#📜ಪ್ರಚಲಿತ ವಿದ್ಯಮಾನ📜
ತುಳುನಾಡಿನ ಪ್ರತಿಯೊಬ್ಬರೂ ಓದಲೇಬೇಕಾದ ಪುಸ್ತಕ ಕರಾವಳಿಯ ರಕ್ತ ಕಣ್ಣೀರು
ಕೋಮುದ್ವೇಷದಿಂದ ನಲುಗಿದ ಕರಾವಳಿಯಲ್ಲಿ ಜೀವ ಕಳೆದುಕೊಂಡ ಅಮಾಯಕ ಯುವಕರ ಕುಟುಂಬಗಳ ಆಕ್ರಂದನವನ್ನು ಅಕ್ಷರ ರೂಪಕ್ಕಿಳಿಸಿದ ಯುವ ಪತ್ರಕರ್ತರಾದ ಇರ್ಷಾದ್ ಉಪ್ಪಿನಂಗಡಿಯವರ ಕಾರ್ಯವನ್ನು ಖಂಡಿತಕ್ಕೂ ಮೆಚ್ಚಲೇಬೇಕು.
ಸ್ವಾತಂತ್ರ್ಯ ಪೂರ್ವದಿಂದಲೇ ಕೋಮು ಸೌಹಾರ್ದತೆಗೆ ಸಾಕ್ಷಿಯಾಗಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಸೌಹಾರ್ದತೆಗೆ ಕೊಳ್ಳಿ ಇಟ್ಟಿದ್ದೇ ಇಲ್ಲಿನ ಸಂಘಪರಿವಾರ ಎಂಬುದರಲ್ಲಿ ಎರಡು ಮಾತಿಲ್ಲ. ಕಳೆದ 3 - 4 ದಶಕಗಳಿಂದ ತನ್ನ ರಾಜಕೀಯ ಬೇಳೆ ಬೇಯಿಸಲು ಕೋಮುವಾದದ ಅಸ್ತ್ರವನ್ನು ಉಪಯೋಗಿಸಿ ಅಮಾಯಕ ಯುವಕರ ಜೀವವನ್ನು ಬಲಿ ತೆಗೆದುಕೊಂಡು ತಾನು ಮಾತ್ರ ರಾಜಕೀಯದ ಮೆಟ್ಟಿಲನ್ನು ಹಂತ ಹಂತವಾಗಿ ಮೇಲೇರಿ ಕೋಟ್ಯಾಂತರ ರೂಪಾಯಿ ಹಣವನ್ನು ದೋಚಿದ ಬಿಜೆಪಿ ಸಂಘಪರಿವಾರದ ನಾಯಕರ ಕಥೆ ಯಾರಿಗೇನು ಗೊತ್ತಿಲ್ಲ. ದೀರ್ಘಕಾಲ ಇಂತಹ ವಿಷಜಂತುಗಳು ಹಬ್ಬಿಸಿದ ಕೋಮು ದ್ವೇಷದಿಂದ ಕರಾವಳಿ ಜನತೆಯ ಬದುಕನ್ನೇ ನಾಶ ಮಾಡಿದ್ದಾರೆ.ಇಲ್ಲಿ ಅಭಿವೃದ್ಧಿಯಂತೂ ಕನಸಿನ ಮಾತಾಗಿದೆ. ಒಂದು ಕಾಲದಲ್ಲಿ ಮಂಗಳೂರಿನ ಜನತೆಯನ್ನು ಅತ್ಯಂತ ಗೌರವದಿಂದ ಕಾಣುತ್ತಿದ್ದ ಹೊರಗಿನ ಜನರು ಇಂದು ಮಂಗಳೂರಿಗರು ಅಂದರೆ ಮಾರುದ್ದ ಓಡುವ ಪ್ರಸಂಗ ಬಂದಿದೆ. ಅಷ್ಟರ ಮಟ್ಟಿಗೆ ಕರಾವಳಿಯ ಅಭಿವೃದ್ಧಿ ಹಾಗೂ ಸೌಹಾರ್ದತೆಯನ್ನು ನಾಶಪಡಿಸಿ, ಇಂದು ಹಿಂದುತ್ವದ ಭದ್ರಕೋಟೆ ಎಂದು ಜಪ ಮಾಡಲಾಗುತ್ತಿದೆ.
ಕೋಮುದ್ವೇಷಕ್ಕೆ ವಿನಾಃ ಕಾರಣ ಬಲಿಯಾದ ಜೀವಗಳೆಷ್ಟು....?ಎಲ್ಲೋ ಒಂದು ಕಡೆ ಅಮಾಯಕ ಯುವಕನ ಕೊಲೆ ನಡೆದರೆ,ಅದಕ್ಕೆ ಪ್ರತಿಯಾಗಿ ಮುಯ್ಯಿಗೆ ಮುಯ್ಯಿ, ತಲೆಗೊಂದು ತಲೆ ಎನ್ನುವ ಎರಡೂ ಕಡೆಯ ಕೋಮುವಾದಿಗಳು ಸೃಷ್ಟಿಸಿರುವ ಫಾರ್ಮುಲಾಕ್ಕೆ ಮತ್ತೊಂದು ಕಡೆ ತನಗೆ ಸಂಬಂಧವೇ ಇಲ್ಲದ ಜನಗಳು ಬಂದು ಮತ್ತೊಬ್ಬ ಅಮಾಯಕ ಯುವಕನನ್ನು ಕೊಲೆ ಮಾಡುವುದೆಂದರೆ ಎಂತಹ ವಿಕೃತ ಮನೋಸ್ಥಿತಿಯಿದು....?ಮೊದಲು ಜೀವ ಕಳೆದುಕೊಂಡ ಯುವಕನಿಗೂ ನಂತರದ ಜೀವವನ್ನು ಬಲಿ ತೆಗೆದುಕೊಳ್ಳಲು ಹೋಗುವ ಯುವಕರಿಗೂ ಸಂಬಂಧವೇ ಇಲ್ಲ ಅದೇ ರೀತಿ ಮೊದಲ ಯುವಕನನ್ನು ಕೊಲೆ ನಡೆಸಲು ಹೋಗುವ ಯುವಕರಿಗೂ ನಂತರ ಜೀವ ಕಳೆದುಕೊಳ್ಳುವ ಯುವಕನಿಗೂ ಸಂಬಂಧವೇ ಇಲ್ಲ. ಜೀವ ಕಳೆದುಕೊಂಡ ಯುವಕನ ಮನೆಯಲ್ಲಿ ದುಖಃ ಮಡುಗಟ್ಟಿದರೆ, ಇತ್ತ ಅದೇ ಯುವಕನ ಶವವನ್ನು ಮೆರವಣಿಗೆ ನಡೆಸಿ ಅದರಲ್ಲೂ ರಾಜಕೀಯ ದುರ್ಲಾಭ ನಡೆಸುವ ನೀಚರು ರಾಜಕೀಯದಲ್ಲಿ ಮೆರೆಯುತ್ತಿರುವುದು ಕರಾವಳಿ ಜಿಲ್ಲೆಯ ದುರಂತ._
ಅತ್ಯಲ್ಪ ಕಾಲದಲ್ಲಿ ಅದೆಷ್ಟೋ ಜೀವಗಳನ್ನು ಕಳೆದುಕೊಂಡ ಕರಾವಳಿಯಲ್ಲಿ ದಿನಾ ಸಾಯುವವರಿಗೆ ಅಳುವವರು ಯಾರು ಎಂಬಂತಾಗಿದೆ. ಪುಸ್ತಕದಲ್ಲಿರುವ ಎಲ್ಲಾ ಘಟನೆಗಳು ಆ ಸಂದರ್ಭದಲ್ಲಿ ಮಾಧ್ಯಮದಲ್ಲಿ ಸುದ್ದಿಯಾಗಿದ್ದು ಬಿಟ್ಟರೆ ನಂತರದಲ್ಲಿ ಯಾರೂ ಅವರ ಬಗ್ಗೆ ಚಿಂತಿಸಿಲ್ಲ. ಆದರೆ ಇರ್ಷಾದ್ ರವರು ಈ ರೀತಿ ಜೀವ ಕಳೆದುಕೊಂಡ ಪ್ರತಿಯೊಂದು ಕುಟುಂಬ ಸದಸ್ಯರನ್ನು ಭೇಟಿಯಾಗಿ ಅವರ ಮನದಾಳದ ದುಖಃ ದುಮ್ಮಾನಗಳನ್ನು ನೋವುಗಳನ್ನು ದಾಖಲಿಸಿ ಕರಾವಳಿಯ ಲಕ್ಷಾಂತರ ಜನತೆಯ ಮುಂದಿಟ್ಟಿದ್ದಾರೆ.ಪ್ರತಿಯೊಂದು ಘಟನೆಗಳನ್ನು ಕಣ್ಷಿಗೆ ಕಟ್ಟುವಂತೆ ವಿವರಿಸಿದ್ದಾರೆ.ಓದಿ ಮುಗಿಸುವಷ್ಟರಲ್ಲಿ ಕಣ್ಣಂಚಿನಲ್ಲಿ ಕಣ್ಣೀರು ಹರಿಯಿತು.
