#📜ಪ್ರಚಲಿತ ವಿದ್ಯಮಾನ📜
ಮನಸೂರೆಗೊಂಡ ಪಿ.ಬಿ.ಶ್ರೀನಿವಾಸ್ ನೆನಪಿನ ಗೀತಗಾಯನ
ಡಾ. ಪಿ.ಬಿ ಶ್ರೀನಿವಾಸ್ ಮಧುರಗಾನ ಬೆಂಗಳೂರು ಮತ್ತು ಡಾ. ಪಿ. ಬಿ ಶ್ರೀನಿವಾಸ್ ಫೌಂಡೇಶನ್ ಸಂಯುಕ್ತಾಶ್ರಯದಲ್ಲಿ "ಇನಿದನಿಯರಸ, ಕಲೈಮಾಮಣಿ, ಸಂಗೀತ ಕಲಾನಿಧಿ ಡಾ. ಪಿ.ಬಿ ಶ್ರೀನಿವಾಸ್ ಭಾವ ಕುಸುಮ" ವಿವಿಧ ಕಲಾವಿದರಿಂದ ಗೀತಗಾಯನ ಕಾರ್ಯಕ್ರಮವು ಬೆಂಗಳೂರಿನ ಬಸವನಗುಡಿ ಡಿ.ವಿ.ಜಿ ರಸ್ತೆಯ ಅಬಲಾಶ್ರಮದಲ್ಲಿ ಆಯೋಜನೆಗೊಂಡಿತ್ತು.
ಮೋಹನ್ ಶ್ರೀಗಿರಿಪುರ ಅವರ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಪ್ರಾರಂಭಗೊಂಡಿತು. ಲಕ್ಷ್ಮಿ, ಅನುರಾಧ ಹಾಗೂ ಸಹನಾ ಸುಬ್ರಹ್ಮಣ್ಯಂ ಅವರು ಅತಿಥಿಗಳನ್ನು ವೇದಿಕೆಗೆ ಬರಮಾಡಿಕೊಂಡರು. ಬೆಳಗ್ಗೆ ಏಳು ಗಂಟೆಗೆಲ್ಲ ಗೀತಗಾಯನ ಕಾರ್ಯಕ್ರಮ ಆರಂಭಗೊಂಡಿತು.
ತತ್ವಶಾಸ್ತ್ರ ಮತ್ತು ಧರ್ಮಶಾಸ್ತ್ರದಲ್ಲಿ (ಎಂ.ಎ)ಸ್ನಾತಕೋತ್ತರ ಪದವಿ, ಕುಂಡಲಿನಿ ಯೋಗ ಸಾಧಕ, ಸಿ.ಎ ಯನ್ನು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ, ಕುಂಡಲಿನಿ ಯೋಗ ವಿಷಯ ಕುರಿತು ಅಂತರರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ಪಾಲ್ಗೊಳ್ಳುವಿಕೆ, ವೀಣೆ ನುಡಿಸುವ ನೈಪುಣ್ಯತೆ ಹಾಗೂ ಈಗಲೂ ಕಲಿಕೆಯಲ್ಲಿ ತೊಡಗಿಸಿಕೊಂಡಿರುವ ಡಾ. ಪಿ. ಬಿ ಶ್ರೀನಿವಾಸನ್ ಅವರ ಸುಪುತ್ರ ಡಾ. ಪಿ.ಬಿ ಫಣೀಂದ್ರ ಅವರು ಗೌರವಾಧ್ಯಕ್ಷರಾಗಿ ಹಾಗೂ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕಲೈಂಗನರ್ ದೂರದರ್ಶನದ ಸಹಾಯಕ ನಿರ್ದೇಶಕ, ಒಂದು ಸಾಲಿನ ಬರಹಗಾರ, ಚಿತ್ರಕಥೆ ಬರಹಗಾರ, ಸಂಭಾಷಣೆ ಬರಹಗಾರ, ಧಾರಾವಾಹಿಗಳಿಗೆ ಹಿನ್ನೆಲೆ ಸಂಗೀತ ಸಂಯೋಜಕ, ಎಲೆಕ್ಟ್ರಾನಿಕ್ ಇಂಜಿನಿಯರಿಂಗ್ ನಲ್ಲಿ ಡಿಪ್ಲೋಮಾ, ಅನಿಮೇಷನ್ ಇಂಜಿನಿಯರಿಂಗ್ ನಲ್ಲಿ ಡಿಪ್ಲೋಮಾ ಮಾಡಿರುವ ಪಿ. ಸೀತಾರಾಮನ್ ಅವರು ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ವೇದಿಕೆಯನ್ನು ಅಲಂಕರಿಸಿದರು.
ಸುಮಾರು 11 ಗಂಟೆಗೆ ಉದ್ಘಾಟನಾ ಸಮಾರಂಭ ಪ್ರಾರಂಭವಾಯಿತು. ಅತಿಥಿಗಣ್ಯರು ದೀಪ ಬೆಳಗುವ ಮೂಲಕ ಕಾರ್ಯಕ್ರಮದ ಉದ್ಘಾಟನೆಯನ್ನು ಮಾಡಿದರು. ಕಾರ್ಯಾಧ್ಯಕ್ಷ ಮೋಹನ್ ಶ್ರೀಗಿರಿಪುರ ಅವರು ಕಾರ್ಯಕ್ರಮದ ಪ್ರಾಸ್ತಾವಿಕ ನುಡಿಗಳನ್ನು ಆಡಿದರು. ಮೋಹನ್ ಶ್ರೀಗಿರಿಪುರ ಹಾಗೂ ಸುದರ್ಶನ್ ಅವರು ಅತಿಥಿಗಳ ಪರಿಚಯವನ್ನು ಮಾಡಿದರು.
ಕಾರ್ಯಕ್ರಮವನ್ನು ನಡೆಸಲು ಸಹಾಯ ಹಸ್ತ ಚಾಚಿದವರೆಲ್ಲರಿಗೂ ಅತಿಥಿ ಗಣ್ಯರ ಮೂಲಕ ಗೌರವ ಸಮರ್ಪಣೆ ಮಾಡಲಾಯಿತು. ಅತೀ ಧೀರ್ಘವಲ್ಲದ ಉದ್ಘಾಟಕರ ಭಾಷಣ, ಮುಖ್ಯ ಅತಿಥಿಗಳ ನುಡಿಗಳು ಮತ್ತು ಅಧ್ಯಕ್ಷರ ನುಡಿಗಳು ಅರ್ಥಪೂರ್ಣವಾಗಿದ್ದವು. ಎಲ್ಲರೂ ಡಾ. ಪಿ.ಬಿ ಶ್ರೀನಿವಾಸ್ ರವರ ಬಗ್ಗೆ ಮಾತನಾಡಿ ತಮ್ಮ ಅನುಭವಗಳನ್ನು ಹಂಚಿಕೊಂಡರು.
ಮುಖ್ಯ ಅತಿಥಿಗಳಾದ ಪಿ. ಸೀತಾರಾಮನ್ ಮಾತನಾಡಿ, ಒಬ್ಬ ಅತ್ಯುತ್ತಮ ಧ್ವನಿ ಅನುಕರಣೆ ಕಲಾವಿದರು. ಅವರು ವೇದಿಕೆಯಲ್ಲಿ ಪ್ರದರ್ಶಿಸಿದ ಹಲವು ಅದ್ಭುತವಾದ ಧ್ವನಿ ಅನುಕರಣೆಗಳು ಕಾರ್ಯಕ್ರಮಕ್ಕೆ ಆಗಮಿಸಿದ್ದ ಪ್ರೇಕ್ಷಕರ ಮನದಲ್ಲಿ ಅಚ್ಚರಿ ಮೂಡುವಂತೆ ಮಾಡಿದವು. ಪ್ರೇಕ್ಷಕರಿಂದ ಕರತಾಡನ ಹಾಗೂ ಹರ್ಷೋದ್ಗಾರಗಳು ಮೊಳಗಿದವು.
