋ ಹುಲಿಯಾ ಎಂದು ಸಮರ ಸಾರಬೇಕಿದ್ದ ಸಿಎಂ ಸಿದ್ದರಾಮಯ್ಯ ಹೌದೋ ಇಲಿಯಾ ಎಂಬಂತಾಗಿದ್ದಾರೆ ಎಂದು ವಿಧಾನಸಭೆಯಲ್ಲಿ ಪ್ರತಿಪಕ್ಷ ನಾಯಕ ಆರ್ ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ವಿಧಾನಮಂಡಲದ ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲರು ಮಾಡಿದ ಭಾಷಣಕ್ಕೆ ವಂದನೇ ಸಲ್ಲಿಸುವ ನಿರ್ಣಯದ ಮೇಲೆ ನಡೆದ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ರಾಜ್ಯ ಸರ್ಕಾರದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದ ಆರೋಪಗಳ ಬಗ್ಗೆ ಎಳೆಎಳೆಯಾಗಿ ಸದನದಲ್ಲಿ ಬಿಡಿಸಿಟ್ಟರು. ಭ್ರಷ್ಟಾಚಾರ ಮತ್ತು ಕಮಿಷನ್ ಆರೋಪದ ವಿರುದ್ಧ ಸಮರ ಎಂದು ಹೇಳಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ನೇತೃತ್ವದ ಸರ್ಕಾರ ಇದೀಗ ಕಮಿಷನ್ ಮತ್ತು ಭ್ರಷ್ಟಾಚಾರದ ದಾಸನಾಗಿದೆ. ಎಲ್ಲ ಇಲಾಖೆಗಳಲ್ಲಿ ಹೆಗ್ಗಣಗಳೇ ತುಂಬಿಹೋಗಿವೆ. ಇವುಗಳನ್ನು ಎದುರಿಸಬೇಕಾದ ಮುಖ್ಯಮಂತ್ರಿಗಳು ಇಲಿಯಾಗಿ ಬಿಲ ಸೇರಿದ್ದಾರೆ ಎಂದು ವ್ಯಂಗ್ಯವಾಡಿದರು. ನಗರಾಭಿವೃದ್ಧಿ, ಅಬಕಾರಿ, ಕಂದಾಯ, ವಿದ್ಯುತ್ ನೀರಾವರಿ ಸೇರಿದಂತೆ ಎಲ್ಲ ಇಲಾಖೆಗಳಲ್ಲೂ ಭ್ರಷ್ಟಾಚಾರ ತಾಂಡವಾಡುತ್ತಿದೆ. ಸಣ್ಣಪುಟ್ಟ ಕೆಲಸಗಳಿಗೂ ಜನಸಾಮಾನ್ಯರು ಲಂಚ ಕೊಟ್ಟು ಮಾಡಿಸಿಕೊಳ್ಳಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಹೇಳಿದರು. ಗುತ್ತಿಗೆದಾರರ ಸಂಘದ ಪ್ರತಿನಿಧಿಗಳು ಈ ಸರ್ಕಾರದಲ್ಲಿ ನಡೆಯುತ್ತಿರುವ ಕಮಿಷನ್ ದಂಧೆಯ ಬಗ್ಗೆ ಬಹಿರಂಗವಾಗಿಯೇ ವಿವರ ನೀಡುತ್ತಿದ್ದಾರೆ. ಅಬಕಾರಿ ಗುತ್ತಿಗೆದಾರರು ಮಂತ್ರಿಗಳು ಮತ್ತು ಇಲಾಖೆಯ ಮುಖ್ಯಸ್ಥರಿಗೆ ನೀಡಬೇಕಾದ ಹಣದ ಬಗ್ಗೆ ಎಲ್ಲಾ ವಿವರ ನೀಡಿ ರಾಜ್ಯಪಾಲರಿಗೆ ದೂರು ಸಲ್ಲಿಸಿದ್ದಾರೆ. ಪರಿಸ್ಥಿತಿ ಇಷ್ಟೊಂದು ಗಂಭೀರವಾಗಿದ್ದರೂ ಕೂಡ ಕ್ರಮ ಕೈಗೊಳ್ಳಬೇಕಾದ ಮುಖ್ಯಮಂತ್ರಿಗಳು ಅಸಹಾಯಕ ರಾಗಿದ್ದಾರೆ ಎಂದು ಟೀಕಿಸಿದರು. ಅಧಿಕಾರ ಹಸ್ತಾಂತರ ಮತ್ತು ಕುರ್ಚಿಗಾಗಿ ಕಾಂಗ್ರೆಸ್ ಪಕ್ಷದಲ್ಲಿ ಜಗಳ ಮಿತಿಮೀರಿದೆ. ಯಾರ ಮೇಲೂ ನಿಯಂತ್ರಣವಿಲ್ಲದೆ ಅಸಹಾಯಕರಾಗಿ ಸಿದ್ದರಾಮಯ್ಯ ತಮ್ಮ ಎಂದಿನ ಮೊನಚು ಕಳೆದುಕೊಂಡು ಕುರ್ಚಿಗೆ ಅಂಟಿಕೊಂಡು ಕುಳಿತಿದ್ದಾರೆ. ಅಧಿಕಾರಿಗಳಿಗೆ ಯಾರ ಭಯವೂ ಇಲ್ಲದಂತಾಗಿದೆ. ಭ್ರಷ್ಟಾಚಾರದ ಗ್ರಾಫ್ ದಿನದಿಂದ ದಿನಕ್ಕೆ ಮೇಲ್ಮಟ್ಟಕ್ಕೆ ಸಾಗುತ್ತಿದೆ ಎಂದು ವಾಗ್ದಾಳಿ ನಡೆಸಿದರು. ಕಂದಾಯ ಇಲಾಖೆಯಲ್ಲಿ ಸಣ್ಣಪುಟ್ಟ ಕೆಲಸಗಳಿಗೂ ದೊಡ್ಡ ಮಟ್ಟದ ಲಂಚ ಕೊಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಕಂದಾಯ ಮಂತ್ರಿಗಳು ವಿಡಿಯೋ ಕಾನ್ಫರೆನ್ಸ್ ಗೆ ಸೀಮಿತವಾಗಿದ್ದಾರೆ. ಯಾವುದೇ ಇಲಾಖೆಯಲ್ಲೂ ಲಂಚ ಕೊಡದೆ ಕೆಲಸ ಆಗುತ್ತಿಲ್ಲ. ಜನಸಾಮಾನ್ಯರ ಸಂಕಷ್ಟವನ್ನು ಕೇಳುವರೇ ಇಲ್ಲದಂತಾಗಿದೆ ಎಂದು ದೂರಿದರು. ಸಂಪನ್ಮೂಲ ಕ್ರೂಡೀಕರಣ ದಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಅಭಿವೃದ್ಧಿ ಯೋಜನೆಗಳು ಮರೀಚಿಕೆಯಾಗಿವೆ. ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲಾಗದೆ ಪರದಾಡುತ್ತಿದ್ದಾರೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ವಿಶೇಷ ಯೋಜನೆಗಳಿಗೆ ಮೀಸಲಾಗಿಟ್ಟ ಹಣವನ್ನು ಕೂಡ ಗ್ಯಾರಂಟಿಗಳಿಗೆ ವೆಚ್ಚ ಮಾಡುವ ಮೂಲಕ ಈ ಸಮುದಾಯದ ಹಿತಾಸಕ್ತಿ ಕಾಪಾಡುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದರು. ಆಡಳಿತ ಯಂತ್ರ ಕುಸಿದಿದ್ದು ಸಂಪನ್ಮೂಲ ಕ್ರೋಡೀಕರಣ ದಲ್ಲಿ ವಿಫಲವಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅನಗತ್ಯವಾಗಿ ಕೇಂದ್ರ ಸರ್ಕಾರದಲ್ಲಿ ವಿರುದ್ಧ ಆರೋಪ ಮಾಡುವ ಮೂಲಕ ಜನರ ಗಮನವನ್ನು ಬೇರೆ ಕಡೆ ಸೆಳೆಯುವ ಪ್ರಯತ್ನ ನಡೆಸಿದ್ದಾರೆ ಅವಶ್ಯಕತೆ ಇಲ್ಲದೆ ಇದ್ದರೂ ಕೂಡ ಕೇಂದ್ರದ ವಿರುದ್ಧ ಸಮರ ಘೋಷಣೆ ಮಾಡುವ ಮೂಲಕ ಅಭಿವೃದ್ಧಿ ಯೋಜನೆಗಳು ಕುಂಠಿತವಾಗುವಂತೆ ಮಾಡಿದ್ದಾರೆ ಎಂದು ಟೀಕಿಸಿದರು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಒಟ್ಟಾಗಿ ಕೆಲಸ ಮಾಡಿದರೆ ಮಾತ್ರ ಅಭಿವೃದ್ಧಿ ಸಾಧ್ಯ. ಈ ಹಿಂದೆ ಮುಖ್ಯಮಂತ್ರಿಯಾಗಿದ್ದ ಎಸ್‌‍.ಎಂ.ಕೃಷ್ಣ ಅವರು ಕೇಂದ್ರದೊಂದಿಗೆ ಸೌಹಾರ್ದಯುತ ಸಂಬಂಧ ಬೆಳೆಸಿದ್ದರಿಂದಾಗಿ ಬೆಂಗಳೂರಿಗೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ, ಮೆಟ್ರೊ ರೈಲು ಯೋಜನೆಯ ಸೇರಿದಂತೆ ಹಲವಾರು ಯೋಜನೆಗಳು ಅನುಷ್ಠಾನಕ್ಕೆ ಬಂದವು. ಇದರಿಂದ ಕರ್ನಾಟಕ ಅಭಿವೃದ್ಧಿಯತ್ತ ನಾಗಾಲೋಟದಿಂದ ಸಾಗಿತು. ವಸ್ತು ಸ್ಥಿತಿ ಹೀಗಿರುವಲ್ಲಿ ಕಾಲು ಕೆರೆದು ಜಗಳವಾಡುವುದರಿಂದ ಏನೂ ಪ್ರಯೋಜನವಾಗುವುದಿಲ್ಲ ಎಂದರು. ಕಾಂಗ್ರೆಸ್‌‍ನವರಿಗೆ ರಾಮನ ಕಂಡರೆ ಸಹ್ಯವಾಗುವುದಿಲ್ಲ. ಅದಕ್ಕಾಗಿ ವಿಕಸಿತ ಭಾರತ, ಉದ್ಯೋಗ ಖಾತರಿ ಮತ್ತು ಜೀವನೋಪಾಯ ಮಿಷನ್‌(ವಿಬಿಜಿ ರಾಮ್‌ ಜಿ) ಯೋಜನೆಗೆ ವಿರೋಧ ಮಾಡುತ್ತಿದ್ದಾರೆ. ರಾಜ್ಯಪಾಲರ ಭಾಷಣದಲ್ಲಿ 12 ಪುಟಗಳಷ್ಟು ವಿಬಿಜಿ ರಾಮ್‌ಜಿ ಯೋಜನೆಯನ್ನು ಟೀಕಿಸಲು ಬಳಕೆ ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಸರ್ಕಾರ ಸಂಪೂರ್ಣ ದಿವಾಳಿಯಾಗಿದೆ. ಕರ್ನಾಟಕದ ಇತಿಹಾಸದಲ್ಲೇ ಅತಿ ಹೆಚ್ಚು ಸಾಲ ಮಾಡಿರುವುದು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸಾಧನೆಯಾಗಿದೆ. ರಾಜ್ಯ ಸರ್ಕಾರ ದಿವಾಳಿಯಾಗಿದೆ ಎಂದರೆ ಇವರಿಗೆ ಕೋಪ ಬರುತ್ತದೆ. ಆದರೆ ಸಿದ್ದರಾಮಯ್ಯನವರು ಇದುವರೆಗೂ ಏಳು ಲಕ್ಷ ಕೋಟಿ ರೂಪಾಯಿ ಸಾಲ ಮಾಡಿದ್ದಾರೆ. ರಾಜ್ಯದಲ್ಲಿ ಅತಿ ಹೆಚ್ಚು ಸಾಲ ಮಾಡಿರುವುದು ಯಾರು ಎಂದರೆ ಅದು ಸಿದ್ದರಾಮಯ್ಯ ಎಂದು ವ್ಯಂಗ್ಯವಾಡಿದರು. ಮಾಡಿರುವ ಸಾಲವನ್ನು ತೀರಿಸಲು ಆಗುತ್ತಿಲ್ಲ. ಹೀಗಿರುವಾಗ ಆರ್ಥಿಕ ಶಿಸ್ತು ಎಲ್ಲಿಂದ ಬರುತ್ತದೆ, ಬದನೆಕಾಯಿ ಎಂದು ವಾಗ್ದಾಳಿ ನಡೆಸಿದ ಅವರು, ಆರ್ಥಿಕ ಸ್ಥಿತಿ ಸರಿಯಾಗಿದ್ದರೆ ಗೃಹಲಕ್ಷ್ಮೀ ಯೋಜನೆಯ 2025 ರ ಫೆಬ್ರವರಿ ಕಂತಿನ 5 ಸಾವಿರ ಕೋಟಿ ಹಣ ಎಲ್ಲಿ ಹೋಯಿತು. ಅನ್ನಭಾಗ್ಯಕ್ಕೂ ಕನ್ನ ಹಾಕಿದ್ದಾರೆ. ಕಳೆದ ವರ್ಷದ ಜನವರಿಯ ಅನ್ನಭಾಗ್ಯದ 657 ಕೋಟಿ ರೂಪಾಯಿ ಬಿಡುಗಡೆಯಾಗಿಲ್ಲ ಎಂದು ಅಂಕಿ ಅಂಶಗಳನ್ನು ಬಿಡಿಸಿಟ್ಟರು. ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಜೋಡೆತ್ತುಗಳು ಎಂದೆಲ್ಲಾ ಹೇಳುತ್ತಿದ್ದರು. ಈಗ ಕುಂಟೆತ್ತುಗಳಾಗಿದ್ದಾರೆ. ಇವರಿಬ್ಬರು ಒಂದೊಂದು ದಾರಿಯಲ್ಲಿ ಓಡಿ ಹೋಗಿದ್ದಾರೆ. ಇದೊಂದು ಇಲ್ಲಗಳ ಸರ್ಕಾರ ಎಂದು ಟೀಕಿಸಿದರು. ಆಡು ಮುಟ್ಟದ ಸೊಪ್ಪಿಲ್ಲ ಎಂಬಂತೆ ಈ ಸರ್ಕಾರ ಲೂಟಿ ಮಾಡದ ಇಲಾಖೆ ಇಲ್ಲ. ಜನ ಕೆಲಸ ಆಗಿಲ್ಲವೆಂದು, ಗುತ್ತಿಗೆದಾರರು ಹಣ ಬಿಡುಗಡೆಯಾಗಿಲ್ಲವೆಂದು, ಅಂಗನವಾಡಿ ಕಾರ್ಯಕರ್ತೆಯರು ವೇತನ ಬಿಡುಗಡೆಯಾಗಿಲ್ಲವೆಂದು ಪರದಾಡುತ್ತಿದ್ದರೆ, ಮಂತ್ರಿಗಳು ಹಣ ಮಾಡುವುದರಲ್ಲಿ ಮುಳುಗಿದ್ದಾರೆ. ಈ ಸರ್ಕಾರ ದಿವಾಳಿಯಾಗಿದೆ. ಖಜಾನೆ ಖಾಲಿ.. ಖಾಲಿ ಎಂದು ಹೇಳಿದ ಅವರು ಸದನಕ್ಕೆ ಬಂದು ಭಾಷಣ ಮಾಡಿದ ರಾಜ್ಯಪಾಲರಿಗೆ ನಾವು ವಂದನೆ ಸಲ್ಲಿಸುತ್ತೇವೆ ಆದರೆ ಅವರ ಬಾಯಲ್ಲಿ ಹೇಳಿಸಿದ ಭಾಷಣಕ್ಕೆ ಯಾವುದೇ ಬೆಲೆ ನೀಡುವುದಿಲ್ಲ ಎಂದರು. #Siddaramaiah #like #tiger #RAshok #malgudiexpress #malgudinews #news #TopNews