ಅಂದ ಹಾಗೆ ಈ ಪುಸ್ತಕವನ್ನು ಪ್ರತಿಯೊಬ್ಬರೂ ಓದಲೇಬೇಕು.... ಕರಾವಳಿಯ ಲಕ್ಷಾಂತರ ಜನತೆಯ ಹೃದಯ ತಟ್ಟುವಲ್ಲಿ ಈ ಪುಸ್ತಕ ನಾಂದಿ ಹಾಡಬೇಕು.ಕೆಳವರ್ಗದ ಶೂದ್ರ ಯುವಕರ ತಲೆಯಲ್ಲಿ ಕೊಮುದ್ವೇಷದ ಅಮಲು ಇಳಿದು, ಪ್ರೀತಿಯ ಗಾಳಿ ಬೀಸುವಂತಾಗಬೇಕು... ಅಮಾಯಕ ಯುವಕರ ಬಲಿ ನಿಲ್ಲುವಂತಾಗಬೇಕು....
- ಸುನಿಲ್ ಕುಮಾರ್ ಬಜಾಲ್
#Everyone #Tulunad #read #book #KaravaliyaRaktaKanneeru #malgudiexpress #malgudinews #news #TopNews
#📜ಪ್ರಚಲಿತ ವಿದ್ಯಮಾನ📜
ಜೆಡಿಎಸ್ ತುತ್ತತುದಿಯ ನಾಯಕರು ಗೌಡರ ಕುಟುಂಬದವರೇ ಆಗಿರುತ್ತಾರೆ: ಸಿದ್ದರಾಮಯ್ಯ
ಸಾಮಾಜಿಕ ದಿನದ ಆಚರಣೆಯ ಅಂಗವಾಗಿ ಪತ್ರಿಕೆಯೊಂದಕ್ಕೆ ನಾನು ಬರೆದಿದ್ದ ಲೇಖನ ರಾಜ್ಯದ ರಾಜಕೀಯ ವಲಯದಲ್ಲಿ ಬಹುಮುಖಿ ಚರ್ಚೆಗೆ ಒಳಗಾಗಿದೆ. ನೀರು ನಿಂತಲ್ಲಿಯೇ ನಿಂತು ಮಡುಗಟ್ಟಿಹೋದರೆ ಕೆಸರಾಗುತ್ತದೆ, ಹರಿಯುತ್ತಿದ್ದರೆ ಅದು ತಿಳಿಯಾಗುತ್ತಾ ಹೋಗುತ್ತದೆ. ಸಾಮಾಜಿಕ ವ್ಯವಸ್ಥೆ ಕೂಡಾ ಹಾಗೆಯೇ ಪಟ್ಟಭದ್ರವಾಗಿ ಉಳಿಯದೆ ಚಲನಶೀಲತೆ ಪಡೆದುಕೊಂಡರೆ ಅದು ಜನಪರವಾಗಿ ಪರಿವರ್ತನೆಯಾಗುತ್ತದೆ. ಈ ದೃಷ್ಟಿಯಿಂದ ನನ್ನ ಲೇಖನದ ಬಗೆಗಿನ ಚರ್ಚೆಯನ್ನು ನಾನು ಸ್ವಾಗತಿಸುತ್ತೇನೆ.
ಸಾಮಾಜಿಕ ನ್ಯಾಯದ ಬಗ್ಗೆ ನಾನು ಇದೇ ಮೊದಲ ಬಾರಿ ಮಾತನಾಡಿದ್ದಲ್ಲ, ನನ್ನ ನಾಲ್ಕು ದಶಕಗಳ ರಾಜಕೀಯ ಜೀವನವನ್ನು ನೋಡುತ್ತಾ ಬಂದವರಿಗೆ ಇದು ಗೊತ್ತಿರುತ್ತದೆ. ಅಧಿಕಾರ ಇರಲಿ, ಇಲ್ಲದೆ ಇರಲಿ ಸಾಮಾಜಿಕ ನ್ಯಾಯದ ಪರವಾದ ನನ್ನ ನಿಲುವು ಅಚಲ. ನಮ್ಮಲ್ಲಿನ ಜಾತಿ ವ್ಯವಸ್ಥೆ ಬಗ್ಗೆ ನನ್ನನ್ನು ಟೀಕಿಸುತ್ತಿರುವ ರಾಜಕಾರಣಿಗಳಿಗಿಂತ ಹೆಚ್ಚಿನ ಸ್ಪಷ್ಟತೆ ನನಗಿದೆ. ಈ ಬಗ್ಗೆ ನಾನು ಸಾರ್ವಜನಿಕ ಸಂವಾದಕ್ಕೆ ಸಿದ್ಧವಾಗಿದ್ದೇನೆ.
ನನ್ನ ಲೇಖನದ ಬಗ್ಗೆ ಜಾತ್ಯತೀತ ಜನತಾದಳದ ನಾಯಕರಾದ ಕೇಂದ್ರ ಸಚಿವ H D Kumaraswamy ಅವರು ವ್ಯಕಪಡಿಸಿರುವ ಪ್ರತಿಕ್ರಿಯೆ ಓದಿ ಆಶ್ಚರ್ಯವಾಗಿಲ್ಲ, ‘’ಸಿದ್ದರಾಮಯ್ಯನವರು ಕುರ್ಚಿಗಾಗಿ ಜಾತಿ ಎಳೆದು ತಂದಿದ್ದಾರೆ" ಎಂಬ ಅವರ ಆರೋಪವನ್ನು ತಮಾಷೆಯಾಗಿ ಸ್ವೀಕರಿಸಿದ್ದೇನೆ.
ಕುಮಾರಸ್ವಾಮಿಯವರು ಮತ್ತು ಅವರ ಪೂಜ್ಯ ತಂದೆಯವರಾದ ಹೆಚ್.ಡಿ.ದೇವೇಗೌಡರು ಖಂಡಿತಾ ಜಾತಿವಾದಿಗಳಲ್ಲ, ಅವರು ಸ್ವಜಾತಿ ವಿರೋಧಿಗಳು. ಅದಕ್ಕಿಂತಲೂ ಮುಖ್ಯವಾಗಿ ಕುಟುಂಬವಾದಿಗಳು. ಇವರಿಗೆ ತಮ್ಮ ಜಾತಿ ಒಂದು ಓಟ್ ಬ್ಯಾಂಕ್ ಅಷ್ಟೆ. ತಂದೆ ಮತ್ತು ಮಕ್ಕಳು ತಮ್ಮ ಕುಟುಂಬದ ಸ್ವಾರ್ಥಕ್ಕಾಗಿ ರಾಜಕೀಯ ಕ್ಷೇತ್ರದಲ್ಲಿ ಉಳಿದವರನ್ನು ಬಿಟ್ಟುಬಿಡಿ, ಸ್ವಜಾತಿ ನಾಯಕರು ಕೂಡಾ ಬೆಳೆಯದಂತೆ ಒಬ್ಬೊಬ್ಬರನ್ನೇ ಮುಗಿಸುತ್ತಾ ಬಂದವರು. "ಹಿಂದೆ, ಇಂದು ಮತ್ತು ಮುಂದೆ ಜಾತ್ಯತೀತ ಜನತಾದಳದ ತುತ್ತತುದಿಯ ನಾಯಕರು ಗೌಡರ ಕುಟುಂಬದವರೇ ಆಗಿರುತ್ತಾರೆ" ಎನ್ನುವುದು ಸತ್ಯ.
ತಮ್ಮ ಸುದೀರ್ಘ ರಾಜಕೀಯ ಜೀವನದಲ್ಲಿ ಸನ್ಮಾನ್ಯ ಹೆಚ್.ಡಿ.ದೇವೇಗೌಡರು ಎಷ್ಟು ಮಂದಿ ಒಕ್ಕಲಿಗ ನಾಯಕರನ್ನು ಜೆಡಿ(ಎಸ್) ಪಕ್ಷದಲ್ಲಿ ಬೆಳೆಸಿದ್ದಾರೆ ಎಂದು ವಿನಯಪೂರ್ವಕವಾಗಿ ಕೇಳಬಯಸುವೆ. ಹಾಸನದ ಪುಟ್ಟಸ್ವಾಮಿಗೌಡ, ಸಿ.ಎಸ್.ಪುಟ್ಟೇಗೌಡ, ಜವರೇಗೌಡ, ಕೆ.ಎಂ.ವಿಶ್ವನಾಥ್, ಹನುಮೇಗೌಡ, ಮಂಡ್ಯದ ಕೆ.ಎನ್.ನಾಗೇಗೌಡ, ಕೆ.ಆರ್.ಪೇಟೆ ಕೃಷ್ಣ, ವೈ.ಕೆ.ರಾಮಯ್ಯ, ಸಿ.ಬೈರೇಗೌಡ, ಬಚ್ಚೇಗೌಡ, ಬಿ.ಎಲ್.ಶಂಕರ್, ಸಿ.ನಾರಾಯಣಸ್ವಾಮಿ, ಚೆಲುವರಾಯ ಸ್ವಾಮಿ ಮೊದಲಾದವರೆಲ್ಲ ಯಾಕೆ ದೇವೇಗೌಡರನ್ನು ಬಿಟ್ಟು ಹೊರಬಂದರು ಎನ್ನುವುದನ್ನು ನಾನು ವಿವರಿಸಿ ಹೇಳಬೇಕಾಗಿಲ್ಲ.