ಗೀತಗಾಯನದಲ್ಲಿ ಹಲವಾರು ಕಲಾವಿದರು ಪಾಲ್ಗೊಂಡಿದ್ದರು. ವಿಶೇಷವೆಂದರೆ ಎಲ್ಲರೂ ಸಂಗೀತ ಕಲಾನಿಧಿ ಡಾ. ಪಿ ಬಿ ಶ್ರೀನಿವಾಸ್ ರವರು ಹಾಡಿದಂತಹ ಅತ್ಯುತ್ತಮ ಗಾನಗಳನ್ನು ಆರಿಸಿ ಹಾಡಿದ್ದರು. ವಿಶೇಷವೆಂದರೆ ಮೋಹನ್ ಶ್ರೀಗಿರಿಪುರ ಅವರು ಪಿ. ಬಿ ಶ್ರೀನಿವಾಸ್ ಅವರನ್ನು ಹೋಲುವ ಧ್ವನಿಯನ್ನು ಹೊಂದಿದ್ದಾರೆ. ಅವರೂ ಕೂಡ ಸುಮಧುರ ಗೀತೆಗಳನ್ನು ಕಾರ್ಯಕ್ರಮದಲ್ಲಿ ಹಾಡಿದ್ದಾರೆ. ಗೀತಗಾಯನ ಕಾರ್ಯಕ್ರಮದಲ್ಲಿ ಯುಗಳ ಗೀತೆಗಳು ಹಾಗೂ ಏಕವ್ಯಕ್ತಿ ಗೀತೆಗಳು ಒಳಗೊಂಡಿದ್ದವು.
ಎಲ್ಲಾ ಗಾಯಕ ಗಾಯಕಿಯರ ಹಾಡುಗಳು ಸುಶ್ರಾವ್ಯ ಹಾಗೂ ಸುಮಧುರವಾಗಿದ್ದವು. ಯುವ ಕಲಾವಿದರು ಗೀತ ಗಾಯನ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದು ವಿಶೇಷ.
ಇಂದಿನ ಯುವ ಜನತೆ ಅಂದಿನ ಕಾಲದ ಕ್ಲಿಷ್ಟಕರವಾದ ಗೀತೆಗಳನ್ನು ಕಲಿತು ಸೊಗಸಾಗಿ, ಮಧುರವಾಗಿ ಹಾಡಿದ್ದು ಪ್ರಶಂಸನೀಯವಾಗಿತ್ತು. ಬಹುಶಃ ನೂರಕ್ಕಿಂತ ಹೆಚ್ಚು ಹಾಡುಗಳನ್ನು ಕಲಾವಿದರು ಹಾಡಿದ್ದಾರೆ. ಗೀತಗಾಯನವನ್ನು ಆಲಿಸುತ್ತಿದ್ದ ಪ್ರತಿಯೊಬ್ಬರೂ ಕರತಾಡನದ ಮೂಲಕ ಕಲಾವಿದರಿಗೆ ಪ್ರೋತ್ಸಾಹವನ್ನು ನೀಡಿ ಉತ್ಸಾಹವನ್ನು ತುಂಬುತ್ತಿದ್ದರು.
ಬಿ. ಆರ್ ಉಮೇಶ್ ಅವರು ಧ್ವನಿವರ್ಧಕ ಉಪಕರಣಗಳ ಸಂಪೂರ್ಣ ಮೇಲುಸ್ತುವಾರಿಯನ್ನು ವಹಿಸಿ, ಉತ್ತಮ ರೀತಿಯಲ್ಲಿ ಉಪಕರಣಗಳ ನಿರ್ವಹಣೆಯನ್ನು ಮಾಡಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು. ಗಾಯಕಿ ಮಮತಾ ಭಾಸ್ಕರ್ ಅವರು ಬೆಳಗ್ಗಿನಿಂದ ಸಂಜೆಯವರೆಗೆ ನಿರಂತರವಾಗಿ ನಡೆದ ಗೀತಗಾಯನ ಕಾರ್ಯಕ್ರಮದ ಹಾಗೂ ಗೀತಗಾಯನಗಳ ಅಷ್ಟೂ ವಿಡಿಯೋಗಳನ್ನು ತಮ್ಮ ಮೊಬೈಲ್ ನಲ್ಲಿ ಸೆರೆಹಿಡಿದಿದ್ದಾರೆ.
ಗೀತಗಾಯನ ಕಾರ್ಯಕ್ರಮದ ನಡುವೆ ಸಂಗೀತ ಹಾಗೂ ಸಾಹಿತ್ಯ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ಪ್ರತಿಭೆಗಳನ್ನು ಗುರುತಿಸಿ, ಅವರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಗಾಯನದಲ್ಲಿ ನುರಿತ ಹಿರಿಯ ಕಲಾವಿದರು ಹಾಗೂ ಮುಖ್ಯ ಅತಿಥಿಗಳ ಮುಖಾಂತರ ಅವರಿಗೆ ಹಾರ ಹಾಕಿಸಿ, ಶಾಲು ಹೊದಿಸಿ, ಪುಸ್ತಕಗಳನ್ನು ಬಹುಮಾನವಾಗಿ ನೀಡಿ ಗೌರವ ಸನ್ಮಾನವನ್ನು ಮಾಡಲಾಯಿತು. ಸಂಜೆ ಕಾರ್ಯಕ್ರಮ ಮುಗಿಯುವವರೆಗೂ ಗಾನಾಲಾಪನ ಮುಂದುವರೆದಿತ್ತು.
ಕಾರ್ಯಕ್ರಮದ ಆಯೋಜನೆಯ ಜವಾಬ್ದಾರಿ ಹೊತ್ತ ಎಲ್ಲರಿಂದಲೂ ಸಮರ್ಪಕವಾದ ಕಾರ್ಯನಿರ್ವಹಣೆ ನಡೆದಿತ್ತು. ಕಾರ್ಯಕ್ರಮದ ಅಂತಿಮದಲ್ಲಿ ಹಲವು ಉತ್ತಮ ಗಾಯಕ/ಗಾಯಕಿಯರಿಗೆ ಸನ್ಮಾನ ಪುರಸ್ಕಾರವನ್ನು ನೀಡಲಾಯಿತು. ಕಾರ್ಯಕ್ರಮಕ್ಕೆ ಆಗಮಿಸಿದ ಎಲ್ಲರಿಗೂ ತಿಂಡಿ, ಕಾಫಿ, ಉಪಹಾರ ಹಾಗೂ ಊಟದ ವ್ಯವಸ್ಥೆಯನ್ನು ಮಾಡಲಾಗಿತ್ತು.
ರಾಜ್ಯೋತ್ಸವ ಪ್ರಶಸ್ತಿ, ನಾಡೋಜ ಡಾ. ರಾಜಕುಮಾರ್ ಸೌಹಾರ್ದ ಪ್ರಶಸ್ತಿ, ಕಲೈವನರ್ ಹೀಗೆ ಈ ಮೇಲ್ಕಂಡ ಪ್ರಶಸ್ತಿಗಳನ್ನು ಪಡೆದ ಡಾ. ಪಿ. ಬಿ ಶ್ರೀನಿವಾಸ್ ರವರು ಜನಮನದಲ್ಲಿ ಅಚ್ಚಳಿಯದೆ ಉಳಿದಂತಹ ಒಬ್ಬ ಅಪೂರ್ವ ಹಾಗೂ ಅಪ್ರತಿಮ ಗಾಯಕರಾಗಿದ್ದಾರೆ.