📜ಪ್ರಚಲಿತ ವಿದ್ಯಮಾನ📜 - ShareChat
#📜ಪ್ರಚಲಿತ ವಿದ್ಯಮಾನ📜 ಬಂಧನವಾಯಿತು ನಿಜ - ಆದರೆ....?: ಡಾ.ಎಚ್.ಸಿ.ಮಹದೇವಪ್ಪ ಸಂವಿಧಾನ ಶಿಲ್ಪಿ, ಭಾರತರತ್ನ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಕುರಿತಾಗಿ ಗೌರವ ತೋರಬೇಕಿದ್ದ ಕಡೆ, ಕೇವಲ ಅಗೌರವ ಮತ್ತು ಅವಮಾನಗಳನ್ನು ಮಾಡುವಂತಹ ಕೆಲಸಗಳನ್ನು ಬಾಬಾ ಸಾಹೇಬರು ಬದುಕಿದ್ದ ಕಾಲದಿಂದಲೂ ಸಹ ಪಕ್ಷಾತೀತವಾಗಿ ಮಾಡುತ್ತಲೇ ಬರುತ್ತಿದ್ದಾರೆ. ಬಾಬಾ ಸಾಹೇಬರ ವಿಚಾರ ಮತ್ತು ಅವರ ಸೈದ್ಧಾಂತಿಕ ನಿಲುಗಳನ್ನು ಹೇಗೆ ಪಕ್ಷಾತೀತವಾಗಿ ವಿರೋಧಿಸುತ್ತಾ, ದ್ವೇಷ ಕಾರುವ ಮನುವಾದಿ ಜನರು ಇದ್ದಾರೋ, ಬಾಬಾ ಸಾಹೇಬರ ವಿಚಾರ ಮತ್ತು ಅವರ ವ್ಯಕ್ತಿತ್ವವನ್ನು ಪ್ರೀತಿಸುವ ಮತ್ತು ಅವರ ಮಹತ್ವವನ್ನು ಅರಿತಿರುವ ಜನರೂ ಕೂಡಾ ಅದೇ ರೀತಿಯಲ್ಲಿ ಪಕ್ಷಾತೀತವಾಗಿ ಇದ್ದಾರೆ. ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಂಡು ಯಾವುದೋ ಮೂಲೆಯಲ್ಲಿ ಕುಳಿತು ಯಾರದ್ದೋ ಮಾತುಗಳಿಂದ ದಿಕ್ಕು ತಪ್ಪಿ ಇಂತಹ ಕೆಲಸ ಮಾಡುತ್ತಿರುವ ಯುವಕರು ಮಾತ್ರ, ಪರಿಶಿಷ್ಟ ಮತ್ತು ಹಿಂದುಳಿದ ಸಮುದಾಯಗಳಿಗೆ ಸೇರಿದ್ದಾರೆಂಬ ಸಂಗತಿಯು ಅತ್ಯಂತ ನೋವು ತರಿಸುವಂತದ್ದು. ಬಾಬಾ ಸಾಹೇಬರ ಮೇಲೆ ಅವಮಾನಕಾರಿಯಾಗಿ, ಮಾತನಾಡುತ್ತಿದ್ದಾರೆ, ಅವರ ಮೇಲೆ ಕ್ರಮ ವಹಿಸಲು ಒತ್ತಡ ಇದೆ ಎಂದು ನಮ್ಮ ಹುಡುಗರು ಹೇಳಿದಾಗ, ಇಂತಹ ಕೆಲಸಕ್ಕೆ ಮನುವಾದಿಗಳು ಯಾರನ್ನು ಬಳಸಿಕೊಳ್ಳುತ್ತಾರೆ ಎಂಬ ಅರಿವಿದ್ದ ನಾನು, ಅವರನ್ನು ಪತ್ತೆ ಮಾಡಿ ಒಂದಿಷ್ಟು ಬುದ್ದಿ ಹೇಳಿ ಕಳಿಸಬಹುದಾ ಎಂದು ಕೊಂಡಿದ್ದೆ. ಅದರಂತೆಯೇ ಮಾಡಲಾಗಿತ್ತು ಕೂಡಾ. ಆದರೆ ತಪ್ಪನ್ನು ಸರಿಪಡಿಕೊಳ್ಳುವ ಕೆಲಸ ಮಾಡದೇ ಮತ್ತೆ ಮತ್ತೆ ರಾಷ್ಟ್ರೀಯ ನಾಯಕರು ಮತ್ತು ದೇಶದ ಸಂವಿಧಾನಕ್ಕೆ ಅಗೌರವ ತರುವಲ್ಲಿ ಅದೇ ಯುವಕರು ಮಾಡಿದ್ದು ನಿಜಕ್ಕೂ ಕ್ರಮ ವಹಿಸಬೇಕಾದ ಸಂಗತಿ ಎನಿಸಿತು. ಅದರಂತೆಯೇ ಈಗ ಬಂಧನವಾಗಿದೆ. ಬಂಧನವೇನೋ ಆಗಿದೆ ನಿಜ, ಆದರೆ ಬಾಬಾ ಸಾಹೇಬರು ಮತ್ತು ಸಂವಿಧಾನದ ವಿರುದ್ಧ ಯಾವ ಸಮುದಾಯಗಳನ್ನು ಎತ್ತಿ ಕಟ್ಟಲಾಗುತ್ತಿದೆ ಎಂಬುದನ್ನು ನೆನೆಸಿಕೊಂಡರೆ, ತಳ ಸಮುದಾಯಗಳ ಅಜ್ಞಾನ, ಮುಗ್ದತೆ ಮತ್ತು ಅವರ ಸ್ಥಿತಿಯ ಬಗ್ಗೆ ಅಂದು ಬಾಬಾ ಸಾಹೇಬರು ಹೊಂದಿದ್ದ ವಿಚಾರಗಳು ನೆನಪಾಗುತ್ತದೆ ಮತ್ತು ಬೇಸರ ಆಗುತ್ತದೆ ಕೂಡಾ.! ಇನ್ನು ಬಾಬಾ ಸಾಹೇಬರು ದೇಶವೆಂಬ ದೇಹದ ಒಳಗೆ ಇರುವ ಜೀವ ಸೆಲೆ. ಅವರ ವಿರುದ್ಧ ಹೊರಡುವುದು ದೇಶದ ಉಸಿರು ನಿಲ್ಲಿಸಲು ಹೊರಡುವ ರೀತಿ ಆಗಿದ್ದು, ಈ ಉಸಿರನ್ನು ಕಾಯಲು ದೇಶದಲ್ಲಿ ಅಷ್ಟೇ ಸಂಖ್ಯೆಯ ಭೀಮ ಸೈನಿಕರು, ಸಂವಿಧಾನದ ಪ್ರಿಯರು ಇದ್ದಾರೆ ಎಂಬುದು ಸಮಾಧಾನಕರವಾದ ಸಂಗತಿಯಾಗಿದೆ! - ಡಾ.ಎಚ್.ಸಿ.ಮಹದೇವಪ್ಪ, ಸಮಾಜ ಕಲ್ಯಾಣ ಸಚಿವ #true #arrested #Ambedkar #HCMahadevappa #malgudiexpress #malgudinews #news #TopNews
📜ಪ್ರಚಲಿತ ವಿದ್ಯಮಾನ📜 - ShareChat