ಒಕ್ಕಲಿಗ ನಾಯಕರನ್ನು ಗುರುತಿಸಿ ರಾಜಕೀಯವಾಗಿ ಬೆಳೆಸಿದ್ದು ಕಾಂಗ್ರೆಸ್ ಪಕ್ಷ ಮಾತ್ರ. ಕೆಂಗಲ್ ಹನುಮಂತಯ್ಯ ಅವರಿಂದ ಹಿಡಿದು ಎಸ್.ಎಂ.ಕೃಷ್ಣ ವರೆಗೆ ನೂರಾರು ಒಕ್ಕಲಿಗ ನಾಯಕರನ್ನು ಬೆಳೆಸಿದೆ. ದೇವೇಗೌಡರಿಂದ ಮೋಸಕ್ಕೊಳಗಾದ ನಾಯಕರಿಗೆ ಅವಕಾಶ ನೀಡಿ ರಾಜಕೀಯವಾಗಿ ಬೆಳೆಸುತ್ತಿರುವುದು ಕೂಡಾ ಕಾಂಗ್ರೆಸ್ ಪಕ್ಷ. ಕೆಂಗಲ್ ಹನುಮಂತಯ್ಯ, ಕಡಿದಾಳ್ ಮಂಜಪ್ಪ, ಎಸ್.ಎಂ.ಕೃಷ್ಣ ಅವರು ರಾಜ್ಯದ ಮುಖ್ಯಮಂತ್ರಿಗಳಾಗಿದ್ದರೆ ಅದಕ್ಕೆ ಕಾಂಗ್ರೆಸ್ ಕಾರಣ.
ಒಕ್ಕಲಿಗ ಸಮುದಾಯಕ್ಕೆ ಸಮರ್ಥ ನಾಯಕತ್ವ ನೀಡಲು ಸಾಧ್ಯ ಇರುವವರು ಈಗಲೂ ಕಾಂಗ್ರೆಸ್ ಪಕ್ಷದಲ್ಲಿಯೇ ಇರುವುದು. ಡಿ.ಕೆ.ಶಿವಕುಮಾರ್, ಟಿ.ಬಿ.ಜಯಚಂದ್ರ, ಕಿಮ್ಮನೆ ರತ್ನಾಕರ್, ಎಂ.ಕೃಷ್ಣಪ್ಪ, ಕೃಷ್ಣಬೈರೇಗೌಡ, ಪಿರಿಯಾಪಟ್ಟಣ ವೆಂಕಟೇಶ್, ಹೀಗೆ ನಮ್ಮಲ್ಲಿರುವ ಒಕ್ಕಲಿಗರ ನಾಯಕರ ದೊಡ್ಡ ಪಟ್ಟಿಯೇ ಇದೆ. ಜೆಡಿ(ಎಸ್)ನಲ್ಲಿ ಎಷ್ಟು ಮಂದಿ ಒಕ್ಕಲಿಗ ನಾಯಕರಿದ್ದಾರೆ. ಮುಂದೊಂದು ದಿನ ದೇವೇಗೌಡರ ಕುಟುಂಬವನ್ನು ಹೊರತುಪಡಿಸಿ ಯಾರಾದರೂ ರಾಜ್ಯದ ಮುಖ್ಯಮಂತ್ರಿಗಳಾದರೆ ಅದು ಕಾಂಗ್ರೆಸ್ ಪಕ್ಷದಿಂದಲೇ ಆಗಲಿದೆ ಎನ್ನುವುದನ್ನು ನಾನು ಒತ್ತು ಕೊಟ್ಟು ಹೇಳುತ್ತಿದ್ದೇನೆ.
ಕಾಂಗ್ರೆಸ್ ಸಾಮಾಜಿಕ ನ್ಯಾಯದ ಪರವಾಗಿರುವ ಪಕ್ಷ. ಈ ಸೈದ್ಧಾಂತಿಕ ಬದ್ಧತೆಯನ್ನು ಕೇವಲ ಮಾತಿನ ಮೂಲಕ ಮಾತ್ರವಲ್ಲ ಕೃತಿಯ ಮೂಲಕವೂ ಪಕ್ಷ ಮಾಡಿ ತೋರಿಸುತ್ತಾ ಬಂದಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷದಿಂದ ಒಕ್ಕಲಿಗರು, ಲಿಂಗಾಯತರು, ಹಿಂದುಳಿದವರು ಮುಖ್ಯಮಂತ್ರಿಗಳಾಗಿದ್ದಾರೆ, ಹಿಂದುಳಿದ ಜಾತಿಗೆ ಸೇರಿದ ನನ್ನನ್ನು ಗುರುತಿಸಿ ಎರಡನೇ ಬಾರಿ ಮುಖ್ಯಮಂತ್ರಿಯಾಗುವ ಅವಕಾಶ ಕಲ್ಪಿಸಿಕೊಟ್ಟಿರುವುದು ಕೂಡಾ ಕಾಂಗ್ರೆಸ್ ಪಕ್ಷ. ಇದಕ್ಕಾಗಿ ನಾನು ಪಕ್ಷದ ನಾಯಕರಾದ ಸೋನಿಯಾಗಾಂಧಿ ಮತ್ತು ರಾಹುಲ್ ಗಾಂಧಿಯವರಿಗೆ ಆಭಾರಿಯಾಗಿದ್ದೇನೆ.
ಜಾತಿಯಿಂದ ಮಾತ್ರವಲ್ಲ, ಅರ್ಹತೆಯ ಬಲದಿಂದಲೇ ಮುಖ್ಯಮಂತ್ರಿಯಾಗುವಂತಹ ದಲಿತ ಸಮುದಾಯದ ನಾಯಕರು ಕೂಡಾ ಕಾಂಗ್ರೆಸ್ ಪಕ್ಷದಲ್ಲಿಯೇ ಇರುವುದು. ಮುಂದೊಂದ ದಿನ ದಲಿತ ಸಮುದಾಯದಿಂದ ಯಾರಾದಾರೂ ರಾಜ್ಯದ ಮುಖ್ಯಮಂತ್ರಿಯಾದರೆ ಅದು ಕಾಂಗ್ರೆಸ್ ಪಕ್ಷದಿಂದ ಮಾತ್ರ ಸಾಧ್ಯ ಎನ್ನುವುದನ್ನು ವಿಶ್ವಾಸಪೂರ್ವಕವಾಗಿ ಹೇಳಬಲ್ಲೆ.
ಇಂತಹದ್ದೊಂದು ಆಶಯವನ್ನು ಕೂಡಾ ವ್ಯಕ್ತಪಡಿಸುವ ಸ್ಥಿತಿಯಲ್ಲಿ ರಾಜ್ಯದ ಜೆಡಿಎಸ್ ಇಲ್ಲವೇ ಬಿಜೆಪಿ ಇದೆಯೇ? ಇದು ಕಾಂಗ್ರೆಸ್ ಪಕ್ಷ ಮತ್ತು ಬಿಜೆಪಿ, ಜೆಡಿಎಸ್ ಗಳಿಗೆಇರುವ ವ್ಯತ್ಯಾಸ. ಆದ್ದರಿಂದ ನನ್ನ ವಿರುದ್ಧ ಜಾತಿ ರಾಜಕೀಯದ ಆರೋಪ ಮಾಡುತ್ತಿರುವವರು ಒಮ್ಮೆ ಆತ್ಮಾವಲೋಕನ ಮಾಡಿಕೊಳ್ಳಲಿ ಎಂದು ಹಾರೈಸುತ್ತೇನೆ.
- ಸಿದ್ದರಾಮಯ್ಯ, ಸಿಎಂ
#Top #leaders #JDS #Gowda #family #Siddaramaiah #SocialJustice #malgudiexpress #malgudinews #news #TopNews
#📜ಪ್ರಚಲಿತ ವಿದ್ಯಮಾನ📜
ಬಿಜೆಪಿಯವರೇ ಲಂಚದ ಆರೋಪದಲ್ಲಿ ಸಿಲುಕಿರುವುದು ನಾಚಿಕೆಗೇಡು: ಸಿದ್ದರಾಮಯ್ಯ
#siddaramaiah #chandrulamani #shirahatti #bribe #congress #bjp #malgudiexpress #malgudinews #news #TopNews
| Subscribe | Comment | Like | Share |
#📜ಪ್ರಚಲಿತ ವಿದ್ಯಮಾನ📜
#malgudiexpress #malgudinews #news #TopNews
| Subscribe | Comment | Like | Share |
#📜ಪ್ರಚಲಿತ ವಿದ್ಯಮಾನ📜
ಬಜೆಟ್ ಬೆಂಬಲ ಇಲ್ಲದೇ ಬಿಜೆಪಿ ಅವಧಿಯಲ್ಲಿ ಕಾಮಗಾರಿ ಟೆಂಡರ್ ಕೊಟ್ಟಿದೆ: ಸತೀಶ್ ಜಾರಕಿಹೊಳಿ
ಬೆಂಗಳೂರು: ಪರಿಹಾರ ಕಂಡುಕೊಳ್ಳಲು ದಾರಿ ಹುಡುಕಿಕೊಳ್ಳಬೇಕಲ್ವಾ? ಸಿಎಂ ಇದ್ದಾರೆ, ಲೋಕಾಯುಕ್ತ ಇದೆ. ಅವರ ಗಮನಕ್ಕೆ ತರಲಿ. ಬಾಕಿ ಅಷ್ಟೊಂದು ಯಾಕೆ ಇದೆ ಅಂತಾ ಚಿಂತನೆ ಆಗಬೇಕು ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.