ಪಿ.ಬಿ.ಎಸ್ ರವರ ಅಭಿಮಾನಿಗಳು ಅವರ ಹೆಸರಿನಲ್ಲಿ ಗೀತಗಾಯನ ಕಾರ್ಯಕ್ರಮಗಳನ್ನು ಮಾಡುತ್ತಾ ಅಪೂರ್ವವಾದ ಗೀತೆಗಳನ್ನು ಜತನದಿಂದ ಕಾಪಾಡಿಕೊಂಡು ಬಂದಿರುವುದು ವಿಶೇಷ. ಕಳೆದ ಮೂರು ವರ್ಷಗಳಿಂದ ಡಾ. ಪಿ.ಬಿ ಶ್ರೀನಿವಾಸ್ ಎಂಬ ಗಾನಮಾಂತ್ರಿಕನ ಸವಿ ನೆನಪಿನಲ್ಲಿ ಮೋಹನ್ ಶ್ರೀ ಗಿರಿಪುರ ರವರ ಕಲಾವಿದರ ಬೆಳಗವು ಕಾರ್ಯಕ್ರಮಗಳನ್ನು ನಡೆಸುತ್ತಾ ಬಂದಿದೆ. ಇದು ಬಳಗವು ನಡೆಸುತ್ತಿರುವ ಒಂಭತ್ತನೇ ಗೀತಗಾಯನ ಕಾರ್ಯಕ್ರಮವಾಗಿದೆ. ಇದುವರೆಗೂ ನಡೆಸಿದ ಕಾರ್ಯಕ್ರಮಗಳ ಪ್ರಮುಖ ಹೆಸರುಗಳು ಇಂತಿವೆ.
1. ಮೋಹಕ ಗಾನ ಮೋಹನ ಯಾನ
(ಸಿಂಗ್ ವಿತ್ ದ ಸ್ಟಾರ್)
2. ಪಿ.ಬಿ.ಎಸ್ ಹಾಡುಹಬ್ಬ ಹಾಗೂ
3. ಡಾ. ಪಿ. ಬಿ. ಶ್ರೀನಿವಾಸ್ ಭಾವಕುಸುಮ.
ಅಜರಾಮರರಾದ ಗಾಯಕ ಡಾ. ಪಿ. ಬಿ ಶ್ರೀನಿವಾಸ್ ರವರ ಹೆಸರಿನಲ್ಲಿ ಸಂಸ್ಥೆಗಳು ಜಂಟಿ ಆಯೋಜನೆಯಲ್ಲಿ ಮಾಡುತ್ತಿರುವ ಸಂಗೀತ ಸೇವೆಯು ಅನುಕರಣೀಯ. ತಮ್ಮ ಮೆಚ್ಚಿನ ಗಾಯಕನ ಗಾಯನದ ಗೀತೆಗಳನ್ನು ಚಿರಸ್ಮರಣೀಯವಾಗಿರಿಸುವ ನಿಟ್ಟಿನಲ್ಲಿ ಸಂಸ್ಥೆಯ ಗೌರವಾಧ್ಯಕ್ಷರಾದ ಗಾಯಕ ಪುತ್ರ ಡಾ. ಪಿ. ಬಿ ಫಣೀಂದ್ರ ಹಾಗೂ ಮೋಹನ್ ಶ್ರೀಗಿರಿಪುರ ಮತ್ತು ಎಲ್ಲಾ ಕಲಾವಿದರ ಪರಿಶ್ರಮ ಶ್ಲಾಘನೀಯ. ಸಂಪೂರ್ಣ ಕಾರ್ಯಕ್ರಮದ ನಿರೂಪಣೆಯನ್ನು ಸುದರ್ಶನ್ ಅವರು ಸೊಗಸಾಗಿ ನಿರ್ವಹಿಸಿದರು. ಅಂತಿಮವಾಗಿ ಕಾರ್ಯಕ್ರಮದ ವಂದನಾರ್ಪಣೆಯನ್ನು ಶ್ರೀಯುತ ಮೋಹನ್ ಶ್ರೀಗಿರಿಪುರರವರು ಮಾಡಿದರು. ಡಾ. ಪಿ. ಬಿ ಶ್ರೀನಿವಾಸ್ ರವರ ಸ್ಮರಣಾರ್ಥವಾಗಿ ಪ್ರಾರಂಭಗೊಂಡ ಗೀತಗಾಯನ ಕಾರ್ಯಕ್ರಮವು ಚಿರಕಾಲ ಹೀಗೆಯೇ ಮುಂದುವರೆಯುವಂತಾಗಲಿ.
- ರುಕ್ಮಿಣಿ ಎಸ್ ನಾಯರ್, ಬೆಂಗಳೂರು
#PBSrinivas #memorable #song #singing #RukminiSNair #malgudiexpress #malgudinews #news #TopNews
#📜ಪ್ರಚಲಿತ ವಿದ್ಯಮಾನ📜
ಮತ್ತೊಮ್ಮೆ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿದ ಅಧಿಕಾರ ಹಸ್ತಾಂತರ ವಿಚಾರ
ಬೆಂಗಳೂರು: ರಾಜ್ಯದಲ್ಲಿ ಮತ್ತೊಮ್ಮೆ ಅಧಿಕಾರ ಹಸ್ತಾಂತರ ವಿಚಾರ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿದೆ. ಮುಂದಿನ ಎರಡೂವರೆ ವರ್ಷಗಳ ಕಾಲ ತಾವೇ ಮುಖ್ಯಮಂತ್ರಿ ಎಂದು ಸಿದ್ದರಾಮಯ್ಯ ಘೋಷಿಸಿದ್ದು, ಅವರ ಬೆಂಬಲಕ್ಕೆ ಅನೇಕ ಮಂದಿ ಮಂತ್ರಿಗಳು ಧಾವಿಸಿದ್ದಾರೆ.
ಮತ್ತೊಂದೆಡೆ ಡಿಸಿಎಂ ಡಿ ಕೆ ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಅವರ ಬೆಂಬಲಿಗರು ಮನವಿ ಮಾಡಿದ್ದು, ಶಿಸ್ತು ಉಲ್ಲಂಘನೆ ಆರೋಪದ ಹೆಸರಿನಲ್ಲಿ ಇವರಿಗೆ ಕಾಂಗ್ರೆಸ್ ಶಿಸ್ತು ಸಮಿತಿ ನೋಟಿಸ್ ಜಾರಿಗೊಳಿಸಿದೆ.
ವಿಜಯದಶಮಿ ವೇಳೆಗೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಿರುವುದಿಲ್ಲ ಎಂದು ಬಿಜೆಪಿ ನಾಯಕರು ಈ ಹಿಂದೆ ಮಾಡಿದ್ದ ಆರೋಪಗಳಿಗೆ ಉತ್ತರ ನೀಡಿದ ಸಿಎಂ ಸಿದ್ದರಾಮಯ್ಯ, ಈ ವಿಜಯದಶಮಿ ಮಾತ್ರವಲ್ಲ ಮುಂದಿನ ವಿಜಯದಶಮಿಗೂ ತಾವೇ ಮುಖ್ಯಮಂತ್ರಿಯಾಗಿದ್ದು ಜಂಬೂಸವಾರಿಗೆ ಪುಷ್ಪಾರ್ಚನೆ ಮಾಡುವುದಾಗಿ ಹೇಳಿದ್ದರು.
ಇದಕ್ಕೆ ಪ್ರತಿಕ್ರಿಯೆ ನೀಡಿದ ಡಿ ಕೆ ಶಿವಕುಮಾರ್ ಅವರ ಆಪ್ತ ಶಾಸಕ ಡಾ. ರಂಗನಾಥ್ ಮತ್ತು ಮಾಜಿ ಸಂಸದ ಶಿವರಾಮೇಗೌಡ ಅವರು ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬರಲು ಡಿ ಕೆ ಶಿವಕುಮಾರ್ ಅವರ ಪಾತ್ರ ಅತ್ಯಂತ ಪ್ರಮುಖವಾಗಿದೆ. ಹೀಗಾಗಿ ಹೈಕಮಾಂಡ್ ಅವರಿಗೆ ಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಆಗ್ರಹಿಸಿದ್ದರು.
