ಮುಸಗುಪ್ಪಿಯಿಂದ ಮೂಡಲಗಿ ಕಡೆ ಹೋಗುವ ಮುಖ್ಯ ರಸ್ತೆಯಲ್ಲಿ ಎರಡು ತುದಿಗಳಲ್ಲಿ ಡಾಂಬರ ರಸ್ತೆ ನಿರ್ಮಾಣ ಮಾಡಲಾಗಿದೆ. ಆದರೆ ಮಧ್ಯದ ಸುಮಾರು 2 ಕಿಲೋಮೀಟರ್ ಭಾಗವನ್ನು ಸಂಪೂರ್ಣವಾಗಿ ಬಿಟ್ಟುಹೋಗಲಾಗಿದೆ. ಪರಿಣಾಮವಾಗಿ ವಾಹನ ಸವಾರರು, ಶಾಲಾ ಮಕ್ಕಳು ಮತ್ತು ಸಾರ್ವಜನಿಕರು ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ.
ಮಳೆ ಬಂದಾಗ ಗುಂಡಿಗಳಲ್ಲಿ ನೀರು ತುಂಬಿಕೊಂಡು ಅಪಘಾತದ ಭೀತಿ ಹೆಚ್ಚಾಗಿದೆ. ಹಲವು ಬಾರಿ ದೂರು ನೀಡಿದರೂ ಶಾಶ್ವತ ಪರಿಹಾರ ಸಿಗದಿರುವುದಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
👉 ಸಂಬಂಧಪಟ್ಟ ಇಲಾಖೆ ತಕ್ಷಣ ಸ್ಥಳ ಪರಿಶೀಲನೆ ನಡೆಸಿ ಸಂಪೂರ್ಣ ರಸ್ತೆ ಕಾಮಗಾರಿ ಪೂರ್ಣಗೊಳಿಸಬೇಕೆಂದು ಸಾರ್ವಜನಿಕರ ಆಗ್ರಹ.
#Musaguppi #Mudalagi #RoadIssue #PublicProblem #Karnatakanews #truenewskarnataka #ಜನರಧ್ವನಿ #BelagaviNews #🔴ನಮ್ಮ ಕರ್ನಾಟಕ🟡