ಬೆಂಗಳೂರಿನಲ್ಲಿ ಗುರುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗುತ್ತಿಗೆದಾರರಿಂದ ಕಮಿಷನ್ ಆರೋಪ ವಿಚಾರವಾಗಿ ಪ್ರತಿಕ್ರಿಯಿಸಿ, ಬಜೆಟ್ ಬೆಂಬಲ ಇಲ್ಲದೇ ಬಿಜೆಪಿ ತನ್ನ ಅವಧಿಯಲ್ಲಿ ಕಾಮಗಾರಿ ಟೆಂಡರ್ ಕೊಟ್ಟಿದೆ. ಆ ರೀತಿ ಬಿಜೆಪಿ ಸರ್ಕಾರ ಮಾಡದೇ ಇದ್ದಿದ್ದರೆ ಈ ರೀತಿ ಆಗುತ್ತಿರಲಿಲ್ಲ. ಕೆಲಸ ಆಗಿದೆ, ಪೇಮೆಂಟ್ ಮಾಡುವುದಕ್ಕೆ ಸಮಯ ಬೇಕು. ಹಿಂದಿನ ಸರ್ಕಾರ ಮಾಡಿರುವ ತಪ್ಪು ಅದು. ನೀರಾವರಿ, ಲೋಕೋಪಯೋಗಿ ಇಲಾಖೆಯಲ್ಲಿ ಜಾಸ್ತಿ ಬಾಕಿ ಇದೆ. ಕಾಮಗಾರಿ ನಿಲ್ಲಿಸುವುದಕ್ಕೆ ಆಗಲ್ಲ, ಅವರಿಗೆ ಕಂಫರ್ಟ್ ಇದ್ದ ಕಡೆ ಟೆಂಡರ್ ಹಾಕೇ ಹಾಕ್ತಾರೆ ಎಂದರು.
ನಮ್ಮಲ್ಲಿರುವ ಬಜೆಟ್ ಗೆ ಸರಿದೂಗಿಸುವ ಕೆಲಸ ಮಾಡುತ್ತಿದ್ದೇವೆ. ಇವರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಅದನ್ನು ಮುಂದೆ ತೋರಿಸುತ್ತೇನೆ. ನಾವು ಹೊಸ ವರ್ಕ್ ಕೊಟ್ಟಿಲ್ಲ. ಬ್ಯಾಲೆನ್ಸ್ ಮಾಡುತ್ತಿದ್ದೇವೆ. ನಮ್ಮಿಂದ ಅಪ್ರೂವ್ ತಗೊಂಡಿದ್ದೀರಾ ಅಂತ ಆರ್ಥಿಕ ಇಲಾಖೆ ಕೇಳುತ್ತೆ. ಬೇರೆ ಮಂತ್ರಿಗಳದ್ದು ನಾನು ಉತ್ತರ ಕೊಡುವುದಕ್ಕೆ ಆಗಲ್ಲ. ಅವರೇ ಸ್ಪಷ್ಟನೆ ಕೊಡಬೇಕು. ಆ ಕಡೆಯುವರು ಈ ಕಡೆ ಆರೋಪ ಮಾಡುತ್ತಾರೆ, ಈ ಕಡೆಯವರು ಆ ಕಡೆಗೆ ಆರೋಪ ಮಾಡುತ್ತಾರೆ. ಕಮಿಷನ್ ನಿಯಂತ್ರಣ ಮಾಡಬೇಕು ಅಷ್ಟೇ ಎಂದರು.
ನಮ್ಮ ಇಲಾಖೆಯಲ್ಲಿ 12 ಸಾವಿರ ಕೋಟಿ ರೂ. ಬಾಕಿ ಇತ್ತು. ಮೂರು ಸಾವಿರ ಕೋಟಿ ಕೊಡಲಾಗಿದೆ. 9 ಸಾವಿರ ಕೋಟಿ ಬಾಕಿ ಇದೆ. ಅದನ್ನು ಬ್ಯಾಲೆನ್ಸ್ ಮಾಡುತ್ತೇವೆ. ನಾವು ನಿಮಗೆ ಅಪ್ರೂವ್ ಕೊಟ್ಟಿಲ್ಲ ಅಂತಲೂ ಚರ್ಚೆ ಆಗಿದೆ. ನಾವು ಕೊಡುವುದರಲ್ಲೇ ಬ್ಯಾಲೆನ್ಸ್ ಮಾಡಿ ಅಂತ ಚರ್ಚೆ ಆಗಿದೆ. ಇದರಲ್ಲಿ ಅಧಿಕಾರಿಗಳ ಲೋಪ ಎನ್ನಲು ಬರಲ್ಲ. ಹಿಂದಿನ ಸರ್ಕಾರವೇ ಇದಕ್ಕೆ ಕಾರಣ ಎಂದರು.
ಸಚಿವ ಹಚ್.ಸಿ.ಮಹದೇವಪ್ಪ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿ, ಅವರನ್ನೇ ಕೇಳಬೇಕು. ನಮ್ಮ ಹೈಕಮಾಂಡ್ ಗಟ್ಟಿ ಇದೆ. ಯಾರೂ ಕೂಡ ಅಲ್ಲಾಡಿಸಲು ಆಗಲ್ಲ. ಹೈಕಮಾಂಡ್ ಸ್ಪಷ್ಟಡಿಸಬೇಕು ಎಂಬುದು ನಮ್ಮದೂ ಇದೆ ಎಂದರು.
ಶಾಸಕರ ವಿದೇಶ ಪ್ರವಾಸ ವಿಚಾರವಾಗಿ, ಹಿರಿಯ ಶಾಸಕರು ಮೊದಲಿನಿಂದಲೂ ಹೋಗುತ್ತಿದ್ದಾರೆ. ಕೆಲವರು ದುಬೈಗೆ ಹೋಗಿದ್ದರು, ಯೂರೋಪ್ಗೆ ಹೋಗಿದ್ದರು. ಪಕ್ಷದಲ್ಲಿ ಟೀಂ ಮಾಡುವುದಕ್ಕೆ ಆಗಲ್ಲ. ಇಬ್ಬರೂ ಟೀಂನಲ್ಲಿದ್ದಾರೆ, ಸಮರ್ಥರಿದ್ದಾರೆ. ಕೆಲವರೆಲ್ಲ ಮಾಧ್ಯಮಗಳಿಗೆ ಹೆದರಿ ಹೋಗುವುದನ್ನು ಕೈ ಬಿಟ್ಟರು. ಕೆಲವರು ಹೈಕಮಾಂಡ್ ಹೇಳಿತು ಅಂತ ಹೋಗಲಿಲ್ಲ. ಪಕ್ಷದಲ್ಲಿ ಟೀಂಗಳು ಇದ್ದೇ ಇರುತ್ತದೆ. ನಾವು ಇಲ್ಲೇ ಕೂತು, ಇಲ್ಲೇ ಮಾತನಾಡುತ್ತೇವೆ, ಬಗೆಹರಿಸುತ್ತೇವೆ. ಪ್ರತೀ ವರ್ಷ ಹೋಗುತ್ತಾರೆ. ಅವರ ಸ್ವಂತ ದುಡ್ಡಿನಿಂದ ತೆರಳುತ್ತಾರೆ. ಅವರನ್ನು ನಿಯಂತ್ರಣ ಮಾಡುವುದಕ್ಕೆ ಆಗುತ್ತಾ? ಎಂದು ಪ್ರಶ್ನಿಸಿದರು.
ಅಧಿಕಾರ ಹಸ್ತಾಂತರ ವಿಚಾರವನ್ನು ಕಾಲ ಬಂದಾಗ ನೋಡೋಣ. ನಾವು ಕೂಡ ನಿಮ್ಮ ಹಾಗೆಯೇ ಕಾಯುತ್ತಿದ್ದೇವೆ ಎಂದರು.