ನಾಯಕತ್ವ ವಿಚಾರ ಕುರಿತಂತೆ ಯಾರೂ ಕೂಡ ಬಹಿರಂಗವಾಗಿ ಹೇಳಿಕೆ ನೀಡಬಾರದು ಎಂದು ಹೈಕಮಾಂಡ್ ಕಟ್ಟಾಜ್ಞೆ ವಿಧಿಸಿದ್ದರೂ ಈ ಇಬ್ಬರೂ ನೀಡಿದ ಹೇಳಿಕೆ ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು.
ಇಬ್ಬರ ಹೇಳಿಕೆಯ ನಂತರ ಸಿದ್ದರಾಮಯ್ಯ ಅವರ ಬೆಂಬಲಕ್ಕೆ ಸಚಿವರ ದಂಡೇ ನಿಂತಿದೆ. ಸಿದ್ದರಾಮಯ್ಯ ಆಪ್ತರಾದ ಜಮೀರ್ ಅಹ್ಮದ್ ಖಾನ್, ಡಾ. ಜಿ ಪರಮೇಶ್ವರ್, ಎಚ್ ಸಿ ಮಹದೇವಪ್ಪ, ಎಂ ಬಿ ಪಾಟೀಲ್ ದಿನೇಶ್ ಗುಂಡೂರಾವ್ ಮಾತ್ರವಲ್ಲ, ಯಾವುದೇ ಬಣಗಳಲ್ಲಿ ಗುರುತಿಸಿಕೊಳ್ಳದ ರಾಮಲಿಂಗಾ ರೆಡ್ಡಿ ಕೂಡಾ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದಾರೆ ಎಂದಿದ್ದಾರೆ.
ನಾಯಕತ್ವ ಬದಲಾವಣೆ ವಿಚಾರವಾಗಿ ಈ ಮೊದಲಿನಿಂದಲೂ ಯಾವುದೇ ಬಹಿರಂಗ ಹೇಳಿಕೆ ನೀಡದೆ ಅಂತರ ಕಾಯ್ದುಕೊಂಡು ಬಂದಿದ್ದ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಇದೇ ಮೊದಲ ಬಾರಿಗೆ ಸಿಎಂ ಬದಲಾವಣೆ ಬಗ್ಗೆ ಮಾತನಾಡಿದ್ದಾರೆ. ನವೆಂಬರ್ ಕ್ರಾಂತಿ ಎಂಬುದು ಭ್ರಾಂತಿ. ಅಧಿಕಾರ ಹಂಚಿಕೆ ಮಾತು ಪಕ್ಷ ವಿರೋಧಿ. ಮುಖ್ಯಮಂತ್ರಿ ಬದಲಾವಣೆ ಇಲ್ಲ. ಸಿದ್ದರಾಮಯ್ಯ ಅವರೇ ಐದು ವರ್ಷ ಸಿಎಂ ಆಗಿ ಮುಂದುವರಿಯಲಿದ್ದಾರೆ ಎಂದಿದ್ದಾರೆ.
ಇವರಷ್ಟೇ ಅಲ್ಲ, ಗೃಹ ಸಚಿವ ಡಾ. ಜಿ ಪರಮೇಶ್ವರ್ ಕೂಡಾ ಸಿದ್ದರಾಮಯ್ಯ ಬೆನ್ನಿಗೆ ನಿಂತಿದ್ದಾರೆ. ಕಾಂಗ್ರೆಸ್ನಲ್ಲಿ ಯಾವುದೇ ಕ್ರಾಂತಿ ಇಲ್ಲ. ಕೇವಲ ಶಾಂತಿ. ಸಿಎಂ ಬದಲಾವಣೆ ಚರ್ಚೆಯೇ ಇಲ್ಲ. ಇದನ್ನು ಸ್ವತಃ ಸಿದ್ದರಾಮಯ್ಯ ಅವರೇ ಹೇಳಿದ್ದಾರೆ. ಸಿದ್ದರಾಮಯ್ಯ ಈಗ ರಾಜ್ಯದ ಮುಖ್ಯಮಂತ್ರಿ ಆಗಿದ್ದಾರೆ. ಮುಂದಿನ ಎರಡುವರೆ ವರ್ಷಗಳ ಕಾಲ ಅವರೇ ಸಿಎಂ ಆಗಿ ಇರುತ್ತಾರೆ ಎಂದು ಅಂದುಕೊಂಡಿದ್ದೇವೆ ಎನ್ನುವ ಮೂಲಕ ನಾಯಕತ್ವ ಬದಲಾವಣೆ ಅಲ್ಲಗಳೆದಿದ್ದಾರೆ.
ಮಂತ್ರಿಗಳಾದ ಎಂ ಬಿ ಪಾಟೀಲ್, ದಿನೇಶ್ ಗುಂಡೂರಾವ್ ಸೇರಿದಂತೆ ಹಲವರು ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕುರಿತು ಯಾವುದೇ ವಿಷಯ ಚರ್ಚೆ ಮಾಡುವಂತಿಲ್ಲ. ಈ ಬಗ್ಗೆ ಹೈಕಮಾಂಡ್ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ. ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಿ ಮುಂದುವರೆಯಲಿದ್ದಾರೆ ಎಂದು ಹೇಳಿದ್ದಾರೆ.
ಇದರ ಬೆನ್ನಲ್ಲೇ ನಾಯಕತ್ವ ಬದಲಾವಣೆ ಕುರಿತ ಹೇಳಿಕೆ ನೀಡಿದ ಉಪ ಮುಖ್ಯಮಂತ್ರಿ ಆಪ್ತರಿಗೆ ಶಿಸ್ತು ಸಮಿತಿ ನೋಟಿಸ್ ನೀಡಿದೆ. ಶಾಸಕ ಡಾ. ರಂಗನಾಥ್ ಅವರು ಡಿ ಕೆ ಶಿವಕುಮಾರ್ ಅವರು ಸಿಎಂ ಆಗಬೇಕು. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಕಾರಕ್ಕೆ ಬರುವಲ್ಲಿ ಡಿಕೆ ಪಾತ್ರ ಇದೆ. ಹಾಗಾಗಿ ಅವರು ಇಂದಲ್ಲ ನಾಳೆ ಸಿಎಂ ಆಗೇ ಆಗುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದರು. ಆದರೆ ಅವರಿಗೆ ಕೆಪಿಸಿಸಿ ಶಿಸ್ತು ಸಮಿತಿ ನೋಟಿಸ್ ನೀಡಿದೆ.
ಅವರಷ್ಟೇ ಅಲ್ಲ, ಮಾಜಿ ಸಂಸದ ಎಲ್ ಆರ್ ಶಿವರಾಮೇಗೌಡ ಕೂಡಾ ಡಿ ಕೆ ಶಿವಕುಮಾರ್ ಪರವಾಗಿ ಹೇಳಿಕೆ ನೀಡಿದ್ದರು. ಡಿಕೆಶಿ ರಾಜ್ಯದ ಸಿಎಂ ಆಗಬೇಕು ಎಂದು ಬಹಿರಂಗವಾಗಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಹಾಗಾಗಿ ಅವರಿಗೆ ಕೂಡಾ ನೋಟಿಸ್ ನೀಡಲಾಗಿದೆ. ಒಂದು ವಾರದೊಳಗಾಗಿ ಉತ್ತರ ನೀಡುವಂತೆ ಸೂಚನೆ ನೀಡಿಲಾಗಿದೆ.