#📜ಪ್ರಚಲಿತ ವಿದ್ಯಮಾನ📜 ಎಸ್ ಐ ಟಿ ತನಿಖೆಯ ವರದಿ ಮಾಸ್ಕ್ ಮ್ಯಾನ್ ನಂತೆ ಮಾಸ್ಕ್ ನಲ್ಲಿ ಮುಚ್ಚಿ ಹೋಗಿದೆಯೇ?: ಸುರೇಶ್ ಕುಮಾರ್ ಬೆಂಗಳೂರು: ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಅಸಹಜ ಸಾವು ಆರೋಪ ಪ್ರಕರಣ ವಿಧಾನಸಭೆಯಲ್ಲಿ ಪ್ರಸ್ತಾಪವಾಗಿದೆ. ಈ ಬಗ್ಗೆ ನಡೆದ ಎಸ್ ಐಟಿಆ ತನಿಖೆಯ ವರದಿ ಮಾಸ್ಕ್ ಮ್ಯಾನ್ ನಂತೆ ಮಾಸ್ಕ್ ನಲ್ಲಿ ಮುಚ್ಚಿ ಹೋಗಿದೆಯೇ ಎಂದು ಬಿಜೆಪಿ ನಾಯಕ ಸುರೇಶ್ ಕುಮಾರ್ ಪ್ರಶ್ನಿಸಿದ್ದಾರೆ. ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲರು ಮಾಡಿದ ಭಾಷಣಕ್ಕೆ ವಂದನೆ ಸಲ್ಲಿಸುವ ನಿರ್ಣಯದ ಮೇಲೆ ಮಾತನಾಡಿದ ಅವರು ಈ ಪ್ರಕರಣದಲ್ಲಿ ಯಾವುದೇ ಸತ್ಯ ಹೊರಬರಲಿಲ್ಲ, ಬದಲಿಗೆ ಶ್ರೀ ಕ್ಷೇತ್ರದ ಪಾವಿತ್ರ್ಯತೆಗೆ ಧಕ್ಕೆ ತರುವ ಕೆಲಸ ಮಾಡಲಾಯಿತು ಎಂದು ಅಸಮಾಧಾನ ವ್ಯಕ್ತಪಡಿಸಿದರು. ಧರ್ಮಸ್ಥಳ ವಿಚಾರದಲ್ಲಿ ಎಸ್ ಐಟಿ ಮಾಡುವ ಅವಶ್ಯಕತೆ ಇಲ್ಲ ಎಂದು ಆರೋಗ್ಯ ದಿನೇಶ್ ಗುಂಡೂರಾವ್ ಹೇಳಿದ್ದರು. ಆದರೂ ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸದೆ ಆರೋಪಗಳ ವಿಚಾರವಾಗಿ ತನಿಖೆ ನಡೆಸಲು ಎಸ್ ಐಟಿ ರಚನೆ ಮಾಡಲಾಗಿದೆ. ಈ ತನಿಖೆ ಸಾಗುತ್ತಿರುವ ರೀತಿಯಿಂದ ಬೇಸತ್ತು ಎಸ್ ಐಟಿಯಲ್ಲಿದ್ದ ಅನೇಕರು ಹೊರಬಂದರು. ಸತ್ಯ ಬರಲಿ ಎಂದು ಅಂದು ನಾವು ಎಸ್ ಐಟಿ ಗೆ ವಿರೋಧ ಮಾಡಲಿಲ್ಲ. ಈಗ ಎಸ್ ಐಟಿ ಏನು ಮಾಡುತ್ತಿದೆ ಆರೋಪಗಳ ಬಗ್ಗೆ ಏನು ತನಿಖೆ‌ ಆಗಿದೆ ಎಂದು ಪ್ರಶ್ನಿಸಿದರು. ಗೃಹ ಮಂತ್ರಿಗಳು ಎಸ್ ಐ ಟಿ ತನಿಖೆಯ ಮಧ್ಯಂತರ ವರದಿ ನೀಡಿದ್ದಾರೆ ಎಂದು ಹೇಳಿದ್ದಾರೆ. ಆ ವರದಿ ಎಲ್ಲಿದೆ? ಅದರಲ್ಲಿ ಯಾವ ಅಂಶಗಳನ್ನು ಉಲ್ಲೇಖಿಸಲಾಗಿದೆ? ಒಂದು ವೇಳೆ ಆರೋಪ ಮಾಡಿರುವ ಮಾಸ್ಕ್ ಮ್ಯಾನ್ ನಂತೇ ಈ ವರದಿಗೂ ಮಾಸ್ಕ್ ಹಾಕಲಾಗಿದೆ ಎಂದು ತರಾಟೆಗೆ ತೆಗೆದುಕೊಂಡರು. ಧರ್ಮಸ್ಥಳ ಇನ್ನೂ ಕಳಂಕ ಹೊತ್ತುಕೊಂಡೇ ಇರಬೇಕಾ? ವರದಿಯನ್ನು ಸದನದ ಮುಂದಿಡಿ. ಧರ್ಮಸ್ಥಳ ಬುರುಡೆ ಗ್ಯಾಂಗ್, ಗಡಿಪಾರು ಇವೆಲ್ಲಾ ರಾಮಾಯಣ. ಈ ಬಗ್ಗೆ ನಾನು ಹೆಚ್ಚು ಹೇಳಲ್ಲ. ಏನೇ ಇರಲಿ, ಧರ್ಮಸ್ಥಳದ ಎಸ್‌ಐಟಿ ವರದಿಯನ್ನು ಮಂಡಿಸಿ ಎಂದು ಆಗ್ರಹಿಸಿದರು. ಧರ್ಮಸ್ಥಳದ ಬಗ್ಗೆ ಸಲ್ಲಿಸಲಾಗಿದ್ದ ಪಿಎಎಲ್ ವಿಚಾರಣೆ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್ ಇದನ್ನು ಪೈಸಾ ವಸೂಲಿ ಲಿಟಿಗೇಷನ್ ಎಂದು ಹೇಳಿದೆ. ಧರ್ಮಸ್ಥಳ ಒಂದು ಧಾರ್ಮಿಕ ಶ್ರದ್ಧಾ ಕೇಂದ್ರ. ಬಹಳ ಜನರಿಗೆ ಮಂಜುನಾಥ ಭರವಸೆಯಾಗಿ ಉಳಿದಿದ್ದಾರೆ. ನಂಬಿಕೆಗೆ ಕೆಲವರು ಮಸಿ ಬಳಿಯುವ ಪ್ರಯತ್ನ ಮಾಡಿದರು. ಏನೇ ಆಗಲಿ, ಸತ್ಯಾಂಶ ಗೊತ್ತಾಗಬೇಕಿದೆ. ಎಸ್‌ಐಟಿ ತನಿಖಾ ವರದಿಯನ್ನು ಮಂಡಿಸಬೇಕು ಎಂದು ಆಗ್ರಹಿಸಿದರು. ವಿಧಾನಸಭೆಯಲ್ಲಿ ಶ್ರೀಸಾಮಾನ್ಯರ ಹಿತ ಕಾಯುವ ಒಂದೂ ಚರ್ಚೆಯಾಗುತ್ತಿಲ್ಲ. ಹೀಗಾದರೆ ಅರ್ಥವಿಲ್ಲದಂತಾಗುತ್ತದೆ. ಶ್ರೀಸಾಮಾನ್ಯರ ಹಿತ ಕಾಯುವ, ಅವರ ಸಮಸ್ಯೆಗಳ ಬಗ್ಗೆ ಚರ್ಚೆಗಳಾಗಬೇಕಿದೆ. ವಿಧಾನಸಭೆಯ ಬಗ್ಗೆ ಜನಸಾಮಾನ್ಯರು ಬಹಳ ನಿರೀಕ್ಷೆ ಇಟ್ಟುಕೊಂಡಿರುತ್ತಾರೆ ಎಂದರು. ರಾಜ್ಯ ಸರ್ಕಾರದಲ್ಲಿ ಭಿನ್ನಮತ ತೀವ್ರಗೊಂಡಿದೆ ಅಧಿಕಾರಕ್ಕಾಗಿ ಬಿಕ್ಕಟ್ಟು ಆರಂಭಗೊಂಡಿದೆ ಒಳ ಜಗಳದಿಂದ ಕೂಡಿರುವ ಸರ್ಕಾರ ಇದು. ಬೆಲೆ ಏರಿಕೆ ಮಾಡುವ ಸರ್ಕಾರ ಇದಾಗಿದ್ದು, ಜನ ಬಯಸಿದಂತೆ ನಡೆದುಕೊಳ್ಳುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿದರು. ರಾಜಕೀಯ ಸೇಡು ತೀರಿಸಿಕೊಳ್ಳುವ ಸರ್ಕಾರ ಇದಾಗಿದೆ. ಕೇವಲ ಬ್ಯಾನರ್ ಕಟ್ಟುವ ವಿಚಾರಕ್ಕೆ ಬಳ್ಳಾರಿಯಲ್ಲಿ ದೊಡ್ಡ ಮಟ್ಟದ ಘರ್ಷಣೆ ಉಂಟಾಯಿತು ರಾಜಕೀಯ ಕಾರಣಕ್ಕಾಗಿ ಬಡಪಾಯಿ ಕಾರ್ಯಕರ್ತನೊಬ್ಬನನ್ನು ಸುಟ್ಟು ಹಾಕಲಾಯಿತು. ಘರ್ಷಣೆಯಲ್ಲಿ ಗುಂಡೇಟಿನಿಂದ ಮೃತಪಟ್ಟ ವ್ಯಕ್ತಿಯ ಕುಟುಂಬದಲ್ಲಿ ಮೃತ ದೇಹವನ್ನು