#Work #tenders #given #BJP #tenure #budget #support #SatishJarkiholi #malgudiexpress #malgudinews #news #TopNews
#📜ಪ್ರಚಲಿತ ವಿದ್ಯಮಾನ📜
ನಾಯಕನಹಟ್ಟಿ ತಿಪ್ಪೇರುದ್ರಸ್ವಾಮಿ ಭಕ್ತರಿಗೆ ಯಾವುದೇ ತೊಂದರೆಯಾಗದಂತೆ ಸಕಲ ಸಿದ್ಧತೆ ಕೈಗೊಳ್ಳಿ: ಬಿ.ಟಿ.ಕುಮಾರಸ್ವಾಮಿ
ಚಿತ್ರದುರ್ಗ: ನಾಯಕನಹಟ್ಟಿ ಶ್ರೀ ಗುರುತಿಪ್ಪೇರುದ್ರಸ್ವಾಮಿ ಜಾತ್ರೆಯನ್ನು ಅತ್ಯಂತ ವ್ಯವಸ್ಥಿತವಾಗಿ ಹಾಗೂ ಭಕ್ತರಿಗೆ ಯಾವುದೇ ತೊಂದರೆಯಾಗದಂತೆ ನಡೆಸಲು ಸಕಲ ಸಿದ್ಧತೆ ಕೈಗೊಳ್ಳಬೇಕು. ಜಾತ್ರೆಯ ಯಶಸ್ವಿಗಾಗಿ ರಚಿಸಿರುವ ಉಪ ಸಮಿತಿಗಳು ತಮ್ಮ ಜವಾಬ್ದಾರಿಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಚಳ್ಳಕೆರೆ ತಾಲ್ಲೂಕು ನಾಯಕನಹಟ್ಟಿ ಗ್ರಾಮದ ಶ್ರೀ ಗುರುತಿಪ್ಪೇರುದ್ರಸ್ವಾಮಿ ಕ್ಷೇತ್ರದಲ್ಲಿ ಇದೇ ಫೆ.27 ರಿಂದ ಮಾರ್ಚ್ 09 ರವರೆಗೆ ಜಾತ್ರೆ ನಡೆಯಲಿದ್ದು, ಮಾರ್ಚ್ 06ರಂದು ರಥೋತ್ಸವ ನಡೆಯಲಿರುವ ಪ್ರಯುಕ್ತ ಜಾತ್ರೆಯ ಕೆಲಸ ಕಾರ್ಯಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ನಾಯಕನಹಟ್ಟಿ ಜಾತ್ರೆಗೆ ಚಿತ್ರದುರ್ಗ ಜಿಲ್ಲೆ, ಹೊರ ಜಿಲ್ಲೆ ಹಾಗೂ ಹೊರ ರಾಜ್ಯಗಳಿಂದಲೂ ಲಕ್ಷಾಂತರ ಭಕ್ತರು ಆಗಮಿಸುವುದರಿಂದ ಕುಡಿಯುವ ನೀರಿನ ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ಎಚ್ಚರ ವಹಿಸಬೇಕು. ನೀರಿನ ಟ್ಯಾಂಕ್ಗಳನ್ನು ಕಡ್ಡಾಯವಾಗಿ ಸ್ವಚ್ಛಗೊಳಿಸಬೇಕು. ನೀರು ಕಲುಷಿತವಾಗಂತೆ ಕ್ರಮವಹಿಸುವ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾ ಪಂಚಾಯತ್ನ ನೀರು ಪರೀಕ್ಷಾ ಘಟಕದಿಂದ ವರದಿ ಪಡೆದುಕೊಳ್ಳಬೇಕು. ನೀರು ಪೂರೈಕೆಯ ಮೂಲ ಮತ್ತು ವಿತರಣಾ ಕೇಂದ್ರ ಎರಡು ಕಡೆಗಳಲ್ಲಿ ನೀರಿನ ಮಾದರಿಯನ್ನು ಪಡೆದು, ಗುಣಮಟ್ಟ ಪರಿಶೀಲಿಸಬೇಕು. ಕುಡಿಯುವ ನೀರು ಸ್ವಚ್ಛತೆ ಕುರಿತು ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸವಂತೆ ನಿರ್ದೇಶನ ನೀಡಿದರು.
ಜಾತ್ರೆಗೆ ಬರುವ ಜಾನುವಾರುಗಳಿಗೆ ಕುಡಿಯುವ ನೀರಿನ ತೊಂದರೆಯಾಗದಂತೆ ಈಗಾಗಲೇ ಇರುವ ನೀರಿನ ತೊಟ್ಟಿಗಳನ್ನು ತಕ್ಷಣವೇ ದುರಸ್ತಿಗೊಳಿಸಲು ಗ್ರಾಮ ಪಂಚಾಯಿತಿ ಅಧಿಕಾರಿಗಳು ಕ್ರಮವಹಿಸಬೇಕು ಎಂದು ತಿಳಿಸಿದರು.
ಪ್ರಸ್ತುತ ಬಿಸಿಲಿನ ತಾಪ ಹೆಚ್ಚಾಗುತ್ತಿರುವುದರಿಂದ ಆರೋಗ್ಯ ಮತ್ತು ನೈರ್ಮಲ್ಯಕ್ಕೆ ಹೆಚ್ಚಿನ ಒತ್ತು ನೀಡಬೇಕು. ಜಾತ್ರೆಗೆ ಬರುವ ಭಕ್ತಾದಿಗಳಿಗೆ ಬಿಸಿಲಿನ ತಾಪ ತಟ್ಟದಂತೆ ಮುನ್ನೆಚ್ಚರಿಕೆ ವಹಿಸಿ, ಸ್ಥಳೀಯವಾಗಿ ಓಆರ್ಎಸ್ ಪ್ಯಾಕೆಟ್ಗಳು ಮತ್ತು ಅಗತ್ಯ ಔಷಧಗಳನ್ನು ಸನ್ನದ್ಧವಾಗಿಟ್ಟುಕೊಳ್ಳಬೇಕು. ಬಿಸಿಲಿನಿಂದ ಉಂಟಾಗುವ ಆರೋಗ್ಯ ಸಮಸ್ಯೆಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಫಲಕಗಳನ್ನು ಅಲ್ಲಲ್ಲಿ ಹಾಕಬೇಕು ಎಂದು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಯಾವುದೇ ತುರ್ತು ಪರಿಸ್ಥಿತಿ ಎದುರಿಸಲು ಜಾತ್ರಾ ಸಮಯದಲ್ಲಿ ನಾಲ್ಕು ಪ್ರಥಮ ಚಿಕಿತ್ಸಾ ಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದೆ. ಇದರೊಂದಿಗೆ ನಾಲ್ಕು ಅಂಬ್ಯುಲೆನ್ಸ್ ಗಳನ್ನು ದಿನದ 24 ಗಂಟೆಯೂ ಕಾರ್ಯಾಚರಣೆಯಲ್ಲಿರುವಂತೆ ನಿಯೋಜಿಸಲಾಗಿದೆ. ಸಮೀಪದ ಸಿ.ಹೆಚ್.ಸಿ ಆಸ್ಪತ್ರೆಯಲ್ಲಿ ಒಟ್ಟು 60 ಹಾಸಿಗೆಗಳನ್ನು ಕಾಯ್ದಿರಿಸಲಾಗಿದ್ದು, ಮಕ್ಕಳ ವೈದ್ಯರು ಸೇರಿದಂತೆ ತಜ್ಞ ವೈದ್ಯರ ತಂಡವು ಸ್ಥಳದಲ್ಲಿ ಲಭ್ಯವಿರಲಿದೆ. ಸುಮಾರು 200 ಸಿಬ್ಬಂದಿಗಳನ್ನು ನಿಯೋಜಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಚಳ್ಳಕೆರೆ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಕಾಶೀ ಮಾಹಿತಿ ನೀಡಿದರು.
ಜಾತ್ರಾ ಮಹೋತ್ಸದಲ್ಲಿ ಎಲ್ಲ ಪಾರ್ಕಿಂಗ್ ಸ್ಥಳಗಳಲ್ಲಿಯೂ ಲೈಟಿಂಗ್ ವ್ಯವಸ್ಥೆ ಕಣ್ಗಾವಲು ಹೆಚ್ಚಿಸಲು ಈಗಾಗಲೇ ಇರುವ 24 ಸಿಸಿ ಟಿವಿಗಳ ಜೊತೆಗೆ ಹೆಚ್ಚುವರಿಯಾಗಿ 50 ಹೊಸ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಬೇಕಿದೆ. ಯಾವುದೇ ಅನಾಹುತಗಳನ್ನು ತಡೆಯಲು ಮತ್ತು ತುರ್ತು ರಕ್ಷಣಾ ಕಾರ್ಯಗಳಿಗಾಗಿ ಎನ್.ಡಿ.ಆರ್.ಎಫ್ ತಂಡ ನಿಯೋಜನೆ, ಜನಸಂದಣಿ ನಿಯಂತ್ರಿಸಲು ಮತ್ತು ಅಗತ್ಯ ಮಾಹಿತಿ ನೀಡಲು ಜಾತ್ರೆಯ ವಿವಿಧೆಡೆ ಧ್ವನಿವರ್ಧಕಗಳ ಅಳವಡಿಸಬೇಕು. ವಿದ್ಯುತ್ ವ್ಯತ್ಯಯವಾದರೂ ಅನೌನ್ಸ್ಮೆಂಟ್ ಮುಂದುವರಿಯಲು ಜನರೇಟರ್ ಬ್ಯಾಕಪ್ ವ್ಯವಸ್ಥೆ ಕಲ್ಪಿಸಬೇಕು ಎಂದು ಪೊಲೀಸ್ ಅಧಿಕಾರಿಗಳು ಸಲಹೆ ನೀಡಿದರು.