#transfer #power #issue #once #again #made #big #splash #malgudiexpress #malgudinews #news #TopNews
#📜ಪ್ರಚಲಿತ ವಿದ್ಯಮಾನ📜
28 ರಾಜ್ಯ ಸರ್ಕಾರಗಳಿಗೆ ಒಟ್ಟಾರೆ 1,01,603 ಕೋಟಿ ರೂ. ತೆರಿಗೆ ಹಂಚಿಕೆ
ಬೆಂಗಳೂರು: ಕೇಂದ್ರ ಸರ್ಕಾರ ತೆರಿಗೆ ಪಾಲನ್ನು ರಾಜ್ಯಗಳಿಗೆ ಬಿಡುಗಡೆ ಮಾಡಿದೆ. ಎಲ್ಲಾ ರಾಜ್ಯಗಳಿಗೆ ಹೆಚ್ಚುವರಿ 1,01,603 ಕೋಟಿ ರೂ. ತೆರಿಗೆ ಪಾಲನ್ನು ಬಿಡುಗಡೆ ಮಾಡಿದ್ದು, ಇದರಲ್ಲಿ ಕರ್ನಾಟಕಕ್ಕೆ 3,705 ಕೋಟಿ ರೂ ಹಂಚಿಕೆ ಮಾಡಲಾಗಿದೆ.
ದೀಪಾವಳಿ ಹಬ್ಬಗಳ ಋತುವಿನಲ್ಲಿ ಕೇಂದ್ರ ಸರ್ಕಾರ ಮಹತ್ತರ ನಿರ್ಣಯ ಕೈಗೊಂಡು ಎಲ್ಲಾ ರಾಜ್ಯಗಳಿಗೂ ನೆರವಾಗುವಂತೆ ತೆರಿಗೆ ಹಂಚಿಕೆಯ ಒಂದು ಮುಂಗಡ ಕಂತು ಬಿಡುಗಡೆ ಮಾಡಿದೆ. ಇದರಲ್ಲಿ ಕರ್ನಾಟಕಕ್ಕೆ 3705 ಕೋಟಿ ರೂ. ಹೆಚ್ಚುವರಿ ತೆರಿಗೆ ಪಾಲನ್ನು ಒದಗಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಸಮರ್ಪಕವಾಗಿ ರಾಜ್ಯಗಳು ಬಳಸಿಕೊಳ್ಳಲಿ: ರಾಜ್ಯಗಳ ಬಂಡವಾಳ ವೆಚ್ಚವನ್ನು ವೇಗಗೊಳಿಸಲು ಹಾಗೂ ಅಭಿವೃದ್ಧಿ ಕಲ್ಯಾಣ ಕಾರ್ಯಗಳ ವೆಚ್ಚಕ್ಕೆ ಆರ್ಥಿಕ ನೆರವು ಒದಗಿಸುವ ದಿಸೆಯಲ್ಲಿ ಕೇಂದ್ರ ಸರ್ಕಾರ ದೇಶದ ಎಲ್ಲಾ 28 ರಾಜ್ಯ ಸರ್ಕಾರಗಳಿಗೂ ಒಟ್ಟಾರೆ 1,01,603 ಕೋಟಿ ರೂ. ತೆರಿಗೆ ಹಂಚಿಕೆಯನ್ನು ಮುಂಗಡ ಕಂತಾಗಿ ಬಿಡುಗಡೆ ಮಾಡಲಾಗಿದೆ.
ಅಕ್ಟೋಬರ್ 10ರಂದು ಬಿಡುಗಡೆ ಆಗಬೇಕಾದ ಸಾಮಾನ್ಯ ಮಾಸಿಕ ಹಂಚಿಕೆ ಜೊತೆಗೆ ಈ ಹೆಚ್ಚುವರಿ ತೆರಿಗೆ ಪಾಲಿನ ಹಣವೂ ಬಿಡುಗಡೆಯಾಗಲಿದೆ. ರಾಜ್ಯ ಸರ್ಕಾರಗಳು ಅಭಿವೃದ್ಧಿ ಕಾರ್ಯಗಳಿಗೆ ಇದನ್ನು ಸಮರ್ಪಕವಾಗಿ ಬಳಸಿಕೊಳ್ಳಲಿ ಎಂದು ಅವರು ಸಲಹೆ ನೀಡಿದ್ದಾರೆ.
ರೈತರಿಗೆ ಬೆಂಬಲ ಬೆಲೆ ತಲುಪಿಸಿ: ಅತಿವೃಷ್ಟಿಯಿಂದಾಗಿ ರಾಜ್ಯದ ರೈತರು ತತ್ತರಿಸಿದ್ದಾರೆ. ಉತ್ತರ ಕರ್ನಾಟಕ, ಕಲ್ಯಾಣ ಕರ್ನಾಟಕ ಸೇರಿದಂತೆ ರಾಜ್ಯಾದ್ಯಾಂತ ವಿಪರೀತ ಮಳೆಯಿಂದ ರೈತರು ಬೆಳೆಹಾನಿಗೆ ಒಳಗಾಗಿದ್ದಾರೆ. ಈ ಸಂಕಷ್ಟ ಪರಿಸ್ಥಿತಿಯಲ್ಲಿ ಕೇಂದ್ರ ಸರ್ಕಾರ ವಿವಿಧ ಬೆಳೆಗಳಿಗೆ ಬೆಂಬಲ ಬೆಲೆಯ ನೆರವು ಕಲ್ಪಿಸಿದೆ. ರಾಜ್ಯ ಸರ್ಕಾರ ಅನ್ನದಾತರಿಗೆ ಇದನ್ನು ಸಮರ್ಪಕವಾಗಿ ತಲುಪಿಸಲಿ ಎಂದು ಒತ್ತಾಯಿಸಿದ್ದಾರೆ.
ರಾಜ್ಯಗಳ ಅಭಿವೃದ್ಧಿ/ಕಲ್ಯಾಣ ಸಂಬಂಧಿತ ವೆಚ್ಚಗಳಿಗೆ ಹಣಕಾಸು ಒದಗಿಸಲು ಮತ್ತು ಬಂಡವಾಳ ವೆಚ್ಚ ವೇಗಗೊಳಿಸಲು ಹಾಗೂ ಮುಂಬರುವ ಹಬ್ಬಗಳ ಋತುವಿನ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಅಕ್ಟೋಬರ್ 1 ರಂದು ರಾಜ್ಯ ಸರ್ಕಾರಗಳಿಗೆ ಹೆಚ್ಚುವರಿ 1,01,603 ಕೋಟಿ ರೂ ತೆರಿಗೆ ಹಂಚಿಕೆಯನ್ನು ಬಿಡುಗಡೆ ಮಾಡಿದೆ. ಅಕ್ಟೋಬರ್ 10ರಂದು ಬಿಡುಗಡೆಯಾಗಬೇಕಿದ್ದ ಸಾಮಾನ್ಯ ಮಾಸಿಕ 81,735 ಕೋಟಿ ರೂ.ಗಳ ತೆರಿಗೆ ಪಾಲನ್ನು ಬಿಡುಗಡೆ ಮಾಡಿದೆ.
#Total #tax #allocation #crore #state #governments #gst #malgudiexpress #malgudinews #news #TopNews
#🌼 ಗಾಂಧಿ ಜಯಂತಿ 🌼
ಗಾಂಧೀಜಿ ಭಾರತಕ್ಕೆ ರಾಜಕೀಯ ಸ್ವಾತಂತ್ರ್ಯ ತಂದುಕೊಟ್ಟರು: ಎನ್.ಎಚ್.ಕೋನರಡ್ಡಿ
ಧಾರವಾಡ: ಗಾಂಧೀಜಿಯವರು ಸತ್ಯ, ಸ್ವಚ್ಛತೆ ಮತ್ತು ಗ್ರಾಮ ಸ್ವರಾಜ್ಯದ ಸಂಕಲ್ಪಕ್ಕೆ ಹೆಚ್ಚಿನ ಮಹತ್ವ ನೀಡಿದ್ದರು. ಭಾರತಕ್ಕೆ ರಾಜಕೀಯ ಸ್ವಾತಂತ್ರ್ಯ ತಂದುಕೊಟ್ಟರು ಎಂದು ಶಾಸಕ ಎನ್.ಎಚ್ ಕೋನರಡ್ಡಿ ಹೇಳಿದರು.