ಹೂತು ಹಾಕುವ ಸಂಪ್ರದಾಯ ಇದೆ. ಆದರೆ ರಾಜಕೀಯ ಕಾರಣಕ್ಕಾಗಿ ಇದನ್ನು ಮರೆಮಾಚಿ ಮೃತ ದೇಹವನ್ನು ಸುಟ್ಟು ಹಾಕಲಾಯಿತು ಎಂದು ಹೇಳಿದ ಅವರು, ರಾಜ್ಯಪಾಲರು ಮಾಡಿದ ಭಾಷಣಕ್ಕೆ ತಾವು ವಂದನೆ ಸಲ್ಲಿಸುವುದಿಲ್ಲ. ಬದಲಿಗೆ ಸದನಕ್ಕೆ ಬಂದ ರಾಜ್ಯಪಾಲರಿಗೆ ವಂದನೆ ಸಲ್ಲಿಸುವುದಾಗಿ ಹೇಳಿದರು. #SIT #investigation #report #covered #mask #like #MaskedMan #SSureshKumar #malgudiexpress #malgudinews #news #TopNews
📜ಪ್ರಚಲಿತ ವಿದ್ಯಮಾನ📜 - ShareChat
#📜ಪ್ರಚಲಿತ ವಿದ್ಯಮಾನ📜 ಮೋಹನ್ ದಾಸ್ ಪೈಗೆ ತಿರುಗೇಟು ಕೊಟ್ಟ ರಾಮಲಿಂಗಾರೆಡ್ಡಿ ಬೆಂಗಳೂರು: ಮಹಾನಗರ ಬೆಂಗಳೂರಿನ ರಸ್ತೆಗಳ ಬಗ್ಗೆ ತಕರಾರು ಎತ್ತುತ್ತಿರುವ ಉದ್ಯಮಿ ಮೋಹನ್ ದಾಸ್ ಪೈ, ಇದೀಗ ನಗರದ ಸಾರಿಗೆ ವ್ಯವಸ್ಥೆ ಬಗ್ಗೆ ಪ್ರಶ್ನೆ ಮಾಡಿದ್ದಾರೆ. ಇದಕ್ಕೆ ತಿರುಗೇಟು ನೀಡಿರುವ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ವ್ಯವಸ್ಥೆಯ ಬಗ್ಗೆ ಟ್ವೀಟ್ ಮೂಲಕ ಅಭಿಪ್ರಾಯ ಹೇಳುವ ಬದಲಿಗೆ ಬಹಿರಂಗ ಚರ್ಚೆಗೆ ಬರುವಂತೆ ಸವಾಲು ಹಾಕಿದ್ದಾರೆ. ಬಿಎಂಟಿಸಿ ಬಸ್ ಕುರಿತಂತೆ ಮೋಹನ್ ದಾಸ್ ಪೈ ಅವರು ಮಾಡಿರುವ ಟ್ವೀಟ್ ಗೆ ಪ್ರತ್ಯುತ್ತರ ನೀಡಿರುವ ರಾಮಲಿಂಗಾರೆಡ್ಡಿ ರೆಡ್ಡಿ ಈ ಹಿಂದೆ ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಆಡಳಿತ ನಡೆಸುತ್ತಿದ್ದ ಅವಧಿಯಲ್ಲಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಯಾವುದೇ ನಿಯಮಗಳಿಗೆ ಹೊಸ ಬಸ್‌ಗಳ ಸೇರ್ಪಡೆ ಸ್ಥಗಿತಗೊಂಡಿದ್ದಾಗ ಮತ್ತು ನಿಗಮಗಳು ಸೊರಗುತ್ತಿದ್ದಾಗ ನೀವು ಒಂದೇ ಒಂದು ಪ್ರಶ್ನೆ ಮಾಡಿಲ್ಲ ಏಕೆ ಎಂದು ಪ್ರಶ್ನಿಸಿದ್ದಾರೆ. ಜನಪರ ಸರ್ಕಾರವು ಉತ್ತಮ ಕೆಲಸ ಮಾಡುತ್ತಿರುವಾಗ ಮಾತ್ರ ನಿಮ್ಮ ಈ 'ಕಾರ್ಪೊರೇಟ್ ಕಾಳಜಿ' ಎಚ್ಚರಗೊಳ್ಳುವುದು ಏಕೆ? ಪ್ರಧಾನಿ ನರೇಂದ್ರ ಮೋದಿಯವರ ತವರು ರಾಜ್ಯ ಗುಜರಾತ್ ಸೇರಿದಂತೆ, ಬಿಜೆಪಿಯ ಯಾವುದಾದರೂ ಒಂದು ರಾಜ್ಯ ಅಥವಾ ನಗರ ಈ ಮಟ್ಟದ ಸಾರಿಗೆ ವ್ಯಾಪ್ತಿ ಮತ್ತು ದಕ್ಷತೆಯನ್ನು ಹೊಂದಿದ್ದರೆ ತೋರಿಸಿ ಎಂದು ಸವಾಲು ಒಡ್ಡಿದ್ದಾರೆ. ಕಳೆದ ಕೇವಲ 2 ವರ್ಷಗಳಲ್ಲಿ ನಾವು 5,800ಕ್ಕೂ ಹೆಚ್ಚು ಹೊಸ ಬಸ್‌ಗಳನ್ನು ಸೇರಿಸಿದ್ದೇವೆ. ಮಾರ್ಚ್ 2026ರ ವೇಳೆಗೆ ಇನ್ನೂ 2,000 ಬಸ್‌ಗಳು ರಸ್ತೆಗಿಳಿಯಲಿವೆ.ನಿಮ್ಮ ದೃಷ್ಟಿಕೋನವು ಕೇವಲ ಪೂರ್ವಾಗ್ರಹ ಪೀಡಿತವಲ್ಲ. ನೀವು ಸಾರ್ವಜನಿಕ ಸೇವೆಯನ್ನು ಕೇವಲ ಲಾಭ-ನಷ್ಟದ 'ಬ್ಯಾಲೆನ್ಸ್ ಶೀಟ್' ಮೂಲಕ ನೋಡುತ್ತೀರಿ; ಆದರೆ ನಾನು ಅದನ್ನು 1.5 ಕೋಟಿ ನಾಗರಿಕರ ಸೇವೆಯ ದೃಷ್ಟಿಯಿಂದ ನೋಡುತ್ತಿದ್ದೇನೆ ಎಂದು ತಿರುಗೇಟು ನೀಡಿದ್ದಾರೆ. ರಾಜ್ಯದಲ್ಲಿ ಶೇಕಡಾ 30ರಷ್ಟು ಮಾರ್ಗಗಳು ನಷ್ಟದಲ್ಲಿದ್ದರೂ, ಹಳ್ಳಿಯ ಸಾಮಾನ್ಯ ಮನುಷ್ಯ ಮತ್ತು ವಿದ್ಯಾರ್ಥಿಗಳಿಗೆ ಬಸ್ ಸೌಲಭ್ಯ ಸುಲಭವಾಗಿ ಸಿಗಲಿ ಎನ್ನುವುದು ನಮ್ಮ ಆಶಯ, ಎಲ್ಲರಿಗೂ ಸುಗಮ ಸಂಚಾರ ವ್ಯವಸ್ಥೆ ಸಿಗಲಿ ಎಂಬ ಕಾರಣಕ್ಕೆ ನಾವು ಅವುಗಳನ್ನು ನಡೆಸುತ್ತಿದ್ದೇವೆ. ಶೇ. 30ರಷ್ಟು ಮಾರ್ಗಗಳು ಲಾಭವೂ ಇಲ್ಲದ, ನಷ್ಟವೂ ಇಲ್ಲದ ಸ್ಥಿತಿಯಲ್ಲಿವೆ. ದೂರ ಪ್ರಯಾಣಿಸುವ ಬಸ್‌ಗಳಿಂದಾಗಿ ಶೇ. 40ರಷ್ಟು ಲಾಭ ಸಿಗಲಿದೆ. ರಾಜ್ಯದ ಶೇ. 98ರಷ್ಟು ಹಳ್ಳಿಗಳಿಗೆ ಬಸ್ ಸಂಪರ್ಕ ಕಲ್ಪಿಸಲಾಗಿದೆ. ಸಮಾಜಕ್ಕೆ ಸೇವೆ ಸಲ್ಲಿಸುವುದು ಹೀಗೆಯೇ ಹೊರತು, ಕೇವಲ ಬೋರ್ಡ್ ಆಫ್ ಡೈರೆಕ್ಟರ್‌ಗಳ ಲಾಭಕ್ಕಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ. ಕರ್ನಾಟಕವು ಒಟ್ಟು 26,054 ಬಸ್‌ಗಳನ್ನು ಕಾರ್ಯಾಚರಣೆ ಮಾಡುತ್ತಿದೆ. ಬೆಂಗಳೂರಿನಲ್ಲಿ ಮಾತ್ರವೇ ನಾವು ಪ್ರತಿದಿನ ಸುಮಾರು 45 ಲಕ್ಷ ಪ್ರಯಾಣಿಕರಿಗೆ ಸೇವೆ ನೀಡುತ್ತಿದ್ದೇವೆ. 