ರಥಬೀದಿಯಲ್ಲಿರುವ ಹಳೆಯ ಮತ್ತು ಶಿಥಿಲಾವಸ್ಥೆಯಲ್ಲಿರುವ ಕಟ್ಟಡಗಳನ್ನು ಗುರುತಿಸಿ, ಅವುಗಳ ಮೇಲೆ ಜನರು ಹತ್ತದಂತೆ ಎಚ್ಚರಿಕೆ ವಹಿಸಲು ಮತ್ತು ಮಾಲೀಕರಿಗೆ ನೋಟಿಸ್ ನೀಡುವಂತೆ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚಿಸಿದರು.
ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶಿವಕುಮಾರ್ ಮಾತನಾಡಿ, ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಜಾತ್ರೆಯು ಯಶಸ್ವಿವಾಗಿ ಆಗಬೇಕು. ಕಳೆದ ವರ್ಷ 5 ಕಿ.ಮೀ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿತ್ತು. ಈ ಬಾರಿ ಸಾರ್ವಜನಿಕರ ದೂರುಗಳ ಹಿನ್ನೆಲೆಯಲ್ಲಿ ಈ ವ್ಯಾಪ್ತಿಯನ್ನು 10 ಕಿ.ಮೀ ಗೆ ವಿಸ್ತರಿಸಲು, ಎರಡು ದಿನಗಳ ಕಾಲ ಮದ್ಯ ಮಾರಾಟ ನಿಷೇಧಿಸಲು ಜಿಲ್ಲಾಧಿಕಾರಿಗಳಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ತಾತ್ಕಾಲಿಕ ಆರೋಗ್ಯ ಕೇಂದ್ರಗಳ ಸ್ಥಾಪನೆ ಮತ್ತು ಜಾತ್ರೆಯಲ್ಲಿ ವಿತರಿಸುವ ಪ್ರಸಾದದ ಗುಣಮಟ್ಟ ಪರೀಕ್ಷಿಸಲು ಆಹಾರ ಸುರಕ್ಷತಾ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ರಸ್ತೆ ದುರಸ್ತಿ, ಕುಡಿಯುವ ನೀರು, ನಿರಂತರ ವಿದ್ಯುತ್ ಸರಬರಾಜು ಮತ್ತು ಹೆಚ್ಚುವರಿ ಕೆಎಸ್ಆರ್ಟಿಸಿ ಬಸ್ಗಳ ವ್ಯವಸ್ಥೆಗಾಗಿ ಸಂಬಂಧಪಟ್ಟ ಇಲಾಖೆಗಳಿಗೆ ಪತ್ರ ಬರೆಯಲಾಗಿದೆ. ಜಾತ್ರೆಗೆ ಬರುವ ಸುಮಾರು 2,500ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಗೆ ವಸತಿ ಸೌಕರ್ಯದ ವ್ಯವಸ್ಥೆ ಕಲ್ಪಿಸಬೇಕಿದೆ. ಯಾವುದೇ ಅಹಿತಕರ ಘಟನೆ ಹಾಗೂ ತುರ್ತು ಪರಿಸ್ಥಿತಿ ಎದುರಾದರೆ ತಕ್ಷಣ ಸ್ಪಂದಿಸಲು ಆಂಬ್ಯುಲೆನ್ಸ್ ಮತ್ತು ವೈದ್ಯಕೀಯ ತಂಡದೊಂದಿಗೆ ಹಿಂದೂ ಮಹಾಗಣಪತಿ ಶೋಭಾಯಾತ್ರೆ ಸಂದರ್ಭದಲ್ಲಿ ಅಳವಡಿಸಿಕೊಂಡ ಮಾದರಿಯಂತೆ ಎಮರ್ಜೆನ್ಸಿ ರೆಸ್ಪಾನ್ಸ್ ಟೀಮ್ ಸಿದ್ಧವಿರಲು ಕ್ರಮ ವಹಿಸಲಾಗುವುದು. ಜಾನುವಾರುಗಳಿಗೆ ತುರ್ತು ವೈದ್ಯಕೀಯ ಸೇವೆ, ಅಗ್ನಿಶಾಮಕ ದಳಗಳ ನಿಯೋಜನೆ, ರಥದ ಸುರಕ್ಷತೆ ಕುರಿತಂತೆಯೂ ಸಂಬಂಧಿಸಿದ ಅಧಿಕಾರಿಗಳು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು. ಯಾವುದೇ ಅನಿಷ್ಟ ಪದ್ಧತಿಗಳ ಆಚರಣೆ ಜರುಗದಂತೆ ಅಧಿಕಾರಿಗಳು ಕ್ರಮ ವಹಿಸಬೇಕು ಎಂದು ತಿಳಿಸಿದರು.
ಜಾತ್ರೆ ಮಾರ್ಗಗಳಲ್ಲಿ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ರಸ್ತೆಗಳನ್ನು ತಗ್ಗು, ಗುಂಡಿ ಮುಕ್ತಗೊಳಿಸಲು ಮತ್ತು ಚರಂಡಿಗಳನ್ನು ಸ್ವಚ್ಛಗೊಳಿಸಲು ಸಂಬಂಧಪಟ್ಟ ಇಲಾಖೆಗಳು ಅಗತ್ಯ ಕ್ರಮವಹಿಸಬೇಕು. ರಸ್ತೆ ಬದಿಯ ಒತ್ತುವರಿ ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು. ಜಾತ್ರೆಯಲ್ಲಿ ಪ್ರಾಣಿ ಬಲಿಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದ್ದು, ಚೆಕ್ಪೋಸ್ಟ್ ತೆರೆದು ಕಟ್ಟುನಿಟ್ಟಾಗಿ ಜಾರಿಗೆ ತರಲಾಗುವುದು. ಅಷ್ಟೇ ಅಲ್ಲದೆ, ಜಾತ್ರೆಯ ಸುತ್ತಮುತ್ತಲ ನಿಗದಿತ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ಮತ್ತು ಸೇವನೆಯ ಮೇಲೆ ಕಟ್ಟುನಿಟ್ಟಿನ ನಿಗಾ ವಹಿಸಲು ಪೊಲೀಸ್ ಇಲಾಖೆ ಕ್ರಮವಹಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚಿಸಿದರು.
ಬ್ಯಾನರ್ ಮುಕ್ತ ಜಾತ್ರೆ: ಈ ಬಾರಿಯ ಜಾತ್ರೆಯಲ್ಲಿ ರಾಜಕೀಯ ಮತ್ತು ವೈಯಕ್ತಿಕ ಪ್ರಚಾರದ ಬ್ಯಾನರ್ಗಳಿಗೆ ಅವಕಾಶವಿರುವುದಿಲ್ಲ. ಕೇವಲ ಸಾರ್ವಜನಿಕ ಮಾಹಿತಿ ನೀಡುವ ಸೂಚನಾ ಫಲಕಗಳು ಮತ್ತು ದೇವಸ್ಥಾನದ ಅಧಿಕೃತ ಸ್ವಾಗತ ಫಲಕಗಳಿಗೆ ಮಾತ್ರ ಅನುಮತಿ ನೀಡಲಾಗಿದ್ದು, ಉಳಿದ ಯಾವುದೇ ಅನಧಿಕೃತ ಬ್ಯಾನರ್ಗಳನ್ನು ತೆರವುಗೊಳಿಸಲು ಅಧಿಕಾರಿಗಳು ಕ್ರಮವಹಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಉಪವಿಭಾಗಾಧಿಕಾರಿ ಕಾಂತರಾಜ್, ನಾಯಕನಹಟ್ಟಿ ಶ್ರೀ ಗುರು ತಿಪ್ಪೇರುದ್ರಸ್ವಾಮಿ ದೇವಸ್ಥಾನ ಕಾರ್ಯನಿರ್ವಾಹಣಾಧಿಕಾರಿ ಗಂಗಾಧರ್, ಕೆಎಸ್ಆರ್ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ವೆಂಕಟೇಶ್, ಪ್ರಾದೇಶಿಕ ಸಾರಿಗೆ ಅಧಿಕಾರಿ ಭರತ್ ಎಂ.ಕಾಳೇಸಿಂಗೆ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ರೇಷ್ಮಾ ಹಾನಗಲ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು.
#Make #preparations #ensure #devotees #Nayaknahatti #Tipperudraswamy #trouble #BTKumaraswamy #malgudiexpress #malgudinews #news #TopNews
#📜ಪ್ರಚಲಿತ ವಿದ್ಯಮಾನ📜
ನಾಡಿನ ಸಮಸ್ತ ಜನತೆಗೆ ವಿಶ್ವ ಸಾಮಾಜಿಕ ನ್ಯಾಯ ದಿನದ ಶುಭಾಶಯಗಳು. ಸಂವಿಧಾನ ನೀಡಿರುವ ಸಾಮಾಜಿಕ ನ್ಯಾಯ ಪರಿಕಲ್ಪನೆಯನ್ನು ಸಾಕಾರಗೊಳಿಸಲು ನಾವೆಲ್ಲ ಸನ್ನದ್ಧರಾಗೋಣ.