ಧಾರವಾಡ ಹೊಸ ಬಸ್ ನಿಲ್ದಾಣದ ಹತ್ತಿರವಿರುವ ನೂತನ ಗಾಂಧಿ ಭವನದ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಮತ್ತು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಇವುಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರ 156 ನೇ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಗಾಂಧೀಜಿ ಅವರ ರಾಜಕೀಯ ಆಡಳಿತ ವ್ಯವಸ್ಥೆ ನಮಗೆ ಮಾದರಿಯಾಗಿದೆ. ಸತ್ಯ ಮತ್ತು ಅಹಿಂಸೆ ಮಾರ್ಗದಲ್ಲಿ ಅವರು ನಡೆದರು. ಸತ್ಯಾಗ್ರಹ ಮನೋಭಾವನೆಯನ್ನು ಮೈಗೂಡಿಸಿಕೊಳ್ಳಬೇಕು. ಗ್ರಾಮ ಸ್ವರಾಜ್ಯದ ಸಂಕಲ್ಪ ಹಾಗೂ ಅಧಿಕಾರ ವೀಕೇಂದ್ರಿಕರಣ ವ್ಯವಸ್ಥೆಗೆ ಬುನಾದಿ ಹಾಕಿದರು. ಪ್ರಜಾಪ್ರಭುತ್ವ ಗಟ್ಟಿಯಾಗಲು ಗ್ರಾಮ ವ್ಯವಸ್ಥೆ ಮುಖ್ಯ. ಆರ್ಥಿಕ, ಸಾಮಾಜಿಕ ಸಮಾನತೆಗೆ ಮುಂದಾಗಬೇಕು ಎಂದರು.
ಗಾಂಧಿ ಚರಿತ್ರೆಯಲ್ಲಿ 1924ರ ಬೆಳಗಾವಿ ಅಧಿವೇಶನ ಅತಿದೊಡ್ಡ ಮೈಲಿಗಲ್ಲಾಗಿದೆ. ಗಾಂಧಿ ತತ್ವವನ್ನು ನಾವೆಲ್ಲರೂ ಅಳವಡಿಸಿಕೊಳ್ಳಬೇಕು. ಸರ್ವಧರ್ಮದ ಗುರುಗಳು ಭಾಗವಹಿಸಿದ ಸಮಾರಂಭ ಇದಾಗಿದೆ. ದೇಶ ಒಂದು ಎಂಬ ಭಾವನೆಯಲ್ಲಿ ನಾವು ಮುನ್ನೆಡಯಬೇಕು. ಗಾಂಧಿ ಭವನದಲ್ಲಿ ಆಯೋಜಿಸಿದ ಕಾರ್ಯಕ್ರಮ ರಾಜ್ಯಕ್ಕೆ ಮಾದರಿಯಾಗಿದೆ. ಇಂದು ವಿಜಯದಶಮಿ ಹಬ್ಬವನ್ನು ಆಚರಿಸುತ್ತಿದ್ದೇವೆ. ಹುಬ್ಬಳ್ಳಿ ಧಾರವಾಡ ಬೃಹತ್ ಬೆಂಗಳೂರು ಮಾದರಿಯಲ್ಲಿ ಬೆಳವಣಿಗೆಯಾಗಬೇಕು ಎಂದರು.
#Gandhiji #brought #political #freedom #India #NHKonaraddy #malgudiexpress #malgudinews #news #TopNews
#📜ಪ್ರಚಲಿತ ವಿದ್ಯಮಾನ📜
ಹೈಟೆಕ್ ಹಾರ್ವೆಸ್ಟರ್ ಹಬ್ ಸ್ಥಾಪನೆಗಾಗಿ ಅರ್ಜಿ ಆಹ್ವಾನ
ಚಿತ್ರದುರ್ಗ: ಹೈಟೆಕ್ ಹಾರ್ವೆಸ್ಟರ್ ಹಬ್ ಯೋಜನೆಯಡಿ 2025-26ನೇ ಸಾಲಿನಲ್ಲಿ ಕೃಷಿಯಲ್ಲಿ ಯಂತ್ರೋಪಕರಣಗಳನ್ನು ರೈತರಿಗೆ ಬಾಡಿಗೆ ಆಧಾರದಲ್ಲಿ ಒದಗಿಸುವಂತೆ ಹಾಗೂ ಜಿಲ್ಲೆಯಲ್ಲಿ ಯಂತ್ರಧಾರೆ ಕೇಂದ್ರಗಳನ್ನು ಇನ್ನಷ್ಟು ಬಲ ಪಡಿಸಲು ವೈಯಕ್ತಿಕ ಫಲಾನುಭವಿಗಳಿಗೆ ಸಾಮಾನ್ಯ ಹಾಗೂ ಪರಿಶಿಷ್ಟ ಜಾತಿಯ ರೈತರಿಂದ ಕಂಬೈನ್ಸ್ ಹಾರ್ವೆಸ್ಟರ್ ಹಬ್ ಸ್ಥಾಪನೆಗಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕ ಡಾ. ಬಿ. ಮಂಜುನಾಥ ತಿಳಿಸಿದ್ದಾರೆ.
ಚಿತ್ರದುರ್ಗ ಜಿಲ್ಲೆಯಲ್ಲಿ ಸಾಮಾನ್ಯ ಘಟಕದಡಿ ವೈಯಕ್ತಿಕ ಫಲಾನುಭವಿಗಳಿಗೆ (ಎರಡು). ವಿಶೇಷ ಘಟಕ ಯೋಜನೆ ವರ್ಗದ ರೈತರಿಗೆ (ಒಂದು) ಘಟಕ ಸ್ಥಾಪನೆಗೆ ಅವಕಾಶ ಕಲ್ಪಿಸಲಾಗಿದೆ. ಈ ಯಂತ್ರಗಳನ್ನು ಬಾಡಿಗೆಗೆ ನೀಡುವ ಮೂಲಕ ರೈತರು ಹೆಚ್ಚುವರಿ ಆದಾಯ ಪಡೆಯಬಹುದಾಗಿದೆ. ಹೈಟೆಕ್ ಹಾರ್ವೆಸ್ಟರ್ ಹಬ್ಗಎಳನ್ನು ಬೆಳೆಯ ವಿಧ ಮತ್ತು ಕಟಾವು ಅವಧಿಯ ಆಧಾರದ ಮೇಲೆ ಕಾರಿಡರ್ ಮಾದರಿಯಲ್ಲಿ ಸ್ಥಾಪಿಸುವುದು. ಕೃಷಿ ಯಂತ್ರೋಪಕರಣವಾರು ನಿಗದಿಪಡಿಸಿದ ಗರಿಷ್ಠ ಸಹಾಯಧನವನ್ನು ಒದಗಿಸಲಾಗುವುದು. ಈ ಸಹಾಯಧನವನ್ನು ಕ್ರೆಡಿಟ್ ಲಿಂಕ್ಸ್ ಬ್ಯಾಕ್ ಎಂಡೆಡ್ ಸಬ್ಸಿಡಿ ಮೂಲಕ ಬಿಡುಗಡೆ ಮಾಡಲಾಗುವುದು. ಆಯ್ಕೆಯಾದ ಫಲಾನುಭವಿಗಳು ಕೃಷಿ ಮೂಲಭೂತ ಸೌಕರ್ಯ ನಿಧಿ ಸಾಲದ ನೆರವನ್ನು ಪಡೆಯಲು ಸಹ ಅವಕಾಶವಿದೆ.