7,108 ಬಸ್‌ಗಳ ಪೈಕಿ 1,686 ಎಲೆಕ್ಟ್ರಿಕ್ ಬಸ್‌ಗಳಿದ್ದು, ದಿನಕ್ಕೆ 13 ಲಕ್ಷ ಕಿ.ಮೀ ಸಂಚರಿಸುತ್ತಾ 66,000 ಟ್ರಿಪ್‌ಗಳನ್ನು ಪೂರೈಸುತ್ತಿದ್ದೇವೆ. ಇದು ಇಡೀ ಭಾರತದಲ್ಲೇ ಅತಿ ಹೆಚ್ಚು ಎಂದಿದ್ದಾರೆ. ರಾಜ್ಯ ಸರ್ಕಾರ ಜಾರಿಗೊಳಿಸಿರುವ ಶಕ್ತಿ ಯೋಜನೆ ಕೇವಲ ಯೋಜನೆಯಲ್ಲ, ಮಹಿಳೆಯರ ಆರ್ಥಿಕ ಸಬಲೀಕರಣದ ದೊಡ್ಡ ಹೆಜ್ಜೆ. ಸಾಮಾಜಿಕ ಸೇವೆ ಖಾಸಗಿ ಸಂಸ್ಥೆಗಳಂತೆ ನಾವು ಕೇವಲ ಲಾಭದಾಯಕ ಮಾರ್ಗಗಳನ್ನು ಮಾತ್ರ ಆರಿಸಿಕೊಳ್ಳುವುದಿಲ್ಲ ಎಂದು ತಿಳಿಸಿದ್ದಾರೆ. ಮೋಹನ್‌ದಾಸ್ ಪೈ ಅವರೇ, ಯಾವುದೇ ವೇದಿಕೆಯಲ್ಲಿ ನಿಮ್ಮೊಂದಿಗೆ ಮುಖಾಮುಖಿ ಚರ್ಚೆ ನಡೆಸಲು ನಮ್ಮ ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕರು ಒಬ್ಬರೇ ಸಾಕು. ದಯವಿಟ್ಟು ಬನ್ನಿ ಮತ್ತು ಅವರೊಂದಿಗೆ ನೇರವಾಗಿ ಸತ್ಯಾಸತ್ಯತೆಗಳ ಬಗ್ಗೆ ಚರ್ಚಿಸಿ. ನೀವು ಈ ಸವಾಲನ್ನು ಸ್ವೀಕರಿಸಲು ಸಿದ್ಧರಿದ್ದೀರಾ? ಅಥವಾ ಕೇವಲ ಟ್ವೀಟ್ ಮಾಡುವುದಕ್ಕಷ್ಟೇ ಸೀಮಿತವಾಗುತ್ತೀರಾ ಎಂದು ಕೇಳಿದ್ದಾರೆ. ಉದ್ಯಮಿ ಮೋಹನ್ ದಾಸ್ ಪೈ ಅವರು ತಮ್ಮ ಟ್ವೀಟ್ ನಲ್ಲಿ ರಾಮಲಿಂಗಾರೆಡ್ಡಿಯವರೇ ಸಾರಿಗೆ ಸಚಿವರಾಗಿ‌ ನಿಮ್ಮ ಸಿದ್ಧಾಂತ ಮತ್ತು ನಡೆಯಿಂದ ರಾಜ್ಯಕ್ಕೆ ಉತ್ತಮ ಸಾರಿಗೆ ವ್ಯವಸ್ಥೆ ನೀಡುವಲ್ಲಿ ನೀವು ವಿಫಲರಾಗಿದ್ದೀರಿ. ಸಾರ್ವಜನಿಕ ಸಾರಿಗೆಯ ಕೊರತೆಯಿಂದ ಜನತೆ ಪರದಾಡುತ್ತಿದ್ದಾರೆ. ದಯವಿಟ್ಟು ಖಾಸಗಿ ವಲಯಕ್ಕೆ ಅವಕಾಶ ನೀಡಿ. ಕಳೆದ ಕೆಲವು ವರ್ಷದಿಂದ ಬಸ್‌ಗಳ ವ್ಯವಸ್ಥೆ ಸರಿಯಿಲ್ಲ. ಬಸ್‌ ಓಡಾಟ ಕಡಿಮೆಯಾಗಿದೆ. ಕೇವಲ ಸರ್ಕಾರಿ ಸಂಸ್ಥೆಗಳೇ ಕೆಲಸ ಮಾಡಬೇಕು ಎಂಬ ನಿಮ್ಮ ಹಠಮಾರಿತನ ಏಕೆ? ಜನರಿಗೆ ಸಾರ್ವಜನಿಕ ಸಾರಿಗೆ ಬೇಕು, ಅದನ್ನು ಯಾರು ಒದಗಿಸುತ್ತಾರೆ ಎಂದು ಪೋಸ್ಟ್‌ ಮಾಡಿದ್ದರು. #RamalingaReddy #hitback #MohanDasPai #malgudiexpress #malgudinews #news #TopNews
📜ಪ್ರಚಲಿತ ವಿದ್ಯಮಾನ📜 - మిఠునో దానో శృిగి తిరుగిళటు ಕೊಟ್ಟ ' ರಾಮಲಿಂಗಾರೆಡ್ಡಿ ಸುದ್ರಿ & ಯ೦ರಯಲ್ಲಿ್ 'Saqa Please subscribe to Malgudi Express YouTube and Website EXPRESS మిఠునో దానో శృిగి తిరుగిళటు ಕೊಟ್ಟ ' ರಾಮಲಿಂಗಾರೆಡ್ಡಿ ಸುದ್ರಿ & ಯ೦ರಯಲ್ಲಿ್ 'Saqa Please subscribe to Malgudi Express YouTube and Website EXPRESS - ShareChat
#ಐಪಿಎಸ್ ಅಧಿಕಾರಿ ಡಾನ್ಸ್ ವಿಡಿಯೋ ವೈರಲ್ IPS Officer off Telangana Vasundhara Dance Goes Viral in Social Media ತೆಲಂಗಾಣದ ಐಪಿಎಸ್ ಅಧಿಕಾರಿ ವಸುಂಧರಾ ನೃತ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ तेलंगाना आईपीएस अधिकारी वसुंधरा का डांस सोशल मीडिया पर वायरल हो गया है। #Cute #SammakkaSarakka #MedaramJatara2026 #MonalisaofTelanagana #malgudiexpress #malgudinews #news #TopNews | Subscribe | Comment | Like | Share |
ಐಪಿಎಸ್ ಅಧಿಕಾರಿ ಡಾನ್ಸ್ ವಿಡಿಯೋ ವೈರಲ್ - ShareChat
00:28