#📜ಪ್ರಚಲಿತ ವಿದ್ಯಮಾನ📜
ಮಾನವ ಬಂಧುತ್ವ ವೇದಿಕೆ ಕಾಂಗ್ರೆಸ್ಸಿಗೆ ಸೈದ್ಧಾಂತಿಕವಾಗಿ ನೀರು ಗೊಬ್ಬರ ಹಾಕುತ್ತಿದೆ: ಕೆ.ವಿ.ಪ್ರಭಾಕರ್
ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿಗೆ ಪ್ರೆಸ್ ಕ್ಲಬ್ನ ‘ವರ್ಷದ ವ್ಯಕ್ತಿ’ ಪ್ರಶಸ್ತಿ ಪ್ರದಾನ
ಬೆಂಗಳೂರು: ಸಾಮಾಜಿಕ ನ್ಯಾಯದ ಕನ್ನಡಿಯಲ್ಲಿ ಸತೀಶ್ ಜಾರಕಿಹೊಳಿ ಅವರ ಬಿಂಬಗಳು ಸ್ಪಷ್ಟವಾಗಿ ಕಾಣಿಸುತ್ತಿವೆ ಎಂದು ಸಿಎಂ ಮಾಧ್ಯಮಸಲಹೆಗಾರ ಕೆ.ವಿ.ಪ್ರಭಾಕರ್ ಹೇಳಿದರು.
ಪ್ರೆಸ್ ಕ್ಲಬ್ ನಲ್ಲಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಪ್ರೆಸ್ ಕ್ಲಬ್ ನೀಡಿದ ವರ್ಷದ ವ್ಯಕ್ತಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಅವರು ಮಾತನಾಡಿ, ಸಿಎಂ ಸಿದ್ದರಾಮಯ್ಯ ಅವರಂತಯೇ ಸಾಮಾಜಿಕ ನ್ಯಾಯದ ಬಗ್ಗೆ ಸ್ಪಷ್ಟತೆ ಮತ್ತು ಖಚಿತತೆ ಸತೀಶ್ ಜಾರಕಿಹೊಳಿಯವರಿಗೆ ಇರುವ ಕಾರಣದಿಂದಲೇ ಸಾಮಾಜಿಕ ನ್ಯಾಯದ ಕನ್ನಡಿಯಲ್ಲಿ ಜಾರಕಿಹೊಳಿಯವರನ್ನು ನಾವು ಸ್ಪಷ್ಟವಾಗಿ ಕಾಣಬಹುದಾಗಿದೆ. ರಾಜ್ಯದಲ್ಲಿ ಸಾಮಾಜಿಕ ನ್ಯಾಯದ ತೇರನ್ನು ಎಳೆಯುತ್ತಿರುವ ಸಿದ್ದರಾಮಯ್ಯ ಅವರ ಕೈಗಳ ಪಕ್ಕದಲ್ಲೇ ಜಾರಕಿಹೊಳಿಯವರ ಕೈಗಳಿವೆ ಎಂದರು.
ಜಾರಕಿಹೊಳಿಯವರು ಹೆಚ್ಚು ಮಾತಾಡುವುದಿಲ್ಲ, ಐವತ್ತು ಮಂದಿ ಸೇರಿರುವ ಸಭೆಯಾಗಲಿ, ಐದು ಲಕ್ಷ ಮಂದಿ ಸೇರಿರುವ ಸಭೆಯಾಗಲಿ ಐದೇ ನಿಮಿಷದಲ್ಲಿ ಮಾತು ಮುಗಿಸುತ್ತಾರೆ ಎಂದು ಬಹಳ ಮಂದಿ ನನಗೆ ಹೇಳಿದ್ದಾರೆ. ಅವರಿಗೆಲ್ಲಾ ನಾನು ಒಂದೇ ಉತ್ತರ ಕೊಡುತ್ತೇನೆ, "ದಡದಲ್ಲಿ ನಿಂತು ನೋಡುವಾಗ ಸಮುದ್ರ ಬಹಳ ಪ್ರಶಾಂತವಾಗಿ ಕಾಣುತ್ತದೆ. ಆದರೆ ಸಮುದ್ರದ ರಭಸ ಇರುವುದು ಅದರ ಆಳದಲ್ಲಿ. ಜಾರಕಿಹೊಳಿಯವರ ಮೌನದ ಆಳದಲ್ಲಿ ಅವರ ರಭಸ ಇದೆ. ಆ ರಭಸ ಅವರ ಕೆಲಸದಲ್ಲಿ ಕಾಣುತ್ತದೆ ಎಂದರು.
ಯಾವತ್ತು Easy chair politics ಗೆ ಒರಗಿಕೊಳ್ಳದ ಸತೀಶ್ ಅವರು ಬಹಳ ಕಷ್ಟವಾದ ಹಾದಿಯನ್ನೇ ಆರಿಸಿಕೊಂಡು ಅದರಲ್ಲಿ ಸಕ್ಸಸ್ ಆಗುತ್ತಾರೆ. ಇದು ಸ್ಪಷ್ಟವಾಗಿ ಮತ್ತೊಮ್ಮೆ ಗೋಚರಿಸಿದ್ದು ಶಿಗ್ಗಾಂವ್ ಉಪ ಚುನಾವಣೆಯಲ್ಲಿ. ಯಾವ ಮಾಧ್ಯಮದವರೂ ಕಲ್ಪಿಸಿಕೊಳ್ಳದ ರೀತಿಯಲ್ಲಿ ಹಲವು ಸವಾಲುಗಳ ನಡುವೆಯೂ ಕಾಂಗ್ರೆಸ್ ಅನ್ನು ಗೆಲ್ಲಿಸಿಕೊಂಡೇ ಬಂದರು. ಇದಕ್ಕಾಗಿ ಅವರು ಮಾಡಿದ ಕೆಲಸವನ್ನು ನಾನು ಬಹಳ ಹತ್ತಿರದಿಂದ ಗಮನಿಸಿದ್ದೇನೆ ಎಂದರು.
ಮಾನವ ಬಂಧುತ್ವ ವೇದಿಕೆಯ ಕಾರ್ಯಕರ್ತರು ಹೇಗೆ ಇಡೀ ಕ್ಷೇತ್ರದ ತುಂಬ ಹರಡಿ ಹೋಗಿದ್ದರು. ಅವರ ಮೂಲಕ ಹೇಗೆ ಕ್ಷೇತ್ರದ ರಾಜಕೀಯ ಚಿತ್ರಣವನ್ನು ಬದಲಿಸಿದರು ಎನ್ನುವುದು ಪ್ರತಿಯೊಬ್ಬ ಪತ್ರಕರ್ತರು ಮತ್ತು ಸಾಮಾಜಿಕ ಕಾರ್ಯಕರ್ತರಿಗೂ ಪಾಠ ಆಗುತ್ತದೆ ಎಂದರು.
ಸೈದ್ಧಾಂತಿಕ ರಾಜಕಾರಣ ಅಳಿವಿನ ಅಂಚಿನಲ್ಲಿರುವ ಈ ಕಾಲಘಟ್ಟದಲ್ಲಿ ಮಾನವ ಬಂಧುತ್ವ ವೇದಿಕೆ ಮೂಲಕ ಇಡೀ ರಾಜ್ಯದಲ್ಲಿ ಸೈದ್ಧಾಂತಿಕ ಪಡೆಯನ್ನು ಕಟ್ಟುತ್ತಿದ್ದಾರೆ. ಇವತ್ತು ಅಭಿಮಾನಿ ಪಡೆಯನ್ನು ಕಟ್ಟುವುದು ಬಹಳ ಸಲೀಸು. ಧಾರವಾಹಿ ನಟರೂ ಅಭಿಮಾನಿ ಪಡೆ ಕಟ್ಟುತ್ತಾರೆ. ಆದರೆ ಸೈದ್ಧಾಂತಿಕ ಪಡೆ ಕಟ್ಟವುದು ಬಹಳ ದೊಡ್ಡ ಸವಾಲು. ಅಧಿಕಾರ-ಹಣ-ಜಾತಿಯ ಬಲ ಇದ್ದರೆ ರಾತ್ರಿ ಬೆಳಗಾಗುವುದರೊಳಗೆ ಅಭಿಮಾನಿಗಳು ಸಾಲುಗಟ್ಟುತ್ತಾರೆ. ಆದರೆ ಸೈದ್ದಾಂತಿಕ ಪಡೆ ಕಟ್ಟಲು ನಿತ್ಯ ಕಸರತ್ತು ಮಾಡಬೇಕಾಗುತ್ತದೆ. ಈ ಕಸರತ್ತನ್ನು ಮಾನವ ಬಂಧುತ್ವ ವೇದಿಕೆ ಮೂಲಕ ರಾಜ್ಯದ ತುಂಬ ಮಾಡುತ್ತಿದ್ದಾರೆ. ಈ ಮಾನವ ಬಂಧುತ್ವ ವೇದಿಕೆ ಕಾಂಗ್ರೆಸ್ಸಿಗೆ ಸೈದ್ಧಾಂತಿಕವಾಗಿ ನೀರು ಗೊಬ್ಬರ ಹಾಕುತ್ತಿದೆ ಎಂದರು.