ಅರ್ಜಿಗಳನ್ನು ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಅಕ್ಟೋಬರ್ 8 ರೊಳಗಾಗಿ ಸಲ್ಲಿಸುವುದು. ಸಹಾಯಕ ಕೃಷಿ ನಿರ್ದೇಶಕರು ಸ್ವೀಕೃತವಾಗುವ ಎಲ್ಲ ಅರ್ಜಿಗಳನ್ನು ಮೇಲ್ಕಂಡ ಎಲ್ಲ ಅಂಶಗಳನ್ವಯ ಪರಿಶೀಲಿಸಿ ಸಂಬಂಧಿಸಿದ ಉಪ ಕೃಷಿ ನಿರ್ದೇಶಕರ ಮುಖಾಂತರ ಜಿಲ್ಲಾ ಜಂಟಿ ಕೃಷಿ ನಿರ್ದೇಶಕರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಸಮೀಪದ ರೈತ ಸಂಪರ್ಕ ಕೇಂದ್ರ. ಆಯಾ ತಾಲೂಕಿನ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಸಂಪರ್ಕಿಸಬಹುದು.
#Invitation #applications #establishment #HiTech #HarvesterHub #malgudiexpress #malgudinews #news #TopNews
#🌼 ಗಾಂಧಿ ಜಯಂತಿ 🌼
ಗಾಂಧೀಜಿ ಅವರ ತತ್ವದಲ್ಲಿ ಲಾಲ್ ಬಹಾದ್ದೂರ್ ಶಾಸ್ತ್ರಿ ಅವರು ಜೀವನ ಸವೆಸಿದ್ದಾರೆ: ಭುವನೇಶ ಪಾಟೀಲ
ಧಾರವಾಡ: ಗಾಂಧೀಜಿ ಅವರ ತತ್ವದಲ್ಲಿ ಲಾಲ್ ಬಹಾದ್ದೂರ್ ಶಾಸ್ತ್ರಿ ಅವರು ಜೀವನ ಸವೆಸಿದ್ದಾರೆ ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ಹೇಳಿದರು.
ಧಾರವಾಡ ಹೊಸ ಬಸ್ ನಿಲ್ದಾಣದ ಹತ್ತಿರವಿರುವ ನೂತನ ಗಾಂಧಿ ಭವನದ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಮತ್ತು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಇವುಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರ 156 ನೇ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಗಾಂಧೀಜಿಯವರ ಅಹಿಂಸೆ ತತ್ವ ನಮಗೆ ದಾರಿದೀಪವಾಗಿದೆ. ಅದೇ ಮಾರ್ಗದಲ್ಲಿ ನಾವು ನಡೆಯಬೇಕು. ದಸರಾ ಹಬ್ಬವನ್ನು ರಾಮನು ರಾವಣನ ಮೇಲೆ ಜಯ ಸಾಧಿಸಿದ ದಿನವನ್ನಾಗಿ ಆಚರಣೆ ಮಾಡಲಾಗುತ್ತದೆ. ಗಾಂಧೀಜಿಯವರ ತತ್ವದಾರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.
ಸ್ವಾತಂತ್ರ್ಯ ಹೋರಾಟದಲ್ಲಿ ಅವರ ಪಾತ್ರ ಬಹಳ ಮಹತ್ವದ್ದಾಗಿದೆ. "ಮೈ ಎಕ್ಸಪೀರಿಮೆಂಟ್ ವಿಥ್ ಟ್ರುಥ್" ಎಂಬ ಗ್ರಂಥವನ್ನು ರಚಿಸಿದ್ದಾರೆ. ಶಾಲಾ ದಿನದಲ್ಲಿ ಮಾಡಿದ ತಪ್ಪನ್ನು ಜೀವನದಲ್ಲಿ ಎಂದಿಗೂ ಮಾಡುವುದಿಲ್ಲ ಎಂದು ಶಪಥ ಮಾಡಿದ್ದರು. ತಮ್ಮ ಜೀವನದುದ್ದಕ್ಕೂ ಸತ್ಯದ ದಾರಿಯಲ್ಲಿ ಅವರು ನಡೆದರು. ಅವರಂತೆ ನಾವು ಪ್ರಾಮಾಣಿಕವಾಗಿ ಕೆಲಸ ಕಾರ್ಯಗಳನ್ನು ಕೈಗೊಳ್ಳಬೇಕೆಂದು ತಿಳಿಸಿದರು.
ಜೀವನದಲ್ಲಿ ತ್ಯಾಗವನ್ನು ಸಹ ಅಳವಡಿಸಿಕೊಳ್ಳಬೇಕಾಗುತ್ತದೆ. ಒಳ್ಳೆಯ ನಾಗರಿಕರಾಗಲು ಮುಂದಾಗಬೇಕು. ಲಾಲ್ ಬಹಾದ್ದೂರ್ ಶಾಸ್ತ್ರಿ ಅವರು ಜೈ ಜವಾನ್ ಜೈ ಕಿಸಾನ್ ಘೋಷವಾಕ್ಯ ನೀಡಿದರು. ಪಾಕಿಸ್ತಾನ ವಿರುದ್ಧ ಯುದ್ಧ ಸಂದರ್ಭದಲ್ಲಿ ಬಹಳ ಪ್ರಮುಖ ಪಾತ್ರ ನಿರ್ವಹಿಸಿದ್ದರು. ನಾವು ಸಹ ಸಮಾಜಕ್ಕೆ ಕೊಡುಗೆ ನೀಡಲು ಅಣಿಯಾಗಬೇಕು. ದೇಶದ ಸಮಸ್ಯೆಗಳನ್ನು ಪರಿಹರಿಸಲು ಮುಂದಾಗಬೇಕು ಎಂದರು.
#LalBahadurShastri #lived #life #based #Gandhiji #principles #BhuvaneshPatil #malgudiexpress #malgudinews #news #TopNews
#📜ಪ್ರಚಲಿತ ವಿದ್ಯಮಾನ📜
ವಿಕಲಚೇತನರಿಂದ ಅರ್ಜಿ ಆಹ್ವಾನ
ಚಿತ್ರದುರ್ಗ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವಿವಿಧ ಫಲಾನುಭವಿ ಆಧಾರಿತ ಯೋಜನೆಗಳನ್ನು 2025-26ನೇ ಸಾಲಿನಲ್ಲಿ ನೇರ ನಗದು ವರ್ಗಾವಣೆ ಆನ್ಲೈನ್ ವೇದಿಕೆ ತಂತ್ರಾಂಶದಡಿ ಅಳವಡಿಸಿ, ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ಅವಧಿಯನ್ನು ಅಕ್ಟೋಬರ್ 15 ರವರೆಗೆ ವಿಸ್ತರಿಸಲಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜೆ.ವೈಶಾಲಿ ತಿಳಿಸಿದ್ದಾರೆ.
ಆಧಾರ ಯೋಜನೆ, ವೈದ್ಯಕೀಯ ಪರಿಹಾರ ನಿಧಿ ಯೋಜನೆ, ಪ್ರತಿಭಾವಂತ ವಿಕಲಚೇತನ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಯೋಜನೆ, ನಿರುದ್ಯೋಗ ಭತ್ಯೆ, ಶಿಶುಪಾಲನಾ ಭತ್ಯೆ, ಮರಣ ಪರಿಹಾರ ನಿಧಿ, ಪ್ರತಿಭೆ ಯೋಜನೆ, ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್ಟಾಪ್ ಯೋಜನೆ, ದೃಷ್ಠಿದೋಷ ಹೊಂದಿರುವ ವಿಕಲಚೇತನರಿಗೆ ಬ್ರೈಲ್ಕಿಟ್ ಯೋಜನೆ, ದೈಹಿಕ ವಿಕಲಚೇತನರಿಗೆ ಯಂತ್ರ ಚಾಲಿತ ದ್ವಿಚಕ್ರ ವಾಹನ ಯೋಜನೆ, ಶ್ರವಣದೋಷವುಳ್ಳ ವ್ಯಕ್ತಿಗಳಿಗೆ ಸ್ವಯಂ ಉದ್ಯೋಗಕ್ಕಾಗಿ ಹೊಲಿಗೆಯಂತ್ರ ಯೋಜನೆ, ಸಾಧನ ಸಲಕರಣೆ ಯೋಜನೆ, ವಿಕಲಚೇತನ ವ್ಯಕ್ತಿಗಳಿಗೆ ಬ್ಯಾಟರಿ ಚಾಲಿತ ವ್ಹೀಲ್ಚೇರ್ ಯೋಜನೆಗಳಿಗೆ ವಿಕಲಚೇತನರಿಂದ ಅರ್ಜಿ ಆಹ್ವಾನಿಸಲಾಗಿದೆ.