#📜ಪ್ರಚಲಿತ ವಿದ್ಯಮಾನ📜 ಡಿ ಕೆ ಶಿವಕುಮಾರ್ ಯಾವುದೇ ಕಾರಣಕ್ಕೂ ರಾಜ್ಯದ ಸಿಎಂ ಆಗಬಾರದು, ಸಿದ್ದರಾಮಯ್ಯ ಮುಂದುವರೆಯಬೇಕು: ಜನಾರ್ದನ ರೆಡ್ಡಿ ಬೆಂಗಳೂರು: ಬಳ್ಳಾರಿಯ ರಾಜಕಾರಣ ರಾಜ್ಯ ವಿಧಾನಸಭೆಯಲ್ಲಿ ಪ್ರತಿಧ್ವನಿಸಿ ಸವಾಲು ಮತ್ತು ಪ್ರತಿ ಸವಾಲಿನ ಪಂಥಾಹ್ವಾನದ ವೇದಿಕೆಯಾಗಿ ಪರಿಣಮಿಸಿತು. ಅಷ್ಟೇ ಅಲ್ಲದೆ ಡಿಸಿಎಂ ಡಿ ಕೆ ಶಿವಕುಮಾರ್ ಯಾವುದೇ ಕಾರಣಕ್ಕೂ ರಾಜ್ಯದ ಮುಖ್ಯಮಂತ್ರಿ ಆಗಬಾರದು, ಸಿದ್ದರಾಮಯ್ಯ ಅವರೇ ಹುದ್ದೆಯಲ್ಲಿ ಮುಂದುವರೆಯಬೇಕು ಎಂದು ಬಿಜೆಪಿ ಶಾಸಕ ಜನಾರ್ದನ ರೆಡ್ಡಿ ಆಗ್ರಹಿಸಿದರು. ರಾಜ್ಯಪಾಲರ ಭಾಷಣಕ್ಕೆ ವಂದನೆ ಸಲ್ಲಿಸುವ ನಿರ್ಣಯದ ಮೇಲೆ ಚರ್ಚೆ ಆರಂಭಿಸಿದ ಬಿಜೆಪಿಯ ಜನಾರ್ದನ ರೆಡ್ಡಿ, ಬಳ್ಳಾರಿಯಲ್ಲಿ ಇತ್ತೀಚೆಗೆ ಬ್ಯಾನರ್ ಕಟ್ಟುವ ವಿಚಾರಕ್ಕೆ ನಡೆದ ಗಲಭೆಯ ವಿಷಯ ಪ್ರಸ್ತಾಪಿಸಿದ್ದರು. ಇದಕ್ಕೆ ಸದನದಲ್ಲಿ ಭಾಷಣ ಆರಂಭಿಸಿದ ಮಾಜಿ ಸಚಿವ ಬಿ ನಾಗೇಂದ್ರ, ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಬಳ್ಳಾರಿಯಲ್ಲಿ ನಡೆದ ಘರ್ಷಣೆಯ ಕುರಿತಂತೆ ಜನಾರ್ದನ ರೆಡ್ಡಿಯವರು ನಿನ್ನೆ ಹಲವು ಸುಳ್ಳು ಹೇಳಿ ಸದನಕ್ಕೆ ತಪ್ಪು ಮಾಹಿತಿ ಕೊಟ್ಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಜನಾರ್ದನ ರೆಡ್ಡಿ ಅವರ ಮನೆ ಮುಂದೆ ಗಲಾಟೆ ಆದಾಗ ಬಿಜೆಪಿ ಕಾರ್ಯಕರ್ತರು ವಾಲ್ಕೀಕಿ ಫೋಟೋ ಇದ್ದ ಬ್ಯಾನರ್ ಕೆಳಕ್ಕೆ ಹಾಕಿ ಅವಮಾನ ಮಾಡಿದ್ರು. ಗಲಾಟೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಸಾವಾಯ್ತು.ಇದಕ್ಕೆ ಯಾರು ಕಾರಣ ಅಂತ ತನಿಖೆಯಲ್ಲಿ ಬಹಿರಂಗ ಆಗುತ್ತದೆ.ಆದರೆ ಈ ಘಟನೆ ನಂತರ ಬಿಜೆಪಿ ನಾಯಕರ ಬಳ್ಳಾರಿಯಲ್ಲಿ ಸಮಾವೇಶದಲ್ಲಿ ಶ್ರೀರಾಮುಲು ಅವರು ಏ ಭರತ್ ರೆಡ್ಡಿ, ಏಯ್ ಕಾಂಗ್ರೆಸ್ ಕಾರ್ಯಕರ್ತರೇ ಮುಂದೆ ನಮ್ಮ ಸರ್ಕಾರ ಅಧಿಕಾರಕ್ಕೆ ಬರುತ್ತೆ. ನೀವೆಲ್ಲಿದ್ರೂ, ಪಾತಾಳದಲ್ಲಿದ್ರೂ ಹುಡುಕಿ ಒದ್ದು ಓಡಿಸ್ತೇವೆ ಅಂದರು ಎಂದು ಆರೋಪಿಸಿದರು. ನಾಗೇಂದ್ರ ಅವರ ಈ ಆರೋಪಗಳಿಗೆ ಅಲ್ಲಿಯೇ ತಿರುಗೇಟು ನೀಡಿದ ಜನಾರ್ಧನ ರೆಡ್ಡಿ ವಾಲ್ಮೀಕಿ ಸಮುದಾಯದಲ್ಲಿ ನೀನಿನ್ನೂ ಬಚ್ಚಾ ಯಾವುದೇ ಕಾರಣಕ್ಕೂ ಶ್ರೀರಾಮುಲು ಮುಂದೆ ನೀನು ನಾಯಕನಾಗಿ ಬೆಳೆಯಲು ಸಾಧ್ಯವೇ ಇಲ್ಲ. ಈ ಜನ್ಮ ಅಲ್ಲ ಇನ್ನು ನೂರು ಜನ್ಮ ಹುಟ್ಟಿ ಬಂದರೂ ನೀನು ನಮ್ಮ ನಾಯಕ ಶ್ರೀರಾಮುಲು ಅವರ ಮುಂದೆ ಲೀಡರ್ ಆಗಿ ಬೆಳೆಯಲು ಸಾಧ್ಯವೇ ಇಲ್ಲ ಎಂದು ಗುಡುಗಿದರು. ಗಲಾಟೆಯ ಸಂದರ್ಭದಲ್ಲಿ ಪೆಟ್ರೋಲ್ ಬಾಂಬ್ ಹಾಕೋಕೆ ಮುಂದಾದ್ರು. ನಿಮ್ಮ ಕಾರ್ಯಕರ್ತ ಸಾವನ್ನಪ್ಪಿದ್ದಾರೆ. ಆದ್ರೆ ನೀನು ಅದನ್ನೆ ಸಮರ್ಥನೆ ಮಾಡಿಕೊಳ್ಳುತ್ತಿಯಾ ಎಂದ್ರೆ ಹೇಗೆ? ಎಂದು ನಾಗೇಂದ್ರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು. ಇದಕ್ಕೆ ತಿರುಗೇಟು ನೀಡಿದ ನಾಗೇಂದ್ರ, "ವಾಲ್ಮೀಕಿ ಭಾವಚಿತ್ರ ಇರೋ ಬ್ಯಾನರ್ ಕೆಳಗೆ ಹಾಕಿ ತುಳಿದಿದ್ದಾರೆ. ಇದು ಸರಿಯಲ್ಲ. ನನ್ನನ್ನು ಸೋಲಿಸೋದು ಬಿಡೋದು ಇದ್ದೇ ಇರುತ್ತದೆ. ನಮ್ಮ ಹೋರಾಟವೂ ಇರುತ್ತದೆ‌. ರೆಡ್ಡಿಯವರ ಎಲ್ಲ ಚಾಲೆಂಜ್ ಗಳನ್ನೂ ನಾವು ಸ್ವಾಗತ ಮಾಡ್ತೇವೆ" ಎಂದರು. ವಿಚಾರವಾಗಿ ಇಬ್ಬರೂ ನಾಯಕರ ನಡುವೆ ತೀವ್ರ ಮಾತಿನ ಚಕಮಕಿ ನಡೆದು ಗದ್ದಲದ ವಾತಾವರಣ ಸೃಷ್ಟಿಯಾಯಿತು ಇಬ್ಬರು ನಾಯಕರನ್ನು ಸುಮ್ಮನಿರುವಂತೆ ಮಾಡುವಲ್ಲಿ ಹರಸಾಹಸ ಮಾಡಿದ ಸಭಾಧ್ಯಕ್ಷ ಯುಟಿ ಖಾದರ್ ಅವರು ಅಂತಿಮವಾಗಿ ಬಿಜೆಪಿ ನಾಯಕ ಸುನಿಲ್ ಕುಮಾರ್ ಅವರಲ್ಲಿ ಜನಾರ್ಧನ ರೆಡ್ಡಿ ಅವರನ್ನು ಸುಮ್ಮನೆ ಕೂರಿಸುವಂತೆ ಮನವಿ ಮಾಡಿದರು. #DKShivakumar #CM #state #reason #Siddaramaiah #continue #JanardanaReddy #malgudiexpress #malgudinews #news #TopNews
