ಬಸವಣ್ಣನವರ ವಚನ 💐🙏

10 Posts • 41K views
ಕಾಯಕವೇ ಕೈಲಾಸ..
978 views 21 days ago
"ನಾದಪ್ರಿಯ ಶಿವನೆಂಬರು, ನಾದಪ್ರಿಯ ಶಿವನಲ್ಲವಯ್ಯಾ.. ವೇದಪ್ರಿಯ ಶಿವನೆಂಬರು, ವೇದಪ್ರಿಯ ಶಿವನಲ್ಲವಯ್ಯಾ.. ನಾದವ ಮಾಡಿದ ರಾವಳಂಗೆ ಅರೆ ಆಯುಷ್ಯವಾಯಿತ್ತು.. ವೇದವನೋದಿದ ಬ್ರಹ್ಮನ ಶಿರ ಹೋಯಿತ್ತು.. ನಾದಪ್ರಿಯನೂ ಅಲ್ಲ, ವೇದಪ್ರಿಯನೂ ಅಲ್ಲ, ಭಕ್ತಿ ಪ್ರಿಯ ನಮ್ಮ ಕೂಡಲಸಂಗಮದೇವ.. ✍️ ವಿಶ್ವಗುರು ಬಸವಣ್ಣನವರ ವಚನ.. ಶರಣು ಶರಣಾರ್ಥಿಗಳು 🙏 #ಬಸವಣ್ಣನವರ ವಚನಗಳು #ಬಸವಾದಿ ಶರಣ ಶರಣೆಯರು #ವಚನಗಳು #//🌳ವಚನ ಸಾಹಿತ್ಯ 🌳// #ಶರಣ ಸಾಹಿತ್ಯ
8 likes
10 shares
ಕಾಯಕವೇ ಕೈಲಾಸ..
918 views 1 months ago
"ನೂರನೋದಿ ನೂರ ಕೇಳಿದಡೇನು??? ಆಸೆ ಹರಿಯದು, ರೋಷ ಬಿಡದು. ಮಜ್ಜನಕ್ಕೆರೆದು ಫಲವೇನು??? ಮಾತಿನಂತೆ ಮನವಿಲ್ಲದ ಜಾತಿ ಡೋಂಬರ ನೋಡಿ ನಗುವ ನಮ್ಮ ಕೂಡಲ ಸಂಗಮದೇವ! ✍️ ವಿಶ್ವಗುರು ಬಸವಣ್ಣನವರ ವಚನ.. ಶರಣು ಶರಣಾರ್ಥಿಗಳು 🙏 #ಬಸವಾದಿ ಶರಣ ಶರಣೆಯರು #ವಚನಗಳು #//🌳ವಚನ ಸಾಹಿತ್ಯ 🌳// #ಶರಣ ಸಾಹಿತ್ಯ #ಬಸವಣ್ಣನವರ ವಚನಗಳು
10 likes
17 shares