Failed to fetch language order
ಶರಣ ಸಾಹಿತ್ಯ
3K Posts • 240K views
ಶ್ರೀ ಗುರು ಬಸವ ಲಿಂಗಾಯ ನಮಃ.. "ಕಾಬುದು ಜೀವನಲ್ಲ, ಕಾಣಿಸಿಕೊಂಬುದು ಪರಮನಲ್ಲ. ಅಟ್ಟಿ ಮುಟ್ಟಿ ಹರಿದಾಡುವವು ಕರಣಂಗಳಲ್ಲ. ಸುಖವನನುಭವಿಸುವವು ಇಂದ್ರಿಯಂಗಳಲ್ಲ. ಇಂತೀ ಭೇದಂಗಳಲ್ಲಿ ಆರೆಂಬುದ ತಿಳಿದು ಸಸಿ ವೃಕ್ಷಕ್ಕೆ ನೀರನೆರದಡೆ ಆ ನೀರ ಕುಡಿವುದು ಬೇರೋ, ಮರನೋ??? ಮೀರಿ ಬೆಳೆದ ಫಲವೋ??? ಎಂಬುದನರಿದು ತಿಳಿದಲ್ಲಿ, ಅರಿದರುಹಿಸಿಕೊಂಬ ನಿರಿಗೆಯ ಬಲ್ಲ, ಆತ ಕಮಠೇಶ್ವರಲಿಂಗವನೊಡಗೂಡಿದ ಶರಣ.. ✍🏻 ಬಾಲಸಂಗಣ್ಣನವರ ವಚನ.. ಬಸವ ಬೆಳಗಿನ ಶರಣು ಶರಣಾರ್ಥಿ ಗಳು 🙏🏻 #ಶರಣ ಸಾಹಿತ್ಯ #ಬಸವಾದಿ ಶರಣ ಶರಣೆಯರು #ವಚನಗಳು #//🌳ವಚನ ಸಾಹಿತ್ಯ 🌳// #ಬಸವಣ್ಣನವರ ವಚನಗಳು
8 likes
6 shares
"ಬಚ್ಚಲ ನೀರು ತಿಳಿಯಾದಡೇನು, ಸಲ್ಲದ ಹೊನ್ನು ಮತ್ತೆಲ್ಲಿದ್ದಡೇನು, ಆಕಾಶದ ಮಾವು ಫಲವೆಂದಡೇನು, ಕೊಯ್ಯಲಿಲ್ಲ, ಮೆಲ್ಲಲಿಲ್ಲ. ಕೂಡಲಸಂಗನ ಶರಣರ ಅನುಭಾವವಿಲ್ಲದವ ಎಲ್ಲಿದ್ಡಡೇನು, ಎಂತಾದಡೇನು.. ✍🏻 ವಿಶ್ವಗುರು ಬಸವಣ್ಣನವರ ವಚನ.. ಶರಣು ಶರಣಾರ್ಥಿಗಳು 🙏 #ಬಸವಣ್ಣನವರ ವಚನಗಳು #//🌳ವಚನ ಸಾಹಿತ್ಯ 🌳// #ವಚನಗಳು #ಬಸವಾದಿ ಶರಣ ಶರಣೆಯರು #ಶರಣ ಸಾಹಿತ್ಯ
13 likes
7 shares
"ಬೆಲ್ಲವ ತಿಂದ ಕೋಡಗದಂತೆ ಸಿಹಿಯ ನೆನೆಯದಿರಾ, ಮನವೆ, ಕಬ್ಬ ತಿಂದ ನರಿಯಂತೆ ಹಿಂದಕ್ಕೆಳಸದಿರಾ, ಮನವೆ. ಗಗನವನಡರಿದ ಕಾಗೆಯಂತೆ ದೆಸೆದಸೆಗೆ ಹಂಬಲಿಸದಿರಾ, ಮನವೆ. ಕೂಡಲಸಂಗನ ಶರಣರ ಕಂಡು ಲಿಂಗವೆಂದೆ ನಂಬು, ಮನವೆ.. ✍🏻 ವಿಶ್ವ ಗುರು ಬಸವಣ್ಣನವರ ವಚನ.. ಬಸವ ಬೆಳಗಿನ ಶರಣು ಶರಣಾರ್ಥಿಗಳು 🙏🏻 #ಶರಣ ಸಾಹಿತ್ಯ #ಬಸವಣ್ಣನವರ ವಚನಗಳು #//🌳ವಚನ ಸಾಹಿತ್ಯ 🌳// #ಬಸವಾದಿ ಶರಣ ಶರಣೆಯರು #ವಚನಗಳು
15 likes
6 shares