📜ಪ್ರಚಲಿತ ವಿದ್ಯಮಾನ📜 - ShareChat
#📜ಪ್ರಚಲಿತ ವಿದ್ಯಮಾನ📜 ಬಿಜೆಪಿ ನಾಯಕರು ಜನ ಸಾಮಾನ್ಯರು ಹಾದಿ ಬೀದಿಯಲ್ಲಿ ಉಗಿಯುತ್ತಿರುವುದನ್ನು ಮರೆತಂತಿದೆ: ಬಿ ಕೆ ಹರಿಪ್ರಸಾದ್ ಭೂತದ ಬಾಯಲ್ಲಿ ಭಗವದ್ಗೀತೆ ಕೇಳುವುದು ಒಂದೇ, BJP Karnataka ದವರಿಂದ ಘನತೆ, ಗೌರವ ಸಂಸ್ಕೃತಿಯ ಬಿಟ್ಟಿ ಪಾಠ ಕೇಳುವುದು ಒಂದೇ. ಸದನಗಳ ಘನತೆ, ಗೌರವವನ್ನು ಮೂರಾಬಟ್ಟೆ ಮಾಡಿರುವ ಬಿಜೆಪಿ ನೈತಿಕತೆಯ ಪಾಠ ಮಾಡುವುದು ಹೇಸಿಗೆತನದ ಪರಮಾವಧಿ. ಚಿಂತಕರ ಚಾವಡಿಯಲ್ಲಿ ಬಾಯ್ತುರಿಕೆಗೆ ಮಾತಾಡುವ ನಾಯಕರನ್ನೇ ಆಯ್ಕೆ ಮಾಡುವ ಪರಂಪರೆ ಹೊಂದಿರುವ ಬಿಜೆಪಿ ಪಕ್ಷದವರು ಸದನದಲ್ಲಾಗಲಿ, ಸಾರ್ವಜನಿಕ ವೇದಿಕೆಯಲ್ಲಾಗಲಿ ಮಹಿಳೆಯರ ಬಗ್ಗೆ, ಜನಪ್ರತಿನಿಧಿಗಳ ಬಗ್ಗೆ ಉದುರಿಸುವ ಒಂದೊಂದು ಮುತ್ತುಗಳನ್ನು ನೋಡಿ ಜನ ಸಾಮಾನ್ಯರು ಹಾದಿ ಬೀದಿಯಲ್ಲಿ ಉಗಿಯುತ್ತಿರುವುದನ್ನು ಮರೆತಂತಿದೆ. ಆರ್.ಎಸ್.ಎಸ್ ಹಾಗೂ ಬಿಜೆಪಿ ಇತ್ತೀಚಿಗೆ "ನಮಸ್ತೆ ಸದಾ ವತ್ಸಲೇ"ಯನ್ನು ಮರೆತು, "ನಮಸ್ತೆ ಸದಾ ರೌಡಿ ಕೋತ್ವಾಲನೇ"ಎಂದು ಶುರು ಮಾಡಿದ್ದಾರೆ. ಕೇಂದ್ರದ ಗೃಹ ಸಚಿವನೇ ಕೊಲೆಯ ಕೇಸ್ ಹಾಕಿಸಿಕೊಂಡು, ಗೂಂಡಾಗಿರಿ ಮಾಡಿ, ಸುಪ್ರೀಂಕೋರ್ಟಿನಿಂದ ಗಡಿಪಾರದವನ ಚೇಲಾಗಳೇ ತುಂಬಿ ತುಳುಕುತ್ತಿರುವ ಬಿಜೆಪಿಗೆ ರೌಡಿ ಕೋತ್ವಾಲನೇ ಗುರು. ರೌಡಿಗಳು, ರೇಪಿಸ್ಟ್ ಗಳು, ಕೊಲೆ ಗಡುಕರಿಗಾಗಿಯೇ ಬಿಜೆಪಿಯಲ್ಲಿ ಪ್ರತ್ಯೇಕ ಮೋರ್ಚಾ ಇರುವಾಗ ರೌಡಿ ಕೋತ್ವಾಲನ ಜಪ ಇಲ್ಲದೇ ನಿದ್ದೆ ಕೂಡ ಬರುವುದಿಲ್ಲ. ಸದನದಲ್ಲೇ ಸರ್ಕಾರದ ಸಚಿವೆಯನ್ನು "ವೇಶ್ಯೆ" ಎಂದು ಕರೆದವನನ್ನು ಚಿಂತಕರ ಚಾವಡಿಗೆ ಸದಸ್ಯ ಮಾಡಿರುವ ಬಿಜೆಪಿಯ ಸಂಸ್ಕೃತಿ ಯಾವುದು? ಮಹಿಳೆಯರನ್ನು ತುಚ್ಛವಾಗಿ ಮಾತಾಡುವ ನಾಯಕನನ್ನು ಬಿಜೆಪಿ ಪಕ್ಷ ಮುಂಬಾಗಿಲಿನಿಂದ ಆಯ್ಕೆ ಮಾಡಿದ್ದಿರೋ ಇಲ್ಲ, ಹಿಂಬಾಗಿಲಿನಿಂದ ಆಯ್ಕೆ ಮಾಡಿದ್ದಿರೋ.. "ರಾತ್ರಿ ಸರ್ಕಾರದ ಕೆಲಸ, ದಿನವಿಡೀ ಮುಖ್ಯಮಂತ್ರಿಯ ಕೆಲಸ ಮಾಡುತ್ತಾರೆ" ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿಯನ್ನೇ ಬಹಿರಂಗ ಸಭೆಯಲ್ಲಿ ನಿರ್ಲಜ್ಜೆಯಿಂದ ಮಾತಾಡಿದ ರವಿ ಕುಮಾರ್ ನನ್ನು ಯಾವ ಮಾನದಂಡದ ಮೇಲೆ ಚಿಂತಕರ ಚಾವಡಿಗೆ ಹಿಂಬಾಗಿಲಿಂದ ಆಯ್ಕೆ ಮಾಡಿದ್ದೀರಿ? ಸಂಘ ಪರಿವಾರದ ಸಂಸ್ಕೃತಿಯ ವಾರಸುದಾರನ ನುಡಿಮುತ್ತುಗಳಿಂದ ಚಿಂತಕ ಚಾವಡಿಯೇ ಎಗರಿ ಹೋಗಿದೆ. ಮನೆಗ ಕಷ್ಟ ಎಂದು ಬಂದ ಬಾಲಕಿ ಮೇಲೆ ಪೈಶಾಚಿಕ ಕೃತ್ಯ ಮಾಡಿ, ಪೋಕ್ಸ್ ಕೇಸ್ ಅಲ್ಲಿ ಕೋರ್ಟ್ ಎದುರು ಹಾಜರಾಗದೆ ಸಾರ್ವಜನಿಕವಾಗಿ ಮುಖ ತೋರಿಸಲು ಯೋಗ್ಯತೆ ಇಲ್ಲದ ನಾಯಕನನ್ನು ಮಾರ್ಗದರ್ಶಕ ಮಂಡಳಿಯಲ್ಲಿ ಇಟ್ಟುಕೊಂಡಿರುವ ಬಿಜೆಪಿ ಪಕ್ಷಕ್ಕೆ ಕಿಂಚಿತ್ತಿದ್ದಾರೂ ನಾಚಿಕೆ, ಮಾನ, ಮರ್ಯಾದೆ ಎನ್ನುವುದು ಇದೆಯೇ? ಬಿಜೆಪಿಯ ಇಂದ್ರ-ಚಂದ್ರ-ಸತ್ಯಹರಿಶ್ಚಂದ್ರನ ತುಂಡುಗಳ ಬಗ್ಗೆ ರಾಜ್ಯದಲ್ಲಿ ಮಾತ್ರವಲ್ಲ ಇಡೀ ದೇಶದಲ್ಲೇ ಮಾಡಿರುವ ಮಾನಗೇಡಿತನಗಳನ್ನು ಕಂತುಗಳಲ್ಲಿ ಮಾತಾಡುವಷ್ಟಿದೆ. ಬಿಜೆಪಿಯ ಗೊಡ್ಡು ಬೆದರಿಕೆಗಳಿಗೆ, ಅವಮಾನಗಳಿಗೆ ಹೆದರುವ, ಬಗ್ಗುವ ಹೇಡಿ ನಾನಲ್ಲ.‌ ನನ್ನದು ಗಾಂಧಿ ಸಂತತಿ- ಹೇಡಿ ಸಾವರ್ಕರ್ ಸಂತತಿಯಂತೂ ಅಲ್ಲವೇ ಅಲ್ಲ. - ಬಿ ಕೆ ಹರಿಪ್ರಸಾದ್, ವಿಧಾನ ಪರಿಷತ್ ಸದಸ್ಯ #BJP #leaders #forgotten #common #people #streets #BKHariprasad #malgudiexpress #malgudinews #news #TopNews
📜ಪ್ರಚಲಿತ ವಿದ್ಯಮಾನ📜 - ShareChat