ಜಾರಕಿಹೊಳಿ ಅವರಲ್ಲದೆ ಬೇರೆ ಯಾರಾದರೂ ಲೋಕೋಪಯೋಗಿ ಇಲಾಖೆ ಸಚಿವರಾಗಿದಿದ್ದರೆ ಇಷ್ಟೊತ್ತಿಗೆ ಹೈರಾಣಾಗಿಬಿಡುತ್ತಿದ್ದರು. ಹಿಂದಿನ ಸರ್ಕಾರ ಮಾಡಿಟ್ಟು ಹೋಗಿರುವ ಅನಾಹುತಗಳು ಮತ್ತು ವಿಪರೀತ ಆರ್ಥಿಕ ಹೊರೆಯ ಬಳಿಕವೂ ಸಮತೋಲನದಿಂದ ಖಾತೆಯನ್ನು ನಿರ್ವಹಿಸುತ್ತಿದ್ದಾರೆ. ಅದಕ್ಕೇ ನಾನು ಆಗಲೇ ಹೇಳಿದ್ದು, ಸತೀಶ್ ಅವರು ಕಷ್ಟವಾದ ಸವಾಲುಗಳಿಗೇ ಕೈ ಹಾಕಿ ಅದರಲ್ಲಿ ಸಕ್ಸಸ್ ಆಗುತ್ತಾರೆ ಎಂದು ಎಂದರು.
ಬೆಳಗಾವಿ ರಾಜಕಾರಣದಲ್ಲಿ ಸಕ್ಸಸ್ ಆದವರು ರಾಜ್ಯ ರಾಜಕಾರಣದಲ್ಲಿ ಸಕ್ಸಸ್ ಆಗುವುದರಲ್ಲಿ ಅನುಮಾನಗಳೇ ಇಲ್ಲ. ಹಾಗೆಯೇ ಬಹಳ ದೊಡ್ಡ ಉದ್ಯಮಿಯಾಗಿ ಸಕ್ಸಸ್ ಆಗಿದ್ದರೂ, ಉದ್ಯಮ ಮತ್ತು ರಾಜಕಾರಣವನ್ನು ಪರಸ್ಪರ ಬೆರೆಸದೆ ಸ್ಪಷ್ಟ ಅಂತರ ಕಾಯ್ದುಕೊಳ್ಳುವಲ್ಲೂ ಸಕ್ಸಸ್ ಆಗಿದ್ದಾರೆ. ಈ ಎಲ್ಲಾ ಕಾರಣಗಳಿಂದ ಬೆಂಗಳೂರು ಪ್ರೆಸ್ ಕ್ಲಬ್ ವರ್ಷದ ವ್ಯಕ್ತಿ ಪ್ರಶಸ್ತಿಗೆ ಸತೀಶ್ ಜಾರಕಿಹೊಳಿ ಅವರನ್ನು ಆಯ್ಕೆ ಮಾಡಿರುವುದು ಅತ್ಯಂತ ಸೂಕ್ತವಾಗಿದೆ ಎಂದರು.
#ManavaBandhutvaVedike #ideologically #Strengthening #Congress KVPrabhakar #SatishJarkiholi
#📜ಪ್ರಚಲಿತ ವಿದ್ಯಮಾನ📜
ಆಟೋ ಮತ್ತು ಮೂರಕ್ಕೂ ಹೆಚ್ಚು ಬೈಕ್ ಜಖಂ
ಬೆಂಗಳೂರು: ರಾಜಾಜಿನಗರ ವಿಧಾನಸಭಾ ಕ್ಷೇತ್ರದ, ಶ್ರೀರಾಮಮಂದಿರ ಆಟದ ಮೈದಾನದ ಬಳಿ ಆಟೋ ಮತ್ತು ಮೂರಕ್ಕೂ ಹೆಚ್ಚು ಬೈಕ್ ಮೇಲೆ ಮರ ಬಿದ್ದು ಜಖಂ ಆಗಿವೆ.
ಆಟೋ ಮಾಲೀಕ ವೇಣುಗೋಪಾಲ್ ಮತ್ತು ಪ್ರಯಾಣಿಕರಾಗಿ ಮಹಿಳೆ ಪ್ರಯಾಣಿಸುತ್ತಿದ್ದರು ಯಾವುದೇ ಪ್ರಾಣಪಾಯ ಸಂಭವಿಸಿಲ್ಲ. ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸ್ ಇಲಾಖೆಯ ಅಧಿಕಾರಿಗಳು, ಬಿದ್ದ ಮರ ತೆರವು ಕಾರ್ಯ ನಡೆಸಿದರು.
#auto #bikes #damaged #malgudiexpress #malgudinews #news #TopNews
| Subscribe | Comment | Like | Share |
#📜ಪ್ರಚಲಿತ ವಿದ್ಯಮಾನ📜
ಕಸದ ಸಮಸ್ಯೆಗೆ ಸರ್ಕಾರದ 'ಮಾಫಿಯಾ'ವೇ ಕಾರಣ: ಆರ್ ಅಶೋಕ್
ಬೆಂಗಳೂರು: ಕಾಂಗ್ರೆಸ್ ಸರ್ಕಾರದ ವಿರುದ್ಧ ಗುತ್ತಿಗೆದಾರರ ಸಂಘ ಮಾಡಿರುವ 80 % ಕಮಿಷನ್ ಆರೋಪ ಗಂಭೀರ ವಿಷಯವಾಗಿದ್ದು, ಅದು ಸುಳ್ಳು ಎಂದು ಹೇಳುವ ಕಾಂಗ್ರೆಸ್ ನಾಯಕರು ಆರೋಪ ಮಾಡಿದವರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲಿ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್ ಅಶೋಕ್ ಸವಾಲು ಹಾಕಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಸತ್ಯಹರಿಶ್ಚಂದ್ರನ ಮಕ್ಕಳು ಎಂದು ಹೇಳಿಕೊಳ್ಳುವ ಸಚಿವರು ಮೊದಲು ಈ ಆರೋಪಗಳಿಗೆ ಸ್ಪಷ್ಟನೆ ನೀಡಬೇಕು ಎಂದು ಆಗ್ರಹಿಸಿದರು.
ರಾಜ್ಯದ ಟೆಂಡರ್ಗಳು ನೆರೆಯ ಆಂಧ್ರಪ್ರದೇಶದ ಗುತ್ತಿಗೆದಾರರಿಗೆ ಹೋಗುತ್ತಿವೆ ಎಂದು ಆರೋಪಿಸಿದ ಅವರು, ಕೆಕೆಆರ್ಡಿಬಿ ಕಾಮಗಾರಿಗಳನ್ನು ಸ್ಥಳೀಯ ಗುತ್ತಿಗೆದಾರರಿಗೆ ನೀಡಬೇಕು ಎಂದು ಒತ್ತಾಯಿಸಿದರು.
ರಾಜ್ಯದಲ್ಲಿ ಪ್ರತಿಯೊಂದು ಕಾಮಗಾರಿಗು ಇಂತಿಷ್ಟು ಕಮಿಷನ್ ಎಂದು ನಿಗದಿ ಮಾಡಲಾಗಿದೆ ಈ ಕಮಿಷನ್ ಕೊಡುವುದು ಕಡ್ಡಾಯ ಇಲ್ಲವಾದರೆ ಗುತ್ತಿಗೆದಾರರಿಗೆ ಮಾಡಲು ಕೆಲಸವೇ ಸಿಗುವುದಿಲ್ಲ ಎಂದರು.
ಕಸದ ಟೆಂಡರ್ ಪಡೆಯಲು ಶೇಕಡ 7% ಕಮಿಷನ್, ಬಿಲ್ ಬಿಡುಗಡೆಗೆ 7% ಹಾಗೂ ವಿಶೇಷ ಎಲ್ಒಸಿ ಪಡೆಯಲು 7% ನೀಡಬೇಕಾಗಿದೆ. ಇದರಿಂದ ಒಟ್ಟಾರೆ 21% ಕಮಿಷನ್ ಸರ್ಕಾರಕ್ಕೆ ಹೋಗುತ್ತಿದೆ. ಇಂಜಿನಿಯರ್ಗಳಿಗೆ ಬೇರೆ ಕಮೀಷನ್ ನೀಡಬೇಕಾಗುತ್ತಿದೆ, ಕಸದ ಸಮಸ್ಯೆಗೆ ಸರ್ಕಾರದ 'ಮಾಫಿಯಾ'ವೇ ಕಾರಣ ಎಂದರು.
#Govt #mafia #responsible #garbage #problem #RAshok #malgudiexpress #malgudinews #news #TopNews












