@Trends Belagavi
34K views • 10 hours ago
#😭ಭೀಕರ ಅಪಘಾತದಲ್ಲಿ ಹಿರಿಯ IAS ಅಧಿಕಾರಿ ನಿಧನ💔 ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕ, ಜಿಲ್ಲೆಯ (kalaburagi news) ಅತ್ಯಂತ ಪ್ರಾಮಾಣಿಕ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ (Mahantesh Bilagi) ಅವರು ಭೀಕರ ಕಾರು ಅಪಘಾತದಲ್ಲಿ (Road Accident) ಸಹೋದರರೊಂದಿಗೆ ದುರ್ಮರಣ ಹೊಂದಿದ್ದಾರೆ.ತಮ್ಮ ಅಧಿಕಾರಾವಧಿಯಲ್ಲಿ ಒಂದೇ ಒಂದು ರೂಪಾಯಿ ಲಂಚಕ್ಕೆ ಬೇಡಿಕೆ ಇಡದ ಪ್ರಾಮಾಣಿಕ ವ್ಯಕ್ತಿಯಾಗಿದ್ದರು ಎಂದು ಅವರನ್ನು ಬಲ್ಲವರು ಹೇಳುತ್ತಾರೆ. ಅವರ ಪ್ರಾಮಾಣಿಕತೆ ಹಾಗೂ ಅವರು ಐಎಎಸ್ ಅಧಿಕಾರಿಯಾದ ಹಿಂದೆ ಒಂದು ಹೃದಯಸ್ಪರ್ಶಿ ಕತೆ ಇದೆ ಎಂದು ಗೊತ್ತಾಗಿದೆ.ತಮಗೆ 5 ವರ್ಷವಿದ್ದಾಗ ತಮ್ಮ ತಂದೆಯನ್ನು ಮಹಾಂತೇಶ್ ಬೀಳಗಿ ಕಳೆದುಕೊಂಡರು. ಕಡು ಬಡತನದಲ್ಲಿ ತಾಯಿ ಕೂಲಿ ನಾಲಿ ಮಾಡಿ ಮಗ ಮಹಾಂತೇಶ್ ಬೀಳಗಿಯನ್ನು ಸಾಕಿ ಓದಿಸಿದರು. ತಮಗೆ ವಿಧವಾ ವೇತನ ಬರುತ್ತದೆ ಎನ್ನುವ ಮಾಹಿತಿ ಆಕೆಗೆ ಸಿಕ್ಕಿತ್ತು. ಇದಕ್ಕಾಗಿ ಅಧಿಕಾರಿಯ ಬಳಿಗೆ ತೆರಳಿ, ತಮ್ಮ ಕಡು ಬಡತನದ ಜೀವನದ ಬಗ್ಗೆ ಹೇಳಿಕೊಂಡು ವಿಧವಾ ವೇತನಕ್ಕೆ ಮನವಿ ಮಾಡಿದರು.
ಮಾಸಿಕ 25 ರೂಪಾಯಿ ವಿಧವಾ ವೇತನ ಮಾಡಿಕೊಡಲು ಆ ಅಧಿಕಾರಿ ಮಾತ್ರ ರೂ.100 ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ವಿಷಯ ತಿಳಿದ ಮಹಾಂತೇಶ್ ಬೀಳಗಿ ಅವರು, ಅಂದೇ ತಾನು ಲಂಚ ಪಡೆಯದ ಅಧಿಕಾರಿಯಾಗಬೇಕು ಎಂಬುದಾಗಿ ನಿರ್ಧರಿಸಿದರು. ತಾನು ಐಎಎಸ್ ಮಾಡಬೇಕು ಎಂಬುದಾಗಿ ಛಲ ತೊಟ್ಟ ಮಹಾಂತೇಶ್ ಬೀಳಗಿ ಅವರು ಕನ್ನಡ ಮಾಧ್ಯಮದಲ್ಲಿ ಓದಿದರೂ, ಎಂಎ ಬಳಿಕ ಕೇಂದ್ರ ಲೋಕಸೇವಾ ಆಯೋಗದ ಪರೀಕ್ಷೆಗೆ ತಯಾರಿ ನಡೆಸಿದರು. #😞 ಮೂಡ್ ಆಫ್ ಸ್ಟೇಟಸ್ #🆕ಲೇಟೆಸ್ಟ್ ಅಪ್ಡೇಟ್ಸ್ 📰 #📰ಇಂದಿನ ಅಪ್ಡೇಟ್ಸ್ 📲
308 likes
4 comments • 938 shares