welcome 2026

21 Posts • 12K views
#😞 ಮೂಡ್ ಆಫ್ ಸ್ಟೇಟಸ್ ದೇಶಸೇವೆಯಲ್ಲಿದ್ದ ಜೋಯಿಡಾದ ಯೋಧ ಈಶ್ವರ ನಾಯ್ಕ ನಿಧನ; ಗ್ರಾಮದಲ್ಲಿ ಶೋಕದ ಛಾಯೆ ದೆಹಲಿ ಸೇನಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರು; ಮಂಗಳವಾರ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತಿಮ ನಮನ ಜೋಯಿಡಾ, ಜು. 20: ದೇಶಸೇವೆಗೆ ತಮ್ಮ ಜೀವನವನ್ನೇ ಸಮರ್ಪಿಸಿದ್ದ ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಗಾಂಗೋಡಾ ಗ್ರಾಮದ ಯೋಧ ಈಶ್ವರ ವಸಂತ ನಾಯ್ಕ (30) ಅವರು ಅನಾರೋಗ್ಯದಿಂದ ದೆಹಲಿಯಲ್ಲಿ ನಿಧನರಾಗಿದ್ದಾರೆ. ಅವರ ಅಕಾಲಿಕ ನಿಧನದಿಂದ ಕುಟುಂಬದಷ್ಟೇ ಅಲ್ಲದೆ ಜೋಯಿಡಾ ತಾಲೂಕು ಹಾಗೂ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಶೋಕದ ವಾತಾವರಣ ನಿರ್ಮಾಣವಾಗಿದೆ. ಭಾರತೀಯ ಸೇನೆಯಲ್ಲಿ ನರ್ಸಿಂಗ್ ಅಸಿಸ್ಟೆಂಟ್ ಆಗಿ ಕಳೆದ ಹತ್ತು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದ ಈಶ್ವರ ನಾಯ್ಕ ಅವರು ಇತ್ತೀಚೆಗೆ ಅನಾರೋಗ್ಯಕ್ಕೆ ತುತ್ತಾಗಿದ್ದು, ದೆಹಲಿಯ ಆರ್ಮಿ ಮೆಡಿಕಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ಅವರು ಕೊನೆಯುಸಿರೆಳೆದಿದ್ದಾರೆ. ಗಾಂಗೋಡಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಿವಾಸಿಯಾಗಿದ್ದ ಈಶ್ವರ ನಾಯ್ಕ ಅವರು ದೇಶಸೇವೆಯ ಉನ್