ಈ ಮೇಲ್ಕಂಡ ಯೋಜನೆಗಳಿಗೆ ಗ್ರಾಮ ಒನ್, ಕರ್ನಾಟಕ ಒನ್ ಮತ್ತು ಸೇವಾಸಿಂಧು ಪೋರ್ಟಲ್ನಡಿ (https://sevasindhu.karnataka.gov.in/sevasindhu/kannada) ಆನ್ಲೈನ್ ಮೂಲಕ ವಿಕಲಚೇತನರು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಿದ ಸ್ವೀಕೃತಿಯೊಂದಿಗೆ ಎಲ್ಲ ಪೂರಕ ದಾಖಲಾತಿಗಳ ಹಾರ್ಡ್ ಪ್ರತಿಯನ್ನು ಆಯಾ ತಾಲ್ಲೂಕಿನ ತಾಲ್ಲೂಕು ಪಂಚಾಯಿತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿದ್ದೋದ್ದೇಶ ಪುನರ್ವಸತಿ ಕಾರ್ಯಕರ್ತರು ಎಂ.ಆರ್.ಡಬ್ಲ್ಯೂಗಳಿಗೆ ಸಲ್ಲಿಸುವುದು.
ಮಾಹಿತಿಗಾಗಿ ಎಂಆರ್ಡಬ್ಲ್ಯೂಗಳ ದೂರವಾಣಿ ಸಂಖ್ಯೆ ಚಿತ್ರದುರ್ಗ-9880821934, ಚಳ್ಳಕೆರೆ-9611266930, ಹಿರಿಯೂರು-9902888901, 9902898901, ಹೊಳಲ್ಕೆರೆ-9740030227, ಹೊಸದುರ್ಗ-9741829990, ಮೊಳಕಾಲ್ಮುರು-9742725576 ಹಾಗೂ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ ದೂರವಾಣಿ ಸಂಖ್ಯೆ 08194-235284 ಅನ್ನು ಸಂಪರ್ಕಿಸಬಹುದು.
#Applications #invited #persons #disabilities #malgudiexpress #malgudinews #news #TopNews
#🌼 ಗಾಂಧಿ ಜಯಂತಿ 🌼 #📜ಪ್ರಚಲಿತ ವಿದ್ಯಮಾನ📜
ಗಾಂಧೀಜಿ ರಾಷ್ಟ್ರಕ್ಕೆ ಸಿಮೀತವಾದ ವ್ಯಕ್ತಿ ಅಲ್ಲ: ನಿತಿನ್ಚಂದ್ರ ಹತ್ತೀಕಾಳ
ಧಾರವಾಡ: ಗಾಂಧೀಜಿ ರಾಷ್ಟ್ರಕ್ಕೆ ಸಿಮೀತವಾದ ವ್ಯಕ್ತಿ ಅಲ್ಲ. ಅವರು ವಿಶ್ವಕ್ಕೆ ಅನನ್ಯ ಕೊಡುಗೆ ನೀಡಿದ್ದಾರೆ. ಮಹಾತ್ಮರು ಹಾಗೂ ಶರಣರು ಇಡೀ ನಾಡಿಗೆ ವಿಶೇಷ ಕೊಡುಗೆಗಳನ್ನು ನೀಡಿರುತ್ತಾರೆ. ನಮ್ಮ ಸಿದ್ಧವೀರ ಸತ್ಸಂಗದಿಂದ 1981 ಅಕ್ಟೋಬರ್ 2 ರಿಂದ ಗಾಂಧೀಜಿಯವರ ಜಯಂತಿಯನ್ನು ಆಚರಿಸುತ್ತಿದ್ದು, ಇಂದು 45 ನೇ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದೆ ಧಾರವಾಡ ಸಿದ್ಧವೀರ ಸತ್ಸಂಗದ ಅಧ್ಯಕ್ಷ ಹಾಗೂ ಗಾಂಧಿ ಚಿಂತಕ ಡಾ. ನಿತಿನ್ಚಂದ್ರ ಹತ್ತೀಕಾಳ ಹೇಳಿದರು.
ಧಾರವಾಡ ಹೊಸ ಬಸ್ ನಿಲ್ದಾಣದ ಹತ್ತಿರವಿರುವ ನೂತನ ಗಾಂಧಿ ಭವನದ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಮತ್ತು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಇವುಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರ 156 ನೇ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ದಕ್ಷಿಣ ಆಫ್ರಿಕಾದಲ್ಲಿ ಅಸ್ಪೃಶ್ಯತೆ ವಿರುದ್ಧ ಹೋರಾಡಿ ಜಯಸಿದರು. ಅಲ್ಲಿಂದ ಮರಳಿ ಭಾರತಕ್ಕೆ ಹಿಂತಿರುಗಿ ಸ್ವಾತಂತ್ರ್ಯ ಹೋರಾಟದಲ್ಲಿ ಧುಮಕಿದರು. ಮಹಾತ್ಮಾ ಎಂಬ ಹೆಸರು ಪಡೆದುಕೊಂಡರು. ಕ್ವಿಟ್ ಇಂಡಿಯಾ, ಚಲೇಜಾವ್ ಚಳುವಳಿ ಸೇರಿದಂತೆ ಅನೇಕ ಹೋರಾಟಗಳಲ್ಲಿ ಭಾಗಿಯಾದರು ಎಂದರು.
ಆದರ್ಶ ನಾಯಕತ್ವದ ಗುಣಗಳನ್ನು ಗಾಂಧೀಜಿಯವರಲ್ಲಿ ನಾವು ಕಂಡೆವು. ಆಲ್ಬರ್ಟ್ ಐನಸ್ಟೀನ್ ಅವರು ಗಾಂಧೀಜಿಯವರನ್ನು ಹಾಡಿಹೊಗಳಿದ್ದಾರೆ. ಮಾರ್ಟಿನ್ ಲೂಥರ್ ಕಿಂಗ್ ಅವರು ನನಗೆ ಇಬ್ಬರೂ ದೇವರು ಎಂದು ಹೇಳಿದ್ದಾರೆ. ಜೀಸಸ್ ಯೇಸುಕ್ರಿಸ್ತ ಮೊದಲನೇ ದೇವರಾದರೆ, ಮಹಾತ್ಮಾ ಗಾಂಧಿ ನನಗೆ ಬದುಕುವ ಕಲೆ ಕಲಿಸಿದ ಎರಡನೇ ದೇವರಾಗಿದ್ದಾರೆ ಎಂದರು.
ವಿರೋಧಿಸುವಿಕೆ, ಸ್ವೀಕಾರ ಮನೋಭಾವ, ರಿಯಲೈಜೇಷನ್ ಜೀವನದಲ್ಲಿ ಬಹುಮುಖ್ಯವಾಗಿವೆ. ಮಹಾತ್ಮಾ ಗಾಂಧಿಯವರ ಹತ್ಯೆ ನಡೆದ ದಿನ ವಿಶ್ವಸಂಸ್ಥೆಯ ಗೊತ್ತುವಳಿಯಿಂದ ಎಲ್ಲ ರಾಷ್ಟ್ರಗಳ ಧ್ವಜಗಳನ್ನು ಅರ್ಧಕ್ಕೆ ಹಾರಿಸಲಾಯಿತು ಎಂದು ತಮ್ಮ ವಿಶೇಷ ಉಪನ್ಯಾಸದಲ್ಲಿ ಅವರು ವಿವರಿಸಿದರು.
#Gandhiji #person #limited #nation #NitinchandraHattikala #malgudiexpress #malgudinews #news #TopNews